Homeಮುಖಪುಟಇಂಧನ ತೆರಿಗೆ ಸಂಗ್ರಹ: 2014 ಕ್ಕಿಂತ 2021 ರಲ್ಲಿ 456% ದಷ್ಟು ಹೆಚ್ಚಳ!

ಇಂಧನ ತೆರಿಗೆ ಸಂಗ್ರಹ: 2014 ಕ್ಕಿಂತ 2021 ರಲ್ಲಿ 456% ದಷ್ಟು ಹೆಚ್ಚಳ!

- Advertisement -
- Advertisement -

ಇಂಧನ ತೆರಿಗೆಗಳು ಸರ್ಕಾರದ ಕಾಮಧೇನು ಆಗಿ ಮಾರ್ಪಟ್ಟಿದೆಯೇ ಎಂಬ ಬಗ್ಗೆ ಯಾವುದೇ ಸಂದೇಹಗಳು ಉಳಿದಿದ್ದರೆ, ಸೋಮವಾರ ಲೋಕಸಭೆಗೆ ಹಣಕಾಸು ಸಚಿವಾಲಯ ನೀಡಿರುವ ಉತ್ತರದಲ್ಲಿ ಅವುಗಳನ್ನು ಪರಿಹರಿಸಿ ಕೊಳ್ಳಬಹುದಾಗಿದೆ. ಪೆಟ್ರೋಲ್, ಡೀಸೆಲ್ ಮತ್ತು ನೈಸರ್ಗಿಕ ಅನಿಲದ ಮೇಲೆ ಅಬಕಾರಿ ಸುಂಕ ಸಂಗ್ರಹಣೆ ಮಾತ್ರವಲ್ಲ, ಭಾರತದ ಒಟ್ಟು ತೆರಿಗೆ ಆದಾಯದಲ್ಲಿ ಅಂತಹ ತೆರಿಗೆಗಳ ಪಾಲು ವರ್ಷದಿಂದ ವರ್ಷಕ್ಕೆ ತೀವ್ರವಾಗಿ ಏರಿಕೆಯಾಗುವುದನ್ನು ನೋಡಬಹುದಾಗಿದೆ. ಇದು ಇಂಧನ ತೆರಿಗೆ ಆದಾಯದ ಮೇಲೆ ಸ್ಥಿರವಾಗಿ ಹೆಚ್ಚುತ್ತಿರುವ ಅವಲಂಬನೆಯನ್ನು ಸೂಚಿಸುತ್ತದೆ.

ಹಣಕಾಸು ಸಚಿವಾಲಯವು ಲೋಕಸಭೆಗೆ ಸಲ್ಲಿಸಿದ ಅಂಕಿಅಂಶಗಳ ಪ್ರಕಾರ, ಈ ಹಣಕಾಸು ವರ್ಷದ (FY-21) ಮೊದಲ 10 ತಿಂಗಳಲ್ಲಿ ಇಂಧನ ಮತ್ತು ನೈಸರ್ಗಿಕ ಅನಿಲದಿಂದಾದ ಅಬಕಾರಿ ಸುಂಕ ಸಂಗ್ರಹವು ಈಗಾಗಲೇ ಕಳೆದ ಹಣಕಾಸು ವರ್ಷ(FY-20)ದ ಅವಧಿಯಲ್ಲಿ ದಾಖಲಾದ ಸಂಗ್ರಹಕ್ಕಿಂತ 45% ಹೆಚ್ಚಾಗಿದೆ!.

ಈ ಅಂಕಿ-ಅಂಶವು, ಏಪ್ರಿಲ್‌ 2020 ಮತ್ತು ಜನವರಿ 2021 ರಲ್ಲಿ 2.94 ಲಕ್ಷ ಕೋಟಿ ರೂ. ಸಂಗ್ರಹವಾಗಿದ್ದರೆ, FY-20 ರಲ್ಲಿ ಕೇವಲ 2,03,010 ಲಕ್ಷ ಕೋಟಿ ರೂ. ಸಂಗ್ರಹವಾಗಿತ್ತು. ಈ ಹಣಕಾಸು ವರ್ಷದ ಮೊದಲ 10 ತಿಂಗಳಲ್ಲಿ ಮಾಡಿದ ತೆರಿಗೆ ಸಂಗ್ರಹಗಳು FY-14 ರಲ್ಲಿ ದಾಖಲಾದ 53,090 ಕೋಟಿ ರೂ.ಗಳಿಗಿಂತ ಐದು ಪಟ್ಟು (456%) ಹೆಚ್ಚಾಗಿದೆ.

ಇದನ್ನೂ ಓದಿ: ಭಗತ್ ಸಿಂಗ್ ಹುತಾತ್ಮ ದಿನ: ದೆಹಲಿಯ ಗಡಿಗಳಲ್ಲಿ ನೆರೆಯಲಿದ್ದಾರೆ ಯುವಜನರ ದಂಡು!

ಅಬಕಾರಿ ತೆರಿಗೆಯ ಸಂಗ್ರಹ ಕಡಿಮೆಯಾದರೂ ಸಹ, ರಾಜ್ಯ ವ್ಯಾಟ್‌ ಸಂಗ್ರಹ ಇನ್ನೂ ಗಮನಾರ್ಹವಾಗಿ ಹೆಚ್ಚಳವಾಗಿದೆ. ಕಚ್ಚಾ ತೈಲ ಬೆಲೆಗಳು 2014 ಜೂನ್‌ ತಿಂಗಳಲ್ಲಿ‌‌‌ ಬ್ಯಾರೆಲ್‌ಗೆ 114 ಡಾಲರ್‌‌ನಿಂದ ಪ್ರಸ್ತುತ ಪ್ರತಿ ಬಾರ್‌ಗೆ 64 ಡಾಲರ್‌ಗೆ ಇಳಿದಿದ್ದರೂ ಚಿಲ್ಲರೆ ಇಂಧನದ ಬೆಲೆಗಳು ಇನ್ನೂ ಇಳಿದಿಲ್ಲ.

ಈ ಅವಧಿಯಲ್ಲಿ ಕಚ್ಚಾ ತೈಲ ಬೆಲೆಗಳು 90 ಡಾಲರ್‌‌ನಿಂದ 16 ಡಾಲರ್‌ನಷ್ಟು ಆಗಿತ್ತು, ಅಂದರೆ ಪ್ರತಿ ಬ್ಯಾರೆಲ್‌ಗೆ ಸರಾಸರಿ 50-60 ಡಾಲರ್‌ನಷ್ಟಾಗಿತ್ತು. ಆದರೆ ಈ ಬೆಲೆ ಕುಸಿತದ ಹೆಚ್ಚಿನ ಲಾಭಗಳನ್ನು ಬೊಕ್ಕಸಕ್ಕೆ ತಳ್ಳಲಾಗಿದೆ.

ಚಿಲ್ಲರೆ ಬೆಲೆಯಲ್ಲಿ ಕೇಂದ್ರದ ತೆರಿಗೆ 39%!

ಜೂನ್ 7, 2014 ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ ಪ್ರತಿ ಲೀಟರ್‌ಗೆ 71.51 ರೂ. ಮತ್ತು 57.28 ರೂ. ಆಗಿತ್ತು. ಕಚ್ಚಾ ಬೆಲೆ ಕುಸಿದರೂ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆರಿಗೆಯನ್ನು ಹೆಚ್ಚಿಸುತ್ತಲೇ ಇದ್ದವು. ಪ್ರಸ್ತುತ ದೆಹಲಿಯನ್ನು ಉದಾಹರಣೆಯಾಗಿ ತೆಗೆದುಕೊಂಡರೆ ಕೇಂದ್ರ ಮತ್ತು ರಾಜ್ಯ ತೆರಿಗೆಗಳು ಪೆಟ್ರೋಲ್‌‌ ಚಿಲ್ಲರೆ ಬೆಲೆಯ 60% ಮತ್ತು ಡೀಸೆಲ್ ಬೆಲೆಯ 53% ವನ್ನು ಹೊಂದಿವೆ. ಕೇಂದ್ರ ಅಬಕಾರಿ ಸುಂಕವೆ ಚಿಲ್ಲರೆ ಬೆಲೆಯ ಸುಮಾರು 39% ಒಳಗೊಂಡಿದೆ.

ಇದನ್ನೂ ಓದಿ: 100 ಕೋಟಿ ಲಂಚದ ಆರೋಪ, ಮೈತ್ರಿ ಪಕ್ಷಗಳ ಸಭೆಯಲ್ಲಿ ಅನಿಲ್ ದೇಶ್‌ಮುಖ್ ಭವಿಷ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...