Homeಮುಖಪುಟರಾತ್ರಿ ಕಾವಲುಗಾರನಾಗಿದ್ದ ಯುವಕ ಇಂದು ಐಐಎಂ ಸಹಾಯಕ ಪ್ರಾಧ್ಯಾಪಕನಾದ ಕಥೆ

ರಾತ್ರಿ ಕಾವಲುಗಾರನಾಗಿದ್ದ ಯುವಕ ಇಂದು ಐಐಎಂ ಸಹಾಯಕ ಪ್ರಾಧ್ಯಾಪಕನಾದ ಕಥೆ

’ಈ ಪೋಸ್ಟ್ ವೈರಲ್ ಆಗುತ್ತದೆ ಎಂದು ನಾನು ಎಂದಿಗೂ ಭಾವಿಸಿರಲಿಲ್ಲ. ಇದು ನನ್ನ ಜೀವನ ಕಥೆ, ಇನ್ನೂ ಕೆಲವರಿಗೆ ಸ್ಫೂರ್ತಿ ನೀಡುತ್ತದೆ ಎಂದು ಭಾವಿಸುತ್ತೇನೆ"

- Advertisement -
- Advertisement -

ಕನಸು ಕಾಣುವುದು ಸುಲಭ ಆದರೆ ಕಂಡ ಕನಸು ನನಸು ಮಾಡಿಕೊಳ್ಳಲು ಕಠಿಣ ಪರಿಶ್ರಮ ಅತ್ಯಗತ್ಯ. ಕನಸು ನನಸು ಮಾಡಿಕೊಳ್ಳುವ ದಾರಿಯಲ್ಲಿ ಸಾಗಿ ರಾತ್ರಿ ಪಾಳಿಯ ಕಾವಲುಗಾರನಾಗಿದ್ದ ರಂಜಿತ್ ರಾಮಚಂದ್ರನ್ ಇಂದು ರಾಂಚಿಯ ಇಂಡಿಯನ್ ಇನ್ಸ್‌ಟಿಟ್ಯೂಟ್ ಆಫ್ ಮ್ಯಾನೆಜ್‌ಮೆಂಟ್ (ಐಐಎಂ)ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಹಲವರಿಗೆ ಮಾದರಿಯಾಗಿ ನಿಂತಿದ್ದಾರೆ.

28 ವರ್ಷದ ರಂಜಿತ್ ರಾಮಚಂದ್ರನ್, ಏಪ್ರಿಲ್ 9 ರಂದು ತಮ್ಮ ಸ್ಪೂರ್ತಿದಾಯಕ ಕಥೆಯನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಫೇಸ್‌ಬುಕ್‌ನಲ್ಲಿ ಈ ಪೋಸ್ಟ್ ವೈರಲ್ ಆಗಿದ್ದು, 39,000 ಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದ್ದಾರೆ.  ಕೇರಳದ ಹಣಕಾಸು ಸಚಿವ ಟಿ ಎಂ ಥಾಮಸ್ ಐಸಾಕ್ ಕೂಡ ಫೇಸ್‌ಬುಕ್‌ನಲ್ಲಿ ಅಭಿನಂದನೆ ತಿಳಿಸಿದ್ದಾರೆ.

ಪದವಿವರೆಗೆ ಮಾತೃಭಾಷೆ ಮಲಯಾಳಂನಲ್ಲಿ ಓದಿರುವ ರಂಜಿತ್ ರಾಮಚಂದ್ರನ್ ರಾತ್ರಿ ವೇಳೆಯಲ್ಲಿ ಕಾವಲುಗಾರನಾಗಿ ದುಡಿದು, ಹಗಲಿನ ಸಮಯವನ್ನು ವ್ಯರ್ಥ ಮಾಡದೇ ವಿದ್ಯಾಭ್ಯಾಸ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಕೇಂದ್ರದೊಂದಿಗೆ ಮಾತುಕತೆಗೆ ಸಿದ್ದವಿದ್ದೇವೆ, ಹಕ್ಕೊತ್ತಾಯಗಳು ಅವೆ ಇರಲಿವೆ- ರಾಕೇಶ್‌ ಟಿಕಾಯತ್

ರಾಮಚಂದ್ರನ್ ಅವರು ಕಾಸರಗೋಡಿನ ಪಣತ್ತೂರಿನಲ್ಲಿ ಬಿಎಸ್ಎನ್ಎಲ್ ದೂರವಾಣಿ ವಿನಿಮಯ ಕೇಂದ್ರದಲ್ಲಿ ರಾತ್ರಿ ಕಾವಲುಗಾರರಾಗಿ ಕೆಲಸ ಮಾಡುತ್ತಿದ್ದರು. ಅದೇ ಜಿಲ್ಲೆಯ ಸೇಂಟ್‌ ಪಯಸ್‌ ಕಾಲೇಜಿನಲ್ಲಿ  ಅರ್ಥಶಾಸ್ತ್ರ ಪದವಿ ಪಡೆದಿದ್ದಾರೆ. ನಂತರ ಉನ್ನತ ಶಿಕ್ಷಣಕ್ಕಾಗಿ ಮದ್ರಾಸ್‌ನ ಐಐಟಿಗೆ ಸೇರಿದ್ದಾರೆ.

“ನಾನು ಹಗಲಿನ ವೇಳೆಯಲ್ಲಿ ಕಾಲೇಜಿಗೆ ಹೋಗುತ್ತಿದ್ದೆ ಮತ್ತು ರಾತ್ರಿ ವೇಳೆಯಲ್ಲಿ ದೂರವಾಣಿ ವಿನಿಮಯ ಕೇಂದ್ರದಲ್ಲಿ ಕೆಲಸ ಮಾಡಿದ್ದೇನೆ” ಎಂದು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಮಲಯಾಳಂ ಭಾಷೆ ಮಾತ್ರ ತಿಳಿದಿದ್ದರಿಂದ ಅಧ್ಯಯನ ಮಾಡಲು ಕಷ್ಟವಾಗಿ, ಪಿಎಚ್‌ಡಿಯನ್ನು ಅರ್ಧದಲ್ಲೇ ತ್ಯಜಿಸಲು ರಂಜಿತ್ ನಿರ್ಧರಿಸಿದ್ದರು. ಆದರೆ ಅವರ ಮಾರ್ಗದರ್ಶಿ ಡಾ. ಸುಭಾಷ್ ಅವರು ಹಾಗೆ ಮಾಡದಂತೆ ಮನವೊಲಿಸಿರು ಎಂದು ತಿಳಿಸಿದ್ದಾರೆ. ಕಳೆದ ವರ್ಷ ಡಾಕ್ಟರೇಟ್ ಗಳಿಸಿದ ರಂಜಿತ್, ಕಳೆದ ಎರಡು ತಿಂಗಳಿನಿಂದ ಬೆಂಗಳೂರಿನ ಕ್ರೈಸ್ಟ್ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ. ಶೀಘ್ರವೇ ಐಐಎಂ– ರಾಂಚಿಯಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.

“ಈ ಪೋಸ್ಟ್ ವೈರಲ್ ಆಗುತ್ತದೆ ಎಂದು ನಾನು ಎಂದಿಗೂ ಭಾವಿಸಿರಲಿಲ್ಲ. ಇದು ನನ್ನ ಜೀವನ ಕಥೆ, ಇನ್ನೂ ಕೆಲವರಿಗೆ ಸ್ಫೂರ್ತಿ ನೀಡುತ್ತದೆ ಎಂದು ಭಾವಿಸುತ್ತೇನೆ. ಪ್ರತಿಯೊಬ್ಬರೂ ಒಳ್ಳೆಯ ಕನಸು ಕಾಣಬೇಕು ಮತ್ತು ಅವರ ಕನಸು ನನಸು ಮಾಡಲು ಹೋರಾಡಬೇಕೆಂದು ನಾನು ಬಯಸುತ್ತೇನೆ” ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಆರ್ಥಿಕ ತೊಂದರೆಗಳಿಂದಾಗಿ ರಂಜಿತ್ ತಮ್ಮ ಶಾಲಾ ಶಿಕ್ಷಣವನ್ನು ತ್ಯಜಿಸಿ ಬೇಕಾದ ಸ್ಥತಿ ಇತ್ತು ಎಂದಿದ್ದಾರೆ. ರಂಜಿತ್ ಅವರ ತಂದೆ ದರ್ಜಿ ಕೆಲಸ ಮಾಡುತ್ತಾರೆ, ತಾಯಿ  ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದಿನಗೂಲಿ ಕಾರ್ಮಿಕರಾಗಿದ್ದಾರೆ.


ಇದನ್ನೂ ಓದಿ: ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...