Homeಮುಖಪುಟ'ಅಪೋಫಿಸ್' ಧರೆಗೆ ಅಪ್ಪಳಿಸುವ ಮುನ್ನ ನಿಮ್ಮ ಎಲ್ಲಾ ಆಸೆಗಳನ್ನು ಆದಷ್ಟು ಬೇಗ ಪೂರೈಸಿಕೊಳ್ಳಿ!

‘ಅಪೋಫಿಸ್’ ಧರೆಗೆ ಅಪ್ಪಳಿಸುವ ಮುನ್ನ ನಿಮ್ಮ ಎಲ್ಲಾ ಆಸೆಗಳನ್ನು ಆದಷ್ಟು ಬೇಗ ಪೂರೈಸಿಕೊಳ್ಳಿ!

ಅಪೋಫಿಸ್ ಏಪ್ರಿಲ್ 13, 2029ರಂದು ಧರೆಯ ಸಮೀಪದಿಂದ ಹಾದು ಹೋಗಲಿದ್ದು, ಅದನ್ನು ಬರಿಯ ಕಣ್ಣಿಂದ, ಯಾವುದೇ ಟೆಲೆಸ್ಕೋಪ್ ಅಥವಾ ಬೈನಾಕ್ಯುಲರ್ ಸಹಾಯವಿಲ್ಲದೇ ನೋಡಬಹುದಾಗಿದೆ.

- Advertisement -
- Advertisement -

ಸೃಷ್ಟಿಪೂರ್ವದ ಭೂತಸಾಮಗ್ರಿಯ ಅವ್ಯವಸ್ಥಿತ ಸ್ಥಿತಿಯ ಗ್ರೀಕ್ ದೇವತೆ “ಅಪೋಫಿಸ್” ಹೆಸರಿನ ಈ ಉಲ್ಕಾಬಂಡೆ ತನ್ನ ವೇಗವನ್ನು ದಿನೇ ದಿನೇ ಹೆಚ್ಚಿಸಿಕೊಳ್ಳುತ್ತಿದೆ. ಸುಮಾರು 340 ಚ.ಮೀಟರ್, ಅಂದರೆ ಸುಮಾರು ಮೂರು ಫುಟ್ಬಾಲ್ ಮೈದಾನದಷ್ಟು, ವಿಸ್ತೀರ್ಣದ ಈ ಉಲ್ಕೆ 2068 ರಲ್ಲಿ ಭೂಮಿಗೆ ಬಂದು ಅಪ್ಪಳಿಸುವ ಸಾಧ್ಯತೆ ಇದೆ.

ಅಸಮತೋಲಿತ ಸೌರ ತಾಪಮಾನ ಹೆಚ್ಚಳಿಕೆಯಿಂದಾಗಿ ಇದು ತನ್ನ ವೇಗ ಹೆಚ್ಚಿಸಿಕೊಳ್ಳುತ್ತಿದ್ದು “ಯಾರ್ಕೊವ್ಸ್ಕಿ ಪರಿಣಾಮ” ದಿಂದಾಗಿ ಧರೆಯೆಡೆಗೆ ಮುನ್ನುಗ್ಗುತ್ತಿದೆ. ಆದರೆ  ಯಾರ್ಕೊವ್ಸ್ಕಿ ಪರಿಣಾಮದ ದೀರ್ಘಕಾಲೀನ ಭವಿಷ್ಯ ನುಡಿಯುವುದೂ ಕಷ್ಟಕರ ಎನ್ನುತ್ತಾರೆ ಹವಾಯಿ ವಿಶ್ವವಿದ್ಯಾಲಯದ ಇನ್ಸ್ಟಿಟ್ಯೂಟ್ ಆಫ್ ಅಸ್ಟ್ರಾನಮಿಯ ವಿಜ್ಞಾನಿಗಳು. ಇತ್ತೀಚೆಗೆ ಅಮೇರಿಕಾದ ನಾಸಾ ಸಂಸ್ಥೆ ಉಲ್ಕೆ “ಬೆನ್ನು” ವಿನ ಬೆನ್ನೇರಿ ಅದರಿಂದ ಸ್ಯಾಂಪಲ್ ಪಡೆದ್ದಿದ್ದು ಸಹ ಈ ಯಾರ್ಕೋವ್ಸ್ಕಿ ಪರಿಣಾಮವನ್ನು ಅರಿಯುವ ಒಂದು ಪ್ರಯತ್ನವಾಗಿದೆ.

ಈ ಉಲ್ಕೆ ಧರೆಗೆ ಅಪ್ಪಳಿಸಿದ್ದೇ ಆದರೆ ಅದರಿಂದ ಸುಮಾರು 880 ಮಿಲಿಯನ್ ಟನ್ ಡೈನಾಮೈಟ್  ಅಥವಾ ಹಿರೋಶಿಮಾ ನಗರವನ್ನು ಧ್ವಂಸ ಮಾಡಿದ 65,000  ಅಣುಬಾಂಬ್‌ಗ ಳು ಏಕಕಾಲಕ್ಕೆ ಸ್ಫೋಟಗೊಂಡ ವಿಧ್ವಂಸಕ ಪರಿಣಾಮ ಬೀರುತ್ತದೆ.

ಅಮೇರಿಕದ ಅಸ್ಟ್ರೋನಾಮಿಕಲ್ ಸೊಸೈಟಿಯ ಡಿವಿಜನ್ ಆಫ್ ಪ್ಲಾನೆಟರಿ ಸೈನ್ಸ್‌ನ 2020ರಲ್ಲಿ ನಡೆದ ವರ್ಚ್ಯುಅಲ್ ಸಭೆಯಲ್ಲಿ ಮಂಡಿಸಲಾದ ಒಂದು ವೈಜ್ಞಾನಿಕ ಲೇಖನದ ಸಹ ಲೇಖಕರಾದ ಡೇವ್ ಥೋಲೆನ್ ಪ್ರಕಾರ ಸುಬಾರು ಟೆಲೆಸ್ಕೋಪ್ ಮೂಲಕ ಸಿಕ್ಕ ದತ್ತಾಂಶಗಳಿಂದ ಅಪೋಫಿಸ್ ವೇಗ ಹೆಚ್ಚುತ್ತಿರುವುದು ಮತ್ತು ತನ್ನ ಗುರುತ್ವಾಕರ್ಷಣ ವಕ್ರಪಥವನ್ನು ಬಿಟ್ಟು ವರ್ಷಕ್ಕೆ 170 ಮೀಟರ್ ಜಾರುತ್ತಿರುವುದು ತಿಳಿದುಬಂದಿದೆ. ಇದರಿಂದ ಅದು 2068ಕ್ಕೆ ಧರೆಗೆ ಅಪ್ಪಳಿಸುವುದು ಬಹುತೇಕ ಖಚಿತ ಎನ್ನುತ್ತಾರೆ.

ಸಣ್ಣ ಅಂದರೆ ಐದರಿಂದ ಹತ್ತು ಮೀಟರ್ ವಿಸ್ತೀರ್ಣದ ಉಲ್ಕೆಗಳು ಧರೆಯ ಹತ್ತಿರದಿಂದ ಹಾದು ಹೋಗುವುದು ಸಾಮಾನ್ಯ, ಆದರೆ ಇಷ್ಟು ದೊಡ್ಡ ಉಲ್ಕೆ ಅಪರೂಪವಷ್ಟೇ ಅಲ್ಲ, ಇಷ್ಟು ಸಮೀಪ ಬರುವುದಿಲ್ಲ. 2068ರಲ್ಲಿ ಧರೆಗೆ ಅಪ್ಪಳಿಸುವ ಮುನ್ನ ಅಪೋಫಿಸ್ ಏಪ್ರಿಲ್ 13, 2029ರಂದು ಧರೆಯ ಸಮೀಪದಿಂದ ಹಾದು ಹೋಗಲಿದ್ದು, ಅದನ್ನು ಬರಿಯ ಕಣ್ಣಿಂದ, ಯಾವುದೇ ಟೆಲೆಸ್ಕೋಪ್ ಅಥವಾ ಬೈನಾಕ್ಯುಲರ್ ಸಹಾಯವಿಲ್ಲದೇ ನೋಡಬಹುದಾಗಿದೆ.

2068ರಲ್ಲಿ ನಾನಂತೂ ಇರುವುದಿಲ್ಲ, ನೀವು ಇರುವುದಾದಲ್ಲಿ ನಿಮ್ಮ ಆಸೆಗಳನ್ನು ಮುಂಚಿತವಾಗಿ ಪೂರೈಸಿಕೊಳ್ಳಿ.

 

  • ಕನ್ನಡ ಅನುವಾದ: ಜಿ.ಆರ್. ವಿದ್ಯಾರಣ್ಯ

ಮೂಲ ಇಂಗ್ಲಿಷ್ ಲೇಖನ ಓದಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಕೈದಿಗಳ ಉಭಯ ಸಂಕಟದ ಕಥೆ: ಇದು ಕೇವಲ ಕಥೆಯಲ್ಲ, ಒಂದು ರಣನೀತಿಯೂ ಹೌದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...