Homeಅಂತರಾಷ್ಟ್ರೀಯಇನ್ನಷ್ಟು ಘರ್ಷಣೆ ನೋಡಲು ಬಯಸುವುದಿಲ್ಲ: ಚೀನಾ

ಇನ್ನಷ್ಟು ಘರ್ಷಣೆ ನೋಡಲು ಬಯಸುವುದಿಲ್ಲ: ಚೀನಾ

- Advertisement -
- Advertisement -

ನಾವು ರಾಜತಾಂತ್ರಿಕ ಮತ್ತು ಮಿಲಿಟರಿ ಚಾನೆಲ್‌ಗಳ ಮೂಲಕ ಸಂವಹನ ನಡೆಸುತ್ತಿದ್ದೇವೆ. ಇದರ ಸರಿ ಮತ್ತು ತಪ್ಪು ತುಂಬಾ ಸ್ಪಷ್ಟವಾಗಿದೆ … ಚೀನಾದ ಕಡೆಯಿಂದ, ನಾವು ಹೆಚ್ಚಿನ ಘರ್ಷಣೆಯನ್ನು ನೋಡಲು ಬಯಸುವುದಿಲ್ಲ” ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಜಾವೋ ಲಿಜಿಯಾನ್ ಹೇಳಿದ್ದಾರೆ ಎಂದು ಎಎನ್‌ಐ ಉಲ್ಲೇಖಿಸಿದೆ.

ಪೂರ್ವ ಲಡಾಕ್‌ನ ಗಾಲ್ವಾನ್ ಕಣಿವೆಯಲ್ಲಿ ಸೋಮವಾರ ಚೀನಾದೊಂದಿಗಿನ “ಹಿಂಸಾತ್ಮಕ ಮುಖಾಮುಖಿ” ಯಲ್ಲಿ ಕನಿಷ್ಠ 20 ಭಾರತೀಯ ಸೇನಾ ಸೈನಿಕರು ಸಾವನ್ನಪ್ಪಿದ್ದರೆ, ಇತರ ನಾಲ್ವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ. ಏತನ್ಮಧ್ಯೆ, ಘರ್ಷಣೆಯ ನಂತರ ಚೀನಾದ ಕಡೆಯಿಂದ ಎಷ್ಟು ಮಂದಿ ಮೃತಪಟ್ಟಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಸೋಮವಾರ ರಾತ್ರಿ ಗಾಲ್ವಾನ್ ಕಣಿವೆಯಲ್ಲಿ ನಡೆದ ಘಟನೆಗೆ ಭಾರತದ ಸೈನಿಕರೆ ಹೊಣೆ ಹೊರತು ಅದಕ್ಕೆ ಚೀನಾ ಕಾರಣವಲ್ಲ ಎಂದು ಅವರು ಹೇಳಿದ್ದಾರೆ.

ಗಾಲ್ವಾನ್ ಕಣಿವೆ ಪ್ರದೇಶದ ಸಾರ್ವಭೌಮತ್ವವು ಯಾವಾಗಲೂ ಚೀನಾಕ್ಕೆ ಸೇರಿದೆ. ಗಡಿ ಸಂಬಂಧಿತ ವಿಷಯಗಳ ಬಗ್ಗೆ ನಮ್ಮ ಗಡಿ ನಿಯಮಾವಳಿಗಳನ್ನು ಮತ್ತು ನಮ್ಮ ಕಮಾಂಡರ್ ಮಟ್ಟದ ಮಾತುಕತೆಗಳ ಒಮ್ಮತವನ್ನು ಭಾರತೀಯ ಗಡಿ ಪಡೆಗಳು ತಿರುಗಿಸಿ ಗಂಭೀರವಾಗಿ ಉಲ್ಲಂಘಿಸಿವೆ ಎಂದು ಅವರು ತಿಳಿಸಿದ್ದಾರೆ.

ನಾವು ಭಾರತವನ್ನು ಮುಂಚೂಣಿ ಪಡೆಗಳು ಕಟ್ಟುನಿಟ್ಟಾಗಿ ಶಿಸ್ತುಬದ್ಧವಾಗಿರುವಂತೆ ಕೇಳುತ್ತೇವೆ. ಏಕಕಾಲದಲ್ಲಿ ಉಲ್ಲಂಘನೆ ಮತ್ತು ಪ್ರಚೋದನಕಾರಿ ಚಟುವಟಿಕೆಯನ್ನು ನಿಲ್ಲಿಸಿ, ಚೀನಾದೊಂದಿಗೆ ಕೆಲಸ ಮಾಡಿ ಮತ್ತು ಸಂಭಾಷಣೆ ಮತ್ತು ಮಾತುಕತೆಯ ಮೂಲಕ ಸಮಸ್ಯೆಗಳನ್ನು ಪರಿಹರಿಸುವ ಸರಿಯಾದ ಹಾದಿಗೆ ಹಿಂತಿರುಗಿ ಎಂದು ಅವರು ಹೇಳಿದ್ದಾರೆ.

ಭಾರತ-ಚೀನಾ ಗಡಿ ಪ್ರದೇಶಗಳಲ್ಲಿನ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರು ಜೂನ್ 19 ರಂದು ಸಂಜೆ 5 ಗಂಟೆಗೆ ಸರ್ವಪಕ್ಷ ಸಭೆ ಕರೆದಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಈ ಕುರಿತು ಟ್ವೀಟ್ ಮಾಡಿದ್ದು, ಈ ವರ್ಚುವಲ್ ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ ಎಂದು ತಿಳಿಸಿದೆ.


ಇದನ್ನೂ ಓದಿ: ಚೀನಾ ಮೇಲೆ ಸರ್ಜಿಕಲ್‌ ಸ್ಟ್ರೈಕ್‌ ಹೇಗೆ? ಯಶವಂತ್ ಸಿನ್ಹಾ ಪ್ರಶ್ನೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...