Homeಮುಖಪುಟ'ಅಪೋಫಿಸ್' ಧರೆಗೆ ಅಪ್ಪಳಿಸುವ ಮುನ್ನ ನಿಮ್ಮ ಎಲ್ಲಾ ಆಸೆಗಳನ್ನು ಆದಷ್ಟು ಬೇಗ ಪೂರೈಸಿಕೊಳ್ಳಿ!

‘ಅಪೋಫಿಸ್’ ಧರೆಗೆ ಅಪ್ಪಳಿಸುವ ಮುನ್ನ ನಿಮ್ಮ ಎಲ್ಲಾ ಆಸೆಗಳನ್ನು ಆದಷ್ಟು ಬೇಗ ಪೂರೈಸಿಕೊಳ್ಳಿ!

ಅಪೋಫಿಸ್ ಏಪ್ರಿಲ್ 13, 2029ರಂದು ಧರೆಯ ಸಮೀಪದಿಂದ ಹಾದು ಹೋಗಲಿದ್ದು, ಅದನ್ನು ಬರಿಯ ಕಣ್ಣಿಂದ, ಯಾವುದೇ ಟೆಲೆಸ್ಕೋಪ್ ಅಥವಾ ಬೈನಾಕ್ಯುಲರ್ ಸಹಾಯವಿಲ್ಲದೇ ನೋಡಬಹುದಾಗಿದೆ.

- Advertisement -
- Advertisement -

ಸೃಷ್ಟಿಪೂರ್ವದ ಭೂತಸಾಮಗ್ರಿಯ ಅವ್ಯವಸ್ಥಿತ ಸ್ಥಿತಿಯ ಗ್ರೀಕ್ ದೇವತೆ “ಅಪೋಫಿಸ್” ಹೆಸರಿನ ಈ ಉಲ್ಕಾಬಂಡೆ ತನ್ನ ವೇಗವನ್ನು ದಿನೇ ದಿನೇ ಹೆಚ್ಚಿಸಿಕೊಳ್ಳುತ್ತಿದೆ. ಸುಮಾರು 340 ಚ.ಮೀಟರ್, ಅಂದರೆ ಸುಮಾರು ಮೂರು ಫುಟ್ಬಾಲ್ ಮೈದಾನದಷ್ಟು, ವಿಸ್ತೀರ್ಣದ ಈ ಉಲ್ಕೆ 2068 ರಲ್ಲಿ ಭೂಮಿಗೆ ಬಂದು ಅಪ್ಪಳಿಸುವ ಸಾಧ್ಯತೆ ಇದೆ.

ಅಸಮತೋಲಿತ ಸೌರ ತಾಪಮಾನ ಹೆಚ್ಚಳಿಕೆಯಿಂದಾಗಿ ಇದು ತನ್ನ ವೇಗ ಹೆಚ್ಚಿಸಿಕೊಳ್ಳುತ್ತಿದ್ದು “ಯಾರ್ಕೊವ್ಸ್ಕಿ ಪರಿಣಾಮ” ದಿಂದಾಗಿ ಧರೆಯೆಡೆಗೆ ಮುನ್ನುಗ್ಗುತ್ತಿದೆ. ಆದರೆ  ಯಾರ್ಕೊವ್ಸ್ಕಿ ಪರಿಣಾಮದ ದೀರ್ಘಕಾಲೀನ ಭವಿಷ್ಯ ನುಡಿಯುವುದೂ ಕಷ್ಟಕರ ಎನ್ನುತ್ತಾರೆ ಹವಾಯಿ ವಿಶ್ವವಿದ್ಯಾಲಯದ ಇನ್ಸ್ಟಿಟ್ಯೂಟ್ ಆಫ್ ಅಸ್ಟ್ರಾನಮಿಯ ವಿಜ್ಞಾನಿಗಳು. ಇತ್ತೀಚೆಗೆ ಅಮೇರಿಕಾದ ನಾಸಾ ಸಂಸ್ಥೆ ಉಲ್ಕೆ “ಬೆನ್ನು” ವಿನ ಬೆನ್ನೇರಿ ಅದರಿಂದ ಸ್ಯಾಂಪಲ್ ಪಡೆದ್ದಿದ್ದು ಸಹ ಈ ಯಾರ್ಕೋವ್ಸ್ಕಿ ಪರಿಣಾಮವನ್ನು ಅರಿಯುವ ಒಂದು ಪ್ರಯತ್ನವಾಗಿದೆ.

ಈ ಉಲ್ಕೆ ಧರೆಗೆ ಅಪ್ಪಳಿಸಿದ್ದೇ ಆದರೆ ಅದರಿಂದ ಸುಮಾರು 880 ಮಿಲಿಯನ್ ಟನ್ ಡೈನಾಮೈಟ್  ಅಥವಾ ಹಿರೋಶಿಮಾ ನಗರವನ್ನು ಧ್ವಂಸ ಮಾಡಿದ 65,000  ಅಣುಬಾಂಬ್‌ಗ ಳು ಏಕಕಾಲಕ್ಕೆ ಸ್ಫೋಟಗೊಂಡ ವಿಧ್ವಂಸಕ ಪರಿಣಾಮ ಬೀರುತ್ತದೆ.

ಅಮೇರಿಕದ ಅಸ್ಟ್ರೋನಾಮಿಕಲ್ ಸೊಸೈಟಿಯ ಡಿವಿಜನ್ ಆಫ್ ಪ್ಲಾನೆಟರಿ ಸೈನ್ಸ್‌ನ 2020ರಲ್ಲಿ ನಡೆದ ವರ್ಚ್ಯುಅಲ್ ಸಭೆಯಲ್ಲಿ ಮಂಡಿಸಲಾದ ಒಂದು ವೈಜ್ಞಾನಿಕ ಲೇಖನದ ಸಹ ಲೇಖಕರಾದ ಡೇವ್ ಥೋಲೆನ್ ಪ್ರಕಾರ ಸುಬಾರು ಟೆಲೆಸ್ಕೋಪ್ ಮೂಲಕ ಸಿಕ್ಕ ದತ್ತಾಂಶಗಳಿಂದ ಅಪೋಫಿಸ್ ವೇಗ ಹೆಚ್ಚುತ್ತಿರುವುದು ಮತ್ತು ತನ್ನ ಗುರುತ್ವಾಕರ್ಷಣ ವಕ್ರಪಥವನ್ನು ಬಿಟ್ಟು ವರ್ಷಕ್ಕೆ 170 ಮೀಟರ್ ಜಾರುತ್ತಿರುವುದು ತಿಳಿದುಬಂದಿದೆ. ಇದರಿಂದ ಅದು 2068ಕ್ಕೆ ಧರೆಗೆ ಅಪ್ಪಳಿಸುವುದು ಬಹುತೇಕ ಖಚಿತ ಎನ್ನುತ್ತಾರೆ.

ಸಣ್ಣ ಅಂದರೆ ಐದರಿಂದ ಹತ್ತು ಮೀಟರ್ ವಿಸ್ತೀರ್ಣದ ಉಲ್ಕೆಗಳು ಧರೆಯ ಹತ್ತಿರದಿಂದ ಹಾದು ಹೋಗುವುದು ಸಾಮಾನ್ಯ, ಆದರೆ ಇಷ್ಟು ದೊಡ್ಡ ಉಲ್ಕೆ ಅಪರೂಪವಷ್ಟೇ ಅಲ್ಲ, ಇಷ್ಟು ಸಮೀಪ ಬರುವುದಿಲ್ಲ. 2068ರಲ್ಲಿ ಧರೆಗೆ ಅಪ್ಪಳಿಸುವ ಮುನ್ನ ಅಪೋಫಿಸ್ ಏಪ್ರಿಲ್ 13, 2029ರಂದು ಧರೆಯ ಸಮೀಪದಿಂದ ಹಾದು ಹೋಗಲಿದ್ದು, ಅದನ್ನು ಬರಿಯ ಕಣ್ಣಿಂದ, ಯಾವುದೇ ಟೆಲೆಸ್ಕೋಪ್ ಅಥವಾ ಬೈನಾಕ್ಯುಲರ್ ಸಹಾಯವಿಲ್ಲದೇ ನೋಡಬಹುದಾಗಿದೆ.

2068ರಲ್ಲಿ ನಾನಂತೂ ಇರುವುದಿಲ್ಲ, ನೀವು ಇರುವುದಾದಲ್ಲಿ ನಿಮ್ಮ ಆಸೆಗಳನ್ನು ಮುಂಚಿತವಾಗಿ ಪೂರೈಸಿಕೊಳ್ಳಿ.

 

  • ಕನ್ನಡ ಅನುವಾದ: ಜಿ.ಆರ್. ವಿದ್ಯಾರಣ್ಯ

ಮೂಲ ಇಂಗ್ಲಿಷ್ ಲೇಖನ ಓದಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಕೈದಿಗಳ ಉಭಯ ಸಂಕಟದ ಕಥೆ: ಇದು ಕೇವಲ ಕಥೆಯಲ್ಲ, ಒಂದು ರಣನೀತಿಯೂ ಹೌದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...