Homeಮುಖಪುಟಇಂಧನ ಬೆಲೆ: ಚುನಾವಣೆ ನಂತರದ 35 ದಿನದಲ್ಲಿ 20 ಸಲ ಹೆಚ್ಚಳ! - ಬಳ್ಳಾರಿ, ಶಿರಸಿಗಳಲ್ಲಿ...

ಇಂಧನ ಬೆಲೆ: ಚುನಾವಣೆ ನಂತರದ 35 ದಿನದಲ್ಲಿ 20 ಸಲ ಹೆಚ್ಚಳ! – ಬಳ್ಳಾರಿ, ಶಿರಸಿಗಳಲ್ಲಿ ಸೆಂಚುರಿ ಬಾರಿಸಿದ ಪೆಟ್ರೋಲ್‍

- Advertisement -
- Advertisement -

ಸರ್ಕಾರಿ ತೈಲ ಕಂಪನಿಗಳು ಸೋಮವಾರ ಪೆಟ್ರೋಲ್ ದರವನ್ನು ಲೀಟರ್‌ಗೆ 28 ಪೈಸೆ ಮತ್ತು ಡೀಸೆಲ್ ದರವನ್ನು 27 ಪೈಸೆ ಹೆಚ್ಚಿಸಿವೆ. ಇತ್ತೀಚಿನ ಹೆಚ್ಚಳವು ಇಂಧನ ದರವನ್ನು ಮತ್ತೊಂದು ದಾಖಲೆಗೆ ಕೊಂಡೊಯ್ದಿದೆ. ಅದು ಈಗ ಮೆಟ್ರೋಗಳಲ್ಲದೇ ಎರಡನೇ ಹಂತದ ನಗರಗಳಲ್ಲೂ ಗರಿಷ್ಠ ಮಟ್ಟ ತಲುಪುತ್ತಿದೆ.

ಐದು ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಘೋಷಣೆಯಾದ ಒಂದೆರಡು ದಿನಗಳ ನಂತರ,  ಅಂದರೆ ಮೇ 2 ರಿಂದ 35 ದಿನಗಳಲ್ಲಿ 20 ದಿನ ಇಂಧನ ದರ ಹೆಚ್ಚಿಸಲಾಗಿದೆ. ಅಂದರೆ ಚುನಾವಣೆ ನಂತರ ಪೆಟ್ರೋಲ್ ಪ್ರತಿ ಲೀಟರ್‌ಗೆ 4,91  ರೂ ಮತ್ತು ಡೀಸೆಲ್  5.49 ರೂ ಏರಿಕೆ ಕಂಡಿವೆ.

ದೆಹಲಿಯಲ್ಲಿ ಸೋಮವಾರ ಪೆಟ್ರೋಲ್‍ ಪ್ರತಿ ಲೀಟರ್‌ಗೆ 95.31 ರೂ. ಮತ್ತು ಡೀಸೆಲ್ ಲೀಟರ್‌ಗೆ. 86.22 ರೂ.ಗಳಿಗೆ ತಲುಪಿದೆ. ದೆಹಲಿಯಲ್ಲಿನ ಇಂಧನ ದರಗಳು ಇಡೀ ದೇಶಕ್ಕೆ ಮಾನದಂಡವಾಗಿದ್ದರೂ, ಎರಡು ಇಂಧನಗಳ ಚಿಲ್ಲರೆ ಬೆಲೆಗಳು ಸ್ಥಳದಿಂದ ಸ್ಥಳಕ್ಕೆ ಭಿನ್ನವಾಗಿರುತ್ತವೆ. ಏಕೆಂದರೆ ರಾಜ್ಯ ತೆರಿಗೆಗಳು ಮತ್ತು ಸ್ಥಳೀಯ ಸುಂಕಗಳಲ್ಲಿ ವ್ಯತ್ಯಾಸವಿದೆ.

ಮೇ 4 ರಿಂದ ಇಂಧನ ದರಗಳಲ್ಲಿ ಕಂಡು ಬಂದ ನಿರಂತರ ಏರಿಕೆಯು ದೇಶದ ವಿವಿಧ ನಗರಗಳಲ್ಲಿ, ವಿಶೇಷವಾಗಿ ಮಹಾರಾಷ್ಟ್ರ, ರಾಜಸ್ಥಾನ, ಆಂಧ್ರಪ್ರದೇಶ ಮತ್ತು ಮಧ್ಯಪ್ರದೇಶಗಳ ನಗರಗಳಲ್ಲಿ ಪೆಟ್ರೋಲ್ ದರ 100 ರೂ. ದಾಟುವಂತೆ ಮಾಡಿದೆ.

ಮುಂಬೈ, ರತ್ನಗಿರಿ, ಪರಭಾನಿ,  ಔರಂಗಾಬಾದ್, ಜೈಸಲ್ಮೇರ್, ಗಂಗಾನಗರ, ಬನ್ಸಾರ್, ಇಂದೋರ್, ಭೋಪಾಲ್, ಗ್ವಾಲಿಯರ್, ಗುಂಟೂರು ಮತ್ತು ಕಾಕಿನಾಡಗಳಲ್ಲಿ ಪೆಟ್ರೋಲ್‍ ಶತಕ ಬಾರಿಸಿದೆ.

ನಿನ್ನೆಯಿಂದ ಕರ್ನಾಟಕದ ಬಳ್ಳಾರಿ ಮತ್ತು ಶಿರಸಿಯಲ್ಲೂ ಪೆಟ್ರೋಲ್‍ ದರ 100 ರೂ. ದಾಟಿದೆ.

ಮಹಾನಗರಗಳಲ್ಲಿ ಮುಂಬೈ ಅತಿ ಹೆಚ್ಚು ಇಂಧನ ದರವನ್ನು ಹೊಂದಿದೆ. ಪೆಟ್ರೋಲ್ 101.53 ರೂ. ಮತ್ತು ಡೀಸೆಲ್  93.58 ರೂ.ಗಳಿಗೆ ಸದ್ಯ ಮಾರಾಟವಾಗುತ್ತಿವೆ.

ಅಂತರರಾಷ್ಟ್ರೀಯ ತೈಲ ದರಗಳು ಮತ್ತು ಅತಿಯಾದ ದೇಶಿ ತೆರಿಗೆಗಳು ಇಂಧನ ದರ ಏರಿಕೆಗೆ ಎರಡು ಪ್ರಮುಖ ಕಾರಣಗಳು.

ಭಾರತೀಯ ತೈಲ ಮಾರಾಟ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್‌ನ ಪಂಪ್ ಬೆಲೆಯನ್ನು, ಹಿಂದಿನ ದಿನದ ಅಂತರರಾಷ್ಟ್ರೀಯ ಮಾನದಂಡ ದರಗಳೊಂದಿಗೆ ಜೋಡಿಸುತ್ತಾರೆ. ಬೆಂಚ್‌ ಮಾರ್ಕ್ ಎನಿಸಿದ ಬ್ರೆಂಟ್ ಕಚ್ಚಾ ತೈಲ ಗುರುವಾರ ಶೇ. 0.06 ರಷ್ಟು ಕುಸಿದು ಪ್ರತಿ ಬ್ಯಾರೆಲ್‌ಗೆ 71.31 ಡಾಲರ್‌ಗೆ ತಲುಪಿತ್ತು,  ಶುಕ್ರವಾರ ಶೇ. 0.81 ಏರಿಕೆ ಕಂಡು ಬ್ಯಾರೆಲ್‌ಗೆ 71.89 ಡಾಲರ್‌ಗೆ ತಲುಪಿದೆ. ಆದರೆ, ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಇದು ಶೇ.0.56 ಕುಸಿದು ಪ್ರತಿ ಬ್ಯಾರೆಲ್‌ಗೆ 71.49 ಡಾಲರಿಗೆ ತಲುಪಿದೆ.

ತೆರಿಗೆಯಿಂದಾಗಿ ಇಂಧನಗಳ ಬೆಲೆ ಕೂಡ ಹೆಚ್ಚಾಗಿದೆ. ದೆಹಲಿಯಲ್ಲಿ, ಜೂನ್ 1 ರ ಅಧಿಕೃತ ಮಾಹಿತಿಯ ಪ್ರಕಾರ, ಪೆಟ್ರೋಲ್‍ ದರದಲ್ಲಿ ಕೇಂದ್ರ ಮತ್ತು ರಾಜ್ಯ ತೆರಿಗೆಗಳ ಪಾಲು ಶೇ. 34.8 ಮತ್ತು ಶೇ. 23.08 ರಷ್ಟಿದೆ. ಡೀಸೆಲ್‍ನಲ್ಲಿ ಕೇಂದ್ರ ತೆರಿಗೆಗಳು ಶೇ. 37.24ಕ್ಕಿಂತ ಹೆಚ್ಚಿದ್ದರೆ, ರಾಜ್ಯ ತೆರಿಗೆಗಳು ಶೇ. 14.64 ರಷ್ಟಿದೆ.

2020ರ ಹೊತ್ತಿಗೆ, ಜಾಗತಿಕ ಕಚ್ಚಾ ಬೆಲೆಗಳು ಕುಸಿಯುತ್ತಿದ್ದಂತೆ, ಕೇಂದ್ರ ಸರ್ಕಾರವು ತನ್ನ ಹಣಕಾಸನ್ನು ಹೆಚ್ಚಿಸಲು ಇಂಧನದ ಮೇಲೆ ಅಬಕಾರಿ ಸುಂಕವನ್ನು ಹೆಚ್ಚಿಸಿತು. ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಆದಾಯವು ಕಡಿಮೆಯಾಗಿದೆ ಎಂದು ಕೇಂದ್ರ ನೆಪ ಹೇಳಿತ್ತು.

ಕಳೆದ ಒಂದು ತಿಂಗಳಲ್ಲಿ ಅಂತರರಾಷ್ಟ್ರೀಯ ತೈಲ ಬೆಲೆಗಳು  ಏರಿಳಿಕೆ ಕಂಡಿವೆ. ಆದರೆ ಭಾರತದಲ್ಲಿ ಮಾತ್ರ ಕೇವಲ ಮೇಲ್ಮುಖವಾಗಿ ಸಾಗಿವೆ. ಉದಾಹರಣೆಗೆ, ಮೇ 20 ರಂದು ಬ್ರೆಂಟ್ ಕಚ್ಚಾ ದರ 65.11 ಡಾಲರ್‌ಗೆ ಕುಸಿದಿತ್ತು. 34 ದಿನಗಳಲ್ಲಿ ಇದು ಅತ್ಯಂತ ಕಡಿಮೆ ದರವಾಗಿತ್ತು. ಆದರೆ ಭಾರತದಲ್ಲಿ ಮರುದಿನ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಕ್ರಮವಾಗಿ 19 ಪೈಸೆ ಮತ್ತು  29 ಪೈಸೆ ಏರಿಕೆ ಮಾಡಲಾಗಿತು.

ಚುನಾವಣೆಯ ಕಾರಣದಿಂದ ಫೆಬ್ರವರಿ 26ರಿಂದ 66 ದಿನಗಳ ಕಾಲ ದರ ಏರಿಕೆ ಮಾಡದೇ ಇದ್ದುದರಿಂದ ತೈಲ ಮಾರಾಟ ಕಂಪನಿಗಳಿಗೆ ಆದಾಯ ನಷ್ಟವಾಗಿತ್ತು. ಹೀಗಾಗಿ ಚುನಾವಣೆಗಳ ನಂತರ ಅವು ಆ ನಷ್ಟ ತುಂಬಿಕೊಳ್ಳಲು ದರ ಏರಿಕೆ ಮಾಡುತ್ತಿವೆ ಎಂದು ಸರ್ಕಾರಿ  ತೈಲ ಕಂಪನಿಗಳ ಅಧಿಕಾರಿಗಳು ಸಮರ್ಥಿಸುತ್ತಾರೆ.


ಇದನ್ನೂ ಓದಿ: ಹೊಸ ಪ್ರವಾಸೋದ್ಯಮ ನೀತಿ ವಿರೋಧಿಸಿ ಲಕ್ಷದ್ವೀಪ ನಿವಾಸಿಗಳಿಂದ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...