Homeಮುಖಪುಟಇಂಧನ ಬೆಲೆ: ಚುನಾವಣೆ ನಂತರದ 35 ದಿನದಲ್ಲಿ 20 ಸಲ ಹೆಚ್ಚಳ! - ಬಳ್ಳಾರಿ, ಶಿರಸಿಗಳಲ್ಲಿ...

ಇಂಧನ ಬೆಲೆ: ಚುನಾವಣೆ ನಂತರದ 35 ದಿನದಲ್ಲಿ 20 ಸಲ ಹೆಚ್ಚಳ! – ಬಳ್ಳಾರಿ, ಶಿರಸಿಗಳಲ್ಲಿ ಸೆಂಚುರಿ ಬಾರಿಸಿದ ಪೆಟ್ರೋಲ್‍

- Advertisement -
- Advertisement -

ಸರ್ಕಾರಿ ತೈಲ ಕಂಪನಿಗಳು ಸೋಮವಾರ ಪೆಟ್ರೋಲ್ ದರವನ್ನು ಲೀಟರ್‌ಗೆ 28 ಪೈಸೆ ಮತ್ತು ಡೀಸೆಲ್ ದರವನ್ನು 27 ಪೈಸೆ ಹೆಚ್ಚಿಸಿವೆ. ಇತ್ತೀಚಿನ ಹೆಚ್ಚಳವು ಇಂಧನ ದರವನ್ನು ಮತ್ತೊಂದು ದಾಖಲೆಗೆ ಕೊಂಡೊಯ್ದಿದೆ. ಅದು ಈಗ ಮೆಟ್ರೋಗಳಲ್ಲದೇ ಎರಡನೇ ಹಂತದ ನಗರಗಳಲ್ಲೂ ಗರಿಷ್ಠ ಮಟ್ಟ ತಲುಪುತ್ತಿದೆ.

ಐದು ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಘೋಷಣೆಯಾದ ಒಂದೆರಡು ದಿನಗಳ ನಂತರ,  ಅಂದರೆ ಮೇ 2 ರಿಂದ 35 ದಿನಗಳಲ್ಲಿ 20 ದಿನ ಇಂಧನ ದರ ಹೆಚ್ಚಿಸಲಾಗಿದೆ. ಅಂದರೆ ಚುನಾವಣೆ ನಂತರ ಪೆಟ್ರೋಲ್ ಪ್ರತಿ ಲೀಟರ್‌ಗೆ 4,91  ರೂ ಮತ್ತು ಡೀಸೆಲ್  5.49 ರೂ ಏರಿಕೆ ಕಂಡಿವೆ.

ದೆಹಲಿಯಲ್ಲಿ ಸೋಮವಾರ ಪೆಟ್ರೋಲ್‍ ಪ್ರತಿ ಲೀಟರ್‌ಗೆ 95.31 ರೂ. ಮತ್ತು ಡೀಸೆಲ್ ಲೀಟರ್‌ಗೆ. 86.22 ರೂ.ಗಳಿಗೆ ತಲುಪಿದೆ. ದೆಹಲಿಯಲ್ಲಿನ ಇಂಧನ ದರಗಳು ಇಡೀ ದೇಶಕ್ಕೆ ಮಾನದಂಡವಾಗಿದ್ದರೂ, ಎರಡು ಇಂಧನಗಳ ಚಿಲ್ಲರೆ ಬೆಲೆಗಳು ಸ್ಥಳದಿಂದ ಸ್ಥಳಕ್ಕೆ ಭಿನ್ನವಾಗಿರುತ್ತವೆ. ಏಕೆಂದರೆ ರಾಜ್ಯ ತೆರಿಗೆಗಳು ಮತ್ತು ಸ್ಥಳೀಯ ಸುಂಕಗಳಲ್ಲಿ ವ್ಯತ್ಯಾಸವಿದೆ.

ಮೇ 4 ರಿಂದ ಇಂಧನ ದರಗಳಲ್ಲಿ ಕಂಡು ಬಂದ ನಿರಂತರ ಏರಿಕೆಯು ದೇಶದ ವಿವಿಧ ನಗರಗಳಲ್ಲಿ, ವಿಶೇಷವಾಗಿ ಮಹಾರಾಷ್ಟ್ರ, ರಾಜಸ್ಥಾನ, ಆಂಧ್ರಪ್ರದೇಶ ಮತ್ತು ಮಧ್ಯಪ್ರದೇಶಗಳ ನಗರಗಳಲ್ಲಿ ಪೆಟ್ರೋಲ್ ದರ 100 ರೂ. ದಾಟುವಂತೆ ಮಾಡಿದೆ.

ಮುಂಬೈ, ರತ್ನಗಿರಿ, ಪರಭಾನಿ,  ಔರಂಗಾಬಾದ್, ಜೈಸಲ್ಮೇರ್, ಗಂಗಾನಗರ, ಬನ್ಸಾರ್, ಇಂದೋರ್, ಭೋಪಾಲ್, ಗ್ವಾಲಿಯರ್, ಗುಂಟೂರು ಮತ್ತು ಕಾಕಿನಾಡಗಳಲ್ಲಿ ಪೆಟ್ರೋಲ್‍ ಶತಕ ಬಾರಿಸಿದೆ.

ನಿನ್ನೆಯಿಂದ ಕರ್ನಾಟಕದ ಬಳ್ಳಾರಿ ಮತ್ತು ಶಿರಸಿಯಲ್ಲೂ ಪೆಟ್ರೋಲ್‍ ದರ 100 ರೂ. ದಾಟಿದೆ.

ಮಹಾನಗರಗಳಲ್ಲಿ ಮುಂಬೈ ಅತಿ ಹೆಚ್ಚು ಇಂಧನ ದರವನ್ನು ಹೊಂದಿದೆ. ಪೆಟ್ರೋಲ್ 101.53 ರೂ. ಮತ್ತು ಡೀಸೆಲ್  93.58 ರೂ.ಗಳಿಗೆ ಸದ್ಯ ಮಾರಾಟವಾಗುತ್ತಿವೆ.

ಅಂತರರಾಷ್ಟ್ರೀಯ ತೈಲ ದರಗಳು ಮತ್ತು ಅತಿಯಾದ ದೇಶಿ ತೆರಿಗೆಗಳು ಇಂಧನ ದರ ಏರಿಕೆಗೆ ಎರಡು ಪ್ರಮುಖ ಕಾರಣಗಳು.

ಭಾರತೀಯ ತೈಲ ಮಾರಾಟ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್‌ನ ಪಂಪ್ ಬೆಲೆಯನ್ನು, ಹಿಂದಿನ ದಿನದ ಅಂತರರಾಷ್ಟ್ರೀಯ ಮಾನದಂಡ ದರಗಳೊಂದಿಗೆ ಜೋಡಿಸುತ್ತಾರೆ. ಬೆಂಚ್‌ ಮಾರ್ಕ್ ಎನಿಸಿದ ಬ್ರೆಂಟ್ ಕಚ್ಚಾ ತೈಲ ಗುರುವಾರ ಶೇ. 0.06 ರಷ್ಟು ಕುಸಿದು ಪ್ರತಿ ಬ್ಯಾರೆಲ್‌ಗೆ 71.31 ಡಾಲರ್‌ಗೆ ತಲುಪಿತ್ತು,  ಶುಕ್ರವಾರ ಶೇ. 0.81 ಏರಿಕೆ ಕಂಡು ಬ್ಯಾರೆಲ್‌ಗೆ 71.89 ಡಾಲರ್‌ಗೆ ತಲುಪಿದೆ. ಆದರೆ, ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಇದು ಶೇ.0.56 ಕುಸಿದು ಪ್ರತಿ ಬ್ಯಾರೆಲ್‌ಗೆ 71.49 ಡಾಲರಿಗೆ ತಲುಪಿದೆ.

ತೆರಿಗೆಯಿಂದಾಗಿ ಇಂಧನಗಳ ಬೆಲೆ ಕೂಡ ಹೆಚ್ಚಾಗಿದೆ. ದೆಹಲಿಯಲ್ಲಿ, ಜೂನ್ 1 ರ ಅಧಿಕೃತ ಮಾಹಿತಿಯ ಪ್ರಕಾರ, ಪೆಟ್ರೋಲ್‍ ದರದಲ್ಲಿ ಕೇಂದ್ರ ಮತ್ತು ರಾಜ್ಯ ತೆರಿಗೆಗಳ ಪಾಲು ಶೇ. 34.8 ಮತ್ತು ಶೇ. 23.08 ರಷ್ಟಿದೆ. ಡೀಸೆಲ್‍ನಲ್ಲಿ ಕೇಂದ್ರ ತೆರಿಗೆಗಳು ಶೇ. 37.24ಕ್ಕಿಂತ ಹೆಚ್ಚಿದ್ದರೆ, ರಾಜ್ಯ ತೆರಿಗೆಗಳು ಶೇ. 14.64 ರಷ್ಟಿದೆ.

2020ರ ಹೊತ್ತಿಗೆ, ಜಾಗತಿಕ ಕಚ್ಚಾ ಬೆಲೆಗಳು ಕುಸಿಯುತ್ತಿದ್ದಂತೆ, ಕೇಂದ್ರ ಸರ್ಕಾರವು ತನ್ನ ಹಣಕಾಸನ್ನು ಹೆಚ್ಚಿಸಲು ಇಂಧನದ ಮೇಲೆ ಅಬಕಾರಿ ಸುಂಕವನ್ನು ಹೆಚ್ಚಿಸಿತು. ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಆದಾಯವು ಕಡಿಮೆಯಾಗಿದೆ ಎಂದು ಕೇಂದ್ರ ನೆಪ ಹೇಳಿತ್ತು.

ಕಳೆದ ಒಂದು ತಿಂಗಳಲ್ಲಿ ಅಂತರರಾಷ್ಟ್ರೀಯ ತೈಲ ಬೆಲೆಗಳು  ಏರಿಳಿಕೆ ಕಂಡಿವೆ. ಆದರೆ ಭಾರತದಲ್ಲಿ ಮಾತ್ರ ಕೇವಲ ಮೇಲ್ಮುಖವಾಗಿ ಸಾಗಿವೆ. ಉದಾಹರಣೆಗೆ, ಮೇ 20 ರಂದು ಬ್ರೆಂಟ್ ಕಚ್ಚಾ ದರ 65.11 ಡಾಲರ್‌ಗೆ ಕುಸಿದಿತ್ತು. 34 ದಿನಗಳಲ್ಲಿ ಇದು ಅತ್ಯಂತ ಕಡಿಮೆ ದರವಾಗಿತ್ತು. ಆದರೆ ಭಾರತದಲ್ಲಿ ಮರುದಿನ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಕ್ರಮವಾಗಿ 19 ಪೈಸೆ ಮತ್ತು  29 ಪೈಸೆ ಏರಿಕೆ ಮಾಡಲಾಗಿತು.

ಚುನಾವಣೆಯ ಕಾರಣದಿಂದ ಫೆಬ್ರವರಿ 26ರಿಂದ 66 ದಿನಗಳ ಕಾಲ ದರ ಏರಿಕೆ ಮಾಡದೇ ಇದ್ದುದರಿಂದ ತೈಲ ಮಾರಾಟ ಕಂಪನಿಗಳಿಗೆ ಆದಾಯ ನಷ್ಟವಾಗಿತ್ತು. ಹೀಗಾಗಿ ಚುನಾವಣೆಗಳ ನಂತರ ಅವು ಆ ನಷ್ಟ ತುಂಬಿಕೊಳ್ಳಲು ದರ ಏರಿಕೆ ಮಾಡುತ್ತಿವೆ ಎಂದು ಸರ್ಕಾರಿ  ತೈಲ ಕಂಪನಿಗಳ ಅಧಿಕಾರಿಗಳು ಸಮರ್ಥಿಸುತ್ತಾರೆ.


ಇದನ್ನೂ ಓದಿ: ಹೊಸ ಪ್ರವಾಸೋದ್ಯಮ ನೀತಿ ವಿರೋಧಿಸಿ ಲಕ್ಷದ್ವೀಪ ನಿವಾಸಿಗಳಿಂದ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...