Homeಮುಖಪುಟಎನ್‌ಸಿಇಆರ್‌ಟಿ ಪಠ್ಯದಿಂದ ಚಾರ್ಲ್ಸ್ ಡಾರ್ವಿನ್ ಸಿದ್ದಾಂತ, ಆವರ್ತಕ ಕೋಷ್ಟಕಕ್ಕೆ ಕೋಕ್: ಸಚಿವ ಧರ್ಮೇಂದ್ರ ಪ್ರಧಾನ್

ಎನ್‌ಸಿಇಆರ್‌ಟಿ ಪಠ್ಯದಿಂದ ಚಾರ್ಲ್ಸ್ ಡಾರ್ವಿನ್ ಸಿದ್ದಾಂತ, ಆವರ್ತಕ ಕೋಷ್ಟಕಕ್ಕೆ ಕೋಕ್: ಸಚಿವ ಧರ್ಮೇಂದ್ರ ಪ್ರಧಾನ್

- Advertisement -
- Advertisement -

ಎನ್‌ಸಿಇಆರ್‌ಟಿ ಪ್ರಕಟಿಸಿರುವ 10ನೇ ತರಗತಿ ವಿದ್ಯಾರ್ಥಿಗಳ ಪಠ್ಯ ಪುಸ್ತಕಗಳಿಂದ ಚಾರ್ಲ್ಸ್ ಡಾರ್ವಿನ್ ಅವರ ವಿಕಾಸದ ಸಿದ್ಧಾಂತ ಮತ್ತು ಆವರ್ತಕ ಕೋಷ್ಟಕವನ್ನು ಕೈಬಿಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಭಾರತದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಹೆಚ್ಚಿನ ವಿದ್ಯಾರ್ಥಿಗಳಿಗೆ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳನ್ನು ಪೂರೈಸುತ್ತದೆ. ಇದು ಕೋವಿಡ್-19 ಸಮಯದಲ್ಲಿ ಪಠ್ಯಕ್ರಮವನ್ನು ಕಡಿಮೆ ಮಾಡಲು ಪರಿಷ್ಕರಿಸುವ ಭಾಗವಾಗಿ 10 ನೇ ತರಗತಿಯ ಪಠ್ಯಪುಸ್ತಕಗಳಿಂದ ಆವರ್ತಕ ಕೋಷ್ಟಕ ಹಾಗೂ ಡಾರ್ವಿನ್‌ನ ವಿಕಾಸದ ಸಿದ್ಧಾಂತವನ್ನು ಕೈಬಿಟ್ಟಿದೆ ಎಂದು ಈ ವರ್ಷದ ಆರಂಭದಲ್ಲಿ ವರದಿಗಳು ಬಂದಿದ್ದವು.

ಎನ್‌ಸಿಇಆರ್‌ಟಿ ನಡೆಗೆ ಶಿಕ್ಷಣ ತಜ್ಞರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಂದು ತಿಂಗಳ ಹಿಂದೆಯಷ್ಟೇ ಪಠ್ಯಪುಸ್ತಕದಿಂದ ಮೊಘಲ್ ಸಾಮ್ರಾಜ್ಯ, ಮಹಾತ್ಮಗಾಂಧಿ ಹತ್ಯೆ, ಗುಜರಾತ್ ದಂಗೆ, ಡಾರ್ವಿನ್‌ನ ವಿಕಾಸವಾದ ಸಿದ್ಧಾಂತದ ಕುರಿತ ವಿವರಗಳನ್ನು ಪಠ್ಯಪುಸ್ತಕದಿಂದ ಕೈಬಿಡಲಾಗಿತ್ತು. ಮಂಡಳಿಯ ಈ ಕ್ರಮಕ್ಕೆ ಪ್ರತಿಪಕ್ಷಗಳು ಮತ್ತು ಶಿಕ್ಷಣ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದರು. ಈಗ 10ನೇ ತರಗತಿ ಪಠ್ಯಪುಸ್ತಕದಲ್ಲೂ ಪ್ರಮುಖ ವಿಷಯದ ಪಠ್ಯಗಳನ್ನು ಕೈ ಬಿಟ್ಟಿದೆ.

ಈ ಬಗ್ಗೆ ಎನ್‌ಇಆರ್‌ಟಿಯ ಮಾಜಿ ಅಧ್ಯಕ್ಷ ಪ್ರೊ.ಕೃಷ್ಣಕುಮಾರ್ ಅವರು, ”ಮಂಡಳಿಯು ಮಾಡಿದ ಈ ಬದಲಾವಣೆಯು ತರ್ಕಬದ್ಧವೇ ಅಥವಾ ಸಮರ್ಥನೀಯವೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ಇಂತಹ ಬದಲಾವಣೆಗೆ ವಿವರ ನೀಡಲು ಆಗುವುದಿಲ್ಲ. ವಿಕಾಸವಾದದ ಸಿದ್ಧಾಂತ ಇಲ್ಲದೆ ಒಬ್ಬ ಶಿಕ್ಷಕ, ವಿದ್ಯಾರ್ಥಿಗಳಿಗೆ ಬೋಧಿಸಲು ಹೇಗೆ ಸಾಧ್ಯ? ಪರಿವರ್ತಕ ಕೋಷ್ಟಕ ಇಲ್ಲದೆ ರಸಾಯನ ವಿಜ್ಞಾನ ಇಲ್ಲ” ಎಂದು ತಿಳಿಹೇಳಿದ್ದಾರೆ.

”ಪರಿಷ್ಕರಣೆ ಮಾಡಿರುವ ವಿಜ್ಞಾನ ಪಠ್ಯಪುಸ್ತಕದಲ್ಲಿ ಆವರ್ತಕ ಕೋಷ್ಟಕವನ್ನು ತೆಗೆದುಹಾಕಲಾಗಿದೆ. ಇದರಡಿ ಬರುವ ಪರಿಸರ ಸುಸ್ಥಿರತೆ ಹಾಗೂ ಇಂಧನ ಮೂಲಗಳು ಅಧ್ಯಾಯಗಳನ್ನು ಕೈಬಿಡಲಾಗಿದೆ. ವಿದ್ಯುತ್ ಮತ್ತು ಕಾಂತೀಯತೆಗೆ ವಿಜ್ಞಾನಿ ಮೈಕಲ್ ಫ್ಯಾರಡೆ ಸಲ್ಲಿಸಿದ ಕೊಡುಗೆಯ ಅಧ್ಯಯನದಿಂದ ವಿದ್ಯಾರ್ಥಿಗಳು ವಂಚಿತರಾಗುವಂತಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ಪರಿಷ್ಕರಣೆ: 10ನೇ ತರಗತಿ ಪಠ್ಯದಿಂದ ‘ಪ್ರಜಾಪ್ರಭುತ್ವ’ ಪಾಠವನ್ನೇ ಕೈಬಿಟ್ಟ ಎನ್‌ಸಿಇಆರ್‌ಟಿ

4000ಕ್ಕೂ ಅಧಿಕ ಸಂಶೋಧಕರು ಮತ್ತು ವಿಜ್ಞಾನಿಗಳು ಅಂಶಗಳನ್ನು ಪುನಃ ಪಠ್ಯದಲ್ಲಿ ಸೇರಿಸಲು ಅಧಿಕಾರಿಗಳನ್ನು ಒತ್ತಾಯಿಸಿ ಏಪ್ರಿಲ್‌ನಲ್ಲಿ ಬಹಿರಂಗ ಪತ್ರಕ್ಕೆ ಸಹಿ ಹಾಕಿದ್ದರು.

”ಚಾರ್ಲ್ಸ್ ಡಾರ್ವಿನ್ ಅವರ ಜೈವಿಕ ವಿಕಾಸದ ಸಿದ್ಧಾಂತವನ್ನು ಕೈಬಿಡಲಾಗಿದೆ ಎಂದು ದೇಶದ ವೈಜ್ಞಾನಿಕ ಸಮುದಾಯವು ಭಾರೀ ನಿರಾಶೆಗೊಂಡಿದೆ” ಎಂದು ಬ್ರೇಕ್‌ಥ್ರೂ ಸೈನ್ಸ್ ಸೊಸೈಟಿ ಸೈನ್ಸ್ ಉಲ್ಲೇಖಿಸಿದ ಹೇಳಿಕೆಯಲ್ಲಿ ತಿಳಿಸಿದೆ.

ಜೂನ್ 21ರಂದು ಪುಣೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಿಕ್ಷಣ ಸಚಿವ ಪ್ರಧಾನ್, ”ಈ ರೀತಿಯ ಏನೂ ಸಂಭವಿಸಿಲ್ಲ” ಎಂದು ಹೇಳಿದ್ದಾರೆ.

”COVID-19 ಸಮಯದಲ್ಲಿ, ಕೆಲವು ಪುನರಾವರ್ತಿತ ಭಾಗಗಳನ್ನು ಕಡಿಮೆ ಮಾಡಿ ಆ ನಂತರ ಮತ್ತೆ ಸೇರಿಸಬಹುದು ಎಂದು ತಜ್ಞರು ಸಲಹೆ ನೀಡಿದ್ದಾರೆ. ಆದ್ದರಿಂದ 8 ಮತ್ತು 9 ನೇ ತರಗತಿಗಳಲ್ಲಿನ ವಿಷಯವು ಬದಲಾಗಿಲ್ಲ. 10ನೇ ತರಗತಿಯ ಪುಸ್ತಕದಲ್ಲಿ, ವಿಕಾಸದ ಸಿದ್ಧಾಂತಕ್ಕೆ ಸಂಬಂಧಿಸಿದ ಕೆಲವು ಭಾಗವನ್ನು ಕಳೆದ ವರ್ಷ ಬಿಟ್ಟುಬಿಡಲಾಗಿದೆ ಮತ್ತು ಇದು 11 ಮತ್ತು 12 ನೇ ತರಗತಿಗಳಲ್ಲಿ ಬದಲಾಗಿಲ್ಲ” ಎಂದು ಸಚಿವರು ಹೇಳಿದರು.

9, 11 ಮತ್ತು 12 ನೇ ತರಗತಿಗಳಲ್ಲಿ ವಿದ್ಯಾರ್ಥಿಗಳಿಗೆ ಆವರ್ತಕ ಕೋಷ್ಟಕವನ್ನು ಕಲಿಸಲಾಗುವುದು. 10 ನೇ ತರಗತಿಯ ನಂತರ ವಿಜ್ಞಾನವನ್ನು ತೆಗೆದುಕೊಳ್ಳದ ವಿದ್ಯಾರ್ಥಿಗಳಿಗೆ ಡಾರ್ವಿನ್ ಸಿದ್ಧಾಂತವನ್ನು ಕಲಿಸಲಾಗುವುದಿಲ್ಲ ಎಂದು ದೇವೇಂದ್ರ ಪ್ರಧಾನ್ ಅವರೇ ಒಪ್ಪಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....