HomeಮುಖಪುಟINDIA ಒಕ್ಕೂಟದಿಂದ ಟಿವಿ ನಿರೂಪಕರ ಕಾರ್ಯಕ್ರಮ ಬಹಿಷ್ಕಾರ: ಪಟ್ಟಿ ಸಿದ್ದಪಡಿಸಿದ ಉಪ ಸಮಿತಿ

INDIA ಒಕ್ಕೂಟದಿಂದ ಟಿವಿ ನಿರೂಪಕರ ಕಾರ್ಯಕ್ರಮ ಬಹಿಷ್ಕಾರ: ಪಟ್ಟಿ ಸಿದ್ದಪಡಿಸಿದ ಉಪ ಸಮಿತಿ

- Advertisement -
- Advertisement -

INDIA ಒಕ್ಕೂಟದ ನಾಯಕರು ಕೆಲ ಟಿವಿ ಕಾರ್ಯಕ್ರಮಗಳು ಮತ್ತು ನಿರೂಪಕರ ಕಾರ್ಯಕ್ರಮದಲ್ಲಿ ಭಾಗವಹಿಸದೆ ಬಹಿಷ್ಕಾರ ಹಾಕಲು ಸಮನ್ವಯ ಸಮಿತಿಯ ಸಭೆಯಲ್ಲಿ ನಿರ್ಧರಿಸಿದ್ದಾರೆ.

ಈ ಕುರಿತು INDIA ಒಕ್ಕೂಟದ ಸಮನ್ವಯ ಸಮಿತಿಯು, ಮಾಧ್ಯಮ ಉಪ ಸಮಿತಿ ರಚಿಸಿದ್ದು ಸಮಿತಿ ಬಹಿಷ್ಕಾರ ಹಾಕಬೇಕಾಗಿರುವ ನಿರೂಪಕರು ಮತ್ತು ಕಾರ್ಯಕ್ರಮಗಳ ಹೆಸರನ್ನು ಸಿದ್ಧಪಡಿಸಿದೆ.

ಅಮಾನ್‌ ಛೋಪ್ರಾ, ಪ್ರಾಚಿ ಪರಸಾರ್‌, ರುಬಿಕಾ ಲಿಯಾಕತ್‌, ಚೈತ್ರಾ ತೃಪ್ತಿ, ಸುದೀರ್‌ ಚೌದರಿ, ಅಮೀಶ್‌ ದೇವಗನ್‌, ಅರ್ನಬ್‌ ಗೋಸ್ವಾಮಿ, ನವಿಕಾ ಕುಮಾರ್‌, ಆನಂದ ನರಸಿಂಹನ್‌, ಗೌರವ್‌ ಸಾವಂತ್‌, ಅದಿತಿ ತ್ಯಾಗಿ, ಸುಶಾಂತ್‌ ಸಿನ್ಹಾ, ಅಶೋಕ್‌ ಶ್ರೀವತ್ಸವ್‌, ಶಿವ್‌ ಅರೂರ್‌ ಅವರ ಕಾರ್ಯಕ್ರಮ ಬಹಿಷ್ಕಾರಕ್ಕೆ ಮಾಧ್ಯಮ ಉಪ ಸಮಿತಿ ತೀರ್ಮಾನಿಸಿದೆ.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರ ಮನೆಯಲ್ಲಿ ನಡೆದ  INDIA ಒಕ್ಕೂಟದ ಸಮನ್ವಯ ಸಮಿತಿಯ ಮೊದಲ ಸಭೆಯಲ್ಲಿ ಕೆಲ ಟಿವಿ ಕಾರ್ಯಕ್ರಮಗಳಿಗೆ ಬಹಿಷ್ಕಾರ ಹಾಕುವ ಸಲುವಾಗಿ ಆಂಕರ್‌ಗಳು ಮತ್ತು ಕಾರ್ಯಕ್ರಮಗಳನ್ನು ಪಟ್ಟಿ ಮಾಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು.

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಮಾಧ್ಯಮದ ಒಂದು ವಿಭಾಗವು ಕಡಿಮೆ ಕವರೇಜ್ ನೀಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಯಾತ್ರೆಗೆ ಜನ ಬೆಂಬಲ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ಯಾತ್ರೆಗೆ ಹೆಚ್ಚು ಬೆಂಬಲ ನೀಡಲಾಗಿದೆ. ಆದರೆ ಮುಖ್ಯವಾಹಿನಿಯ ಮಾಧ್ಯಮಗಳು ರಾಹುಲ್‌ ಯಾತ್ರೆಯನ್ನು ಬಹಿಷ್ಕರಿಸುವುದನ್ನು ಮುಂದುವರೆಸಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದರು.

ಸಂಪಾದಕರು ಯಾತ್ರೆಯನ್ನು ಬಹಿಷ್ಕರಿಸಿದ್ದಾರೆ ಎಂಬುದು ನನ್ನ ಆರೋಪ. ಲಕ್ಷಗಟ್ಟಲೆ  ಜನ ಯಾತ್ರೆಗೆ ಸೇರಿದ್ದಾರೆ. ಇಷ್ಟು ದೊಡ್ಡ ಯಾತ್ರೆಯನ್ನು ನೀವು ತೋರಿಸುವುದಿಲ್ಲವೇ? ಎಂದು ರಾಜಸ್ಥಾನ ಮುಖ್ಯಮಂತ್ರಿ ಪ್ರಶ್ನಿಸಿದ್ದರು.

ಸಮನ್ವಯ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲ 12 ಪಕ್ಷಗಳ ಪರವಾಗಿ ಮಾತನಾಡಿದ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಇಂಡಿಯಾ ಒಕ್ಕೂಟದ ನಾಯಕರು ಟಿವಿಯ ಕೆಲ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಲಿದ್ದು, ಮಾಧ್ಯಮದ ಉಪ ಸಮಿತಿಯು ಈ ಕುರಿತ ಟಿವಿ ಶೋಗಳು ಮತ್ತು ನಿರೂಪಕರನ್ನು ಪಟ್ಟಿ ಮಾಡಲಿದೆ ಎಂದು ಹೇಳಿದ್ದರು.

 

ಇದನ್ನು ಓದಿ: ಬೆಂಗಳೂರು: ಸೆ.16ರಂದು ‘ಒಂದು ದೇಶ, ಒಂದು ಚುನಾವಣೆ’ ಸಂವಾದ ಕಾರ್ಯಕ್ರಮ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read