Homeಮುಖಪುಟಇಂಧನ ದರಗಳು ಮತ್ತೆ ಏರಿಕೆ: ಮುಂಬೈಯಲ್ಲಿ ಪೆಟ್ರೋಲ್‌‌ ₹ 99

ಇಂಧನ ದರಗಳು ಮತ್ತೆ ಏರಿಕೆ: ಮುಂಬೈಯಲ್ಲಿ ಪೆಟ್ರೋಲ್‌‌ ₹ 99

ಬೆಲೆ ಹೆಚ್ಚುತ್ತಿರುವುದು ಈ ತಿಂಗಳಲ್ಲಿ ಇದು ಹತ್ತನೇ ಬಾರಿಯಾಗಿದ್ದು, ದೇಶದಲ್ಲಿ ಇಂಧನ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಯಾಗಿದೆ.

- Advertisement -
- Advertisement -

ಅಂತರರಾಷ್ಟ್ರೀಯ ತೈಲ ಬೆಲೆಯನ್ನು ತೈಲ ಕಂಪನಿಗಳು ಹೆಚ್ಚಿಸಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಮತ್ತೆ ಹೆಚ್ಚಾಗಿದೆ. ಮುಂಬೈನಲ್ಲಿ ಮಂಗಳವಾರ ಪೆಟ್ರೋಲ್ ಬೆಲೆ 99 ರೂ.ಗೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ಚಿಲ್ಲರೆ ಇಂಧನ ಔಟ್‌ಲೆಟ್‌ಗಳು ಬೆಲೆ ಅಧಿಸೂಚನೆಯ ಪ್ರಕಾರ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 27 ಪೈಸೆ ಮತ್ತು ಡೀಸೆಲ್ ಅನ್ನು 29 ಪೈಸೆ ಹೆಚ್ಚಿಸಿದೆ.

ಇಂಧನದ ಬೆಲೆಯು ಹೆಚ್ಚುತ್ತಿರುವುದು ಈ ತಿಂಗಳಲ್ಲಿ ಇದು ಹತ್ತನೇ ಬಾರಿಯಾಗಿದ್ದು, ಪರಿಣಾಮವಾಗಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಯಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ, ಕೆಲವೆಡೆ ಯೆಲ್ಲೋ ಅಲರ್ಟ್ ಘೋಷಣೆ

ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ಹಲವಾರು ನಗರಗಳಲ್ಲಿ ಇಂಧನದ ದರಗಳು ಈಗಾಗಲೇ 100 ರೂ.ಗಳನ್ನು ದಾಟಿದ್ದವು. ಇಂದಿನ ಹೆಚ್ಚಳದೊಂದಿಗೆ, ಮುಂಬೈಯ ಬೆಲೆಯೂ ಕೂಡಾ ಆ ಮಟ್ಟಕ್ಕೆ ತಲುಪಿದೆ.

ಕಚ್ಚಾ ತೈಲ ಬೆಲೆ ಏರಿಕೆ

ಮಂಗಳವಾರ ಬೆಳಿಗ್ಗೆ ಕಚ್ಚಾ ತೈಲ ಬೆಲೆ ಹೆಚ್ಚಾಗಿದೆ. ಯುಎಸ್ ಡಬ್ಲ್ಯುಟಿಐ ಕಚ್ಚಾ ತೈಲ ಬೆಲೆಯು ಬ್ಯಾರೆಲ್‌ಗೆ 1.4% ಏರಿಕೆ ಕಂಡು 66.27 ಡಾಲರ್‌ಗೆ ತಲುಪಿದ್ದರೆ, ಬ್ರೆಂಟ್ ಕಚ್ಚಾ ತೈಲದ ಬೆಲೆಯು 1.1% ರಷ್ಟು ಏರಿಕೆ ಕಂಡಿದ್ದು, ಪ್ರತಿ ಬ್ಯಾರೆಲ್‌ಗೆ. 69.46 ರಂತೆ ವಹಿವಾಟು ನಡೆಸಿದೆ ಎಂದು ರಾಯಿಟರ್ಸ್ ತಿಳಿಸಿದೆ.

ಚೆನ್ನೈ, ಕೋಲ್ಕತಾ, ಬೆಂಗಳೂರು, ಹೈದರಾಬಾದ್, ಯುಪಿ, ಪಂಜಾಬ್, ಹರಿಯಾಣ, ಪುಣೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ

  • ಬೆಂಗಳೂರು: ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 95.94 ರೂ; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 88.53 ರೂ
  • ಚೆನ್ನೈ: ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 94.54 ರೂ; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 88.34 ರೂ

ಇದನ್ನೂ ಓದಿ: ಕೋವಿಡ್ ದುರಂತದ ಮೂಲ ಮೋದಿಯವರ ನೋಟು ಅಮಾನ್ಯೀಕರಣದಲ್ಲಿದೆ!

  • ಕೋಲ್ಕತಾ: ಪೆಟ್ರೋಲ್ ಬೆಲೆ – 92.692 ಪರ್ ಲೀಟರ್; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 86.35 ರೂ
  • ಪುಣೆ: ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 98.77 ರೂ; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 88.96 ರೂ
  • ಹೈದರಾಬಾದ್: ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 96.50 ರೂ. ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 91.04 ರೂ
  • ನೋಯ್ಡಾ (ಯುಪಿ): ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 90.66; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 83.97 ರೂ
  • ಮೊಹಾಲಿ (ಪಂಜಾಬ್): ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 95.05 ರೂ; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 86.41
  • ಚಂಡೀಗಡ: ಪೆಟ್ರೋಲ್ ಬೆಲೆ ಲೀಟರ್‌ಗೆ 89.31; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 83.17 ರೂ
  • ಗುರುಗ್ರಾಮ್ (ಹರಿಯಾಣ): ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 90.73 ರೂ; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 84.09 ರೂ

ಇದನ್ನೂ ಓದಿ: ‘ದೇವರೇ ಕಾಪಾಡಬೇಕು’: ಉತ್ತರಪ್ರದೇಶದ ಗ್ರಾಮೀಣ ಆರೋಗ್ಯ ವ್ಯವಸ್ಥೆಯ ಕುರಿತು ಹೈಕೋರ್ಟ್ ಕಳವಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...