Homeಮುಖಪುಟ'ಅಪೋಫಿಸ್' ಧರೆಗೆ ಅಪ್ಪಳಿಸುವ ಮುನ್ನ ನಿಮ್ಮ ಎಲ್ಲಾ ಆಸೆಗಳನ್ನು ಆದಷ್ಟು ಬೇಗ ಪೂರೈಸಿಕೊಳ್ಳಿ!

‘ಅಪೋಫಿಸ್’ ಧರೆಗೆ ಅಪ್ಪಳಿಸುವ ಮುನ್ನ ನಿಮ್ಮ ಎಲ್ಲಾ ಆಸೆಗಳನ್ನು ಆದಷ್ಟು ಬೇಗ ಪೂರೈಸಿಕೊಳ್ಳಿ!

ಅಪೋಫಿಸ್ ಏಪ್ರಿಲ್ 13, 2029ರಂದು ಧರೆಯ ಸಮೀಪದಿಂದ ಹಾದು ಹೋಗಲಿದ್ದು, ಅದನ್ನು ಬರಿಯ ಕಣ್ಣಿಂದ, ಯಾವುದೇ ಟೆಲೆಸ್ಕೋಪ್ ಅಥವಾ ಬೈನಾಕ್ಯುಲರ್ ಸಹಾಯವಿಲ್ಲದೇ ನೋಡಬಹುದಾಗಿದೆ.

- Advertisement -
- Advertisement -

ಸೃಷ್ಟಿಪೂರ್ವದ ಭೂತಸಾಮಗ್ರಿಯ ಅವ್ಯವಸ್ಥಿತ ಸ್ಥಿತಿಯ ಗ್ರೀಕ್ ದೇವತೆ “ಅಪೋಫಿಸ್” ಹೆಸರಿನ ಈ ಉಲ್ಕಾಬಂಡೆ ತನ್ನ ವೇಗವನ್ನು ದಿನೇ ದಿನೇ ಹೆಚ್ಚಿಸಿಕೊಳ್ಳುತ್ತಿದೆ. ಸುಮಾರು 340 ಚ.ಮೀಟರ್, ಅಂದರೆ ಸುಮಾರು ಮೂರು ಫುಟ್ಬಾಲ್ ಮೈದಾನದಷ್ಟು, ವಿಸ್ತೀರ್ಣದ ಈ ಉಲ್ಕೆ 2068 ರಲ್ಲಿ ಭೂಮಿಗೆ ಬಂದು ಅಪ್ಪಳಿಸುವ ಸಾಧ್ಯತೆ ಇದೆ.

ಅಸಮತೋಲಿತ ಸೌರ ತಾಪಮಾನ ಹೆಚ್ಚಳಿಕೆಯಿಂದಾಗಿ ಇದು ತನ್ನ ವೇಗ ಹೆಚ್ಚಿಸಿಕೊಳ್ಳುತ್ತಿದ್ದು “ಯಾರ್ಕೊವ್ಸ್ಕಿ ಪರಿಣಾಮ” ದಿಂದಾಗಿ ಧರೆಯೆಡೆಗೆ ಮುನ್ನುಗ್ಗುತ್ತಿದೆ. ಆದರೆ  ಯಾರ್ಕೊವ್ಸ್ಕಿ ಪರಿಣಾಮದ ದೀರ್ಘಕಾಲೀನ ಭವಿಷ್ಯ ನುಡಿಯುವುದೂ ಕಷ್ಟಕರ ಎನ್ನುತ್ತಾರೆ ಹವಾಯಿ ವಿಶ್ವವಿದ್ಯಾಲಯದ ಇನ್ಸ್ಟಿಟ್ಯೂಟ್ ಆಫ್ ಅಸ್ಟ್ರಾನಮಿಯ ವಿಜ್ಞಾನಿಗಳು. ಇತ್ತೀಚೆಗೆ ಅಮೇರಿಕಾದ ನಾಸಾ ಸಂಸ್ಥೆ ಉಲ್ಕೆ “ಬೆನ್ನು” ವಿನ ಬೆನ್ನೇರಿ ಅದರಿಂದ ಸ್ಯಾಂಪಲ್ ಪಡೆದ್ದಿದ್ದು ಸಹ ಈ ಯಾರ್ಕೋವ್ಸ್ಕಿ ಪರಿಣಾಮವನ್ನು ಅರಿಯುವ ಒಂದು ಪ್ರಯತ್ನವಾಗಿದೆ.

ಈ ಉಲ್ಕೆ ಧರೆಗೆ ಅಪ್ಪಳಿಸಿದ್ದೇ ಆದರೆ ಅದರಿಂದ ಸುಮಾರು 880 ಮಿಲಿಯನ್ ಟನ್ ಡೈನಾಮೈಟ್  ಅಥವಾ ಹಿರೋಶಿಮಾ ನಗರವನ್ನು ಧ್ವಂಸ ಮಾಡಿದ 65,000  ಅಣುಬಾಂಬ್‌ಗ ಳು ಏಕಕಾಲಕ್ಕೆ ಸ್ಫೋಟಗೊಂಡ ವಿಧ್ವಂಸಕ ಪರಿಣಾಮ ಬೀರುತ್ತದೆ.

ಅಮೇರಿಕದ ಅಸ್ಟ್ರೋನಾಮಿಕಲ್ ಸೊಸೈಟಿಯ ಡಿವಿಜನ್ ಆಫ್ ಪ್ಲಾನೆಟರಿ ಸೈನ್ಸ್‌ನ 2020ರಲ್ಲಿ ನಡೆದ ವರ್ಚ್ಯುಅಲ್ ಸಭೆಯಲ್ಲಿ ಮಂಡಿಸಲಾದ ಒಂದು ವೈಜ್ಞಾನಿಕ ಲೇಖನದ ಸಹ ಲೇಖಕರಾದ ಡೇವ್ ಥೋಲೆನ್ ಪ್ರಕಾರ ಸುಬಾರು ಟೆಲೆಸ್ಕೋಪ್ ಮೂಲಕ ಸಿಕ್ಕ ದತ್ತಾಂಶಗಳಿಂದ ಅಪೋಫಿಸ್ ವೇಗ ಹೆಚ್ಚುತ್ತಿರುವುದು ಮತ್ತು ತನ್ನ ಗುರುತ್ವಾಕರ್ಷಣ ವಕ್ರಪಥವನ್ನು ಬಿಟ್ಟು ವರ್ಷಕ್ಕೆ 170 ಮೀಟರ್ ಜಾರುತ್ತಿರುವುದು ತಿಳಿದುಬಂದಿದೆ. ಇದರಿಂದ ಅದು 2068ಕ್ಕೆ ಧರೆಗೆ ಅಪ್ಪಳಿಸುವುದು ಬಹುತೇಕ ಖಚಿತ ಎನ್ನುತ್ತಾರೆ.

ಸಣ್ಣ ಅಂದರೆ ಐದರಿಂದ ಹತ್ತು ಮೀಟರ್ ವಿಸ್ತೀರ್ಣದ ಉಲ್ಕೆಗಳು ಧರೆಯ ಹತ್ತಿರದಿಂದ ಹಾದು ಹೋಗುವುದು ಸಾಮಾನ್ಯ, ಆದರೆ ಇಷ್ಟು ದೊಡ್ಡ ಉಲ್ಕೆ ಅಪರೂಪವಷ್ಟೇ ಅಲ್ಲ, ಇಷ್ಟು ಸಮೀಪ ಬರುವುದಿಲ್ಲ. 2068ರಲ್ಲಿ ಧರೆಗೆ ಅಪ್ಪಳಿಸುವ ಮುನ್ನ ಅಪೋಫಿಸ್ ಏಪ್ರಿಲ್ 13, 2029ರಂದು ಧರೆಯ ಸಮೀಪದಿಂದ ಹಾದು ಹೋಗಲಿದ್ದು, ಅದನ್ನು ಬರಿಯ ಕಣ್ಣಿಂದ, ಯಾವುದೇ ಟೆಲೆಸ್ಕೋಪ್ ಅಥವಾ ಬೈನಾಕ್ಯುಲರ್ ಸಹಾಯವಿಲ್ಲದೇ ನೋಡಬಹುದಾಗಿದೆ.

2068ರಲ್ಲಿ ನಾನಂತೂ ಇರುವುದಿಲ್ಲ, ನೀವು ಇರುವುದಾದಲ್ಲಿ ನಿಮ್ಮ ಆಸೆಗಳನ್ನು ಮುಂಚಿತವಾಗಿ ಪೂರೈಸಿಕೊಳ್ಳಿ.

 

  • ಕನ್ನಡ ಅನುವಾದ: ಜಿ.ಆರ್. ವಿದ್ಯಾರಣ್ಯ

ಮೂಲ ಇಂಗ್ಲಿಷ್ ಲೇಖನ ಓದಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಕೈದಿಗಳ ಉಭಯ ಸಂಕಟದ ಕಥೆ: ಇದು ಕೇವಲ ಕಥೆಯಲ್ಲ, ಒಂದು ರಣನೀತಿಯೂ ಹೌದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...