ನಾವು ರಾಜತಾಂತ್ರಿಕ ಮತ್ತು ಮಿಲಿಟರಿ ಚಾನೆಲ್ಗಳ ಮೂಲಕ ಸಂವಹನ ನಡೆಸುತ್ತಿದ್ದೇವೆ. ಇದರ ಸರಿ ಮತ್ತು ತಪ್ಪು ತುಂಬಾ ಸ್ಪಷ್ಟವಾಗಿದೆ … ಚೀನಾದ ಕಡೆಯಿಂದ, ನಾವು ಹೆಚ್ಚಿನ ಘರ್ಷಣೆಯನ್ನು ನೋಡಲು ಬಯಸುವುದಿಲ್ಲ” ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಜಾವೋ ಲಿಜಿಯಾನ್ ಹೇಳಿದ್ದಾರೆ ಎಂದು ಎಎನ್ಐ ಉಲ್ಲೇಖಿಸಿದೆ.
ಪೂರ್ವ ಲಡಾಕ್ನ ಗಾಲ್ವಾನ್ ಕಣಿವೆಯಲ್ಲಿ ಸೋಮವಾರ ಚೀನಾದೊಂದಿಗಿನ “ಹಿಂಸಾತ್ಮಕ ಮುಖಾಮುಖಿ” ಯಲ್ಲಿ ಕನಿಷ್ಠ 20 ಭಾರತೀಯ ಸೇನಾ ಸೈನಿಕರು ಸಾವನ್ನಪ್ಪಿದ್ದರೆ, ಇತರ ನಾಲ್ವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ. ಏತನ್ಮಧ್ಯೆ, ಘರ್ಷಣೆಯ ನಂತರ ಚೀನಾದ ಕಡೆಯಿಂದ ಎಷ್ಟು ಮಂದಿ ಮೃತಪಟ್ಟಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಸೋಮವಾರ ರಾತ್ರಿ ಗಾಲ್ವಾನ್ ಕಣಿವೆಯಲ್ಲಿ ನಡೆದ ಘಟನೆಗೆ ಭಾರತದ ಸೈನಿಕರೆ ಹೊಣೆ ಹೊರತು ಅದಕ್ಕೆ ಚೀನಾ ಕಾರಣವಲ್ಲ ಎಂದು ಅವರು ಹೇಳಿದ್ದಾರೆ.
ಗಾಲ್ವಾನ್ ಕಣಿವೆ ಪ್ರದೇಶದ ಸಾರ್ವಭೌಮತ್ವವು ಯಾವಾಗಲೂ ಚೀನಾಕ್ಕೆ ಸೇರಿದೆ. ಗಡಿ ಸಂಬಂಧಿತ ವಿಷಯಗಳ ಬಗ್ಗೆ ನಮ್ಮ ಗಡಿ ನಿಯಮಾವಳಿಗಳನ್ನು ಮತ್ತು ನಮ್ಮ ಕಮಾಂಡರ್ ಮಟ್ಟದ ಮಾತುಕತೆಗಳ ಒಮ್ಮತವನ್ನು ಭಾರತೀಯ ಗಡಿ ಪಡೆಗಳು ತಿರುಗಿಸಿ ಗಂಭೀರವಾಗಿ ಉಲ್ಲಂಘಿಸಿವೆ ಎಂದು ಅವರು ತಿಳಿಸಿದ್ದಾರೆ.
ನಾವು ಭಾರತವನ್ನು ಮುಂಚೂಣಿ ಪಡೆಗಳು ಕಟ್ಟುನಿಟ್ಟಾಗಿ ಶಿಸ್ತುಬದ್ಧವಾಗಿರುವಂತೆ ಕೇಳುತ್ತೇವೆ. ಏಕಕಾಲದಲ್ಲಿ ಉಲ್ಲಂಘನೆ ಮತ್ತು ಪ್ರಚೋದನಕಾರಿ ಚಟುವಟಿಕೆಯನ್ನು ನಿಲ್ಲಿಸಿ, ಚೀನಾದೊಂದಿಗೆ ಕೆಲಸ ಮಾಡಿ ಮತ್ತು ಸಂಭಾಷಣೆ ಮತ್ತು ಮಾತುಕತೆಯ ಮೂಲಕ ಸಮಸ್ಯೆಗಳನ್ನು ಪರಿಹರಿಸುವ ಸರಿಯಾದ ಹಾದಿಗೆ ಹಿಂತಿರುಗಿ ಎಂದು ಅವರು ಹೇಳಿದ್ದಾರೆ.
ಭಾರತ-ಚೀನಾ ಗಡಿ ಪ್ರದೇಶಗಳಲ್ಲಿನ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರು ಜೂನ್ 19 ರಂದು ಸಂಜೆ 5 ಗಂಟೆಗೆ ಸರ್ವಪಕ್ಷ ಸಭೆ ಕರೆದಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.
ಈ ಕುರಿತು ಟ್ವೀಟ್ ಮಾಡಿದ್ದು, ಈ ವರ್ಚುವಲ್ ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ ಎಂದು ತಿಳಿಸಿದೆ.
ಇದನ್ನೂ ಓದಿ: ಚೀನಾ ಮೇಲೆ ಸರ್ಜಿಕಲ್ ಸ್ಟ್ರೈಕ್ ಹೇಗೆ? ಯಶವಂತ್ ಸಿನ್ಹಾ ಪ್ರಶ್ನೆ