Homeಮುಖಪುಟಇಂಧನ ದರಗಳು ಮತ್ತೆ ಏರಿಕೆ: ಮುಂಬೈಯಲ್ಲಿ ಪೆಟ್ರೋಲ್‌‌ ₹ 99

ಇಂಧನ ದರಗಳು ಮತ್ತೆ ಏರಿಕೆ: ಮುಂಬೈಯಲ್ಲಿ ಪೆಟ್ರೋಲ್‌‌ ₹ 99

ಬೆಲೆ ಹೆಚ್ಚುತ್ತಿರುವುದು ಈ ತಿಂಗಳಲ್ಲಿ ಇದು ಹತ್ತನೇ ಬಾರಿಯಾಗಿದ್ದು, ದೇಶದಲ್ಲಿ ಇಂಧನ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಯಾಗಿದೆ.

- Advertisement -
- Advertisement -

ಅಂತರರಾಷ್ಟ್ರೀಯ ತೈಲ ಬೆಲೆಯನ್ನು ತೈಲ ಕಂಪನಿಗಳು ಹೆಚ್ಚಿಸಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಮತ್ತೆ ಹೆಚ್ಚಾಗಿದೆ. ಮುಂಬೈನಲ್ಲಿ ಮಂಗಳವಾರ ಪೆಟ್ರೋಲ್ ಬೆಲೆ 99 ರೂ.ಗೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ಚಿಲ್ಲರೆ ಇಂಧನ ಔಟ್‌ಲೆಟ್‌ಗಳು ಬೆಲೆ ಅಧಿಸೂಚನೆಯ ಪ್ರಕಾರ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 27 ಪೈಸೆ ಮತ್ತು ಡೀಸೆಲ್ ಅನ್ನು 29 ಪೈಸೆ ಹೆಚ್ಚಿಸಿದೆ.

ಇಂಧನದ ಬೆಲೆಯು ಹೆಚ್ಚುತ್ತಿರುವುದು ಈ ತಿಂಗಳಲ್ಲಿ ಇದು ಹತ್ತನೇ ಬಾರಿಯಾಗಿದ್ದು, ಪರಿಣಾಮವಾಗಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಯಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ, ಕೆಲವೆಡೆ ಯೆಲ್ಲೋ ಅಲರ್ಟ್ ಘೋಷಣೆ

ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ಹಲವಾರು ನಗರಗಳಲ್ಲಿ ಇಂಧನದ ದರಗಳು ಈಗಾಗಲೇ 100 ರೂ.ಗಳನ್ನು ದಾಟಿದ್ದವು. ಇಂದಿನ ಹೆಚ್ಚಳದೊಂದಿಗೆ, ಮುಂಬೈಯ ಬೆಲೆಯೂ ಕೂಡಾ ಆ ಮಟ್ಟಕ್ಕೆ ತಲುಪಿದೆ.

ಕಚ್ಚಾ ತೈಲ ಬೆಲೆ ಏರಿಕೆ

ಮಂಗಳವಾರ ಬೆಳಿಗ್ಗೆ ಕಚ್ಚಾ ತೈಲ ಬೆಲೆ ಹೆಚ್ಚಾಗಿದೆ. ಯುಎಸ್ ಡಬ್ಲ್ಯುಟಿಐ ಕಚ್ಚಾ ತೈಲ ಬೆಲೆಯು ಬ್ಯಾರೆಲ್‌ಗೆ 1.4% ಏರಿಕೆ ಕಂಡು 66.27 ಡಾಲರ್‌ಗೆ ತಲುಪಿದ್ದರೆ, ಬ್ರೆಂಟ್ ಕಚ್ಚಾ ತೈಲದ ಬೆಲೆಯು 1.1% ರಷ್ಟು ಏರಿಕೆ ಕಂಡಿದ್ದು, ಪ್ರತಿ ಬ್ಯಾರೆಲ್‌ಗೆ. 69.46 ರಂತೆ ವಹಿವಾಟು ನಡೆಸಿದೆ ಎಂದು ರಾಯಿಟರ್ಸ್ ತಿಳಿಸಿದೆ.

ಚೆನ್ನೈ, ಕೋಲ್ಕತಾ, ಬೆಂಗಳೂರು, ಹೈದರಾಬಾದ್, ಯುಪಿ, ಪಂಜಾಬ್, ಹರಿಯಾಣ, ಪುಣೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ

  • ಬೆಂಗಳೂರು: ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 95.94 ರೂ; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 88.53 ರೂ
  • ಚೆನ್ನೈ: ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 94.54 ರೂ; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 88.34 ರೂ

ಇದನ್ನೂ ಓದಿ: ಕೋವಿಡ್ ದುರಂತದ ಮೂಲ ಮೋದಿಯವರ ನೋಟು ಅಮಾನ್ಯೀಕರಣದಲ್ಲಿದೆ!

  • ಕೋಲ್ಕತಾ: ಪೆಟ್ರೋಲ್ ಬೆಲೆ – 92.692 ಪರ್ ಲೀಟರ್; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 86.35 ರೂ
  • ಪುಣೆ: ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 98.77 ರೂ; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 88.96 ರೂ
  • ಹೈದರಾಬಾದ್: ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 96.50 ರೂ. ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 91.04 ರೂ
  • ನೋಯ್ಡಾ (ಯುಪಿ): ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 90.66; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 83.97 ರೂ
  • ಮೊಹಾಲಿ (ಪಂಜಾಬ್): ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 95.05 ರೂ; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 86.41
  • ಚಂಡೀಗಡ: ಪೆಟ್ರೋಲ್ ಬೆಲೆ ಲೀಟರ್‌ಗೆ 89.31; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 83.17 ರೂ
  • ಗುರುಗ್ರಾಮ್ (ಹರಿಯಾಣ): ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 90.73 ರೂ; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 84.09 ರೂ

ಇದನ್ನೂ ಓದಿ: ‘ದೇವರೇ ಕಾಪಾಡಬೇಕು’: ಉತ್ತರಪ್ರದೇಶದ ಗ್ರಾಮೀಣ ಆರೋಗ್ಯ ವ್ಯವಸ್ಥೆಯ ಕುರಿತು ಹೈಕೋರ್ಟ್ ಕಳವಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...