Homeಮುಖಪುಟಇಂಧನ ತೆರಿಗೆ ಸಂಗ್ರಹ: 2014 ಕ್ಕಿಂತ 2021 ರಲ್ಲಿ 456% ದಷ್ಟು ಹೆಚ್ಚಳ!

ಇಂಧನ ತೆರಿಗೆ ಸಂಗ್ರಹ: 2014 ಕ್ಕಿಂತ 2021 ರಲ್ಲಿ 456% ದಷ್ಟು ಹೆಚ್ಚಳ!

- Advertisement -
- Advertisement -

ಇಂಧನ ತೆರಿಗೆಗಳು ಸರ್ಕಾರದ ಕಾಮಧೇನು ಆಗಿ ಮಾರ್ಪಟ್ಟಿದೆಯೇ ಎಂಬ ಬಗ್ಗೆ ಯಾವುದೇ ಸಂದೇಹಗಳು ಉಳಿದಿದ್ದರೆ, ಸೋಮವಾರ ಲೋಕಸಭೆಗೆ ಹಣಕಾಸು ಸಚಿವಾಲಯ ನೀಡಿರುವ ಉತ್ತರದಲ್ಲಿ ಅವುಗಳನ್ನು ಪರಿಹರಿಸಿ ಕೊಳ್ಳಬಹುದಾಗಿದೆ. ಪೆಟ್ರೋಲ್, ಡೀಸೆಲ್ ಮತ್ತು ನೈಸರ್ಗಿಕ ಅನಿಲದ ಮೇಲೆ ಅಬಕಾರಿ ಸುಂಕ ಸಂಗ್ರಹಣೆ ಮಾತ್ರವಲ್ಲ, ಭಾರತದ ಒಟ್ಟು ತೆರಿಗೆ ಆದಾಯದಲ್ಲಿ ಅಂತಹ ತೆರಿಗೆಗಳ ಪಾಲು ವರ್ಷದಿಂದ ವರ್ಷಕ್ಕೆ ತೀವ್ರವಾಗಿ ಏರಿಕೆಯಾಗುವುದನ್ನು ನೋಡಬಹುದಾಗಿದೆ. ಇದು ಇಂಧನ ತೆರಿಗೆ ಆದಾಯದ ಮೇಲೆ ಸ್ಥಿರವಾಗಿ ಹೆಚ್ಚುತ್ತಿರುವ ಅವಲಂಬನೆಯನ್ನು ಸೂಚಿಸುತ್ತದೆ.

ಹಣಕಾಸು ಸಚಿವಾಲಯವು ಲೋಕಸಭೆಗೆ ಸಲ್ಲಿಸಿದ ಅಂಕಿಅಂಶಗಳ ಪ್ರಕಾರ, ಈ ಹಣಕಾಸು ವರ್ಷದ (FY-21) ಮೊದಲ 10 ತಿಂಗಳಲ್ಲಿ ಇಂಧನ ಮತ್ತು ನೈಸರ್ಗಿಕ ಅನಿಲದಿಂದಾದ ಅಬಕಾರಿ ಸುಂಕ ಸಂಗ್ರಹವು ಈಗಾಗಲೇ ಕಳೆದ ಹಣಕಾಸು ವರ್ಷ(FY-20)ದ ಅವಧಿಯಲ್ಲಿ ದಾಖಲಾದ ಸಂಗ್ರಹಕ್ಕಿಂತ 45% ಹೆಚ್ಚಾಗಿದೆ!.

ಈ ಅಂಕಿ-ಅಂಶವು, ಏಪ್ರಿಲ್‌ 2020 ಮತ್ತು ಜನವರಿ 2021 ರಲ್ಲಿ 2.94 ಲಕ್ಷ ಕೋಟಿ ರೂ. ಸಂಗ್ರಹವಾಗಿದ್ದರೆ, FY-20 ರಲ್ಲಿ ಕೇವಲ 2,03,010 ಲಕ್ಷ ಕೋಟಿ ರೂ. ಸಂಗ್ರಹವಾಗಿತ್ತು. ಈ ಹಣಕಾಸು ವರ್ಷದ ಮೊದಲ 10 ತಿಂಗಳಲ್ಲಿ ಮಾಡಿದ ತೆರಿಗೆ ಸಂಗ್ರಹಗಳು FY-14 ರಲ್ಲಿ ದಾಖಲಾದ 53,090 ಕೋಟಿ ರೂ.ಗಳಿಗಿಂತ ಐದು ಪಟ್ಟು (456%) ಹೆಚ್ಚಾಗಿದೆ.

ಇದನ್ನೂ ಓದಿ: ಭಗತ್ ಸಿಂಗ್ ಹುತಾತ್ಮ ದಿನ: ದೆಹಲಿಯ ಗಡಿಗಳಲ್ಲಿ ನೆರೆಯಲಿದ್ದಾರೆ ಯುವಜನರ ದಂಡು!

ಅಬಕಾರಿ ತೆರಿಗೆಯ ಸಂಗ್ರಹ ಕಡಿಮೆಯಾದರೂ ಸಹ, ರಾಜ್ಯ ವ್ಯಾಟ್‌ ಸಂಗ್ರಹ ಇನ್ನೂ ಗಮನಾರ್ಹವಾಗಿ ಹೆಚ್ಚಳವಾಗಿದೆ. ಕಚ್ಚಾ ತೈಲ ಬೆಲೆಗಳು 2014 ಜೂನ್‌ ತಿಂಗಳಲ್ಲಿ‌‌‌ ಬ್ಯಾರೆಲ್‌ಗೆ 114 ಡಾಲರ್‌‌ನಿಂದ ಪ್ರಸ್ತುತ ಪ್ರತಿ ಬಾರ್‌ಗೆ 64 ಡಾಲರ್‌ಗೆ ಇಳಿದಿದ್ದರೂ ಚಿಲ್ಲರೆ ಇಂಧನದ ಬೆಲೆಗಳು ಇನ್ನೂ ಇಳಿದಿಲ್ಲ.

ಈ ಅವಧಿಯಲ್ಲಿ ಕಚ್ಚಾ ತೈಲ ಬೆಲೆಗಳು 90 ಡಾಲರ್‌‌ನಿಂದ 16 ಡಾಲರ್‌ನಷ್ಟು ಆಗಿತ್ತು, ಅಂದರೆ ಪ್ರತಿ ಬ್ಯಾರೆಲ್‌ಗೆ ಸರಾಸರಿ 50-60 ಡಾಲರ್‌ನಷ್ಟಾಗಿತ್ತು. ಆದರೆ ಈ ಬೆಲೆ ಕುಸಿತದ ಹೆಚ್ಚಿನ ಲಾಭಗಳನ್ನು ಬೊಕ್ಕಸಕ್ಕೆ ತಳ್ಳಲಾಗಿದೆ.

ಚಿಲ್ಲರೆ ಬೆಲೆಯಲ್ಲಿ ಕೇಂದ್ರದ ತೆರಿಗೆ 39%!

ಜೂನ್ 7, 2014 ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ ಪ್ರತಿ ಲೀಟರ್‌ಗೆ 71.51 ರೂ. ಮತ್ತು 57.28 ರೂ. ಆಗಿತ್ತು. ಕಚ್ಚಾ ಬೆಲೆ ಕುಸಿದರೂ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆರಿಗೆಯನ್ನು ಹೆಚ್ಚಿಸುತ್ತಲೇ ಇದ್ದವು. ಪ್ರಸ್ತುತ ದೆಹಲಿಯನ್ನು ಉದಾಹರಣೆಯಾಗಿ ತೆಗೆದುಕೊಂಡರೆ ಕೇಂದ್ರ ಮತ್ತು ರಾಜ್ಯ ತೆರಿಗೆಗಳು ಪೆಟ್ರೋಲ್‌‌ ಚಿಲ್ಲರೆ ಬೆಲೆಯ 60% ಮತ್ತು ಡೀಸೆಲ್ ಬೆಲೆಯ 53% ವನ್ನು ಹೊಂದಿವೆ. ಕೇಂದ್ರ ಅಬಕಾರಿ ಸುಂಕವೆ ಚಿಲ್ಲರೆ ಬೆಲೆಯ ಸುಮಾರು 39% ಒಳಗೊಂಡಿದೆ.

ಇದನ್ನೂ ಓದಿ: 100 ಕೋಟಿ ಲಂಚದ ಆರೋಪ, ಮೈತ್ರಿ ಪಕ್ಷಗಳ ಸಭೆಯಲ್ಲಿ ಅನಿಲ್ ದೇಶ್‌ಮುಖ್ ಭವಿಷ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...