Homeಮುಖಪುಟಇನ್ಮುಂದೆ ಜನನ ಪ್ರಮಾಣಪತ್ರವೇ ಎಲ್ಲದಕ್ಕೂ ಆಧಾರ: 1969ರ ಕಾಯ್ದೆಗೆ ತಿದ್ದುಪಡಿ ಮಸೂದೆ ಮಂಡನೆ

ಇನ್ಮುಂದೆ ಜನನ ಪ್ರಮಾಣಪತ್ರವೇ ಎಲ್ಲದಕ್ಕೂ ಆಧಾರ: 1969ರ ಕಾಯ್ದೆಗೆ ತಿದ್ದುಪಡಿ ಮಸೂದೆ ಮಂಡನೆ

- Advertisement -
- Advertisement -

1969ರ ಜನನ ಮತ್ತು ಮರಣಗಳ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವ ಉದ್ದೇಶದ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಬುಧವಾರ ಮಂಡಿಸಿದೆ. ಈ ಕಾಯ್ದೆ ಜಾರಿಗೆ ಬಂದು 54 ವರ್ಷಗಳ ನಂತರ ಮೊದಲ ಬಾರಿಗೆ ತಿದ್ದುಪಡಿ ಮಾಡುತ್ತಿರುವುದು ಗಮನಾರ್ಹವಾಗಿದೆ.

ಈ ತಿದ್ದುಪಡಿ ಮೂಲಕ ಇನ್ನುಮುಂದೆ ಶಾಲಾ-ಕಾಲೇಜುಗಳಲ್ಲಿ ಪ್ರವೇಶ, ಡ್ರೈವಿಂಗ್ ಲೈಸೆನ್ಸ್ ಪಡೆಯಲು ಹಾಗೂ ಸರ್ಕಾರಿ ನೌಕರಿಗೆ ನಡೆಯುವ ನೇಮಕಾತಿ ಸಂದರ್ಭಗಳಲ್ಲಿ ಜನನ ಪ್ರಮಾಣಪತ್ರವನ್ನು ಒಂದೇ ದಾಖಲೆ ಬಳಸಲು ಅವಕಾಶ ನೀಡಲಾಗುತ್ತದೆ.

ಅಷ್ಟೇ ಅಲ್ಲದೇ ಮತದಾರರ ಪಟ್ಟಿ ಸಿದ್ಧಪಡಿಸಲು, ಆಧಾರ್ ಸಂಖ್ಯೆ, ನೀಡುವಾಗ ಹಾಗೂ ವಿವಾಹ ನೋಂದಣಿ ಸಂದರ್ಭದಲ್ಲಿಯೂ ಜನನ ಪ್ರಮಾಣಪತ್ರವನ್ನು ಬಳಸುವುದನ್ನು ಈ ಉದ್ದೇಶಿತ ತಿದ್ದುಪಡಿ ಒಳಗೊಂಡಿದೆ.

ಈ ಹಿಂದೆ ಜನನ ಪ್ರಮಾಣಪತ್ರ ಬಳಸಬೇಕು ಎಂಬ ಸರ್ಕಾರದ ಯೋಜನೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ಖಾಸಗಿತನದ ಬಗ್ಗೆ ಕಳವಳ ವ್ಯಕ್ತಪಡಿಸಿದ ಹಲವರು ಈ ನಡೆಯು ರಾಜ್ಯಗಳ ಹಕ್ಕುಗಳನ್ನು ಕಸಿಯಲಿದೆ ಎಂದು ದೂರಿದ್ದರು. ಜನರಿಗೆ ಸಂಬಂಧಿಸಿದ ಮಾಹಿತಿಯನ್ನು ಸರ್ಕಾರವು ಅನಿಯಂತ್ರಿತವಾಗಿ ಪಡೆಯುವುದು ಸಾಧ್ಯವಾಗಲಿದೆ ಎಂಬ ಆತಂಕವನ್ನು ಹೊರಹಾಕಿದ್ದರು.

ಈ ಬಗ್ಗೆ ಮಾತನಾಡಿದ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರಾಯ್, ”ಸಾಮಾಜಿಕ ಬದಲಾವಣೆ ಮತ್ತು ತಂತ್ರಜ್ಞಾನದಲ್ಲಿನ ಪ್ರಗತಿಗೆ ತಕ್ಕಂತೆ ಈ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ’ ಎಂದು ಹೇಳಿದ್ದಾರೆ.

”ತಿದ್ದುಪಡಿ ಮೂಲಕ ಕಾಯ್ಕೆಯನ್ನು ಮತ್ತಷ್ಟು ನಾಗರಿಕಸ್ನೇಹಿಯಾಗಿಸುವ ಉದ್ದೇಶ ಹೊಂದಲಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರಗಳು, ಸಾರ್ವಜನಿಕರು ಹಾಗೂ ಇತರ ಭಾಗೀದಾರರೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಲಾಗಿದೆ” ಎಂದು ಅವರು ತಿಳಿಸಿದರು.

ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಸಂಸದ ಮನೀಷ್ ತಿವಾರಿ, ”ಈ ಮಸೂದೆಯು ವ್ಯಕ್ತಿಯ ಖಾಸಗಿತನ ಹಕ್ಕು ಕೇಂದ್ರ ಮತ್ತು ರಾಜ್ಯಗಳ ನಡುವೆ ಅಧಿಕಾರ ವಿಂಗಡಣೆಯ ಉಲ್ಲಂಘನೆಯಾಗಲಿದೆ” ಎಂದು ಹೇಳಿದರು.

ಇದನ್ನೂ ಓದಿ: ಮೈಕ್ ಆಫ್ ಮಾಡಿರುವುದು ನನ್ನ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ, ಅವಮಾನ ಮಾಡಲಾಗಿದೆ: ಮಲ್ಲಿಕಾರ್ಜುನ ಖರ್ಗೆ

ಈ ಮಸೂದೆಯಲ್ಲಿನ ಪ್ರಮಖ ಅಂಶಗಳು:

* ಜನನ ಪ್ರಮಾಣಪತ್ರವನ್ನು ಜನಿಸಿದ ದಿನಾಂಕ ಮತ್ತು ಸ್ಥಳದ ಪುರಾವೆಯ ದಾಖಲೆಯಂತೆ ಬಳಸಬಹುದು.

* ಜನಸಂಖ್ಯಾ, ರಿಜಿಸ್ಟರ್, ಮತದಾರರ ಪಟ್ಟಿ, ಆಧಾರ್ ಸಂಖ್ಯೆ, ಪಡಿತರ ಚೀಟಿ, ಪಾಸ್‌ಪೋರ್ಟ್, ಆಸ್ತಿ ನೋಂದಣಿ ಹಾಗೂ ಕೇಂದ್ರ ಸರ್ಕಾರದಿಂದ ಅಧಿಸೂಚಿತ ಇತರ ಡೇಟಾಬೇಸ್‌ಗಳನ್ನು ನಿರ್ವಹಿಸುವ ಪ್ರಾಧಿಕಾರಗಳಿಗೆ ಜನನ ಮತ್ತು ಮರಣಗಳ ಡೇಟಾಬೇಸ್ ಒದಗಿಸುವುದು.

* ದತ್ತು ಪಡೆದ ಮಗು, ಅನಾಥ, ಪರಿತ್ಯಕ್ತ, ಬಾಡಿಗೆ ತಾಯ್ತನದಿಂದ ಪಡೆದ ಮಗು, ಒಬ್ಬರೇ ಪಾಲಕರಿರುವ ಅಥವಾ ಅವಿವಾಹಿತ ತಾಯಿಯ ಮಗುವಿನ ನೋಂದಣಿಗೆ ತಿದ್ದುಪಡಿ ನೆರವಾಗಲಿದೆ.

* ವಿಪತ್ತು ಅಥವಾ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಂಡ ಸಂದರ್ಭದಲ್ಲಿ ಮರಣಗಳ ನೋಂದಣಿ ಹಾಗೂ ಮರಣ ಪ್ರಮಾಣಪತ್ರ ವಿತರಣೆ ಪ್ರಕ್ರಿಯೆಗೆ ವೇಗ ನೀಡುವುದಕ್ಕಾಗಿ ವಿಶೇಷ ಸಬ್‌ರಿಜಿ‌ಗಳ ನೇಮಕಕ್ಕೆ ಅವಕಾಶ.

* ಜನನ ನೋಂದಣಿ ಸಂದರ್ಭದಲ್ಲಿ ಪಾಲಕರ ಅಥವಾ ಮಾಹಿತಿ ನೀಡುವವರ ಆಧಾ‌ ಸಂಖ್ಯೆಯನ್ನು ಸಂಗ್ರಹಿಸಲು ಅವಕಾಶ.

* ರಿಜಿಸ್ಕಾ‌ ಅಥವಾ ಜಿಲ್ಲಾ ರಿಜಿಸ್ಟ್ರಾ‌ಗಳು ತೆಗೆದುಕೊಂಡ ಕ್ರಮ ಇಲ್ಲವೇ ಹೊರಡಿಸಿದ ಆದೇಶದಿಂದ ತೊಂದರೆಗೆ ಒಳಗಾಗುವ ಸಾರ್ವಜನಿಕರ ಅಹವಾಲುಗಳಿಗೆ ಪರಿಹಾರ ಒದಗಿಸಲು ಮತ್ತು ದಂಡದ ಮೊತ್ತವನ್ನು ಹೆಚ್ಚಿಸಲು ಅವಕಾಶ ಕಲ್ಪಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...