Homeಮುಖಪುಟಇಂಧನ ಬೆಲೆ: ಚುನಾವಣೆ ನಂತರದ 35 ದಿನದಲ್ಲಿ 20 ಸಲ ಹೆಚ್ಚಳ! - ಬಳ್ಳಾರಿ, ಶಿರಸಿಗಳಲ್ಲಿ...

ಇಂಧನ ಬೆಲೆ: ಚುನಾವಣೆ ನಂತರದ 35 ದಿನದಲ್ಲಿ 20 ಸಲ ಹೆಚ್ಚಳ! – ಬಳ್ಳಾರಿ, ಶಿರಸಿಗಳಲ್ಲಿ ಸೆಂಚುರಿ ಬಾರಿಸಿದ ಪೆಟ್ರೋಲ್‍

- Advertisement -
- Advertisement -

ಸರ್ಕಾರಿ ತೈಲ ಕಂಪನಿಗಳು ಸೋಮವಾರ ಪೆಟ್ರೋಲ್ ದರವನ್ನು ಲೀಟರ್‌ಗೆ 28 ಪೈಸೆ ಮತ್ತು ಡೀಸೆಲ್ ದರವನ್ನು 27 ಪೈಸೆ ಹೆಚ್ಚಿಸಿವೆ. ಇತ್ತೀಚಿನ ಹೆಚ್ಚಳವು ಇಂಧನ ದರವನ್ನು ಮತ್ತೊಂದು ದಾಖಲೆಗೆ ಕೊಂಡೊಯ್ದಿದೆ. ಅದು ಈಗ ಮೆಟ್ರೋಗಳಲ್ಲದೇ ಎರಡನೇ ಹಂತದ ನಗರಗಳಲ್ಲೂ ಗರಿಷ್ಠ ಮಟ್ಟ ತಲುಪುತ್ತಿದೆ.

ಐದು ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಘೋಷಣೆಯಾದ ಒಂದೆರಡು ದಿನಗಳ ನಂತರ,  ಅಂದರೆ ಮೇ 2 ರಿಂದ 35 ದಿನಗಳಲ್ಲಿ 20 ದಿನ ಇಂಧನ ದರ ಹೆಚ್ಚಿಸಲಾಗಿದೆ. ಅಂದರೆ ಚುನಾವಣೆ ನಂತರ ಪೆಟ್ರೋಲ್ ಪ್ರತಿ ಲೀಟರ್‌ಗೆ 4,91  ರೂ ಮತ್ತು ಡೀಸೆಲ್  5.49 ರೂ ಏರಿಕೆ ಕಂಡಿವೆ.

ದೆಹಲಿಯಲ್ಲಿ ಸೋಮವಾರ ಪೆಟ್ರೋಲ್‍ ಪ್ರತಿ ಲೀಟರ್‌ಗೆ 95.31 ರೂ. ಮತ್ತು ಡೀಸೆಲ್ ಲೀಟರ್‌ಗೆ. 86.22 ರೂ.ಗಳಿಗೆ ತಲುಪಿದೆ. ದೆಹಲಿಯಲ್ಲಿನ ಇಂಧನ ದರಗಳು ಇಡೀ ದೇಶಕ್ಕೆ ಮಾನದಂಡವಾಗಿದ್ದರೂ, ಎರಡು ಇಂಧನಗಳ ಚಿಲ್ಲರೆ ಬೆಲೆಗಳು ಸ್ಥಳದಿಂದ ಸ್ಥಳಕ್ಕೆ ಭಿನ್ನವಾಗಿರುತ್ತವೆ. ಏಕೆಂದರೆ ರಾಜ್ಯ ತೆರಿಗೆಗಳು ಮತ್ತು ಸ್ಥಳೀಯ ಸುಂಕಗಳಲ್ಲಿ ವ್ಯತ್ಯಾಸವಿದೆ.

ಮೇ 4 ರಿಂದ ಇಂಧನ ದರಗಳಲ್ಲಿ ಕಂಡು ಬಂದ ನಿರಂತರ ಏರಿಕೆಯು ದೇಶದ ವಿವಿಧ ನಗರಗಳಲ್ಲಿ, ವಿಶೇಷವಾಗಿ ಮಹಾರಾಷ್ಟ್ರ, ರಾಜಸ್ಥಾನ, ಆಂಧ್ರಪ್ರದೇಶ ಮತ್ತು ಮಧ್ಯಪ್ರದೇಶಗಳ ನಗರಗಳಲ್ಲಿ ಪೆಟ್ರೋಲ್ ದರ 100 ರೂ. ದಾಟುವಂತೆ ಮಾಡಿದೆ.

ಮುಂಬೈ, ರತ್ನಗಿರಿ, ಪರಭಾನಿ,  ಔರಂಗಾಬಾದ್, ಜೈಸಲ್ಮೇರ್, ಗಂಗಾನಗರ, ಬನ್ಸಾರ್, ಇಂದೋರ್, ಭೋಪಾಲ್, ಗ್ವಾಲಿಯರ್, ಗುಂಟೂರು ಮತ್ತು ಕಾಕಿನಾಡಗಳಲ್ಲಿ ಪೆಟ್ರೋಲ್‍ ಶತಕ ಬಾರಿಸಿದೆ.

ನಿನ್ನೆಯಿಂದ ಕರ್ನಾಟಕದ ಬಳ್ಳಾರಿ ಮತ್ತು ಶಿರಸಿಯಲ್ಲೂ ಪೆಟ್ರೋಲ್‍ ದರ 100 ರೂ. ದಾಟಿದೆ.

ಮಹಾನಗರಗಳಲ್ಲಿ ಮುಂಬೈ ಅತಿ ಹೆಚ್ಚು ಇಂಧನ ದರವನ್ನು ಹೊಂದಿದೆ. ಪೆಟ್ರೋಲ್ 101.53 ರೂ. ಮತ್ತು ಡೀಸೆಲ್  93.58 ರೂ.ಗಳಿಗೆ ಸದ್ಯ ಮಾರಾಟವಾಗುತ್ತಿವೆ.

ಅಂತರರಾಷ್ಟ್ರೀಯ ತೈಲ ದರಗಳು ಮತ್ತು ಅತಿಯಾದ ದೇಶಿ ತೆರಿಗೆಗಳು ಇಂಧನ ದರ ಏರಿಕೆಗೆ ಎರಡು ಪ್ರಮುಖ ಕಾರಣಗಳು.

ಭಾರತೀಯ ತೈಲ ಮಾರಾಟ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್‌ನ ಪಂಪ್ ಬೆಲೆಯನ್ನು, ಹಿಂದಿನ ದಿನದ ಅಂತರರಾಷ್ಟ್ರೀಯ ಮಾನದಂಡ ದರಗಳೊಂದಿಗೆ ಜೋಡಿಸುತ್ತಾರೆ. ಬೆಂಚ್‌ ಮಾರ್ಕ್ ಎನಿಸಿದ ಬ್ರೆಂಟ್ ಕಚ್ಚಾ ತೈಲ ಗುರುವಾರ ಶೇ. 0.06 ರಷ್ಟು ಕುಸಿದು ಪ್ರತಿ ಬ್ಯಾರೆಲ್‌ಗೆ 71.31 ಡಾಲರ್‌ಗೆ ತಲುಪಿತ್ತು,  ಶುಕ್ರವಾರ ಶೇ. 0.81 ಏರಿಕೆ ಕಂಡು ಬ್ಯಾರೆಲ್‌ಗೆ 71.89 ಡಾಲರ್‌ಗೆ ತಲುಪಿದೆ. ಆದರೆ, ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಇದು ಶೇ.0.56 ಕುಸಿದು ಪ್ರತಿ ಬ್ಯಾರೆಲ್‌ಗೆ 71.49 ಡಾಲರಿಗೆ ತಲುಪಿದೆ.

ತೆರಿಗೆಯಿಂದಾಗಿ ಇಂಧನಗಳ ಬೆಲೆ ಕೂಡ ಹೆಚ್ಚಾಗಿದೆ. ದೆಹಲಿಯಲ್ಲಿ, ಜೂನ್ 1 ರ ಅಧಿಕೃತ ಮಾಹಿತಿಯ ಪ್ರಕಾರ, ಪೆಟ್ರೋಲ್‍ ದರದಲ್ಲಿ ಕೇಂದ್ರ ಮತ್ತು ರಾಜ್ಯ ತೆರಿಗೆಗಳ ಪಾಲು ಶೇ. 34.8 ಮತ್ತು ಶೇ. 23.08 ರಷ್ಟಿದೆ. ಡೀಸೆಲ್‍ನಲ್ಲಿ ಕೇಂದ್ರ ತೆರಿಗೆಗಳು ಶೇ. 37.24ಕ್ಕಿಂತ ಹೆಚ್ಚಿದ್ದರೆ, ರಾಜ್ಯ ತೆರಿಗೆಗಳು ಶೇ. 14.64 ರಷ್ಟಿದೆ.

2020ರ ಹೊತ್ತಿಗೆ, ಜಾಗತಿಕ ಕಚ್ಚಾ ಬೆಲೆಗಳು ಕುಸಿಯುತ್ತಿದ್ದಂತೆ, ಕೇಂದ್ರ ಸರ್ಕಾರವು ತನ್ನ ಹಣಕಾಸನ್ನು ಹೆಚ್ಚಿಸಲು ಇಂಧನದ ಮೇಲೆ ಅಬಕಾರಿ ಸುಂಕವನ್ನು ಹೆಚ್ಚಿಸಿತು. ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಆದಾಯವು ಕಡಿಮೆಯಾಗಿದೆ ಎಂದು ಕೇಂದ್ರ ನೆಪ ಹೇಳಿತ್ತು.

ಕಳೆದ ಒಂದು ತಿಂಗಳಲ್ಲಿ ಅಂತರರಾಷ್ಟ್ರೀಯ ತೈಲ ಬೆಲೆಗಳು  ಏರಿಳಿಕೆ ಕಂಡಿವೆ. ಆದರೆ ಭಾರತದಲ್ಲಿ ಮಾತ್ರ ಕೇವಲ ಮೇಲ್ಮುಖವಾಗಿ ಸಾಗಿವೆ. ಉದಾಹರಣೆಗೆ, ಮೇ 20 ರಂದು ಬ್ರೆಂಟ್ ಕಚ್ಚಾ ದರ 65.11 ಡಾಲರ್‌ಗೆ ಕುಸಿದಿತ್ತು. 34 ದಿನಗಳಲ್ಲಿ ಇದು ಅತ್ಯಂತ ಕಡಿಮೆ ದರವಾಗಿತ್ತು. ಆದರೆ ಭಾರತದಲ್ಲಿ ಮರುದಿನ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಕ್ರಮವಾಗಿ 19 ಪೈಸೆ ಮತ್ತು  29 ಪೈಸೆ ಏರಿಕೆ ಮಾಡಲಾಗಿತು.

ಚುನಾವಣೆಯ ಕಾರಣದಿಂದ ಫೆಬ್ರವರಿ 26ರಿಂದ 66 ದಿನಗಳ ಕಾಲ ದರ ಏರಿಕೆ ಮಾಡದೇ ಇದ್ದುದರಿಂದ ತೈಲ ಮಾರಾಟ ಕಂಪನಿಗಳಿಗೆ ಆದಾಯ ನಷ್ಟವಾಗಿತ್ತು. ಹೀಗಾಗಿ ಚುನಾವಣೆಗಳ ನಂತರ ಅವು ಆ ನಷ್ಟ ತುಂಬಿಕೊಳ್ಳಲು ದರ ಏರಿಕೆ ಮಾಡುತ್ತಿವೆ ಎಂದು ಸರ್ಕಾರಿ  ತೈಲ ಕಂಪನಿಗಳ ಅಧಿಕಾರಿಗಳು ಸಮರ್ಥಿಸುತ್ತಾರೆ.


ಇದನ್ನೂ ಓದಿ: ಹೊಸ ಪ್ರವಾಸೋದ್ಯಮ ನೀತಿ ವಿರೋಧಿಸಿ ಲಕ್ಷದ್ವೀಪ ನಿವಾಸಿಗಳಿಂದ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...