Homeಮುಖಪುಟದೇಶದಾದ್ಯಂತ 111 ಮಸಾಲೆ ತಯಾರಕರ ಪರವಾನಿಗೆಗಳನ್ನು ರದ್ದುಗೊಳಿಸಿದ FSSAI

ದೇಶದಾದ್ಯಂತ 111 ಮಸಾಲೆ ತಯಾರಕರ ಪರವಾನಿಗೆಗಳನ್ನು ರದ್ದುಗೊಳಿಸಿದ FSSAI

- Advertisement -
- Advertisement -

ಕಳೆದ ಒಂದು ತಿಂಗಳ ಅವಧಿಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ದೇಶಾದ್ಯಂತ 111 ಮಸಾಲೆ ಉತ್ಪಾದಕರ ಉತ್ಪಾದನಾ ಪರವಾನಗಿಯನ್ನು ರದ್ದುಗೊಳಿಸಿದೆ. ತಕ್ಷಣವೇ ಉತ್ಪಾದನೆಯನ್ನು ನಿಲ್ಲಿಸುವಂತೆ ಅವರಿಗೆ ಸೂಚನೆ ನೀಡಲಾಗಿದೆ ಎಂದು ವರದಿಗಳು ಹೇಳಿವೆ.

ಕಳೆದ ಎಪ್ರಿಲ್‌ನಲ್ಲಿ ಸಿಂಗಾಪುರ ಮತ್ತು ಹಾಂಗ್‌ಕಾಂಗ್ ಜನಪ್ರಿಯ ಭಾರತೀಯ ಬ್ರ್ಯಾಂಡ್‌ಗಳಾದ ಎಂಡಿಹೆಚ್ ಮತ್ತು ಎವರೆಸ್ಟ್ ಮಸಾಲೆಗಳ ಮಾರಾಟವನ್ನು ನಿಷೇಧಿಸಿದಾಗಿನಿಂದ ಎಫ್‌ಎಸ್‌ಎಸ್‌ಎಐ ದೇಶಾದ್ಯಂತದಿಂದ ಮಸಾಲೆ ಉತ್ಪನ್ನಗಳ ಸ್ಯಾಂಪಲ್‌ಗಳನ್ನು ಸಂಗ್ರಹಿಸುತ್ತಿದೆ. ಹಲವಾರು ಉತ್ಪನ್ನಗಳಲ್ಲಿ ಕ್ಯಾನ್ಸರ್‌ಕಾರಕ ಕೀಟನಾಶಕ ಎಥೆಲೀನ್ ಆಕ್ಸೈಡ್ ಪತ್ತೆಯಾದ ಬಳಿಕ ಸಿಂಗಾಪುರ ಮತ್ತು ಹಾಂಗ್‌ಕಾಂಗ್ ಈ ಬ್ರ್ಯಾಂಡ್‌ಗಳನ್ನು ನಿಷೇಧಿಸಿವೆ.

ಎಫ್‌ಎಸ್‌ಎಸ್‌ಎಐ ಈವರೆಗೆ 4,000 ಸ್ಯಾಂಪಲ್‌ಗಳನ್ನು ಸಂಗ್ರಹಿಸಿದ್ದು,ಈ ಪೈಕಿ ಸುಮಾರು 2,200 ಸ್ಯಾಂಪಲ್‌ಗಳನ್ನು ಪರೀಕ್ಷೆಗಳಿಗೆ ಒಳಪಡಿಸಲಾಗಿದೆ. ಎಫ್‌ಎಸ್‌ಎಸ್‌ಎಐ ಇನ್ನಷ್ಟು ಸ್ಯಾಂಪಲ್‌ಗಳ ಪರೀಕ್ಷೆಯನ್ನು ಮುಂದುವರಿಸಿರುವುದರಿಂದ ಮತ್ತಷ್ಟು ಪರವಾನಿಗೆಗಳು ರದ್ದಾಗುವ ಸಾಧ್ಯತೆಯಿದೆ.

ಈವರೆಗೆ ಪರವಾನಿಗೆ ರದ್ದುಗೊಂಡಿರುವ ಮಸಾಲೆ ಉತ್ಪನ್ನಗಳಲ್ಲಿ ಜನಪ್ರಿಯ ಬ್ರ್ಯಾಂಡ್‌ಗಳಾದ ಎವರೆಸ್ಟ್,ಎಂಡಿಹೆಚ್,ಕ್ಯಾಚ್ ಮತ್ತು ಬಾದಶಾಹ್ ಸೇರಿವೆ.

ಪರವಾನಿಗೆಗಳು ರದ್ದುಗೊಂಡಿರುವ ಹೆಚ್ಚಿನ ಕಂಪನಿಗಳು ಕೇರಳ ಮತ್ತು ತಮಿಳುನಾಡಿಗೆ ಸೇರಿವೆ. ಗುಜರಾತ್, ಮಹಾರಾಷ್ಟ್ರ ಮತ್ತು ಮಧ್ಯ ಪ್ರದೇಶದ ಹಲವಾರು ಕಂಪನಿಗಳೂ ನಿಗಾದಲ್ಲಿವೆ. ಪರವಾನಿಗೆ ರದ್ದುಗೊಂಡಿರುವ ಹೆಚ್ಚಿನ ಕಂಪನಿಗಳು ಸಣ್ಣ ಪ್ರಮಾಣದ ಉದ್ಯಮಗಳಾಗಿವೆ.

ಅರಿಷಿಣ, ಮೆಣಸಿನ ಹುಡಿ, ಕರಿಮೆಣಸು, ದಾಲ್ಚಿನಿ ಮತ್ತು ಕೊತ್ತಂಬರಿ ಹುಡಿಯಂತಹ ಮಸಾಲೆ ತಯಾರಿಕೆಯಲ್ಲಿ ಬಳಕೆಯಾಗುವ ಸಾಂಬಾರ್ ಪದಾರ್ಥಗಳು ಸುಲಭವಾಗಿ ಕಲಬೆರಕೆಗೆ ಗುರಿಯಾಗುತ್ತವೆ. ಮಸಾಲೆ ಉತ್ಪಾದಕರು ಪ್ರಮಾಣವನ್ನು ಹೆಚ್ಚಿಸಲು ಮತ್ತು ಉತ್ಪಾದನಾ ವೆಚ್ಚವನ್ನು ತಗ್ಗಿಸಲು ಸ್ಟಾರ್ಚ್,ಮರದ ಹೊಟ್ಟು, ಕೃತಕ ಬಣ್ಣಗಳು ಮತ್ತು ರಾಸಾಯನಿಕ ಬಣ್ಣಗಳನ್ನು ಬಳಸುತ್ತಾರೆ. ಇದು ಈ ಮಸಾಲೆಗಳ ಗುಣಮಟ್ಟ ಮತ್ತು ಸುರಕ್ಷತೆಯ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರುತ್ತದೆ.

ಕಲಬೆರಕೆ ದೂರುಗಳ ಹಿನ್ನೆಲೆಯಲ್ಲಿ ಎಫ್‌ಎಸ್‌ಎಸ್‌ಎಐ,ಇನ್ನಷ್ಟು ಕಲಬೆರಕೆಯನ್ನು ತಡೆಯಲು ಅನುಮತಿಸಲ್ಪಟ್ಟ ಕೀಟನಾಶಕ ಮಟ್ಟಗಳನ್ನು 10 ಪಟ್ಟು ಹೆಚ್ಚಿಸುವುದಾಗಿ ಇತ್ತೀಚಿಗೆ ಹೇಳಿತ್ತು.

ಇದನ್ನೂ ಓದಿ : ಹೊಸ ಕ್ರಿಮಿನಲ್ ಕಾನೂನಿನಲ್ಲಿ ಪೊಲೀಸ್ ಕಸ್ಟಡಿ ಅವಧಿ ಹೆಚ್ಚಳ: ಕಳವಳ ವ್ಯಕ್ತಪಡಿಸಿದ ಪಿಯುಸಿಎಲ್‌; ತಿದ್ದುಪಡಿಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...