Homeಅಂತರಾಷ್ಟ್ರೀಯಚೀನಾದ ಅಪ್ಲಿಕೇಷನ್‌ಗ‌ಳಾದ ಟಿಕ್‌ಟಾಕ್, ವೀಚಾಟ್ ಬ್ಯಾನ್!: ಅಮೇರಿಕ

ಚೀನಾದ ಅಪ್ಲಿಕೇಷನ್‌ಗ‌ಳಾದ ಟಿಕ್‌ಟಾಕ್, ವೀಚಾಟ್ ಬ್ಯಾನ್!: ಅಮೇರಿಕ

ಟಿಕ್‌ಟಾಕ್ ಮತ್ತು ವೀಚಾಟ್‌ನ ಮೂಲ ಕಂಪನಿಯಾದ ಬೈಟ್‌ಡ್ಯಾನ್ಸ್ ಲಿಮಿಟೆಡ್‌ನೊಂದಿಗೆ ವಹಿವಾಟುಗಳನ್ನು ನಿಷೇಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಸ್ಟ್ 6 ರಂದು ಸಹಿ ಹಾಕಿದ್ದರು.

- Advertisement -
- Advertisement -

ಚೀನಾದ ಜನಪ್ರಿಯ ಮೊಬೈಲ್ ಅಪ್ಲಿಕೇಶನ್‌ಗಳಾದ ವೀಚಾಟ್ ಮತ್ತು ಟಿಕ್‌ಟಾಕ್ ಡೌನ್‌ಲೋಡ್ ಮಾಡುವುದನ್ನು ನಿಷೇಧಿಸಲು ಅಮೆರಿಕದ ಅಧಿಕಾರಿಗಳು ಶುಕ್ರವಾರ ಆದೇಶಿಸಿದ್ದಾರೆ.

ತಂತ್ರಜ್ಞಾನದ ಮೇಲಿನ ಅಮೇರಿಕ-ಚೀನಾ ಉದ್ವಿಗ್ನತೆ ಮತ್ತು ಅಮೆರಿಕದ ಹೂಡಿಕೆದಾರರಿಗೆ ಟಿಕ್‌ಟಾಕ್ ವಿಡಿಯೋ ಅಪ್ಲಿಕೇಶನ್‌ನ ಮಾರಾಟ ಮಾಡುವ ಟ್ರಂಪ್ ಆಡಳಿತದ ಪ್ರಯತ್ನದ ಮಧ್ಯೆ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನು ಓದಿ: ಬೆಂಕಿ ಬರಹ-1: ಟಿಕ್‌ಟಾಕ್ v/s ಯೂಟ್ಯೂಬ್ – ಯುವಜನರ ಆನ್‌ಲೈನ್ ವರ್ಗ ಸಂಘರ್ಷ

“ಚೀನಾದ ಕಮ್ಯುನಿಸ್ಟ್ ಪಕ್ಷವು ರಾಷ್ಟ್ರೀಯ ಭದ್ರತೆ, ವಿದೇಶಾಂಗ ನೀತಿ ಮತ್ತು ಅಮೆರಿಕದ ಆರ್ಥಿಕತೆಗೆ ಧಕ್ಕೆ ತರಲು ಈ ಅಪ್ಲಿಕೇಶನ್‌ಗಳನ್ನು ಬಳಸುವ ಉದ್ದೇಶಗಳನ್ನು ಹೊಂದಿದೆ” ಎಂದು ವಾಣಿಜ್ಯ ಕಾರ್ಯದರ್ಶಿ ವಿಲ್ಬರ್ ರಾಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದು, ಚೀನೀ ಮಾತನಾಡುವವರಲ್ಲಿ ಭಾರಿ ಬಳಕೆಯಾಗುವ ಅಪ್ಲಿಕೇಶನ್ ವೀಚಾಟ್ ಮತ್ತು ಆಪಲ್, ಗೂಗಲ್ ನಿರ್ವಹಿಸುವ ಆನ್‌ಲೈನ್ ಮಾರುಕಟ್ಟೆಗಳಿಂದ ಟಿಕ್‌ಟಾಕ್ ಅನ್ನು ನಿಷೇಧಿಸುವ ಕ್ರಮವಾಗಿದೆ.

ಚೀನಾದ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಟಿಕ್‌ಟಾಕ್ ಮತ್ತು ವೀಚಾಟ್‌ನ ಮೂಲ ಕಂಪನಿಯಾದ ಬೈಟ್‌ಡ್ಯಾನ್ಸ್ ಲಿಮಿಟೆಡ್‌ನೊಂದಿಗೆ ವಹಿವಾಟುಗಳನ್ನು ನಿಷೇಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಸ್ಟ್ 6 ರಂದು ಸಹಿ ಹಾಕಿದ್ದರು. ಈ ಆದೇಶವು 45 ದಿನಗಳ ನಂತರ ಜಾರಿಗೆ ಬರಲಿದೆ ಎಂದು ಅಮೇರಿಕಾ ಹೇಳಿತ್ತು.

ಗಾಲ್ವಾನ್ ವ್ಯಾಲಿ ಘರ್ಷಣೆಯ ನಂತರ ಭಾರತದಲ್ಲಿ ಚೀನಾದ ಆ್ಯಪ್‌ಗಳನ್ನು ನಿಷೇಧಿಸಲಾಯಿತು.

ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತ್ವಕ್ಕೆ ಬೆದರಿಕೆ ಹಾಕಿದ್ದನ್ನು ಉಲ್ಲೇಖಿಸಿ ಜೂನ್‌ನಲ್ಲಿ ಕೇಂದ್ರವು 59 ಚೀನೀ ಅಪ್ಲಿಕೇಶನ್‌ಗಳನ್ನು ನಿಷೇಧಿಸಿತು. ಕಳೆದ ವಾರ, ನಿಷೇಧಿತ ಅಪ್ಲಿಕೇಶನ್‌ಗಳ ತದ್ರೂಪುಗಳಾಗಿದ್ದ 47 ಅಪ್ಲಿಕೇಶನ್‌ಗಳನ್ನು ಸಹ ನಿರ್ಬಂಧಿಸಲಾಗಿದೆ.

ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸುವ ಭಾರತದ ಕ್ರಮವನ್ನು, ಚೀನಾ, ವಿಶ್ವ ವಾಣಿಜ್ಯ ಸಂಸ್ಥೆಯ ನಿಯಮಗಳ ಉಲ್ಲಂಘನೆ ಎಂದು ಕರೆದಿದೆ.


ಇದನ್ನು ಓದಿ: ಟಿಕ್‌ಟಾಕ್‌ ಮಾರಾಟಕ್ಕೆ ಒರಾಕಲ್ ಅ‌ನ್ನು ಆಯ್ಕೆ ಮಾಡಿದ ಬೈಟ್‌ಡ್ಯಾನ್ಸ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...