Homeಮುಖಪುಟಇನ್ಮುಂದೆ ಜನನ ಪ್ರಮಾಣಪತ್ರವೇ ಎಲ್ಲದಕ್ಕೂ ಆಧಾರ: 1969ರ ಕಾಯ್ದೆಗೆ ತಿದ್ದುಪಡಿ ಮಸೂದೆ ಮಂಡನೆ

ಇನ್ಮುಂದೆ ಜನನ ಪ್ರಮಾಣಪತ್ರವೇ ಎಲ್ಲದಕ್ಕೂ ಆಧಾರ: 1969ರ ಕಾಯ್ದೆಗೆ ತಿದ್ದುಪಡಿ ಮಸೂದೆ ಮಂಡನೆ

- Advertisement -
- Advertisement -

1969ರ ಜನನ ಮತ್ತು ಮರಣಗಳ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವ ಉದ್ದೇಶದ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಬುಧವಾರ ಮಂಡಿಸಿದೆ. ಈ ಕಾಯ್ದೆ ಜಾರಿಗೆ ಬಂದು 54 ವರ್ಷಗಳ ನಂತರ ಮೊದಲ ಬಾರಿಗೆ ತಿದ್ದುಪಡಿ ಮಾಡುತ್ತಿರುವುದು ಗಮನಾರ್ಹವಾಗಿದೆ.

ಈ ತಿದ್ದುಪಡಿ ಮೂಲಕ ಇನ್ನುಮುಂದೆ ಶಾಲಾ-ಕಾಲೇಜುಗಳಲ್ಲಿ ಪ್ರವೇಶ, ಡ್ರೈವಿಂಗ್ ಲೈಸೆನ್ಸ್ ಪಡೆಯಲು ಹಾಗೂ ಸರ್ಕಾರಿ ನೌಕರಿಗೆ ನಡೆಯುವ ನೇಮಕಾತಿ ಸಂದರ್ಭಗಳಲ್ಲಿ ಜನನ ಪ್ರಮಾಣಪತ್ರವನ್ನು ಒಂದೇ ದಾಖಲೆ ಬಳಸಲು ಅವಕಾಶ ನೀಡಲಾಗುತ್ತದೆ.

ಅಷ್ಟೇ ಅಲ್ಲದೇ ಮತದಾರರ ಪಟ್ಟಿ ಸಿದ್ಧಪಡಿಸಲು, ಆಧಾರ್ ಸಂಖ್ಯೆ, ನೀಡುವಾಗ ಹಾಗೂ ವಿವಾಹ ನೋಂದಣಿ ಸಂದರ್ಭದಲ್ಲಿಯೂ ಜನನ ಪ್ರಮಾಣಪತ್ರವನ್ನು ಬಳಸುವುದನ್ನು ಈ ಉದ್ದೇಶಿತ ತಿದ್ದುಪಡಿ ಒಳಗೊಂಡಿದೆ.

ಈ ಹಿಂದೆ ಜನನ ಪ್ರಮಾಣಪತ್ರ ಬಳಸಬೇಕು ಎಂಬ ಸರ್ಕಾರದ ಯೋಜನೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ಖಾಸಗಿತನದ ಬಗ್ಗೆ ಕಳವಳ ವ್ಯಕ್ತಪಡಿಸಿದ ಹಲವರು ಈ ನಡೆಯು ರಾಜ್ಯಗಳ ಹಕ್ಕುಗಳನ್ನು ಕಸಿಯಲಿದೆ ಎಂದು ದೂರಿದ್ದರು. ಜನರಿಗೆ ಸಂಬಂಧಿಸಿದ ಮಾಹಿತಿಯನ್ನು ಸರ್ಕಾರವು ಅನಿಯಂತ್ರಿತವಾಗಿ ಪಡೆಯುವುದು ಸಾಧ್ಯವಾಗಲಿದೆ ಎಂಬ ಆತಂಕವನ್ನು ಹೊರಹಾಕಿದ್ದರು.

ಈ ಬಗ್ಗೆ ಮಾತನಾಡಿದ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರಾಯ್, ”ಸಾಮಾಜಿಕ ಬದಲಾವಣೆ ಮತ್ತು ತಂತ್ರಜ್ಞಾನದಲ್ಲಿನ ಪ್ರಗತಿಗೆ ತಕ್ಕಂತೆ ಈ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ’ ಎಂದು ಹೇಳಿದ್ದಾರೆ.

”ತಿದ್ದುಪಡಿ ಮೂಲಕ ಕಾಯ್ಕೆಯನ್ನು ಮತ್ತಷ್ಟು ನಾಗರಿಕಸ್ನೇಹಿಯಾಗಿಸುವ ಉದ್ದೇಶ ಹೊಂದಲಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರಗಳು, ಸಾರ್ವಜನಿಕರು ಹಾಗೂ ಇತರ ಭಾಗೀದಾರರೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಲಾಗಿದೆ” ಎಂದು ಅವರು ತಿಳಿಸಿದರು.

ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಸಂಸದ ಮನೀಷ್ ತಿವಾರಿ, ”ಈ ಮಸೂದೆಯು ವ್ಯಕ್ತಿಯ ಖಾಸಗಿತನ ಹಕ್ಕು ಕೇಂದ್ರ ಮತ್ತು ರಾಜ್ಯಗಳ ನಡುವೆ ಅಧಿಕಾರ ವಿಂಗಡಣೆಯ ಉಲ್ಲಂಘನೆಯಾಗಲಿದೆ” ಎಂದು ಹೇಳಿದರು.

ಇದನ್ನೂ ಓದಿ: ಮೈಕ್ ಆಫ್ ಮಾಡಿರುವುದು ನನ್ನ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ, ಅವಮಾನ ಮಾಡಲಾಗಿದೆ: ಮಲ್ಲಿಕಾರ್ಜುನ ಖರ್ಗೆ

ಈ ಮಸೂದೆಯಲ್ಲಿನ ಪ್ರಮಖ ಅಂಶಗಳು:

* ಜನನ ಪ್ರಮಾಣಪತ್ರವನ್ನು ಜನಿಸಿದ ದಿನಾಂಕ ಮತ್ತು ಸ್ಥಳದ ಪುರಾವೆಯ ದಾಖಲೆಯಂತೆ ಬಳಸಬಹುದು.

* ಜನಸಂಖ್ಯಾ, ರಿಜಿಸ್ಟರ್, ಮತದಾರರ ಪಟ್ಟಿ, ಆಧಾರ್ ಸಂಖ್ಯೆ, ಪಡಿತರ ಚೀಟಿ, ಪಾಸ್‌ಪೋರ್ಟ್, ಆಸ್ತಿ ನೋಂದಣಿ ಹಾಗೂ ಕೇಂದ್ರ ಸರ್ಕಾರದಿಂದ ಅಧಿಸೂಚಿತ ಇತರ ಡೇಟಾಬೇಸ್‌ಗಳನ್ನು ನಿರ್ವಹಿಸುವ ಪ್ರಾಧಿಕಾರಗಳಿಗೆ ಜನನ ಮತ್ತು ಮರಣಗಳ ಡೇಟಾಬೇಸ್ ಒದಗಿಸುವುದು.

* ದತ್ತು ಪಡೆದ ಮಗು, ಅನಾಥ, ಪರಿತ್ಯಕ್ತ, ಬಾಡಿಗೆ ತಾಯ್ತನದಿಂದ ಪಡೆದ ಮಗು, ಒಬ್ಬರೇ ಪಾಲಕರಿರುವ ಅಥವಾ ಅವಿವಾಹಿತ ತಾಯಿಯ ಮಗುವಿನ ನೋಂದಣಿಗೆ ತಿದ್ದುಪಡಿ ನೆರವಾಗಲಿದೆ.

* ವಿಪತ್ತು ಅಥವಾ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಂಡ ಸಂದರ್ಭದಲ್ಲಿ ಮರಣಗಳ ನೋಂದಣಿ ಹಾಗೂ ಮರಣ ಪ್ರಮಾಣಪತ್ರ ವಿತರಣೆ ಪ್ರಕ್ರಿಯೆಗೆ ವೇಗ ನೀಡುವುದಕ್ಕಾಗಿ ವಿಶೇಷ ಸಬ್‌ರಿಜಿ‌ಗಳ ನೇಮಕಕ್ಕೆ ಅವಕಾಶ.

* ಜನನ ನೋಂದಣಿ ಸಂದರ್ಭದಲ್ಲಿ ಪಾಲಕರ ಅಥವಾ ಮಾಹಿತಿ ನೀಡುವವರ ಆಧಾ‌ ಸಂಖ್ಯೆಯನ್ನು ಸಂಗ್ರಹಿಸಲು ಅವಕಾಶ.

* ರಿಜಿಸ್ಕಾ‌ ಅಥವಾ ಜಿಲ್ಲಾ ರಿಜಿಸ್ಟ್ರಾ‌ಗಳು ತೆಗೆದುಕೊಂಡ ಕ್ರಮ ಇಲ್ಲವೇ ಹೊರಡಿಸಿದ ಆದೇಶದಿಂದ ತೊಂದರೆಗೆ ಒಳಗಾಗುವ ಸಾರ್ವಜನಿಕರ ಅಹವಾಲುಗಳಿಗೆ ಪರಿಹಾರ ಒದಗಿಸಲು ಮತ್ತು ದಂಡದ ಮೊತ್ತವನ್ನು ಹೆಚ್ಚಿಸಲು ಅವಕಾಶ ಕಲ್ಪಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...