Homeಮುಖಪುಟ'ಅಪೋಫಿಸ್' ಧರೆಗೆ ಅಪ್ಪಳಿಸುವ ಮುನ್ನ ನಿಮ್ಮ ಎಲ್ಲಾ ಆಸೆಗಳನ್ನು ಆದಷ್ಟು ಬೇಗ ಪೂರೈಸಿಕೊಳ್ಳಿ!

‘ಅಪೋಫಿಸ್’ ಧರೆಗೆ ಅಪ್ಪಳಿಸುವ ಮುನ್ನ ನಿಮ್ಮ ಎಲ್ಲಾ ಆಸೆಗಳನ್ನು ಆದಷ್ಟು ಬೇಗ ಪೂರೈಸಿಕೊಳ್ಳಿ!

ಅಪೋಫಿಸ್ ಏಪ್ರಿಲ್ 13, 2029ರಂದು ಧರೆಯ ಸಮೀಪದಿಂದ ಹಾದು ಹೋಗಲಿದ್ದು, ಅದನ್ನು ಬರಿಯ ಕಣ್ಣಿಂದ, ಯಾವುದೇ ಟೆಲೆಸ್ಕೋಪ್ ಅಥವಾ ಬೈನಾಕ್ಯುಲರ್ ಸಹಾಯವಿಲ್ಲದೇ ನೋಡಬಹುದಾಗಿದೆ.

- Advertisement -
- Advertisement -

ಸೃಷ್ಟಿಪೂರ್ವದ ಭೂತಸಾಮಗ್ರಿಯ ಅವ್ಯವಸ್ಥಿತ ಸ್ಥಿತಿಯ ಗ್ರೀಕ್ ದೇವತೆ “ಅಪೋಫಿಸ್” ಹೆಸರಿನ ಈ ಉಲ್ಕಾಬಂಡೆ ತನ್ನ ವೇಗವನ್ನು ದಿನೇ ದಿನೇ ಹೆಚ್ಚಿಸಿಕೊಳ್ಳುತ್ತಿದೆ. ಸುಮಾರು 340 ಚ.ಮೀಟರ್, ಅಂದರೆ ಸುಮಾರು ಮೂರು ಫುಟ್ಬಾಲ್ ಮೈದಾನದಷ್ಟು, ವಿಸ್ತೀರ್ಣದ ಈ ಉಲ್ಕೆ 2068 ರಲ್ಲಿ ಭೂಮಿಗೆ ಬಂದು ಅಪ್ಪಳಿಸುವ ಸಾಧ್ಯತೆ ಇದೆ.

ಅಸಮತೋಲಿತ ಸೌರ ತಾಪಮಾನ ಹೆಚ್ಚಳಿಕೆಯಿಂದಾಗಿ ಇದು ತನ್ನ ವೇಗ ಹೆಚ್ಚಿಸಿಕೊಳ್ಳುತ್ತಿದ್ದು “ಯಾರ್ಕೊವ್ಸ್ಕಿ ಪರಿಣಾಮ” ದಿಂದಾಗಿ ಧರೆಯೆಡೆಗೆ ಮುನ್ನುಗ್ಗುತ್ತಿದೆ. ಆದರೆ  ಯಾರ್ಕೊವ್ಸ್ಕಿ ಪರಿಣಾಮದ ದೀರ್ಘಕಾಲೀನ ಭವಿಷ್ಯ ನುಡಿಯುವುದೂ ಕಷ್ಟಕರ ಎನ್ನುತ್ತಾರೆ ಹವಾಯಿ ವಿಶ್ವವಿದ್ಯಾಲಯದ ಇನ್ಸ್ಟಿಟ್ಯೂಟ್ ಆಫ್ ಅಸ್ಟ್ರಾನಮಿಯ ವಿಜ್ಞಾನಿಗಳು. ಇತ್ತೀಚೆಗೆ ಅಮೇರಿಕಾದ ನಾಸಾ ಸಂಸ್ಥೆ ಉಲ್ಕೆ “ಬೆನ್ನು” ವಿನ ಬೆನ್ನೇರಿ ಅದರಿಂದ ಸ್ಯಾಂಪಲ್ ಪಡೆದ್ದಿದ್ದು ಸಹ ಈ ಯಾರ್ಕೋವ್ಸ್ಕಿ ಪರಿಣಾಮವನ್ನು ಅರಿಯುವ ಒಂದು ಪ್ರಯತ್ನವಾಗಿದೆ.

ಈ ಉಲ್ಕೆ ಧರೆಗೆ ಅಪ್ಪಳಿಸಿದ್ದೇ ಆದರೆ ಅದರಿಂದ ಸುಮಾರು 880 ಮಿಲಿಯನ್ ಟನ್ ಡೈನಾಮೈಟ್  ಅಥವಾ ಹಿರೋಶಿಮಾ ನಗರವನ್ನು ಧ್ವಂಸ ಮಾಡಿದ 65,000  ಅಣುಬಾಂಬ್‌ಗ ಳು ಏಕಕಾಲಕ್ಕೆ ಸ್ಫೋಟಗೊಂಡ ವಿಧ್ವಂಸಕ ಪರಿಣಾಮ ಬೀರುತ್ತದೆ.

ಅಮೇರಿಕದ ಅಸ್ಟ್ರೋನಾಮಿಕಲ್ ಸೊಸೈಟಿಯ ಡಿವಿಜನ್ ಆಫ್ ಪ್ಲಾನೆಟರಿ ಸೈನ್ಸ್‌ನ 2020ರಲ್ಲಿ ನಡೆದ ವರ್ಚ್ಯುಅಲ್ ಸಭೆಯಲ್ಲಿ ಮಂಡಿಸಲಾದ ಒಂದು ವೈಜ್ಞಾನಿಕ ಲೇಖನದ ಸಹ ಲೇಖಕರಾದ ಡೇವ್ ಥೋಲೆನ್ ಪ್ರಕಾರ ಸುಬಾರು ಟೆಲೆಸ್ಕೋಪ್ ಮೂಲಕ ಸಿಕ್ಕ ದತ್ತಾಂಶಗಳಿಂದ ಅಪೋಫಿಸ್ ವೇಗ ಹೆಚ್ಚುತ್ತಿರುವುದು ಮತ್ತು ತನ್ನ ಗುರುತ್ವಾಕರ್ಷಣ ವಕ್ರಪಥವನ್ನು ಬಿಟ್ಟು ವರ್ಷಕ್ಕೆ 170 ಮೀಟರ್ ಜಾರುತ್ತಿರುವುದು ತಿಳಿದುಬಂದಿದೆ. ಇದರಿಂದ ಅದು 2068ಕ್ಕೆ ಧರೆಗೆ ಅಪ್ಪಳಿಸುವುದು ಬಹುತೇಕ ಖಚಿತ ಎನ್ನುತ್ತಾರೆ.

ಸಣ್ಣ ಅಂದರೆ ಐದರಿಂದ ಹತ್ತು ಮೀಟರ್ ವಿಸ್ತೀರ್ಣದ ಉಲ್ಕೆಗಳು ಧರೆಯ ಹತ್ತಿರದಿಂದ ಹಾದು ಹೋಗುವುದು ಸಾಮಾನ್ಯ, ಆದರೆ ಇಷ್ಟು ದೊಡ್ಡ ಉಲ್ಕೆ ಅಪರೂಪವಷ್ಟೇ ಅಲ್ಲ, ಇಷ್ಟು ಸಮೀಪ ಬರುವುದಿಲ್ಲ. 2068ರಲ್ಲಿ ಧರೆಗೆ ಅಪ್ಪಳಿಸುವ ಮುನ್ನ ಅಪೋಫಿಸ್ ಏಪ್ರಿಲ್ 13, 2029ರಂದು ಧರೆಯ ಸಮೀಪದಿಂದ ಹಾದು ಹೋಗಲಿದ್ದು, ಅದನ್ನು ಬರಿಯ ಕಣ್ಣಿಂದ, ಯಾವುದೇ ಟೆಲೆಸ್ಕೋಪ್ ಅಥವಾ ಬೈನಾಕ್ಯುಲರ್ ಸಹಾಯವಿಲ್ಲದೇ ನೋಡಬಹುದಾಗಿದೆ.

2068ರಲ್ಲಿ ನಾನಂತೂ ಇರುವುದಿಲ್ಲ, ನೀವು ಇರುವುದಾದಲ್ಲಿ ನಿಮ್ಮ ಆಸೆಗಳನ್ನು ಮುಂಚಿತವಾಗಿ ಪೂರೈಸಿಕೊಳ್ಳಿ.

 

  • ಕನ್ನಡ ಅನುವಾದ: ಜಿ.ಆರ್. ವಿದ್ಯಾರಣ್ಯ

ಮೂಲ ಇಂಗ್ಲಿಷ್ ಲೇಖನ ಓದಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಕೈದಿಗಳ ಉಭಯ ಸಂಕಟದ ಕಥೆ: ಇದು ಕೇವಲ ಕಥೆಯಲ್ಲ, ಒಂದು ರಣನೀತಿಯೂ ಹೌದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...