Homeಮುಖಪುಟದೇಶದಾದ್ಯಂತ 111 ಮಸಾಲೆ ತಯಾರಕರ ಪರವಾನಿಗೆಗಳನ್ನು ರದ್ದುಗೊಳಿಸಿದ FSSAI

ದೇಶದಾದ್ಯಂತ 111 ಮಸಾಲೆ ತಯಾರಕರ ಪರವಾನಿಗೆಗಳನ್ನು ರದ್ದುಗೊಳಿಸಿದ FSSAI

- Advertisement -
- Advertisement -

ಕಳೆದ ಒಂದು ತಿಂಗಳ ಅವಧಿಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ದೇಶಾದ್ಯಂತ 111 ಮಸಾಲೆ ಉತ್ಪಾದಕರ ಉತ್ಪಾದನಾ ಪರವಾನಗಿಯನ್ನು ರದ್ದುಗೊಳಿಸಿದೆ. ತಕ್ಷಣವೇ ಉತ್ಪಾದನೆಯನ್ನು ನಿಲ್ಲಿಸುವಂತೆ ಅವರಿಗೆ ಸೂಚನೆ ನೀಡಲಾಗಿದೆ ಎಂದು ವರದಿಗಳು ಹೇಳಿವೆ.

ಕಳೆದ ಎಪ್ರಿಲ್‌ನಲ್ಲಿ ಸಿಂಗಾಪುರ ಮತ್ತು ಹಾಂಗ್‌ಕಾಂಗ್ ಜನಪ್ರಿಯ ಭಾರತೀಯ ಬ್ರ್ಯಾಂಡ್‌ಗಳಾದ ಎಂಡಿಹೆಚ್ ಮತ್ತು ಎವರೆಸ್ಟ್ ಮಸಾಲೆಗಳ ಮಾರಾಟವನ್ನು ನಿಷೇಧಿಸಿದಾಗಿನಿಂದ ಎಫ್‌ಎಸ್‌ಎಸ್‌ಎಐ ದೇಶಾದ್ಯಂತದಿಂದ ಮಸಾಲೆ ಉತ್ಪನ್ನಗಳ ಸ್ಯಾಂಪಲ್‌ಗಳನ್ನು ಸಂಗ್ರಹಿಸುತ್ತಿದೆ. ಹಲವಾರು ಉತ್ಪನ್ನಗಳಲ್ಲಿ ಕ್ಯಾನ್ಸರ್‌ಕಾರಕ ಕೀಟನಾಶಕ ಎಥೆಲೀನ್ ಆಕ್ಸೈಡ್ ಪತ್ತೆಯಾದ ಬಳಿಕ ಸಿಂಗಾಪುರ ಮತ್ತು ಹಾಂಗ್‌ಕಾಂಗ್ ಈ ಬ್ರ್ಯಾಂಡ್‌ಗಳನ್ನು ನಿಷೇಧಿಸಿವೆ.

ಎಫ್‌ಎಸ್‌ಎಸ್‌ಎಐ ಈವರೆಗೆ 4,000 ಸ್ಯಾಂಪಲ್‌ಗಳನ್ನು ಸಂಗ್ರಹಿಸಿದ್ದು,ಈ ಪೈಕಿ ಸುಮಾರು 2,200 ಸ್ಯಾಂಪಲ್‌ಗಳನ್ನು ಪರೀಕ್ಷೆಗಳಿಗೆ ಒಳಪಡಿಸಲಾಗಿದೆ. ಎಫ್‌ಎಸ್‌ಎಸ್‌ಎಐ ಇನ್ನಷ್ಟು ಸ್ಯಾಂಪಲ್‌ಗಳ ಪರೀಕ್ಷೆಯನ್ನು ಮುಂದುವರಿಸಿರುವುದರಿಂದ ಮತ್ತಷ್ಟು ಪರವಾನಿಗೆಗಳು ರದ್ದಾಗುವ ಸಾಧ್ಯತೆಯಿದೆ.

ಈವರೆಗೆ ಪರವಾನಿಗೆ ರದ್ದುಗೊಂಡಿರುವ ಮಸಾಲೆ ಉತ್ಪನ್ನಗಳಲ್ಲಿ ಜನಪ್ರಿಯ ಬ್ರ್ಯಾಂಡ್‌ಗಳಾದ ಎವರೆಸ್ಟ್,ಎಂಡಿಹೆಚ್,ಕ್ಯಾಚ್ ಮತ್ತು ಬಾದಶಾಹ್ ಸೇರಿವೆ.

ಪರವಾನಿಗೆಗಳು ರದ್ದುಗೊಂಡಿರುವ ಹೆಚ್ಚಿನ ಕಂಪನಿಗಳು ಕೇರಳ ಮತ್ತು ತಮಿಳುನಾಡಿಗೆ ಸೇರಿವೆ. ಗುಜರಾತ್, ಮಹಾರಾಷ್ಟ್ರ ಮತ್ತು ಮಧ್ಯ ಪ್ರದೇಶದ ಹಲವಾರು ಕಂಪನಿಗಳೂ ನಿಗಾದಲ್ಲಿವೆ. ಪರವಾನಿಗೆ ರದ್ದುಗೊಂಡಿರುವ ಹೆಚ್ಚಿನ ಕಂಪನಿಗಳು ಸಣ್ಣ ಪ್ರಮಾಣದ ಉದ್ಯಮಗಳಾಗಿವೆ.

ಅರಿಷಿಣ, ಮೆಣಸಿನ ಹುಡಿ, ಕರಿಮೆಣಸು, ದಾಲ್ಚಿನಿ ಮತ್ತು ಕೊತ್ತಂಬರಿ ಹುಡಿಯಂತಹ ಮಸಾಲೆ ತಯಾರಿಕೆಯಲ್ಲಿ ಬಳಕೆಯಾಗುವ ಸಾಂಬಾರ್ ಪದಾರ್ಥಗಳು ಸುಲಭವಾಗಿ ಕಲಬೆರಕೆಗೆ ಗುರಿಯಾಗುತ್ತವೆ. ಮಸಾಲೆ ಉತ್ಪಾದಕರು ಪ್ರಮಾಣವನ್ನು ಹೆಚ್ಚಿಸಲು ಮತ್ತು ಉತ್ಪಾದನಾ ವೆಚ್ಚವನ್ನು ತಗ್ಗಿಸಲು ಸ್ಟಾರ್ಚ್,ಮರದ ಹೊಟ್ಟು, ಕೃತಕ ಬಣ್ಣಗಳು ಮತ್ತು ರಾಸಾಯನಿಕ ಬಣ್ಣಗಳನ್ನು ಬಳಸುತ್ತಾರೆ. ಇದು ಈ ಮಸಾಲೆಗಳ ಗುಣಮಟ್ಟ ಮತ್ತು ಸುರಕ್ಷತೆಯ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರುತ್ತದೆ.

ಕಲಬೆರಕೆ ದೂರುಗಳ ಹಿನ್ನೆಲೆಯಲ್ಲಿ ಎಫ್‌ಎಸ್‌ಎಸ್‌ಎಐ,ಇನ್ನಷ್ಟು ಕಲಬೆರಕೆಯನ್ನು ತಡೆಯಲು ಅನುಮತಿಸಲ್ಪಟ್ಟ ಕೀಟನಾಶಕ ಮಟ್ಟಗಳನ್ನು 10 ಪಟ್ಟು ಹೆಚ್ಚಿಸುವುದಾಗಿ ಇತ್ತೀಚಿಗೆ ಹೇಳಿತ್ತು.

ಇದನ್ನೂ ಓದಿ : ಹೊಸ ಕ್ರಿಮಿನಲ್ ಕಾನೂನಿನಲ್ಲಿ ಪೊಲೀಸ್ ಕಸ್ಟಡಿ ಅವಧಿ ಹೆಚ್ಚಳ: ಕಳವಳ ವ್ಯಕ್ತಪಡಿಸಿದ ಪಿಯುಸಿಎಲ್‌; ತಿದ್ದುಪಡಿಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...