Homeಮುಖಪುಟಇಂಧನ ಬೆಲೆ ಏರಿಕೆಗೆ ವ್ಯಂಗ್ಯ: ಚಾಕೋಲೆಟ್ ಹಂಚಿ, ಟ್ರ್ಯಾಕ್ಟರ್ ಎಳೆದು ವಿಭಿನ್ನ ಪ್ರತಿಭಟನೆ!

ಇಂಧನ ಬೆಲೆ ಏರಿಕೆಗೆ ವ್ಯಂಗ್ಯ: ಚಾಕೋಲೆಟ್ ಹಂಚಿ, ಟ್ರ್ಯಾಕ್ಟರ್ ಎಳೆದು ವಿಭಿನ್ನ ಪ್ರತಿಭಟನೆ!

ಕೇಂದ್ರ ಸರಕಾರ 300 ದಿನಗಳ ಅವಧಿಯಲ್ಲಿ 66 ಭಾರೀ ಇಂಧನ ದರ ಏರಿಕೆ ಮಾಡಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

- Advertisement -
- Advertisement -

ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಖಂಡಿಸಿ ದಾವಣಗೆರೆಯಲ್ಲಿ ಬೀದಿ ಬೀದಿಗಳಲ್ಲಿ ಚಾಕೋಲೆಟ್ ಹಂಚುವ ಮೂಲಕ ವಿಭಿನ್ನ ಪ್ರತಿಭಟನೆ ನಡೆಸಲಾಗಿದೆ. ಅದೇ ರೀತಿಯಲ್ಲಿ ಸಿಂಧನೂರಿನಲ್ಲಿ ಟ್ರ್ಯಾಕ್ಟರ್ ಎಳೆದು, ಕತ್ತೆ ಮೆರೆವಣಿಗೆ ಮಾಡಿ ವ್ಯಕ್ತಪಡಿಸಲಾಗಿದೆ.

ಆಮ್ ಆದ್ಮಿ ಪಾರ್ಟಿ, ಕರ್ನಾಟಕ ಜನಶಕ್ತಿ, ಕರ್ನಾಟಕ ಸೋಷಿಯಲ್ ಸರ್ವೀಸ್, ಟಿಪ್ಪು ಸುಲ್ತಾನ್ ಟ್ರಸ್ಟ್ ವತಿಯಿಂದ ಇಂದು ದಾವಣಗೆರೆ ನಗರದ ಬೂದಾಳ್ ರಿಂಗ್ ರೋಡ್ ನಿಂದ ಅಖ್ತರ್ ರಜಾ ಸರ್ಕಲ್ ವರೆಗೂ ಸಾರ್ವಜನಿಕರಿಗೆ ಚಾಕಲೇಟ್ ಹಂಚುವ ಮೂಲಕ ಬೆಲೆ ಏರಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗಿದೆ.

ಹಿಂದೆಲ್ಲಾ ಇಂಧನ ಬೆಲೆ ಏರಿಕೆಯಾದಾಗ ಬಿಜೆಪಿ ಪಕ್ಷವು ಪ್ರತಿಭಟನೆ ನಡೆಸುತ್ತಿತ್ತು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದು ತೀವ್ರ ರೀತಿಯಲ್ಲಿ ಇಂಧನ ಬೆಲೆ ಏರಿಸುತ್ತಿದೆ. ಅದನ್ನು ಪ್ರಶ್ನಿಸಿದವರನ್ನು ದೇಶದ್ರೋಹಿಗಳು ಎನ್ನಲಾಗುತ್ತಿದೆ. ಹಾಗಾಗಿ ಬೆಲೆ ಏರಿಕೆಯನ್ನು ನಾವು ಸಂಭ್ರಮಿಸುತ್ತೇವೆ ಎಂದು ಚಾಕೋಲೆಟ್ ಹಂಚುವ ಮೂಲಕ ವ್ಯಂಗ್ಯ ಮಾಡಿದ್ದೇವೆ ಎಂದು ಕರ್ನಾಟಕ ಜನಶಕ್ತಿಯ ಜಿಲ್ಲಾ ಸಂಚಾಲಕ ಸತೀಶ್ ಅರವಿಂದ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಸಬ್ಸಿಡಿ ತಗೆದಿದೆ. ಪೆಟ್ರೋಲ್ ಡೀಸೆಲ್ ಮೇಲೆ ಕೇಂದ್ರ & ರಾಜ್ಯ ಸರ್ಕಾರಗಳು ಹೆಚ್ಚಿನ ತೆರಿಗೆ ವಿಧಿಸುತ್ತಿವೆ. ಇದರಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದ ಸಾಮಾನ್ಯ ಜನರು ತೊಂದರೆಯಲ್ಲಿದ್ದಾರೆ. ಆದರೆ ಸರ್ಕಾರ ಮಾತ್ರ ಕಾರ್ಪೊರೇಟ್ ಕಂಪನಿಗಳ ಪರವಾದ ಆರ್ಥಿಕ ನೀತಿಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

ಸಿಂಧನೂರು ವರದಿ 

ಇಂಧನ ಬೆಲೆ ಗಗನಕ್ಕೆ ಏರಿಸಿದ ಕೇಂದ್ರ ಸರ್ಕಾರದ ನೀತಿ ಖಂಡಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ, ಸಿಂಧನೂರು ವತಿಯಿಂದ ಇಂದು ನಗರದ ಎಪಿಎಂಸಿ ಗಂಜ್‌ನಿಂದ ಗಾಂಧಿ ಸರ್ಕಲ್ ವರೆಗೆ ಟ್ರಾಕ್ಟರ್ ಎಳೆದು ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಕೇಂದ್ರ ಸರಕಾರದ ಜನವಿರೋಧಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರಿಂದ ಜನಸಾಮಾನ್ಯರು ಬದುಕಲಾರದಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಈಗಾಗಲೇ ಕೋವಿಡ್-19 ರ ದಾಳಿಯಿಂದಾಗಿ ಹೈರಾಣಾಗಿರುವ ಜನರ ಮೇಲೆ ತೈಲ ದರ ಏರಿಕೆಯು ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ. ಕೇಂದ್ರ ಸರಕಾರದ ಇಂಧನ ದರ 300 ದಿನಗಳ ಅವಧಿಯಲ್ಲಿ 66 ಭಾರೀ ಏರಿಕೆಯಾಗಿದ್ದುರೂ ಅಬಕಾರಿ ಸುಂಕವನ್ನು ಇಳಿಸದೆ ಜನವಿರೋಧಿ ನೀತಿಯನ್ನು ಅನುಸರಿಸುವುದರ ಮೂಲಕ ಕಾರ್ಪೊರೇಟ್‌ಗಳ ಲಾಭಕ್ಕೆ ಪೂರಕವಾದ ಆಡಳಿತವನ್ನು ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಈ ರೈತ ಹೋರಾಟ ಭಾರತಕ್ಕೆ ಸ್ಪಷ್ಟ ದಿಕ್ಕು ತೋರಿದೆ: ದೆಹಲಿಯ ರೈತ ಹೋರಾಟ ಬೆಂಬಲಿಸಿ ಬಂದವರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....