Homeಮುಖಪುಟಇಂಧನ ಬೆಲೆ: ಚುನಾವಣೆ ನಂತರದ 35 ದಿನದಲ್ಲಿ 20 ಸಲ ಹೆಚ್ಚಳ! - ಬಳ್ಳಾರಿ, ಶಿರಸಿಗಳಲ್ಲಿ...

ಇಂಧನ ಬೆಲೆ: ಚುನಾವಣೆ ನಂತರದ 35 ದಿನದಲ್ಲಿ 20 ಸಲ ಹೆಚ್ಚಳ! – ಬಳ್ಳಾರಿ, ಶಿರಸಿಗಳಲ್ಲಿ ಸೆಂಚುರಿ ಬಾರಿಸಿದ ಪೆಟ್ರೋಲ್‍

- Advertisement -
- Advertisement -

ಸರ್ಕಾರಿ ತೈಲ ಕಂಪನಿಗಳು ಸೋಮವಾರ ಪೆಟ್ರೋಲ್ ದರವನ್ನು ಲೀಟರ್‌ಗೆ 28 ಪೈಸೆ ಮತ್ತು ಡೀಸೆಲ್ ದರವನ್ನು 27 ಪೈಸೆ ಹೆಚ್ಚಿಸಿವೆ. ಇತ್ತೀಚಿನ ಹೆಚ್ಚಳವು ಇಂಧನ ದರವನ್ನು ಮತ್ತೊಂದು ದಾಖಲೆಗೆ ಕೊಂಡೊಯ್ದಿದೆ. ಅದು ಈಗ ಮೆಟ್ರೋಗಳಲ್ಲದೇ ಎರಡನೇ ಹಂತದ ನಗರಗಳಲ್ಲೂ ಗರಿಷ್ಠ ಮಟ್ಟ ತಲುಪುತ್ತಿದೆ.

ಐದು ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಘೋಷಣೆಯಾದ ಒಂದೆರಡು ದಿನಗಳ ನಂತರ,  ಅಂದರೆ ಮೇ 2 ರಿಂದ 35 ದಿನಗಳಲ್ಲಿ 20 ದಿನ ಇಂಧನ ದರ ಹೆಚ್ಚಿಸಲಾಗಿದೆ. ಅಂದರೆ ಚುನಾವಣೆ ನಂತರ ಪೆಟ್ರೋಲ್ ಪ್ರತಿ ಲೀಟರ್‌ಗೆ 4,91  ರೂ ಮತ್ತು ಡೀಸೆಲ್  5.49 ರೂ ಏರಿಕೆ ಕಂಡಿವೆ.

ದೆಹಲಿಯಲ್ಲಿ ಸೋಮವಾರ ಪೆಟ್ರೋಲ್‍ ಪ್ರತಿ ಲೀಟರ್‌ಗೆ 95.31 ರೂ. ಮತ್ತು ಡೀಸೆಲ್ ಲೀಟರ್‌ಗೆ. 86.22 ರೂ.ಗಳಿಗೆ ತಲುಪಿದೆ. ದೆಹಲಿಯಲ್ಲಿನ ಇಂಧನ ದರಗಳು ಇಡೀ ದೇಶಕ್ಕೆ ಮಾನದಂಡವಾಗಿದ್ದರೂ, ಎರಡು ಇಂಧನಗಳ ಚಿಲ್ಲರೆ ಬೆಲೆಗಳು ಸ್ಥಳದಿಂದ ಸ್ಥಳಕ್ಕೆ ಭಿನ್ನವಾಗಿರುತ್ತವೆ. ಏಕೆಂದರೆ ರಾಜ್ಯ ತೆರಿಗೆಗಳು ಮತ್ತು ಸ್ಥಳೀಯ ಸುಂಕಗಳಲ್ಲಿ ವ್ಯತ್ಯಾಸವಿದೆ.

ಮೇ 4 ರಿಂದ ಇಂಧನ ದರಗಳಲ್ಲಿ ಕಂಡು ಬಂದ ನಿರಂತರ ಏರಿಕೆಯು ದೇಶದ ವಿವಿಧ ನಗರಗಳಲ್ಲಿ, ವಿಶೇಷವಾಗಿ ಮಹಾರಾಷ್ಟ್ರ, ರಾಜಸ್ಥಾನ, ಆಂಧ್ರಪ್ರದೇಶ ಮತ್ತು ಮಧ್ಯಪ್ರದೇಶಗಳ ನಗರಗಳಲ್ಲಿ ಪೆಟ್ರೋಲ್ ದರ 100 ರೂ. ದಾಟುವಂತೆ ಮಾಡಿದೆ.

ಮುಂಬೈ, ರತ್ನಗಿರಿ, ಪರಭಾನಿ,  ಔರಂಗಾಬಾದ್, ಜೈಸಲ್ಮೇರ್, ಗಂಗಾನಗರ, ಬನ್ಸಾರ್, ಇಂದೋರ್, ಭೋಪಾಲ್, ಗ್ವಾಲಿಯರ್, ಗುಂಟೂರು ಮತ್ತು ಕಾಕಿನಾಡಗಳಲ್ಲಿ ಪೆಟ್ರೋಲ್‍ ಶತಕ ಬಾರಿಸಿದೆ.

ನಿನ್ನೆಯಿಂದ ಕರ್ನಾಟಕದ ಬಳ್ಳಾರಿ ಮತ್ತು ಶಿರಸಿಯಲ್ಲೂ ಪೆಟ್ರೋಲ್‍ ದರ 100 ರೂ. ದಾಟಿದೆ.

ಮಹಾನಗರಗಳಲ್ಲಿ ಮುಂಬೈ ಅತಿ ಹೆಚ್ಚು ಇಂಧನ ದರವನ್ನು ಹೊಂದಿದೆ. ಪೆಟ್ರೋಲ್ 101.53 ರೂ. ಮತ್ತು ಡೀಸೆಲ್  93.58 ರೂ.ಗಳಿಗೆ ಸದ್ಯ ಮಾರಾಟವಾಗುತ್ತಿವೆ.

ಅಂತರರಾಷ್ಟ್ರೀಯ ತೈಲ ದರಗಳು ಮತ್ತು ಅತಿಯಾದ ದೇಶಿ ತೆರಿಗೆಗಳು ಇಂಧನ ದರ ಏರಿಕೆಗೆ ಎರಡು ಪ್ರಮುಖ ಕಾರಣಗಳು.

ಭಾರತೀಯ ತೈಲ ಮಾರಾಟ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್‌ನ ಪಂಪ್ ಬೆಲೆಯನ್ನು, ಹಿಂದಿನ ದಿನದ ಅಂತರರಾಷ್ಟ್ರೀಯ ಮಾನದಂಡ ದರಗಳೊಂದಿಗೆ ಜೋಡಿಸುತ್ತಾರೆ. ಬೆಂಚ್‌ ಮಾರ್ಕ್ ಎನಿಸಿದ ಬ್ರೆಂಟ್ ಕಚ್ಚಾ ತೈಲ ಗುರುವಾರ ಶೇ. 0.06 ರಷ್ಟು ಕುಸಿದು ಪ್ರತಿ ಬ್ಯಾರೆಲ್‌ಗೆ 71.31 ಡಾಲರ್‌ಗೆ ತಲುಪಿತ್ತು,  ಶುಕ್ರವಾರ ಶೇ. 0.81 ಏರಿಕೆ ಕಂಡು ಬ್ಯಾರೆಲ್‌ಗೆ 71.89 ಡಾಲರ್‌ಗೆ ತಲುಪಿದೆ. ಆದರೆ, ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಇದು ಶೇ.0.56 ಕುಸಿದು ಪ್ರತಿ ಬ್ಯಾರೆಲ್‌ಗೆ 71.49 ಡಾಲರಿಗೆ ತಲುಪಿದೆ.

ತೆರಿಗೆಯಿಂದಾಗಿ ಇಂಧನಗಳ ಬೆಲೆ ಕೂಡ ಹೆಚ್ಚಾಗಿದೆ. ದೆಹಲಿಯಲ್ಲಿ, ಜೂನ್ 1 ರ ಅಧಿಕೃತ ಮಾಹಿತಿಯ ಪ್ರಕಾರ, ಪೆಟ್ರೋಲ್‍ ದರದಲ್ಲಿ ಕೇಂದ್ರ ಮತ್ತು ರಾಜ್ಯ ತೆರಿಗೆಗಳ ಪಾಲು ಶೇ. 34.8 ಮತ್ತು ಶೇ. 23.08 ರಷ್ಟಿದೆ. ಡೀಸೆಲ್‍ನಲ್ಲಿ ಕೇಂದ್ರ ತೆರಿಗೆಗಳು ಶೇ. 37.24ಕ್ಕಿಂತ ಹೆಚ್ಚಿದ್ದರೆ, ರಾಜ್ಯ ತೆರಿಗೆಗಳು ಶೇ. 14.64 ರಷ್ಟಿದೆ.

2020ರ ಹೊತ್ತಿಗೆ, ಜಾಗತಿಕ ಕಚ್ಚಾ ಬೆಲೆಗಳು ಕುಸಿಯುತ್ತಿದ್ದಂತೆ, ಕೇಂದ್ರ ಸರ್ಕಾರವು ತನ್ನ ಹಣಕಾಸನ್ನು ಹೆಚ್ಚಿಸಲು ಇಂಧನದ ಮೇಲೆ ಅಬಕಾರಿ ಸುಂಕವನ್ನು ಹೆಚ್ಚಿಸಿತು. ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಆದಾಯವು ಕಡಿಮೆಯಾಗಿದೆ ಎಂದು ಕೇಂದ್ರ ನೆಪ ಹೇಳಿತ್ತು.

ಕಳೆದ ಒಂದು ತಿಂಗಳಲ್ಲಿ ಅಂತರರಾಷ್ಟ್ರೀಯ ತೈಲ ಬೆಲೆಗಳು  ಏರಿಳಿಕೆ ಕಂಡಿವೆ. ಆದರೆ ಭಾರತದಲ್ಲಿ ಮಾತ್ರ ಕೇವಲ ಮೇಲ್ಮುಖವಾಗಿ ಸಾಗಿವೆ. ಉದಾಹರಣೆಗೆ, ಮೇ 20 ರಂದು ಬ್ರೆಂಟ್ ಕಚ್ಚಾ ದರ 65.11 ಡಾಲರ್‌ಗೆ ಕುಸಿದಿತ್ತು. 34 ದಿನಗಳಲ್ಲಿ ಇದು ಅತ್ಯಂತ ಕಡಿಮೆ ದರವಾಗಿತ್ತು. ಆದರೆ ಭಾರತದಲ್ಲಿ ಮರುದಿನ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಕ್ರಮವಾಗಿ 19 ಪೈಸೆ ಮತ್ತು  29 ಪೈಸೆ ಏರಿಕೆ ಮಾಡಲಾಗಿತು.

ಚುನಾವಣೆಯ ಕಾರಣದಿಂದ ಫೆಬ್ರವರಿ 26ರಿಂದ 66 ದಿನಗಳ ಕಾಲ ದರ ಏರಿಕೆ ಮಾಡದೇ ಇದ್ದುದರಿಂದ ತೈಲ ಮಾರಾಟ ಕಂಪನಿಗಳಿಗೆ ಆದಾಯ ನಷ್ಟವಾಗಿತ್ತು. ಹೀಗಾಗಿ ಚುನಾವಣೆಗಳ ನಂತರ ಅವು ಆ ನಷ್ಟ ತುಂಬಿಕೊಳ್ಳಲು ದರ ಏರಿಕೆ ಮಾಡುತ್ತಿವೆ ಎಂದು ಸರ್ಕಾರಿ  ತೈಲ ಕಂಪನಿಗಳ ಅಧಿಕಾರಿಗಳು ಸಮರ್ಥಿಸುತ್ತಾರೆ.


ಇದನ್ನೂ ಓದಿ: ಹೊಸ ಪ್ರವಾಸೋದ್ಯಮ ನೀತಿ ವಿರೋಧಿಸಿ ಲಕ್ಷದ್ವೀಪ ನಿವಾಸಿಗಳಿಂದ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...