Homeಮುಖಪುಟರಾತ್ರಿ ಕಾವಲುಗಾರನಾಗಿದ್ದ ಯುವಕ ಇಂದು ಐಐಎಂ ಸಹಾಯಕ ಪ್ರಾಧ್ಯಾಪಕನಾದ ಕಥೆ

ರಾತ್ರಿ ಕಾವಲುಗಾರನಾಗಿದ್ದ ಯುವಕ ಇಂದು ಐಐಎಂ ಸಹಾಯಕ ಪ್ರಾಧ್ಯಾಪಕನಾದ ಕಥೆ

’ಈ ಪೋಸ್ಟ್ ವೈರಲ್ ಆಗುತ್ತದೆ ಎಂದು ನಾನು ಎಂದಿಗೂ ಭಾವಿಸಿರಲಿಲ್ಲ. ಇದು ನನ್ನ ಜೀವನ ಕಥೆ, ಇನ್ನೂ ಕೆಲವರಿಗೆ ಸ್ಫೂರ್ತಿ ನೀಡುತ್ತದೆ ಎಂದು ಭಾವಿಸುತ್ತೇನೆ"

- Advertisement -
- Advertisement -

ಕನಸು ಕಾಣುವುದು ಸುಲಭ ಆದರೆ ಕಂಡ ಕನಸು ನನಸು ಮಾಡಿಕೊಳ್ಳಲು ಕಠಿಣ ಪರಿಶ್ರಮ ಅತ್ಯಗತ್ಯ. ಕನಸು ನನಸು ಮಾಡಿಕೊಳ್ಳುವ ದಾರಿಯಲ್ಲಿ ಸಾಗಿ ರಾತ್ರಿ ಪಾಳಿಯ ಕಾವಲುಗಾರನಾಗಿದ್ದ ರಂಜಿತ್ ರಾಮಚಂದ್ರನ್ ಇಂದು ರಾಂಚಿಯ ಇಂಡಿಯನ್ ಇನ್ಸ್‌ಟಿಟ್ಯೂಟ್ ಆಫ್ ಮ್ಯಾನೆಜ್‌ಮೆಂಟ್ (ಐಐಎಂ)ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಹಲವರಿಗೆ ಮಾದರಿಯಾಗಿ ನಿಂತಿದ್ದಾರೆ.

28 ವರ್ಷದ ರಂಜಿತ್ ರಾಮಚಂದ್ರನ್, ಏಪ್ರಿಲ್ 9 ರಂದು ತಮ್ಮ ಸ್ಪೂರ್ತಿದಾಯಕ ಕಥೆಯನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಫೇಸ್‌ಬುಕ್‌ನಲ್ಲಿ ಈ ಪೋಸ್ಟ್ ವೈರಲ್ ಆಗಿದ್ದು, 39,000 ಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದ್ದಾರೆ.  ಕೇರಳದ ಹಣಕಾಸು ಸಚಿವ ಟಿ ಎಂ ಥಾಮಸ್ ಐಸಾಕ್ ಕೂಡ ಫೇಸ್‌ಬುಕ್‌ನಲ್ಲಿ ಅಭಿನಂದನೆ ತಿಳಿಸಿದ್ದಾರೆ.

ಪದವಿವರೆಗೆ ಮಾತೃಭಾಷೆ ಮಲಯಾಳಂನಲ್ಲಿ ಓದಿರುವ ರಂಜಿತ್ ರಾಮಚಂದ್ರನ್ ರಾತ್ರಿ ವೇಳೆಯಲ್ಲಿ ಕಾವಲುಗಾರನಾಗಿ ದುಡಿದು, ಹಗಲಿನ ಸಮಯವನ್ನು ವ್ಯರ್ಥ ಮಾಡದೇ ವಿದ್ಯಾಭ್ಯಾಸ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಕೇಂದ್ರದೊಂದಿಗೆ ಮಾತುಕತೆಗೆ ಸಿದ್ದವಿದ್ದೇವೆ, ಹಕ್ಕೊತ್ತಾಯಗಳು ಅವೆ ಇರಲಿವೆ- ರಾಕೇಶ್‌ ಟಿಕಾಯತ್

ರಾಮಚಂದ್ರನ್ ಅವರು ಕಾಸರಗೋಡಿನ ಪಣತ್ತೂರಿನಲ್ಲಿ ಬಿಎಸ್ಎನ್ಎಲ್ ದೂರವಾಣಿ ವಿನಿಮಯ ಕೇಂದ್ರದಲ್ಲಿ ರಾತ್ರಿ ಕಾವಲುಗಾರರಾಗಿ ಕೆಲಸ ಮಾಡುತ್ತಿದ್ದರು. ಅದೇ ಜಿಲ್ಲೆಯ ಸೇಂಟ್‌ ಪಯಸ್‌ ಕಾಲೇಜಿನಲ್ಲಿ  ಅರ್ಥಶಾಸ್ತ್ರ ಪದವಿ ಪಡೆದಿದ್ದಾರೆ. ನಂತರ ಉನ್ನತ ಶಿಕ್ಷಣಕ್ಕಾಗಿ ಮದ್ರಾಸ್‌ನ ಐಐಟಿಗೆ ಸೇರಿದ್ದಾರೆ.

“ನಾನು ಹಗಲಿನ ವೇಳೆಯಲ್ಲಿ ಕಾಲೇಜಿಗೆ ಹೋಗುತ್ತಿದ್ದೆ ಮತ್ತು ರಾತ್ರಿ ವೇಳೆಯಲ್ಲಿ ದೂರವಾಣಿ ವಿನಿಮಯ ಕೇಂದ್ರದಲ್ಲಿ ಕೆಲಸ ಮಾಡಿದ್ದೇನೆ” ಎಂದು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಮಲಯಾಳಂ ಭಾಷೆ ಮಾತ್ರ ತಿಳಿದಿದ್ದರಿಂದ ಅಧ್ಯಯನ ಮಾಡಲು ಕಷ್ಟವಾಗಿ, ಪಿಎಚ್‌ಡಿಯನ್ನು ಅರ್ಧದಲ್ಲೇ ತ್ಯಜಿಸಲು ರಂಜಿತ್ ನಿರ್ಧರಿಸಿದ್ದರು. ಆದರೆ ಅವರ ಮಾರ್ಗದರ್ಶಿ ಡಾ. ಸುಭಾಷ್ ಅವರು ಹಾಗೆ ಮಾಡದಂತೆ ಮನವೊಲಿಸಿರು ಎಂದು ತಿಳಿಸಿದ್ದಾರೆ. ಕಳೆದ ವರ್ಷ ಡಾಕ್ಟರೇಟ್ ಗಳಿಸಿದ ರಂಜಿತ್, ಕಳೆದ ಎರಡು ತಿಂಗಳಿನಿಂದ ಬೆಂಗಳೂರಿನ ಕ್ರೈಸ್ಟ್ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ. ಶೀಘ್ರವೇ ಐಐಎಂ– ರಾಂಚಿಯಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.

“ಈ ಪೋಸ್ಟ್ ವೈರಲ್ ಆಗುತ್ತದೆ ಎಂದು ನಾನು ಎಂದಿಗೂ ಭಾವಿಸಿರಲಿಲ್ಲ. ಇದು ನನ್ನ ಜೀವನ ಕಥೆ, ಇನ್ನೂ ಕೆಲವರಿಗೆ ಸ್ಫೂರ್ತಿ ನೀಡುತ್ತದೆ ಎಂದು ಭಾವಿಸುತ್ತೇನೆ. ಪ್ರತಿಯೊಬ್ಬರೂ ಒಳ್ಳೆಯ ಕನಸು ಕಾಣಬೇಕು ಮತ್ತು ಅವರ ಕನಸು ನನಸು ಮಾಡಲು ಹೋರಾಡಬೇಕೆಂದು ನಾನು ಬಯಸುತ್ತೇನೆ” ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಆರ್ಥಿಕ ತೊಂದರೆಗಳಿಂದಾಗಿ ರಂಜಿತ್ ತಮ್ಮ ಶಾಲಾ ಶಿಕ್ಷಣವನ್ನು ತ್ಯಜಿಸಿ ಬೇಕಾದ ಸ್ಥತಿ ಇತ್ತು ಎಂದಿದ್ದಾರೆ. ರಂಜಿತ್ ಅವರ ತಂದೆ ದರ್ಜಿ ಕೆಲಸ ಮಾಡುತ್ತಾರೆ, ತಾಯಿ  ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ದಿನಗೂಲಿ ಕಾರ್ಮಿಕರಾಗಿದ್ದಾರೆ.


ಇದನ್ನೂ ಓದಿ: ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...