Homeಮುಖಪುಟಇನ್ಮುಂದೆ ಜನನ ಪ್ರಮಾಣಪತ್ರವೇ ಎಲ್ಲದಕ್ಕೂ ಆಧಾರ: 1969ರ ಕಾಯ್ದೆಗೆ ತಿದ್ದುಪಡಿ ಮಸೂದೆ ಮಂಡನೆ

ಇನ್ಮುಂದೆ ಜನನ ಪ್ರಮಾಣಪತ್ರವೇ ಎಲ್ಲದಕ್ಕೂ ಆಧಾರ: 1969ರ ಕಾಯ್ದೆಗೆ ತಿದ್ದುಪಡಿ ಮಸೂದೆ ಮಂಡನೆ

- Advertisement -
- Advertisement -

1969ರ ಜನನ ಮತ್ತು ಮರಣಗಳ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವ ಉದ್ದೇಶದ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಬುಧವಾರ ಮಂಡಿಸಿದೆ. ಈ ಕಾಯ್ದೆ ಜಾರಿಗೆ ಬಂದು 54 ವರ್ಷಗಳ ನಂತರ ಮೊದಲ ಬಾರಿಗೆ ತಿದ್ದುಪಡಿ ಮಾಡುತ್ತಿರುವುದು ಗಮನಾರ್ಹವಾಗಿದೆ.

ಈ ತಿದ್ದುಪಡಿ ಮೂಲಕ ಇನ್ನುಮುಂದೆ ಶಾಲಾ-ಕಾಲೇಜುಗಳಲ್ಲಿ ಪ್ರವೇಶ, ಡ್ರೈವಿಂಗ್ ಲೈಸೆನ್ಸ್ ಪಡೆಯಲು ಹಾಗೂ ಸರ್ಕಾರಿ ನೌಕರಿಗೆ ನಡೆಯುವ ನೇಮಕಾತಿ ಸಂದರ್ಭಗಳಲ್ಲಿ ಜನನ ಪ್ರಮಾಣಪತ್ರವನ್ನು ಒಂದೇ ದಾಖಲೆ ಬಳಸಲು ಅವಕಾಶ ನೀಡಲಾಗುತ್ತದೆ.

ಅಷ್ಟೇ ಅಲ್ಲದೇ ಮತದಾರರ ಪಟ್ಟಿ ಸಿದ್ಧಪಡಿಸಲು, ಆಧಾರ್ ಸಂಖ್ಯೆ, ನೀಡುವಾಗ ಹಾಗೂ ವಿವಾಹ ನೋಂದಣಿ ಸಂದರ್ಭದಲ್ಲಿಯೂ ಜನನ ಪ್ರಮಾಣಪತ್ರವನ್ನು ಬಳಸುವುದನ್ನು ಈ ಉದ್ದೇಶಿತ ತಿದ್ದುಪಡಿ ಒಳಗೊಂಡಿದೆ.

ಈ ಹಿಂದೆ ಜನನ ಪ್ರಮಾಣಪತ್ರ ಬಳಸಬೇಕು ಎಂಬ ಸರ್ಕಾರದ ಯೋಜನೆಗೆ ಭಾರಿ ವಿರೋಧ ವ್ಯಕ್ತವಾಗಿತ್ತು. ಖಾಸಗಿತನದ ಬಗ್ಗೆ ಕಳವಳ ವ್ಯಕ್ತಪಡಿಸಿದ ಹಲವರು ಈ ನಡೆಯು ರಾಜ್ಯಗಳ ಹಕ್ಕುಗಳನ್ನು ಕಸಿಯಲಿದೆ ಎಂದು ದೂರಿದ್ದರು. ಜನರಿಗೆ ಸಂಬಂಧಿಸಿದ ಮಾಹಿತಿಯನ್ನು ಸರ್ಕಾರವು ಅನಿಯಂತ್ರಿತವಾಗಿ ಪಡೆಯುವುದು ಸಾಧ್ಯವಾಗಲಿದೆ ಎಂಬ ಆತಂಕವನ್ನು ಹೊರಹಾಕಿದ್ದರು.

ಈ ಬಗ್ಗೆ ಮಾತನಾಡಿದ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರಾಯ್, ”ಸಾಮಾಜಿಕ ಬದಲಾವಣೆ ಮತ್ತು ತಂತ್ರಜ್ಞಾನದಲ್ಲಿನ ಪ್ರಗತಿಗೆ ತಕ್ಕಂತೆ ಈ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ’ ಎಂದು ಹೇಳಿದ್ದಾರೆ.

”ತಿದ್ದುಪಡಿ ಮೂಲಕ ಕಾಯ್ಕೆಯನ್ನು ಮತ್ತಷ್ಟು ನಾಗರಿಕಸ್ನೇಹಿಯಾಗಿಸುವ ಉದ್ದೇಶ ಹೊಂದಲಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರಗಳು, ಸಾರ್ವಜನಿಕರು ಹಾಗೂ ಇತರ ಭಾಗೀದಾರರೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಲಾಗಿದೆ” ಎಂದು ಅವರು ತಿಳಿಸಿದರು.

ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಸಂಸದ ಮನೀಷ್ ತಿವಾರಿ, ”ಈ ಮಸೂದೆಯು ವ್ಯಕ್ತಿಯ ಖಾಸಗಿತನ ಹಕ್ಕು ಕೇಂದ್ರ ಮತ್ತು ರಾಜ್ಯಗಳ ನಡುವೆ ಅಧಿಕಾರ ವಿಂಗಡಣೆಯ ಉಲ್ಲಂಘನೆಯಾಗಲಿದೆ” ಎಂದು ಹೇಳಿದರು.

ಇದನ್ನೂ ಓದಿ: ಮೈಕ್ ಆಫ್ ಮಾಡಿರುವುದು ನನ್ನ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ, ಅವಮಾನ ಮಾಡಲಾಗಿದೆ: ಮಲ್ಲಿಕಾರ್ಜುನ ಖರ್ಗೆ

ಈ ಮಸೂದೆಯಲ್ಲಿನ ಪ್ರಮಖ ಅಂಶಗಳು:

* ಜನನ ಪ್ರಮಾಣಪತ್ರವನ್ನು ಜನಿಸಿದ ದಿನಾಂಕ ಮತ್ತು ಸ್ಥಳದ ಪುರಾವೆಯ ದಾಖಲೆಯಂತೆ ಬಳಸಬಹುದು.

* ಜನಸಂಖ್ಯಾ, ರಿಜಿಸ್ಟರ್, ಮತದಾರರ ಪಟ್ಟಿ, ಆಧಾರ್ ಸಂಖ್ಯೆ, ಪಡಿತರ ಚೀಟಿ, ಪಾಸ್‌ಪೋರ್ಟ್, ಆಸ್ತಿ ನೋಂದಣಿ ಹಾಗೂ ಕೇಂದ್ರ ಸರ್ಕಾರದಿಂದ ಅಧಿಸೂಚಿತ ಇತರ ಡೇಟಾಬೇಸ್‌ಗಳನ್ನು ನಿರ್ವಹಿಸುವ ಪ್ರಾಧಿಕಾರಗಳಿಗೆ ಜನನ ಮತ್ತು ಮರಣಗಳ ಡೇಟಾಬೇಸ್ ಒದಗಿಸುವುದು.

* ದತ್ತು ಪಡೆದ ಮಗು, ಅನಾಥ, ಪರಿತ್ಯಕ್ತ, ಬಾಡಿಗೆ ತಾಯ್ತನದಿಂದ ಪಡೆದ ಮಗು, ಒಬ್ಬರೇ ಪಾಲಕರಿರುವ ಅಥವಾ ಅವಿವಾಹಿತ ತಾಯಿಯ ಮಗುವಿನ ನೋಂದಣಿಗೆ ತಿದ್ದುಪಡಿ ನೆರವಾಗಲಿದೆ.

* ವಿಪತ್ತು ಅಥವಾ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಂಡ ಸಂದರ್ಭದಲ್ಲಿ ಮರಣಗಳ ನೋಂದಣಿ ಹಾಗೂ ಮರಣ ಪ್ರಮಾಣಪತ್ರ ವಿತರಣೆ ಪ್ರಕ್ರಿಯೆಗೆ ವೇಗ ನೀಡುವುದಕ್ಕಾಗಿ ವಿಶೇಷ ಸಬ್‌ರಿಜಿ‌ಗಳ ನೇಮಕಕ್ಕೆ ಅವಕಾಶ.

* ಜನನ ನೋಂದಣಿ ಸಂದರ್ಭದಲ್ಲಿ ಪಾಲಕರ ಅಥವಾ ಮಾಹಿತಿ ನೀಡುವವರ ಆಧಾ‌ ಸಂಖ್ಯೆಯನ್ನು ಸಂಗ್ರಹಿಸಲು ಅವಕಾಶ.

* ರಿಜಿಸ್ಕಾ‌ ಅಥವಾ ಜಿಲ್ಲಾ ರಿಜಿಸ್ಟ್ರಾ‌ಗಳು ತೆಗೆದುಕೊಂಡ ಕ್ರಮ ಇಲ್ಲವೇ ಹೊರಡಿಸಿದ ಆದೇಶದಿಂದ ತೊಂದರೆಗೆ ಒಳಗಾಗುವ ಸಾರ್ವಜನಿಕರ ಅಹವಾಲುಗಳಿಗೆ ಪರಿಹಾರ ಒದಗಿಸಲು ಮತ್ತು ದಂಡದ ಮೊತ್ತವನ್ನು ಹೆಚ್ಚಿಸಲು ಅವಕಾಶ ಕಲ್ಪಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...