Homeಮುಖಪುಟಇಂಧನ ಬೆಲೆ: ಚುನಾವಣೆ ನಂತರದ 35 ದಿನದಲ್ಲಿ 20 ಸಲ ಹೆಚ್ಚಳ! - ಬಳ್ಳಾರಿ, ಶಿರಸಿಗಳಲ್ಲಿ...

ಇಂಧನ ಬೆಲೆ: ಚುನಾವಣೆ ನಂತರದ 35 ದಿನದಲ್ಲಿ 20 ಸಲ ಹೆಚ್ಚಳ! – ಬಳ್ಳಾರಿ, ಶಿರಸಿಗಳಲ್ಲಿ ಸೆಂಚುರಿ ಬಾರಿಸಿದ ಪೆಟ್ರೋಲ್‍

- Advertisement -
- Advertisement -

ಸರ್ಕಾರಿ ತೈಲ ಕಂಪನಿಗಳು ಸೋಮವಾರ ಪೆಟ್ರೋಲ್ ದರವನ್ನು ಲೀಟರ್‌ಗೆ 28 ಪೈಸೆ ಮತ್ತು ಡೀಸೆಲ್ ದರವನ್ನು 27 ಪೈಸೆ ಹೆಚ್ಚಿಸಿವೆ. ಇತ್ತೀಚಿನ ಹೆಚ್ಚಳವು ಇಂಧನ ದರವನ್ನು ಮತ್ತೊಂದು ದಾಖಲೆಗೆ ಕೊಂಡೊಯ್ದಿದೆ. ಅದು ಈಗ ಮೆಟ್ರೋಗಳಲ್ಲದೇ ಎರಡನೇ ಹಂತದ ನಗರಗಳಲ್ಲೂ ಗರಿಷ್ಠ ಮಟ್ಟ ತಲುಪುತ್ತಿದೆ.

ಐದು ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಘೋಷಣೆಯಾದ ಒಂದೆರಡು ದಿನಗಳ ನಂತರ,  ಅಂದರೆ ಮೇ 2 ರಿಂದ 35 ದಿನಗಳಲ್ಲಿ 20 ದಿನ ಇಂಧನ ದರ ಹೆಚ್ಚಿಸಲಾಗಿದೆ. ಅಂದರೆ ಚುನಾವಣೆ ನಂತರ ಪೆಟ್ರೋಲ್ ಪ್ರತಿ ಲೀಟರ್‌ಗೆ 4,91  ರೂ ಮತ್ತು ಡೀಸೆಲ್  5.49 ರೂ ಏರಿಕೆ ಕಂಡಿವೆ.

ದೆಹಲಿಯಲ್ಲಿ ಸೋಮವಾರ ಪೆಟ್ರೋಲ್‍ ಪ್ರತಿ ಲೀಟರ್‌ಗೆ 95.31 ರೂ. ಮತ್ತು ಡೀಸೆಲ್ ಲೀಟರ್‌ಗೆ. 86.22 ರೂ.ಗಳಿಗೆ ತಲುಪಿದೆ. ದೆಹಲಿಯಲ್ಲಿನ ಇಂಧನ ದರಗಳು ಇಡೀ ದೇಶಕ್ಕೆ ಮಾನದಂಡವಾಗಿದ್ದರೂ, ಎರಡು ಇಂಧನಗಳ ಚಿಲ್ಲರೆ ಬೆಲೆಗಳು ಸ್ಥಳದಿಂದ ಸ್ಥಳಕ್ಕೆ ಭಿನ್ನವಾಗಿರುತ್ತವೆ. ಏಕೆಂದರೆ ರಾಜ್ಯ ತೆರಿಗೆಗಳು ಮತ್ತು ಸ್ಥಳೀಯ ಸುಂಕಗಳಲ್ಲಿ ವ್ಯತ್ಯಾಸವಿದೆ.

ಮೇ 4 ರಿಂದ ಇಂಧನ ದರಗಳಲ್ಲಿ ಕಂಡು ಬಂದ ನಿರಂತರ ಏರಿಕೆಯು ದೇಶದ ವಿವಿಧ ನಗರಗಳಲ್ಲಿ, ವಿಶೇಷವಾಗಿ ಮಹಾರಾಷ್ಟ್ರ, ರಾಜಸ್ಥಾನ, ಆಂಧ್ರಪ್ರದೇಶ ಮತ್ತು ಮಧ್ಯಪ್ರದೇಶಗಳ ನಗರಗಳಲ್ಲಿ ಪೆಟ್ರೋಲ್ ದರ 100 ರೂ. ದಾಟುವಂತೆ ಮಾಡಿದೆ.

ಮುಂಬೈ, ರತ್ನಗಿರಿ, ಪರಭಾನಿ,  ಔರಂಗಾಬಾದ್, ಜೈಸಲ್ಮೇರ್, ಗಂಗಾನಗರ, ಬನ್ಸಾರ್, ಇಂದೋರ್, ಭೋಪಾಲ್, ಗ್ವಾಲಿಯರ್, ಗುಂಟೂರು ಮತ್ತು ಕಾಕಿನಾಡಗಳಲ್ಲಿ ಪೆಟ್ರೋಲ್‍ ಶತಕ ಬಾರಿಸಿದೆ.

ನಿನ್ನೆಯಿಂದ ಕರ್ನಾಟಕದ ಬಳ್ಳಾರಿ ಮತ್ತು ಶಿರಸಿಯಲ್ಲೂ ಪೆಟ್ರೋಲ್‍ ದರ 100 ರೂ. ದಾಟಿದೆ.

ಮಹಾನಗರಗಳಲ್ಲಿ ಮುಂಬೈ ಅತಿ ಹೆಚ್ಚು ಇಂಧನ ದರವನ್ನು ಹೊಂದಿದೆ. ಪೆಟ್ರೋಲ್ 101.53 ರೂ. ಮತ್ತು ಡೀಸೆಲ್  93.58 ರೂ.ಗಳಿಗೆ ಸದ್ಯ ಮಾರಾಟವಾಗುತ್ತಿವೆ.

ಅಂತರರಾಷ್ಟ್ರೀಯ ತೈಲ ದರಗಳು ಮತ್ತು ಅತಿಯಾದ ದೇಶಿ ತೆರಿಗೆಗಳು ಇಂಧನ ದರ ಏರಿಕೆಗೆ ಎರಡು ಪ್ರಮುಖ ಕಾರಣಗಳು.

ಭಾರತೀಯ ತೈಲ ಮಾರಾಟ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್‌ನ ಪಂಪ್ ಬೆಲೆಯನ್ನು, ಹಿಂದಿನ ದಿನದ ಅಂತರರಾಷ್ಟ್ರೀಯ ಮಾನದಂಡ ದರಗಳೊಂದಿಗೆ ಜೋಡಿಸುತ್ತಾರೆ. ಬೆಂಚ್‌ ಮಾರ್ಕ್ ಎನಿಸಿದ ಬ್ರೆಂಟ್ ಕಚ್ಚಾ ತೈಲ ಗುರುವಾರ ಶೇ. 0.06 ರಷ್ಟು ಕುಸಿದು ಪ್ರತಿ ಬ್ಯಾರೆಲ್‌ಗೆ 71.31 ಡಾಲರ್‌ಗೆ ತಲುಪಿತ್ತು,  ಶುಕ್ರವಾರ ಶೇ. 0.81 ಏರಿಕೆ ಕಂಡು ಬ್ಯಾರೆಲ್‌ಗೆ 71.89 ಡಾಲರ್‌ಗೆ ತಲುಪಿದೆ. ಆದರೆ, ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಇದು ಶೇ.0.56 ಕುಸಿದು ಪ್ರತಿ ಬ್ಯಾರೆಲ್‌ಗೆ 71.49 ಡಾಲರಿಗೆ ತಲುಪಿದೆ.

ತೆರಿಗೆಯಿಂದಾಗಿ ಇಂಧನಗಳ ಬೆಲೆ ಕೂಡ ಹೆಚ್ಚಾಗಿದೆ. ದೆಹಲಿಯಲ್ಲಿ, ಜೂನ್ 1 ರ ಅಧಿಕೃತ ಮಾಹಿತಿಯ ಪ್ರಕಾರ, ಪೆಟ್ರೋಲ್‍ ದರದಲ್ಲಿ ಕೇಂದ್ರ ಮತ್ತು ರಾಜ್ಯ ತೆರಿಗೆಗಳ ಪಾಲು ಶೇ. 34.8 ಮತ್ತು ಶೇ. 23.08 ರಷ್ಟಿದೆ. ಡೀಸೆಲ್‍ನಲ್ಲಿ ಕೇಂದ್ರ ತೆರಿಗೆಗಳು ಶೇ. 37.24ಕ್ಕಿಂತ ಹೆಚ್ಚಿದ್ದರೆ, ರಾಜ್ಯ ತೆರಿಗೆಗಳು ಶೇ. 14.64 ರಷ್ಟಿದೆ.

2020ರ ಹೊತ್ತಿಗೆ, ಜಾಗತಿಕ ಕಚ್ಚಾ ಬೆಲೆಗಳು ಕುಸಿಯುತ್ತಿದ್ದಂತೆ, ಕೇಂದ್ರ ಸರ್ಕಾರವು ತನ್ನ ಹಣಕಾಸನ್ನು ಹೆಚ್ಚಿಸಲು ಇಂಧನದ ಮೇಲೆ ಅಬಕಾರಿ ಸುಂಕವನ್ನು ಹೆಚ್ಚಿಸಿತು. ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಆದಾಯವು ಕಡಿಮೆಯಾಗಿದೆ ಎಂದು ಕೇಂದ್ರ ನೆಪ ಹೇಳಿತ್ತು.

ಕಳೆದ ಒಂದು ತಿಂಗಳಲ್ಲಿ ಅಂತರರಾಷ್ಟ್ರೀಯ ತೈಲ ಬೆಲೆಗಳು  ಏರಿಳಿಕೆ ಕಂಡಿವೆ. ಆದರೆ ಭಾರತದಲ್ಲಿ ಮಾತ್ರ ಕೇವಲ ಮೇಲ್ಮುಖವಾಗಿ ಸಾಗಿವೆ. ಉದಾಹರಣೆಗೆ, ಮೇ 20 ರಂದು ಬ್ರೆಂಟ್ ಕಚ್ಚಾ ದರ 65.11 ಡಾಲರ್‌ಗೆ ಕುಸಿದಿತ್ತು. 34 ದಿನಗಳಲ್ಲಿ ಇದು ಅತ್ಯಂತ ಕಡಿಮೆ ದರವಾಗಿತ್ತು. ಆದರೆ ಭಾರತದಲ್ಲಿ ಮರುದಿನ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಕ್ರಮವಾಗಿ 19 ಪೈಸೆ ಮತ್ತು  29 ಪೈಸೆ ಏರಿಕೆ ಮಾಡಲಾಗಿತು.

ಚುನಾವಣೆಯ ಕಾರಣದಿಂದ ಫೆಬ್ರವರಿ 26ರಿಂದ 66 ದಿನಗಳ ಕಾಲ ದರ ಏರಿಕೆ ಮಾಡದೇ ಇದ್ದುದರಿಂದ ತೈಲ ಮಾರಾಟ ಕಂಪನಿಗಳಿಗೆ ಆದಾಯ ನಷ್ಟವಾಗಿತ್ತು. ಹೀಗಾಗಿ ಚುನಾವಣೆಗಳ ನಂತರ ಅವು ಆ ನಷ್ಟ ತುಂಬಿಕೊಳ್ಳಲು ದರ ಏರಿಕೆ ಮಾಡುತ್ತಿವೆ ಎಂದು ಸರ್ಕಾರಿ  ತೈಲ ಕಂಪನಿಗಳ ಅಧಿಕಾರಿಗಳು ಸಮರ್ಥಿಸುತ್ತಾರೆ.


ಇದನ್ನೂ ಓದಿ: ಹೊಸ ಪ್ರವಾಸೋದ್ಯಮ ನೀತಿ ವಿರೋಧಿಸಿ ಲಕ್ಷದ್ವೀಪ ನಿವಾಸಿಗಳಿಂದ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...