Homeಮುಖಪುಟಇಂಧನ ತೆರಿಗೆ ಸಂಗ್ರಹ: 2014 ಕ್ಕಿಂತ 2021 ರಲ್ಲಿ 456% ದಷ್ಟು ಹೆಚ್ಚಳ!

ಇಂಧನ ತೆರಿಗೆ ಸಂಗ್ರಹ: 2014 ಕ್ಕಿಂತ 2021 ರಲ್ಲಿ 456% ದಷ್ಟು ಹೆಚ್ಚಳ!

- Advertisement -
- Advertisement -

ಇಂಧನ ತೆರಿಗೆಗಳು ಸರ್ಕಾರದ ಕಾಮಧೇನು ಆಗಿ ಮಾರ್ಪಟ್ಟಿದೆಯೇ ಎಂಬ ಬಗ್ಗೆ ಯಾವುದೇ ಸಂದೇಹಗಳು ಉಳಿದಿದ್ದರೆ, ಸೋಮವಾರ ಲೋಕಸಭೆಗೆ ಹಣಕಾಸು ಸಚಿವಾಲಯ ನೀಡಿರುವ ಉತ್ತರದಲ್ಲಿ ಅವುಗಳನ್ನು ಪರಿಹರಿಸಿ ಕೊಳ್ಳಬಹುದಾಗಿದೆ. ಪೆಟ್ರೋಲ್, ಡೀಸೆಲ್ ಮತ್ತು ನೈಸರ್ಗಿಕ ಅನಿಲದ ಮೇಲೆ ಅಬಕಾರಿ ಸುಂಕ ಸಂಗ್ರಹಣೆ ಮಾತ್ರವಲ್ಲ, ಭಾರತದ ಒಟ್ಟು ತೆರಿಗೆ ಆದಾಯದಲ್ಲಿ ಅಂತಹ ತೆರಿಗೆಗಳ ಪಾಲು ವರ್ಷದಿಂದ ವರ್ಷಕ್ಕೆ ತೀವ್ರವಾಗಿ ಏರಿಕೆಯಾಗುವುದನ್ನು ನೋಡಬಹುದಾಗಿದೆ. ಇದು ಇಂಧನ ತೆರಿಗೆ ಆದಾಯದ ಮೇಲೆ ಸ್ಥಿರವಾಗಿ ಹೆಚ್ಚುತ್ತಿರುವ ಅವಲಂಬನೆಯನ್ನು ಸೂಚಿಸುತ್ತದೆ.

ಹಣಕಾಸು ಸಚಿವಾಲಯವು ಲೋಕಸಭೆಗೆ ಸಲ್ಲಿಸಿದ ಅಂಕಿಅಂಶಗಳ ಪ್ರಕಾರ, ಈ ಹಣಕಾಸು ವರ್ಷದ (FY-21) ಮೊದಲ 10 ತಿಂಗಳಲ್ಲಿ ಇಂಧನ ಮತ್ತು ನೈಸರ್ಗಿಕ ಅನಿಲದಿಂದಾದ ಅಬಕಾರಿ ಸುಂಕ ಸಂಗ್ರಹವು ಈಗಾಗಲೇ ಕಳೆದ ಹಣಕಾಸು ವರ್ಷ(FY-20)ದ ಅವಧಿಯಲ್ಲಿ ದಾಖಲಾದ ಸಂಗ್ರಹಕ್ಕಿಂತ 45% ಹೆಚ್ಚಾಗಿದೆ!.

ಈ ಅಂಕಿ-ಅಂಶವು, ಏಪ್ರಿಲ್‌ 2020 ಮತ್ತು ಜನವರಿ 2021 ರಲ್ಲಿ 2.94 ಲಕ್ಷ ಕೋಟಿ ರೂ. ಸಂಗ್ರಹವಾಗಿದ್ದರೆ, FY-20 ರಲ್ಲಿ ಕೇವಲ 2,03,010 ಲಕ್ಷ ಕೋಟಿ ರೂ. ಸಂಗ್ರಹವಾಗಿತ್ತು. ಈ ಹಣಕಾಸು ವರ್ಷದ ಮೊದಲ 10 ತಿಂಗಳಲ್ಲಿ ಮಾಡಿದ ತೆರಿಗೆ ಸಂಗ್ರಹಗಳು FY-14 ರಲ್ಲಿ ದಾಖಲಾದ 53,090 ಕೋಟಿ ರೂ.ಗಳಿಗಿಂತ ಐದು ಪಟ್ಟು (456%) ಹೆಚ್ಚಾಗಿದೆ.

ಇದನ್ನೂ ಓದಿ: ಭಗತ್ ಸಿಂಗ್ ಹುತಾತ್ಮ ದಿನ: ದೆಹಲಿಯ ಗಡಿಗಳಲ್ಲಿ ನೆರೆಯಲಿದ್ದಾರೆ ಯುವಜನರ ದಂಡು!

ಅಬಕಾರಿ ತೆರಿಗೆಯ ಸಂಗ್ರಹ ಕಡಿಮೆಯಾದರೂ ಸಹ, ರಾಜ್ಯ ವ್ಯಾಟ್‌ ಸಂಗ್ರಹ ಇನ್ನೂ ಗಮನಾರ್ಹವಾಗಿ ಹೆಚ್ಚಳವಾಗಿದೆ. ಕಚ್ಚಾ ತೈಲ ಬೆಲೆಗಳು 2014 ಜೂನ್‌ ತಿಂಗಳಲ್ಲಿ‌‌‌ ಬ್ಯಾರೆಲ್‌ಗೆ 114 ಡಾಲರ್‌‌ನಿಂದ ಪ್ರಸ್ತುತ ಪ್ರತಿ ಬಾರ್‌ಗೆ 64 ಡಾಲರ್‌ಗೆ ಇಳಿದಿದ್ದರೂ ಚಿಲ್ಲರೆ ಇಂಧನದ ಬೆಲೆಗಳು ಇನ್ನೂ ಇಳಿದಿಲ್ಲ.

ಈ ಅವಧಿಯಲ್ಲಿ ಕಚ್ಚಾ ತೈಲ ಬೆಲೆಗಳು 90 ಡಾಲರ್‌‌ನಿಂದ 16 ಡಾಲರ್‌ನಷ್ಟು ಆಗಿತ್ತು, ಅಂದರೆ ಪ್ರತಿ ಬ್ಯಾರೆಲ್‌ಗೆ ಸರಾಸರಿ 50-60 ಡಾಲರ್‌ನಷ್ಟಾಗಿತ್ತು. ಆದರೆ ಈ ಬೆಲೆ ಕುಸಿತದ ಹೆಚ್ಚಿನ ಲಾಭಗಳನ್ನು ಬೊಕ್ಕಸಕ್ಕೆ ತಳ್ಳಲಾಗಿದೆ.

ಚಿಲ್ಲರೆ ಬೆಲೆಯಲ್ಲಿ ಕೇಂದ್ರದ ತೆರಿಗೆ 39%!

ಜೂನ್ 7, 2014 ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ ಪ್ರತಿ ಲೀಟರ್‌ಗೆ 71.51 ರೂ. ಮತ್ತು 57.28 ರೂ. ಆಗಿತ್ತು. ಕಚ್ಚಾ ಬೆಲೆ ಕುಸಿದರೂ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆರಿಗೆಯನ್ನು ಹೆಚ್ಚಿಸುತ್ತಲೇ ಇದ್ದವು. ಪ್ರಸ್ತುತ ದೆಹಲಿಯನ್ನು ಉದಾಹರಣೆಯಾಗಿ ತೆಗೆದುಕೊಂಡರೆ ಕೇಂದ್ರ ಮತ್ತು ರಾಜ್ಯ ತೆರಿಗೆಗಳು ಪೆಟ್ರೋಲ್‌‌ ಚಿಲ್ಲರೆ ಬೆಲೆಯ 60% ಮತ್ತು ಡೀಸೆಲ್ ಬೆಲೆಯ 53% ವನ್ನು ಹೊಂದಿವೆ. ಕೇಂದ್ರ ಅಬಕಾರಿ ಸುಂಕವೆ ಚಿಲ್ಲರೆ ಬೆಲೆಯ ಸುಮಾರು 39% ಒಳಗೊಂಡಿದೆ.

ಇದನ್ನೂ ಓದಿ: 100 ಕೋಟಿ ಲಂಚದ ಆರೋಪ, ಮೈತ್ರಿ ಪಕ್ಷಗಳ ಸಭೆಯಲ್ಲಿ ಅನಿಲ್ ದೇಶ್‌ಮುಖ್ ಭವಿಷ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...