Homeಮುಖಪುಟಇಂಧನ ದರಗಳು ಮತ್ತೆ ಏರಿಕೆ: ಮುಂಬೈಯಲ್ಲಿ ಪೆಟ್ರೋಲ್‌‌ ₹ 99

ಇಂಧನ ದರಗಳು ಮತ್ತೆ ಏರಿಕೆ: ಮುಂಬೈಯಲ್ಲಿ ಪೆಟ್ರೋಲ್‌‌ ₹ 99

ಬೆಲೆ ಹೆಚ್ಚುತ್ತಿರುವುದು ಈ ತಿಂಗಳಲ್ಲಿ ಇದು ಹತ್ತನೇ ಬಾರಿಯಾಗಿದ್ದು, ದೇಶದಲ್ಲಿ ಇಂಧನ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಯಾಗಿದೆ.

- Advertisement -
- Advertisement -

ಅಂತರರಾಷ್ಟ್ರೀಯ ತೈಲ ಬೆಲೆಯನ್ನು ತೈಲ ಕಂಪನಿಗಳು ಹೆಚ್ಚಿಸಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಮತ್ತೆ ಹೆಚ್ಚಾಗಿದೆ. ಮುಂಬೈನಲ್ಲಿ ಮಂಗಳವಾರ ಪೆಟ್ರೋಲ್ ಬೆಲೆ 99 ರೂ.ಗೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ಚಿಲ್ಲರೆ ಇಂಧನ ಔಟ್‌ಲೆಟ್‌ಗಳು ಬೆಲೆ ಅಧಿಸೂಚನೆಯ ಪ್ರಕಾರ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 27 ಪೈಸೆ ಮತ್ತು ಡೀಸೆಲ್ ಅನ್ನು 29 ಪೈಸೆ ಹೆಚ್ಚಿಸಿದೆ.

ಇಂಧನದ ಬೆಲೆಯು ಹೆಚ್ಚುತ್ತಿರುವುದು ಈ ತಿಂಗಳಲ್ಲಿ ಇದು ಹತ್ತನೇ ಬಾರಿಯಾಗಿದ್ದು, ಪರಿಣಾಮವಾಗಿ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಯಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ, ಕೆಲವೆಡೆ ಯೆಲ್ಲೋ ಅಲರ್ಟ್ ಘೋಷಣೆ

ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ಹಲವಾರು ನಗರಗಳಲ್ಲಿ ಇಂಧನದ ದರಗಳು ಈಗಾಗಲೇ 100 ರೂ.ಗಳನ್ನು ದಾಟಿದ್ದವು. ಇಂದಿನ ಹೆಚ್ಚಳದೊಂದಿಗೆ, ಮುಂಬೈಯ ಬೆಲೆಯೂ ಕೂಡಾ ಆ ಮಟ್ಟಕ್ಕೆ ತಲುಪಿದೆ.

ಕಚ್ಚಾ ತೈಲ ಬೆಲೆ ಏರಿಕೆ

ಮಂಗಳವಾರ ಬೆಳಿಗ್ಗೆ ಕಚ್ಚಾ ತೈಲ ಬೆಲೆ ಹೆಚ್ಚಾಗಿದೆ. ಯುಎಸ್ ಡಬ್ಲ್ಯುಟಿಐ ಕಚ್ಚಾ ತೈಲ ಬೆಲೆಯು ಬ್ಯಾರೆಲ್‌ಗೆ 1.4% ಏರಿಕೆ ಕಂಡು 66.27 ಡಾಲರ್‌ಗೆ ತಲುಪಿದ್ದರೆ, ಬ್ರೆಂಟ್ ಕಚ್ಚಾ ತೈಲದ ಬೆಲೆಯು 1.1% ರಷ್ಟು ಏರಿಕೆ ಕಂಡಿದ್ದು, ಪ್ರತಿ ಬ್ಯಾರೆಲ್‌ಗೆ. 69.46 ರಂತೆ ವಹಿವಾಟು ನಡೆಸಿದೆ ಎಂದು ರಾಯಿಟರ್ಸ್ ತಿಳಿಸಿದೆ.

ಚೆನ್ನೈ, ಕೋಲ್ಕತಾ, ಬೆಂಗಳೂರು, ಹೈದರಾಬಾದ್, ಯುಪಿ, ಪಂಜಾಬ್, ಹರಿಯಾಣ, ಪುಣೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ

  • ಬೆಂಗಳೂರು: ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 95.94 ರೂ; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 88.53 ರೂ
  • ಚೆನ್ನೈ: ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 94.54 ರೂ; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 88.34 ರೂ

ಇದನ್ನೂ ಓದಿ: ಕೋವಿಡ್ ದುರಂತದ ಮೂಲ ಮೋದಿಯವರ ನೋಟು ಅಮಾನ್ಯೀಕರಣದಲ್ಲಿದೆ!

  • ಕೋಲ್ಕತಾ: ಪೆಟ್ರೋಲ್ ಬೆಲೆ – 92.692 ಪರ್ ಲೀಟರ್; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 86.35 ರೂ
  • ಪುಣೆ: ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 98.77 ರೂ; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 88.96 ರೂ
  • ಹೈದರಾಬಾದ್: ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 96.50 ರೂ. ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 91.04 ರೂ
  • ನೋಯ್ಡಾ (ಯುಪಿ): ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 90.66; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 83.97 ರೂ
  • ಮೊಹಾಲಿ (ಪಂಜಾಬ್): ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 95.05 ರೂ; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 86.41
  • ಚಂಡೀಗಡ: ಪೆಟ್ರೋಲ್ ಬೆಲೆ ಲೀಟರ್‌ಗೆ 89.31; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 83.17 ರೂ
  • ಗುರುಗ್ರಾಮ್ (ಹರಿಯಾಣ): ಪೆಟ್ರೋಲ್ ಬೆಲೆ – ಪ್ರತಿ ಲೀಟರ್‌ಗೆ 90.73 ರೂ; ಡೀಸೆಲ್ ಬೆಲೆ – ಪ್ರತಿ ಲೀಟರ್‌ಗೆ 84.09 ರೂ

ಇದನ್ನೂ ಓದಿ: ‘ದೇವರೇ ಕಾಪಾಡಬೇಕು’: ಉತ್ತರಪ್ರದೇಶದ ಗ್ರಾಮೀಣ ಆರೋಗ್ಯ ವ್ಯವಸ್ಥೆಯ ಕುರಿತು ಹೈಕೋರ್ಟ್ ಕಳವಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...