Homeಮುಖಪುಟಇಂಧನ ಬೆಲೆ ಏರಿಕೆಗೆ ವ್ಯಂಗ್ಯ: ಚಾಕೋಲೆಟ್ ಹಂಚಿ, ಟ್ರ್ಯಾಕ್ಟರ್ ಎಳೆದು ವಿಭಿನ್ನ ಪ್ರತಿಭಟನೆ!

ಇಂಧನ ಬೆಲೆ ಏರಿಕೆಗೆ ವ್ಯಂಗ್ಯ: ಚಾಕೋಲೆಟ್ ಹಂಚಿ, ಟ್ರ್ಯಾಕ್ಟರ್ ಎಳೆದು ವಿಭಿನ್ನ ಪ್ರತಿಭಟನೆ!

ಕೇಂದ್ರ ಸರಕಾರ 300 ದಿನಗಳ ಅವಧಿಯಲ್ಲಿ 66 ಭಾರೀ ಇಂಧನ ದರ ಏರಿಕೆ ಮಾಡಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

- Advertisement -
- Advertisement -

ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಖಂಡಿಸಿ ದಾವಣಗೆರೆಯಲ್ಲಿ ಬೀದಿ ಬೀದಿಗಳಲ್ಲಿ ಚಾಕೋಲೆಟ್ ಹಂಚುವ ಮೂಲಕ ವಿಭಿನ್ನ ಪ್ರತಿಭಟನೆ ನಡೆಸಲಾಗಿದೆ. ಅದೇ ರೀತಿಯಲ್ಲಿ ಸಿಂಧನೂರಿನಲ್ಲಿ ಟ್ರ್ಯಾಕ್ಟರ್ ಎಳೆದು, ಕತ್ತೆ ಮೆರೆವಣಿಗೆ ಮಾಡಿ ವ್ಯಕ್ತಪಡಿಸಲಾಗಿದೆ.

ಆಮ್ ಆದ್ಮಿ ಪಾರ್ಟಿ, ಕರ್ನಾಟಕ ಜನಶಕ್ತಿ, ಕರ್ನಾಟಕ ಸೋಷಿಯಲ್ ಸರ್ವೀಸ್, ಟಿಪ್ಪು ಸುಲ್ತಾನ್ ಟ್ರಸ್ಟ್ ವತಿಯಿಂದ ಇಂದು ದಾವಣಗೆರೆ ನಗರದ ಬೂದಾಳ್ ರಿಂಗ್ ರೋಡ್ ನಿಂದ ಅಖ್ತರ್ ರಜಾ ಸರ್ಕಲ್ ವರೆಗೂ ಸಾರ್ವಜನಿಕರಿಗೆ ಚಾಕಲೇಟ್ ಹಂಚುವ ಮೂಲಕ ಬೆಲೆ ಏರಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗಿದೆ.

ಹಿಂದೆಲ್ಲಾ ಇಂಧನ ಬೆಲೆ ಏರಿಕೆಯಾದಾಗ ಬಿಜೆಪಿ ಪಕ್ಷವು ಪ್ರತಿಭಟನೆ ನಡೆಸುತ್ತಿತ್ತು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದು ತೀವ್ರ ರೀತಿಯಲ್ಲಿ ಇಂಧನ ಬೆಲೆ ಏರಿಸುತ್ತಿದೆ. ಅದನ್ನು ಪ್ರಶ್ನಿಸಿದವರನ್ನು ದೇಶದ್ರೋಹಿಗಳು ಎನ್ನಲಾಗುತ್ತಿದೆ. ಹಾಗಾಗಿ ಬೆಲೆ ಏರಿಕೆಯನ್ನು ನಾವು ಸಂಭ್ರಮಿಸುತ್ತೇವೆ ಎಂದು ಚಾಕೋಲೆಟ್ ಹಂಚುವ ಮೂಲಕ ವ್ಯಂಗ್ಯ ಮಾಡಿದ್ದೇವೆ ಎಂದು ಕರ್ನಾಟಕ ಜನಶಕ್ತಿಯ ಜಿಲ್ಲಾ ಸಂಚಾಲಕ ಸತೀಶ್ ಅರವಿಂದ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಸಬ್ಸಿಡಿ ತಗೆದಿದೆ. ಪೆಟ್ರೋಲ್ ಡೀಸೆಲ್ ಮೇಲೆ ಕೇಂದ್ರ & ರಾಜ್ಯ ಸರ್ಕಾರಗಳು ಹೆಚ್ಚಿನ ತೆರಿಗೆ ವಿಧಿಸುತ್ತಿವೆ. ಇದರಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದ ಸಾಮಾನ್ಯ ಜನರು ತೊಂದರೆಯಲ್ಲಿದ್ದಾರೆ. ಆದರೆ ಸರ್ಕಾರ ಮಾತ್ರ ಕಾರ್ಪೊರೇಟ್ ಕಂಪನಿಗಳ ಪರವಾದ ಆರ್ಥಿಕ ನೀತಿಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

ಸಿಂಧನೂರು ವರದಿ 

ಇಂಧನ ಬೆಲೆ ಗಗನಕ್ಕೆ ಏರಿಸಿದ ಕೇಂದ್ರ ಸರ್ಕಾರದ ನೀತಿ ಖಂಡಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ, ಸಿಂಧನೂರು ವತಿಯಿಂದ ಇಂದು ನಗರದ ಎಪಿಎಂಸಿ ಗಂಜ್‌ನಿಂದ ಗಾಂಧಿ ಸರ್ಕಲ್ ವರೆಗೆ ಟ್ರಾಕ್ಟರ್ ಎಳೆದು ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಕೇಂದ್ರ ಸರಕಾರದ ಜನವಿರೋಧಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರಿಂದ ಜನಸಾಮಾನ್ಯರು ಬದುಕಲಾರದಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಈಗಾಗಲೇ ಕೋವಿಡ್-19 ರ ದಾಳಿಯಿಂದಾಗಿ ಹೈರಾಣಾಗಿರುವ ಜನರ ಮೇಲೆ ತೈಲ ದರ ಏರಿಕೆಯು ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ. ಕೇಂದ್ರ ಸರಕಾರದ ಇಂಧನ ದರ 300 ದಿನಗಳ ಅವಧಿಯಲ್ಲಿ 66 ಭಾರೀ ಏರಿಕೆಯಾಗಿದ್ದುರೂ ಅಬಕಾರಿ ಸುಂಕವನ್ನು ಇಳಿಸದೆ ಜನವಿರೋಧಿ ನೀತಿಯನ್ನು ಅನುಸರಿಸುವುದರ ಮೂಲಕ ಕಾರ್ಪೊರೇಟ್‌ಗಳ ಲಾಭಕ್ಕೆ ಪೂರಕವಾದ ಆಡಳಿತವನ್ನು ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಈ ರೈತ ಹೋರಾಟ ಭಾರತಕ್ಕೆ ಸ್ಪಷ್ಟ ದಿಕ್ಕು ತೋರಿದೆ: ದೆಹಲಿಯ ರೈತ ಹೋರಾಟ ಬೆಂಬಲಿಸಿ ಬಂದವರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...