Homeಮುಖಪುಟದೇಶದಾದ್ಯಂತ 111 ಮಸಾಲೆ ತಯಾರಕರ ಪರವಾನಿಗೆಗಳನ್ನು ರದ್ದುಗೊಳಿಸಿದ FSSAI

ದೇಶದಾದ್ಯಂತ 111 ಮಸಾಲೆ ತಯಾರಕರ ಪರವಾನಿಗೆಗಳನ್ನು ರದ್ದುಗೊಳಿಸಿದ FSSAI

- Advertisement -
- Advertisement -

ಕಳೆದ ಒಂದು ತಿಂಗಳ ಅವಧಿಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ದೇಶಾದ್ಯಂತ 111 ಮಸಾಲೆ ಉತ್ಪಾದಕರ ಉತ್ಪಾದನಾ ಪರವಾನಗಿಯನ್ನು ರದ್ದುಗೊಳಿಸಿದೆ. ತಕ್ಷಣವೇ ಉತ್ಪಾದನೆಯನ್ನು ನಿಲ್ಲಿಸುವಂತೆ ಅವರಿಗೆ ಸೂಚನೆ ನೀಡಲಾಗಿದೆ ಎಂದು ವರದಿಗಳು ಹೇಳಿವೆ.

ಕಳೆದ ಎಪ್ರಿಲ್‌ನಲ್ಲಿ ಸಿಂಗಾಪುರ ಮತ್ತು ಹಾಂಗ್‌ಕಾಂಗ್ ಜನಪ್ರಿಯ ಭಾರತೀಯ ಬ್ರ್ಯಾಂಡ್‌ಗಳಾದ ಎಂಡಿಹೆಚ್ ಮತ್ತು ಎವರೆಸ್ಟ್ ಮಸಾಲೆಗಳ ಮಾರಾಟವನ್ನು ನಿಷೇಧಿಸಿದಾಗಿನಿಂದ ಎಫ್‌ಎಸ್‌ಎಸ್‌ಎಐ ದೇಶಾದ್ಯಂತದಿಂದ ಮಸಾಲೆ ಉತ್ಪನ್ನಗಳ ಸ್ಯಾಂಪಲ್‌ಗಳನ್ನು ಸಂಗ್ರಹಿಸುತ್ತಿದೆ. ಹಲವಾರು ಉತ್ಪನ್ನಗಳಲ್ಲಿ ಕ್ಯಾನ್ಸರ್‌ಕಾರಕ ಕೀಟನಾಶಕ ಎಥೆಲೀನ್ ಆಕ್ಸೈಡ್ ಪತ್ತೆಯಾದ ಬಳಿಕ ಸಿಂಗಾಪುರ ಮತ್ತು ಹಾಂಗ್‌ಕಾಂಗ್ ಈ ಬ್ರ್ಯಾಂಡ್‌ಗಳನ್ನು ನಿಷೇಧಿಸಿವೆ.

ಎಫ್‌ಎಸ್‌ಎಸ್‌ಎಐ ಈವರೆಗೆ 4,000 ಸ್ಯಾಂಪಲ್‌ಗಳನ್ನು ಸಂಗ್ರಹಿಸಿದ್ದು,ಈ ಪೈಕಿ ಸುಮಾರು 2,200 ಸ್ಯಾಂಪಲ್‌ಗಳನ್ನು ಪರೀಕ್ಷೆಗಳಿಗೆ ಒಳಪಡಿಸಲಾಗಿದೆ. ಎಫ್‌ಎಸ್‌ಎಸ್‌ಎಐ ಇನ್ನಷ್ಟು ಸ್ಯಾಂಪಲ್‌ಗಳ ಪರೀಕ್ಷೆಯನ್ನು ಮುಂದುವರಿಸಿರುವುದರಿಂದ ಮತ್ತಷ್ಟು ಪರವಾನಿಗೆಗಳು ರದ್ದಾಗುವ ಸಾಧ್ಯತೆಯಿದೆ.

ಈವರೆಗೆ ಪರವಾನಿಗೆ ರದ್ದುಗೊಂಡಿರುವ ಮಸಾಲೆ ಉತ್ಪನ್ನಗಳಲ್ಲಿ ಜನಪ್ರಿಯ ಬ್ರ್ಯಾಂಡ್‌ಗಳಾದ ಎವರೆಸ್ಟ್,ಎಂಡಿಹೆಚ್,ಕ್ಯಾಚ್ ಮತ್ತು ಬಾದಶಾಹ್ ಸೇರಿವೆ.

ಪರವಾನಿಗೆಗಳು ರದ್ದುಗೊಂಡಿರುವ ಹೆಚ್ಚಿನ ಕಂಪನಿಗಳು ಕೇರಳ ಮತ್ತು ತಮಿಳುನಾಡಿಗೆ ಸೇರಿವೆ. ಗುಜರಾತ್, ಮಹಾರಾಷ್ಟ್ರ ಮತ್ತು ಮಧ್ಯ ಪ್ರದೇಶದ ಹಲವಾರು ಕಂಪನಿಗಳೂ ನಿಗಾದಲ್ಲಿವೆ. ಪರವಾನಿಗೆ ರದ್ದುಗೊಂಡಿರುವ ಹೆಚ್ಚಿನ ಕಂಪನಿಗಳು ಸಣ್ಣ ಪ್ರಮಾಣದ ಉದ್ಯಮಗಳಾಗಿವೆ.

ಅರಿಷಿಣ, ಮೆಣಸಿನ ಹುಡಿ, ಕರಿಮೆಣಸು, ದಾಲ್ಚಿನಿ ಮತ್ತು ಕೊತ್ತಂಬರಿ ಹುಡಿಯಂತಹ ಮಸಾಲೆ ತಯಾರಿಕೆಯಲ್ಲಿ ಬಳಕೆಯಾಗುವ ಸಾಂಬಾರ್ ಪದಾರ್ಥಗಳು ಸುಲಭವಾಗಿ ಕಲಬೆರಕೆಗೆ ಗುರಿಯಾಗುತ್ತವೆ. ಮಸಾಲೆ ಉತ್ಪಾದಕರು ಪ್ರಮಾಣವನ್ನು ಹೆಚ್ಚಿಸಲು ಮತ್ತು ಉತ್ಪಾದನಾ ವೆಚ್ಚವನ್ನು ತಗ್ಗಿಸಲು ಸ್ಟಾರ್ಚ್,ಮರದ ಹೊಟ್ಟು, ಕೃತಕ ಬಣ್ಣಗಳು ಮತ್ತು ರಾಸಾಯನಿಕ ಬಣ್ಣಗಳನ್ನು ಬಳಸುತ್ತಾರೆ. ಇದು ಈ ಮಸಾಲೆಗಳ ಗುಣಮಟ್ಟ ಮತ್ತು ಸುರಕ್ಷತೆಯ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರುತ್ತದೆ.

ಕಲಬೆರಕೆ ದೂರುಗಳ ಹಿನ್ನೆಲೆಯಲ್ಲಿ ಎಫ್‌ಎಸ್‌ಎಸ್‌ಎಐ,ಇನ್ನಷ್ಟು ಕಲಬೆರಕೆಯನ್ನು ತಡೆಯಲು ಅನುಮತಿಸಲ್ಪಟ್ಟ ಕೀಟನಾಶಕ ಮಟ್ಟಗಳನ್ನು 10 ಪಟ್ಟು ಹೆಚ್ಚಿಸುವುದಾಗಿ ಇತ್ತೀಚಿಗೆ ಹೇಳಿತ್ತು.

ಇದನ್ನೂ ಓದಿ : ಹೊಸ ಕ್ರಿಮಿನಲ್ ಕಾನೂನಿನಲ್ಲಿ ಪೊಲೀಸ್ ಕಸ್ಟಡಿ ಅವಧಿ ಹೆಚ್ಚಳ: ಕಳವಳ ವ್ಯಕ್ತಪಡಿಸಿದ ಪಿಯುಸಿಎಲ್‌; ತಿದ್ದುಪಡಿಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...