Homeಮುಖಪುಟಇಂಧನ ದರಗಳು ಮತ್ತೆ ಏರಿಕೆ: ಮುಂಬೈಯಲ್ಲಿ ಪೆಟ್ರೋಲ್‌‌ ₹ 99

ಇಂಧನ ದರಗಳು ಮತ್ತೆ ಏರಿಕೆ: ಮುಂಬೈಯಲ್ಲಿ ಪೆಟ್ರೋಲ್‌‌ ₹ 99

ಬೆಲೆ ಹೆಚ್ಚುತ್ತಿರುವುದು ಈ ತಿಂಗಳಲ್ಲಿ ಇದು ಹತ್ತನೇ ಬಾರಿಯಾಗಿದ್ದು, ದೇಶದಲ್ಲಿ ಇಂಧನ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಯಾಗಿದೆ.

- Advertisement -
- Advertisement -

ಅಂತರರಾಷ್ಟ್ರೀಯ ತೈಲ ಬೆಲೆಯನ್ನು ತೈಲ ಕಂಪನಿಗಳು ಹೆಚ್ಚಿಸಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಮತ್ತೆ ಹೆಚ್ಚಾಗಿದೆ. ಮುಂಬೈನಲ್ಲಿ ಮಂಗಳವಾರ ಪೆಟ್ರೋಲ್ ಬೆಲೆ 99 ರೂ.ಗೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ಚಿಲ್ಲರೆ ಇಂಧನ ಔಟ್‌ಲೆಟ್‌ಗಳು ಬೆಲೆ ಅಧಿಸೂಚನೆಯ ಪ್ರಕಾರ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 27 ಪೈಸೆ ಮತ್ತು ಡೀಸೆಲ್ ಅನ್ನು 29 ಪೈಸೆ ಹೆಚ್ಚಿಸಿದೆ.

ಇಂಧನದ ಬೆಲೆಯು ಹೆಚ್ಚುತ್ತಿರುವುದು ಈ ತಿಂಗಳಲ್ಲಿ ಇದು ಹತ್ತನೇ ಬಾರಿಯಾಗಿದ್ದು, ಪರಿಣಾಮವಾಗಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಯಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ, ಕೆಲವೆಡೆ ಯೆಲ್ಲೋ ಅಲರ್ಟ್ ಘೋಷಣೆ

ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ಹಲವಾರು ನಗರಗಳಲ್ಲಿ ಇಂಧನದ ದರಗಳು ಈಗಾಗಲೇ 100 ರೂ.ಗಳನ್ನು ದಾಟಿದ್ದವು. ಇಂದಿನ ಹೆಚ್ಚಳದೊಂದಿಗೆ, ಮುಂಬೈಯ ಬೆಲೆಯೂ ಕೂಡಾ ಆ ಮಟ್ಟಕ್ಕೆ ತಲುಪಿದೆ.

ಕಚ್ಚಾ ತೈಲ ಬೆಲೆ ಏರಿಕೆ

ಮಂಗಳವಾರ ಬೆಳಿಗ್ಗೆ ಕಚ್ಚಾ ತೈಲ ಬೆಲೆ ಹೆಚ್ಚಾಗಿದೆ. ಯುಎಸ್ ಡಬ್ಲ್ಯುಟಿಐ ಕಚ್ಚಾ ತೈಲ ಬೆಲೆಯು ಬ್ಯಾರೆಲ್‌ಗೆ 1.4% ಏರಿಕೆ ಕಂಡು 66.27 ಡಾಲರ್‌ಗೆ ತಲುಪಿದ್ದರೆ, ಬ್ರೆಂಟ್ ಕಚ್ಚಾ ತೈಲದ ಬೆಲೆಯು 1.1% ರಷ್ಟು ಏರಿಕೆ ಕಂಡಿದ್ದು, ಪ್ರತಿ ಬ್ಯಾರೆಲ್‌ಗೆ. 69.46 ರಂತೆ ವಹಿವಾಟು ನಡೆಸಿದೆ ಎಂದು ರಾಯಿಟರ್ಸ್ ತಿಳಿಸಿದೆ.

ಚೆನ್ನೈ, ಕೋಲ್ಕತಾ, ಬೆಂಗಳೂರು, ಹೈದರಾಬಾದ್, ಯುಪಿ, ಪಂಜಾಬ್, ಹರಿಯಾಣ, ಪುಣೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ

  • ಬೆಂಗಳೂರು: ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 95.94 ರೂ; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 88.53 ರೂ
  • ಚೆನ್ನೈ: ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 94.54 ರೂ; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 88.34 ರೂ

ಇದನ್ನೂ ಓದಿ: ಕೋವಿಡ್ ದುರಂತದ ಮೂಲ ಮೋದಿಯವರ ನೋಟು ಅಮಾನ್ಯೀಕರಣದಲ್ಲಿದೆ!

  • ಕೋಲ್ಕತಾ: ಪೆಟ್ರೋಲ್ ಬೆಲೆ – 92.692 ಪರ್ ಲೀಟರ್; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 86.35 ರೂ
  • ಪುಣೆ: ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 98.77 ರೂ; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 88.96 ರೂ
  • ಹೈದರಾಬಾದ್: ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 96.50 ರೂ. ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 91.04 ರೂ
  • ನೋಯ್ಡಾ (ಯುಪಿ): ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 90.66; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 83.97 ರೂ
  • ಮೊಹಾಲಿ (ಪಂಜಾಬ್): ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 95.05 ರೂ; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 86.41
  • ಚಂಡೀಗಡ: ಪೆಟ್ರೋಲ್ ಬೆಲೆ ಲೀಟರ್‌ಗೆ 89.31; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 83.17 ರೂ
  • ಗುರುಗ್ರಾಮ್ (ಹರಿಯಾಣ): ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 90.73 ರೂ; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 84.09 ರೂ

ಇದನ್ನೂ ಓದಿ: ‘ದೇವರೇ ಕಾಪಾಡಬೇಕು’: ಉತ್ತರಪ್ರದೇಶದ ಗ್ರಾಮೀಣ ಆರೋಗ್ಯ ವ್ಯವಸ್ಥೆಯ ಕುರಿತು ಹೈಕೋರ್ಟ್ ಕಳವಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...