Homeಮುಖಪುಟ'ಅಪೋಫಿಸ್' ಧರೆಗೆ ಅಪ್ಪಳಿಸುವ ಮುನ್ನ ನಿಮ್ಮ ಎಲ್ಲಾ ಆಸೆಗಳನ್ನು ಆದಷ್ಟು ಬೇಗ ಪೂರೈಸಿಕೊಳ್ಳಿ!

‘ಅಪೋಫಿಸ್’ ಧರೆಗೆ ಅಪ್ಪಳಿಸುವ ಮುನ್ನ ನಿಮ್ಮ ಎಲ್ಲಾ ಆಸೆಗಳನ್ನು ಆದಷ್ಟು ಬೇಗ ಪೂರೈಸಿಕೊಳ್ಳಿ!

ಅಪೋಫಿಸ್ ಏಪ್ರಿಲ್ 13, 2029ರಂದು ಧರೆಯ ಸಮೀಪದಿಂದ ಹಾದು ಹೋಗಲಿದ್ದು, ಅದನ್ನು ಬರಿಯ ಕಣ್ಣಿಂದ, ಯಾವುದೇ ಟೆಲೆಸ್ಕೋಪ್ ಅಥವಾ ಬೈನಾಕ್ಯುಲರ್ ಸಹಾಯವಿಲ್ಲದೇ ನೋಡಬಹುದಾಗಿದೆ.

- Advertisement -
- Advertisement -

ಸೃಷ್ಟಿಪೂರ್ವದ ಭೂತಸಾಮಗ್ರಿಯ ಅವ್ಯವಸ್ಥಿತ ಸ್ಥಿತಿಯ ಗ್ರೀಕ್ ದೇವತೆ “ಅಪೋಫಿಸ್” ಹೆಸರಿನ ಈ ಉಲ್ಕಾಬಂಡೆ ತನ್ನ ವೇಗವನ್ನು ದಿನೇ ದಿನೇ ಹೆಚ್ಚಿಸಿಕೊಳ್ಳುತ್ತಿದೆ. ಸುಮಾರು 340 ಚ.ಮೀಟರ್, ಅಂದರೆ ಸುಮಾರು ಮೂರು ಫುಟ್ಬಾಲ್ ಮೈದಾನದಷ್ಟು, ವಿಸ್ತೀರ್ಣದ ಈ ಉಲ್ಕೆ 2068 ರಲ್ಲಿ ಭೂಮಿಗೆ ಬಂದು ಅಪ್ಪಳಿಸುವ ಸಾಧ್ಯತೆ ಇದೆ.

ಅಸಮತೋಲಿತ ಸೌರ ತಾಪಮಾನ ಹೆಚ್ಚಳಿಕೆಯಿಂದಾಗಿ ಇದು ತನ್ನ ವೇಗ ಹೆಚ್ಚಿಸಿಕೊಳ್ಳುತ್ತಿದ್ದು “ಯಾರ್ಕೊವ್ಸ್ಕಿ ಪರಿಣಾಮ” ದಿಂದಾಗಿ ಧರೆಯೆಡೆಗೆ ಮುನ್ನುಗ್ಗುತ್ತಿದೆ. ಆದರೆ  ಯಾರ್ಕೊವ್ಸ್ಕಿ ಪರಿಣಾಮದ ದೀರ್ಘಕಾಲೀನ ಭವಿಷ್ಯ ನುಡಿಯುವುದೂ ಕಷ್ಟಕರ ಎನ್ನುತ್ತಾರೆ ಹವಾಯಿ ವಿಶ್ವವಿದ್ಯಾಲಯದ ಇನ್ಸ್ಟಿಟ್ಯೂಟ್ ಆಫ್ ಅಸ್ಟ್ರಾನಮಿಯ ವಿಜ್ಞಾನಿಗಳು. ಇತ್ತೀಚೆಗೆ ಅಮೇರಿಕಾದ ನಾಸಾ ಸಂಸ್ಥೆ ಉಲ್ಕೆ “ಬೆನ್ನು” ವಿನ ಬೆನ್ನೇರಿ ಅದರಿಂದ ಸ್ಯಾಂಪಲ್ ಪಡೆದ್ದಿದ್ದು ಸಹ ಈ ಯಾರ್ಕೋವ್ಸ್ಕಿ ಪರಿಣಾಮವನ್ನು ಅರಿಯುವ ಒಂದು ಪ್ರಯತ್ನವಾಗಿದೆ.

ಈ ಉಲ್ಕೆ ಧರೆಗೆ ಅಪ್ಪಳಿಸಿದ್ದೇ ಆದರೆ ಅದರಿಂದ ಸುಮಾರು 880 ಮಿಲಿಯನ್ ಟನ್ ಡೈನಾಮೈಟ್  ಅಥವಾ ಹಿರೋಶಿಮಾ ನಗರವನ್ನು ಧ್ವಂಸ ಮಾಡಿದ 65,000  ಅಣುಬಾಂಬ್‌ಗ ಳು ಏಕಕಾಲಕ್ಕೆ ಸ್ಫೋಟಗೊಂಡ ವಿಧ್ವಂಸಕ ಪರಿಣಾಮ ಬೀರುತ್ತದೆ.

ಅಮೇರಿಕದ ಅಸ್ಟ್ರೋನಾಮಿಕಲ್ ಸೊಸೈಟಿಯ ಡಿವಿಜನ್ ಆಫ್ ಪ್ಲಾನೆಟರಿ ಸೈನ್ಸ್‌ನ 2020ರಲ್ಲಿ ನಡೆದ ವರ್ಚ್ಯುಅಲ್ ಸಭೆಯಲ್ಲಿ ಮಂಡಿಸಲಾದ ಒಂದು ವೈಜ್ಞಾನಿಕ ಲೇಖನದ ಸಹ ಲೇಖಕರಾದ ಡೇವ್ ಥೋಲೆನ್ ಪ್ರಕಾರ ಸುಬಾರು ಟೆಲೆಸ್ಕೋಪ್ ಮೂಲಕ ಸಿಕ್ಕ ದತ್ತಾಂಶಗಳಿಂದ ಅಪೋಫಿಸ್ ವೇಗ ಹೆಚ್ಚುತ್ತಿರುವುದು ಮತ್ತು ತನ್ನ ಗುರುತ್ವಾಕರ್ಷಣ ವಕ್ರಪಥವನ್ನು ಬಿಟ್ಟು ವರ್ಷಕ್ಕೆ 170 ಮೀಟರ್ ಜಾರುತ್ತಿರುವುದು ತಿಳಿದುಬಂದಿದೆ. ಇದರಿಂದ ಅದು 2068ಕ್ಕೆ ಧರೆಗೆ ಅಪ್ಪಳಿಸುವುದು ಬಹುತೇಕ ಖಚಿತ ಎನ್ನುತ್ತಾರೆ.

ಸಣ್ಣ ಅಂದರೆ ಐದರಿಂದ ಹತ್ತು ಮೀಟರ್ ವಿಸ್ತೀರ್ಣದ ಉಲ್ಕೆಗಳು ಧರೆಯ ಹತ್ತಿರದಿಂದ ಹಾದು ಹೋಗುವುದು ಸಾಮಾನ್ಯ, ಆದರೆ ಇಷ್ಟು ದೊಡ್ಡ ಉಲ್ಕೆ ಅಪರೂಪವಷ್ಟೇ ಅಲ್ಲ, ಇಷ್ಟು ಸಮೀಪ ಬರುವುದಿಲ್ಲ. 2068ರಲ್ಲಿ ಧರೆಗೆ ಅಪ್ಪಳಿಸುವ ಮುನ್ನ ಅಪೋಫಿಸ್ ಏಪ್ರಿಲ್ 13, 2029ರಂದು ಧರೆಯ ಸಮೀಪದಿಂದ ಹಾದು ಹೋಗಲಿದ್ದು, ಅದನ್ನು ಬರಿಯ ಕಣ್ಣಿಂದ, ಯಾವುದೇ ಟೆಲೆಸ್ಕೋಪ್ ಅಥವಾ ಬೈನಾಕ್ಯುಲರ್ ಸಹಾಯವಿಲ್ಲದೇ ನೋಡಬಹುದಾಗಿದೆ.

2068ರಲ್ಲಿ ನಾನಂತೂ ಇರುವುದಿಲ್ಲ, ನೀವು ಇರುವುದಾದಲ್ಲಿ ನಿಮ್ಮ ಆಸೆಗಳನ್ನು ಮುಂಚಿತವಾಗಿ ಪೂರೈಸಿಕೊಳ್ಳಿ.

 

  • ಕನ್ನಡ ಅನುವಾದ: ಜಿ.ಆರ್. ವಿದ್ಯಾರಣ್ಯ

ಮೂಲ ಇಂಗ್ಲಿಷ್ ಲೇಖನ ಓದಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಕೈದಿಗಳ ಉಭಯ ಸಂಕಟದ ಕಥೆ: ಇದು ಕೇವಲ ಕಥೆಯಲ್ಲ, ಒಂದು ರಣನೀತಿಯೂ ಹೌದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...