Homeಮುಖಪುಟ'ಅಪೋಫಿಸ್' ಧರೆಗೆ ಅಪ್ಪಳಿಸುವ ಮುನ್ನ ನಿಮ್ಮ ಎಲ್ಲಾ ಆಸೆಗಳನ್ನು ಆದಷ್ಟು ಬೇಗ ಪೂರೈಸಿಕೊಳ್ಳಿ!

‘ಅಪೋಫಿಸ್’ ಧರೆಗೆ ಅಪ್ಪಳಿಸುವ ಮುನ್ನ ನಿಮ್ಮ ಎಲ್ಲಾ ಆಸೆಗಳನ್ನು ಆದಷ್ಟು ಬೇಗ ಪೂರೈಸಿಕೊಳ್ಳಿ!

ಅಪೋಫಿಸ್ ಏಪ್ರಿಲ್ 13, 2029ರಂದು ಧರೆಯ ಸಮೀಪದಿಂದ ಹಾದು ಹೋಗಲಿದ್ದು, ಅದನ್ನು ಬರಿಯ ಕಣ್ಣಿಂದ, ಯಾವುದೇ ಟೆಲೆಸ್ಕೋಪ್ ಅಥವಾ ಬೈನಾಕ್ಯುಲರ್ ಸಹಾಯವಿಲ್ಲದೇ ನೋಡಬಹುದಾಗಿದೆ.

- Advertisement -
- Advertisement -

ಸೃಷ್ಟಿಪೂರ್ವದ ಭೂತಸಾಮಗ್ರಿಯ ಅವ್ಯವಸ್ಥಿತ ಸ್ಥಿತಿಯ ಗ್ರೀಕ್ ದೇವತೆ “ಅಪೋಫಿಸ್” ಹೆಸರಿನ ಈ ಉಲ್ಕಾಬಂಡೆ ತನ್ನ ವೇಗವನ್ನು ದಿನೇ ದಿನೇ ಹೆಚ್ಚಿಸಿಕೊಳ್ಳುತ್ತಿದೆ. ಸುಮಾರು 340 ಚ.ಮೀಟರ್, ಅಂದರೆ ಸುಮಾರು ಮೂರು ಫುಟ್ಬಾಲ್ ಮೈದಾನದಷ್ಟು, ವಿಸ್ತೀರ್ಣದ ಈ ಉಲ್ಕೆ 2068 ರಲ್ಲಿ ಭೂಮಿಗೆ ಬಂದು ಅಪ್ಪಳಿಸುವ ಸಾಧ್ಯತೆ ಇದೆ.

ಅಸಮತೋಲಿತ ಸೌರ ತಾಪಮಾನ ಹೆಚ್ಚಳಿಕೆಯಿಂದಾಗಿ ಇದು ತನ್ನ ವೇಗ ಹೆಚ್ಚಿಸಿಕೊಳ್ಳುತ್ತಿದ್ದು “ಯಾರ್ಕೊವ್ಸ್ಕಿ ಪರಿಣಾಮ” ದಿಂದಾಗಿ ಧರೆಯೆಡೆಗೆ ಮುನ್ನುಗ್ಗುತ್ತಿದೆ. ಆದರೆ  ಯಾರ್ಕೊವ್ಸ್ಕಿ ಪರಿಣಾಮದ ದೀರ್ಘಕಾಲೀನ ಭವಿಷ್ಯ ನುಡಿಯುವುದೂ ಕಷ್ಟಕರ ಎನ್ನುತ್ತಾರೆ ಹವಾಯಿ ವಿಶ್ವವಿದ್ಯಾಲಯದ ಇನ್ಸ್ಟಿಟ್ಯೂಟ್ ಆಫ್ ಅಸ್ಟ್ರಾನಮಿಯ ವಿಜ್ಞಾನಿಗಳು. ಇತ್ತೀಚೆಗೆ ಅಮೇರಿಕಾದ ನಾಸಾ ಸಂಸ್ಥೆ ಉಲ್ಕೆ “ಬೆನ್ನು” ವಿನ ಬೆನ್ನೇರಿ ಅದರಿಂದ ಸ್ಯಾಂಪಲ್ ಪಡೆದ್ದಿದ್ದು ಸಹ ಈ ಯಾರ್ಕೋವ್ಸ್ಕಿ ಪರಿಣಾಮವನ್ನು ಅರಿಯುವ ಒಂದು ಪ್ರಯತ್ನವಾಗಿದೆ.

ಈ ಉಲ್ಕೆ ಧರೆಗೆ ಅಪ್ಪಳಿಸಿದ್ದೇ ಆದರೆ ಅದರಿಂದ ಸುಮಾರು 880 ಮಿಲಿಯನ್ ಟನ್ ಡೈನಾಮೈಟ್  ಅಥವಾ ಹಿರೋಶಿಮಾ ನಗರವನ್ನು ಧ್ವಂಸ ಮಾಡಿದ 65,000  ಅಣುಬಾಂಬ್‌ಗ ಳು ಏಕಕಾಲಕ್ಕೆ ಸ್ಫೋಟಗೊಂಡ ವಿಧ್ವಂಸಕ ಪರಿಣಾಮ ಬೀರುತ್ತದೆ.

ಅಮೇರಿಕದ ಅಸ್ಟ್ರೋನಾಮಿಕಲ್ ಸೊಸೈಟಿಯ ಡಿವಿಜನ್ ಆಫ್ ಪ್ಲಾನೆಟರಿ ಸೈನ್ಸ್‌ನ 2020ರಲ್ಲಿ ನಡೆದ ವರ್ಚ್ಯುಅಲ್ ಸಭೆಯಲ್ಲಿ ಮಂಡಿಸಲಾದ ಒಂದು ವೈಜ್ಞಾನಿಕ ಲೇಖನದ ಸಹ ಲೇಖಕರಾದ ಡೇವ್ ಥೋಲೆನ್ ಪ್ರಕಾರ ಸುಬಾರು ಟೆಲೆಸ್ಕೋಪ್ ಮೂಲಕ ಸಿಕ್ಕ ದತ್ತಾಂಶಗಳಿಂದ ಅಪೋಫಿಸ್ ವೇಗ ಹೆಚ್ಚುತ್ತಿರುವುದು ಮತ್ತು ತನ್ನ ಗುರುತ್ವಾಕರ್ಷಣ ವಕ್ರಪಥವನ್ನು ಬಿಟ್ಟು ವರ್ಷಕ್ಕೆ 170 ಮೀಟರ್ ಜಾರುತ್ತಿರುವುದು ತಿಳಿದುಬಂದಿದೆ. ಇದರಿಂದ ಅದು 2068ಕ್ಕೆ ಧರೆಗೆ ಅಪ್ಪಳಿಸುವುದು ಬಹುತೇಕ ಖಚಿತ ಎನ್ನುತ್ತಾರೆ.

ಸಣ್ಣ ಅಂದರೆ ಐದರಿಂದ ಹತ್ತು ಮೀಟರ್ ವಿಸ್ತೀರ್ಣದ ಉಲ್ಕೆಗಳು ಧರೆಯ ಹತ್ತಿರದಿಂದ ಹಾದು ಹೋಗುವುದು ಸಾಮಾನ್ಯ, ಆದರೆ ಇಷ್ಟು ದೊಡ್ಡ ಉಲ್ಕೆ ಅಪರೂಪವಷ್ಟೇ ಅಲ್ಲ, ಇಷ್ಟು ಸಮೀಪ ಬರುವುದಿಲ್ಲ. 2068ರಲ್ಲಿ ಧರೆಗೆ ಅಪ್ಪಳಿಸುವ ಮುನ್ನ ಅಪೋಫಿಸ್ ಏಪ್ರಿಲ್ 13, 2029ರಂದು ಧರೆಯ ಸಮೀಪದಿಂದ ಹಾದು ಹೋಗಲಿದ್ದು, ಅದನ್ನು ಬರಿಯ ಕಣ್ಣಿಂದ, ಯಾವುದೇ ಟೆಲೆಸ್ಕೋಪ್ ಅಥವಾ ಬೈನಾಕ್ಯುಲರ್ ಸಹಾಯವಿಲ್ಲದೇ ನೋಡಬಹುದಾಗಿದೆ.

2068ರಲ್ಲಿ ನಾನಂತೂ ಇರುವುದಿಲ್ಲ, ನೀವು ಇರುವುದಾದಲ್ಲಿ ನಿಮ್ಮ ಆಸೆಗಳನ್ನು ಮುಂಚಿತವಾಗಿ ಪೂರೈಸಿಕೊಳ್ಳಿ.

 

  • ಕನ್ನಡ ಅನುವಾದ: ಜಿ.ಆರ್. ವಿದ್ಯಾರಣ್ಯ

ಮೂಲ ಇಂಗ್ಲಿಷ್ ಲೇಖನ ಓದಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಕೈದಿಗಳ ಉಭಯ ಸಂಕಟದ ಕಥೆ: ಇದು ಕೇವಲ ಕಥೆಯಲ್ಲ, ಒಂದು ರಣನೀತಿಯೂ ಹೌದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...