Homeಮುಖಪುಟಇಂಧನ ದರಗಳು ಮತ್ತೆ ಏರಿಕೆ: ಮುಂಬೈಯಲ್ಲಿ ಪೆಟ್ರೋಲ್‌‌ ₹ 99

ಇಂಧನ ದರಗಳು ಮತ್ತೆ ಏರಿಕೆ: ಮುಂಬೈಯಲ್ಲಿ ಪೆಟ್ರೋಲ್‌‌ ₹ 99

ಬೆಲೆ ಹೆಚ್ಚುತ್ತಿರುವುದು ಈ ತಿಂಗಳಲ್ಲಿ ಇದು ಹತ್ತನೇ ಬಾರಿಯಾಗಿದ್ದು, ದೇಶದಲ್ಲಿ ಇಂಧನ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಯಾಗಿದೆ.

- Advertisement -
- Advertisement -

ಅಂತರರಾಷ್ಟ್ರೀಯ ತೈಲ ಬೆಲೆಯನ್ನು ತೈಲ ಕಂಪನಿಗಳು ಹೆಚ್ಚಿಸಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಮತ್ತೆ ಹೆಚ್ಚಾಗಿದೆ. ಮುಂಬೈನಲ್ಲಿ ಮಂಗಳವಾರ ಪೆಟ್ರೋಲ್ ಬೆಲೆ 99 ರೂ.ಗೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ಚಿಲ್ಲರೆ ಇಂಧನ ಔಟ್‌ಲೆಟ್‌ಗಳು ಬೆಲೆ ಅಧಿಸೂಚನೆಯ ಪ್ರಕಾರ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 27 ಪೈಸೆ ಮತ್ತು ಡೀಸೆಲ್ ಅನ್ನು 29 ಪೈಸೆ ಹೆಚ್ಚಿಸಿದೆ.

ಇಂಧನದ ಬೆಲೆಯು ಹೆಚ್ಚುತ್ತಿರುವುದು ಈ ತಿಂಗಳಲ್ಲಿ ಇದು ಹತ್ತನೇ ಬಾರಿಯಾಗಿದ್ದು, ಪರಿಣಾಮವಾಗಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಯಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ, ಕೆಲವೆಡೆ ಯೆಲ್ಲೋ ಅಲರ್ಟ್ ಘೋಷಣೆ

ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ಹಲವಾರು ನಗರಗಳಲ್ಲಿ ಇಂಧನದ ದರಗಳು ಈಗಾಗಲೇ 100 ರೂ.ಗಳನ್ನು ದಾಟಿದ್ದವು. ಇಂದಿನ ಹೆಚ್ಚಳದೊಂದಿಗೆ, ಮುಂಬೈಯ ಬೆಲೆಯೂ ಕೂಡಾ ಆ ಮಟ್ಟಕ್ಕೆ ತಲುಪಿದೆ.

ಕಚ್ಚಾ ತೈಲ ಬೆಲೆ ಏರಿಕೆ

ಮಂಗಳವಾರ ಬೆಳಿಗ್ಗೆ ಕಚ್ಚಾ ತೈಲ ಬೆಲೆ ಹೆಚ್ಚಾಗಿದೆ. ಯುಎಸ್ ಡಬ್ಲ್ಯುಟಿಐ ಕಚ್ಚಾ ತೈಲ ಬೆಲೆಯು ಬ್ಯಾರೆಲ್‌ಗೆ 1.4% ಏರಿಕೆ ಕಂಡು 66.27 ಡಾಲರ್‌ಗೆ ತಲುಪಿದ್ದರೆ, ಬ್ರೆಂಟ್ ಕಚ್ಚಾ ತೈಲದ ಬೆಲೆಯು 1.1% ರಷ್ಟು ಏರಿಕೆ ಕಂಡಿದ್ದು, ಪ್ರತಿ ಬ್ಯಾರೆಲ್‌ಗೆ. 69.46 ರಂತೆ ವಹಿವಾಟು ನಡೆಸಿದೆ ಎಂದು ರಾಯಿಟರ್ಸ್ ತಿಳಿಸಿದೆ.

ಚೆನ್ನೈ, ಕೋಲ್ಕತಾ, ಬೆಂಗಳೂರು, ಹೈದರಾಬಾದ್, ಯುಪಿ, ಪಂಜಾಬ್, ಹರಿಯಾಣ, ಪುಣೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ

  • ಬೆಂಗಳೂರು: ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 95.94 ರೂ; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 88.53 ರೂ
  • ಚೆನ್ನೈ: ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 94.54 ರೂ; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 88.34 ರೂ

ಇದನ್ನೂ ಓದಿ: ಕೋವಿಡ್ ದುರಂತದ ಮೂಲ ಮೋದಿಯವರ ನೋಟು ಅಮಾನ್ಯೀಕರಣದಲ್ಲಿದೆ!

  • ಕೋಲ್ಕತಾ: ಪೆಟ್ರೋಲ್ ಬೆಲೆ – 92.692 ಪರ್ ಲೀಟರ್; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 86.35 ರೂ
  • ಪುಣೆ: ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 98.77 ರೂ; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 88.96 ರೂ
  • ಹೈದರಾಬಾದ್: ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 96.50 ರೂ. ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 91.04 ರೂ
  • ನೋಯ್ಡಾ (ಯುಪಿ): ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 90.66; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 83.97 ರೂ
  • ಮೊಹಾಲಿ (ಪಂಜಾಬ್): ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 95.05 ರೂ; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 86.41
  • ಚಂಡೀಗಡ: ಪೆಟ್ರೋಲ್ ಬೆಲೆ ಲೀಟರ್‌ಗೆ 89.31; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 83.17 ರೂ
  • ಗುರುಗ್ರಾಮ್ (ಹರಿಯಾಣ): ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 90.73 ರೂ; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 84.09 ರೂ

ಇದನ್ನೂ ಓದಿ: ‘ದೇವರೇ ಕಾಪಾಡಬೇಕು’: ಉತ್ತರಪ್ರದೇಶದ ಗ್ರಾಮೀಣ ಆರೋಗ್ಯ ವ್ಯವಸ್ಥೆಯ ಕುರಿತು ಹೈಕೋರ್ಟ್ ಕಳವಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...