Homeಮುಖಪುಟಇಂಧನ ಬೆಲೆ: ಚುನಾವಣೆ ನಂತರದ 35 ದಿನದಲ್ಲಿ 20 ಸಲ ಹೆಚ್ಚಳ! - ಬಳ್ಳಾರಿ, ಶಿರಸಿಗಳಲ್ಲಿ...

ಇಂಧನ ಬೆಲೆ: ಚುನಾವಣೆ ನಂತರದ 35 ದಿನದಲ್ಲಿ 20 ಸಲ ಹೆಚ್ಚಳ! – ಬಳ್ಳಾರಿ, ಶಿರಸಿಗಳಲ್ಲಿ ಸೆಂಚುರಿ ಬಾರಿಸಿದ ಪೆಟ್ರೋಲ್‍

- Advertisement -
- Advertisement -

ಸರ್ಕಾರಿ ತೈಲ ಕಂಪನಿಗಳು ಸೋಮವಾರ ಪೆಟ್ರೋಲ್ ದರವನ್ನು ಲೀಟರ್‌ಗೆ 28 ಪೈಸೆ ಮತ್ತು ಡೀಸೆಲ್ ದರವನ್ನು 27 ಪೈಸೆ ಹೆಚ್ಚಿಸಿವೆ. ಇತ್ತೀಚಿನ ಹೆಚ್ಚಳವು ಇಂಧನ ದರವನ್ನು ಮತ್ತೊಂದು ದಾಖಲೆಗೆ ಕೊಂಡೊಯ್ದಿದೆ. ಅದು ಈಗ ಮೆಟ್ರೋಗಳಲ್ಲದೇ ಎರಡನೇ ಹಂತದ ನಗರಗಳಲ್ಲೂ ಗರಿಷ್ಠ ಮಟ್ಟ ತಲುಪುತ್ತಿದೆ.

ಐದು ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಘೋಷಣೆಯಾದ ಒಂದೆರಡು ದಿನಗಳ ನಂತರ,  ಅಂದರೆ ಮೇ 2 ರಿಂದ 35 ದಿನಗಳಲ್ಲಿ 20 ದಿನ ಇಂಧನ ದರ ಹೆಚ್ಚಿಸಲಾಗಿದೆ. ಅಂದರೆ ಚುನಾವಣೆ ನಂತರ ಪೆಟ್ರೋಲ್ ಪ್ರತಿ ಲೀಟರ್‌ಗೆ 4,91  ರೂ ಮತ್ತು ಡೀಸೆಲ್  5.49 ರೂ ಏರಿಕೆ ಕಂಡಿವೆ.

ದೆಹಲಿಯಲ್ಲಿ ಸೋಮವಾರ ಪೆಟ್ರೋಲ್‍ ಪ್ರತಿ ಲೀಟರ್‌ಗೆ 95.31 ರೂ. ಮತ್ತು ಡೀಸೆಲ್ ಲೀಟರ್‌ಗೆ. 86.22 ರೂ.ಗಳಿಗೆ ತಲುಪಿದೆ. ದೆಹಲಿಯಲ್ಲಿನ ಇಂಧನ ದರಗಳು ಇಡೀ ದೇಶಕ್ಕೆ ಮಾನದಂಡವಾಗಿದ್ದರೂ, ಎರಡು ಇಂಧನಗಳ ಚಿಲ್ಲರೆ ಬೆಲೆಗಳು ಸ್ಥಳದಿಂದ ಸ್ಥಳಕ್ಕೆ ಭಿನ್ನವಾಗಿರುತ್ತವೆ. ಏಕೆಂದರೆ ರಾಜ್ಯ ತೆರಿಗೆಗಳು ಮತ್ತು ಸ್ಥಳೀಯ ಸುಂಕಗಳಲ್ಲಿ ವ್ಯತ್ಯಾಸವಿದೆ.

ಮೇ 4 ರಿಂದ ಇಂಧನ ದರಗಳಲ್ಲಿ ಕಂಡು ಬಂದ ನಿರಂತರ ಏರಿಕೆಯು ದೇಶದ ವಿವಿಧ ನಗರಗಳಲ್ಲಿ, ವಿಶೇಷವಾಗಿ ಮಹಾರಾಷ್ಟ್ರ, ರಾಜಸ್ಥಾನ, ಆಂಧ್ರಪ್ರದೇಶ ಮತ್ತು ಮಧ್ಯಪ್ರದೇಶಗಳ ನಗರಗಳಲ್ಲಿ ಪೆಟ್ರೋಲ್ ದರ 100 ರೂ. ದಾಟುವಂತೆ ಮಾಡಿದೆ.

ಮುಂಬೈ, ರತ್ನಗಿರಿ, ಪರಭಾನಿ,  ಔರಂಗಾಬಾದ್, ಜೈಸಲ್ಮೇರ್, ಗಂಗಾನಗರ, ಬನ್ಸಾರ್, ಇಂದೋರ್, ಭೋಪಾಲ್, ಗ್ವಾಲಿಯರ್, ಗುಂಟೂರು ಮತ್ತು ಕಾಕಿನಾಡಗಳಲ್ಲಿ ಪೆಟ್ರೋಲ್‍ ಶತಕ ಬಾರಿಸಿದೆ.

ನಿನ್ನೆಯಿಂದ ಕರ್ನಾಟಕದ ಬಳ್ಳಾರಿ ಮತ್ತು ಶಿರಸಿಯಲ್ಲೂ ಪೆಟ್ರೋಲ್‍ ದರ 100 ರೂ. ದಾಟಿದೆ.

ಮಹಾನಗರಗಳಲ್ಲಿ ಮುಂಬೈ ಅತಿ ಹೆಚ್ಚು ಇಂಧನ ದರವನ್ನು ಹೊಂದಿದೆ. ಪೆಟ್ರೋಲ್ 101.53 ರೂ. ಮತ್ತು ಡೀಸೆಲ್  93.58 ರೂ.ಗಳಿಗೆ ಸದ್ಯ ಮಾರಾಟವಾಗುತ್ತಿವೆ.

ಅಂತರರಾಷ್ಟ್ರೀಯ ತೈಲ ದರಗಳು ಮತ್ತು ಅತಿಯಾದ ದೇಶಿ ತೆರಿಗೆಗಳು ಇಂಧನ ದರ ಏರಿಕೆಗೆ ಎರಡು ಪ್ರಮುಖ ಕಾರಣಗಳು.

ಭಾರತೀಯ ತೈಲ ಮಾರಾಟ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್‌ನ ಪಂಪ್ ಬೆಲೆಯನ್ನು, ಹಿಂದಿನ ದಿನದ ಅಂತರರಾಷ್ಟ್ರೀಯ ಮಾನದಂಡ ದರಗಳೊಂದಿಗೆ ಜೋಡಿಸುತ್ತಾರೆ. ಬೆಂಚ್‌ ಮಾರ್ಕ್ ಎನಿಸಿದ ಬ್ರೆಂಟ್ ಕಚ್ಚಾ ತೈಲ ಗುರುವಾರ ಶೇ. 0.06 ರಷ್ಟು ಕುಸಿದು ಪ್ರತಿ ಬ್ಯಾರೆಲ್‌ಗೆ 71.31 ಡಾಲರ್‌ಗೆ ತಲುಪಿತ್ತು,  ಶುಕ್ರವಾರ ಶೇ. 0.81 ಏರಿಕೆ ಕಂಡು ಬ್ಯಾರೆಲ್‌ಗೆ 71.89 ಡಾಲರ್‌ಗೆ ತಲುಪಿದೆ. ಆದರೆ, ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಇದು ಶೇ.0.56 ಕುಸಿದು ಪ್ರತಿ ಬ್ಯಾರೆಲ್‌ಗೆ 71.49 ಡಾಲರಿಗೆ ತಲುಪಿದೆ.

ತೆರಿಗೆಯಿಂದಾಗಿ ಇಂಧನಗಳ ಬೆಲೆ ಕೂಡ ಹೆಚ್ಚಾಗಿದೆ. ದೆಹಲಿಯಲ್ಲಿ, ಜೂನ್ 1 ರ ಅಧಿಕೃತ ಮಾಹಿತಿಯ ಪ್ರಕಾರ, ಪೆಟ್ರೋಲ್‍ ದರದಲ್ಲಿ ಕೇಂದ್ರ ಮತ್ತು ರಾಜ್ಯ ತೆರಿಗೆಗಳ ಪಾಲು ಶೇ. 34.8 ಮತ್ತು ಶೇ. 23.08 ರಷ್ಟಿದೆ. ಡೀಸೆಲ್‍ನಲ್ಲಿ ಕೇಂದ್ರ ತೆರಿಗೆಗಳು ಶೇ. 37.24ಕ್ಕಿಂತ ಹೆಚ್ಚಿದ್ದರೆ, ರಾಜ್ಯ ತೆರಿಗೆಗಳು ಶೇ. 14.64 ರಷ್ಟಿದೆ.

2020ರ ಹೊತ್ತಿಗೆ, ಜಾಗತಿಕ ಕಚ್ಚಾ ಬೆಲೆಗಳು ಕುಸಿಯುತ್ತಿದ್ದಂತೆ, ಕೇಂದ್ರ ಸರ್ಕಾರವು ತನ್ನ ಹಣಕಾಸನ್ನು ಹೆಚ್ಚಿಸಲು ಇಂಧನದ ಮೇಲೆ ಅಬಕಾರಿ ಸುಂಕವನ್ನು ಹೆಚ್ಚಿಸಿತು. ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಆದಾಯವು ಕಡಿಮೆಯಾಗಿದೆ ಎಂದು ಕೇಂದ್ರ ನೆಪ ಹೇಳಿತ್ತು.

ಕಳೆದ ಒಂದು ತಿಂಗಳಲ್ಲಿ ಅಂತರರಾಷ್ಟ್ರೀಯ ತೈಲ ಬೆಲೆಗಳು  ಏರಿಳಿಕೆ ಕಂಡಿವೆ. ಆದರೆ ಭಾರತದಲ್ಲಿ ಮಾತ್ರ ಕೇವಲ ಮೇಲ್ಮುಖವಾಗಿ ಸಾಗಿವೆ. ಉದಾಹರಣೆಗೆ, ಮೇ 20 ರಂದು ಬ್ರೆಂಟ್ ಕಚ್ಚಾ ದರ 65.11 ಡಾಲರ್‌ಗೆ ಕುಸಿದಿತ್ತು. 34 ದಿನಗಳಲ್ಲಿ ಇದು ಅತ್ಯಂತ ಕಡಿಮೆ ದರವಾಗಿತ್ತು. ಆದರೆ ಭಾರತದಲ್ಲಿ ಮರುದಿನ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಕ್ರಮವಾಗಿ 19 ಪೈಸೆ ಮತ್ತು  29 ಪೈಸೆ ಏರಿಕೆ ಮಾಡಲಾಗಿತು.

ಚುನಾವಣೆಯ ಕಾರಣದಿಂದ ಫೆಬ್ರವರಿ 26ರಿಂದ 66 ದಿನಗಳ ಕಾಲ ದರ ಏರಿಕೆ ಮಾಡದೇ ಇದ್ದುದರಿಂದ ತೈಲ ಮಾರಾಟ ಕಂಪನಿಗಳಿಗೆ ಆದಾಯ ನಷ್ಟವಾಗಿತ್ತು. ಹೀಗಾಗಿ ಚುನಾವಣೆಗಳ ನಂತರ ಅವು ಆ ನಷ್ಟ ತುಂಬಿಕೊಳ್ಳಲು ದರ ಏರಿಕೆ ಮಾಡುತ್ತಿವೆ ಎಂದು ಸರ್ಕಾರಿ  ತೈಲ ಕಂಪನಿಗಳ ಅಧಿಕಾರಿಗಳು ಸಮರ್ಥಿಸುತ್ತಾರೆ.


ಇದನ್ನೂ ಓದಿ: ಹೊಸ ಪ್ರವಾಸೋದ್ಯಮ ನೀತಿ ವಿರೋಧಿಸಿ ಲಕ್ಷದ್ವೀಪ ನಿವಾಸಿಗಳಿಂದ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...