Homeಮುಖಪುಟನನ್ನ ವಿರುದ್ಧ ಸಿಬಿಐ, ಇಡಿ ಸಂಸ್ಥೆಗಳ ಸಂಪೂರ್ಣ ಅಧಿಕಾರ ಬಳಕೆ: ಕೇಂದ್ರದ ವಿರುದ್ಧ ದೆಹಲಿ ಡಿಸಿಎಂ...

ನನ್ನ ವಿರುದ್ಧ ಸಿಬಿಐ, ಇಡಿ ಸಂಸ್ಥೆಗಳ ಸಂಪೂರ್ಣ ಅಧಿಕಾರ ಬಳಕೆ: ಕೇಂದ್ರದ ವಿರುದ್ಧ ದೆಹಲಿ ಡಿಸಿಎಂ ಆರೋಪ

- Advertisement -
- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಭಾನುವಾರ ಬೆಳಿಗ್ಗೆ 11 ಗಂಟೆಗೆ ಕೇಂದ್ರ ತನಿಖಾ ದಳದ (ಸಿಬಿಐ) ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ. ಈ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ ಸುಮಾರು ಮೂರು ತಿಂಗಳ ನಂತರ ಸಿಬಿಐ ಅಧಿಕಾರಿಗಳು ಅವರನ್ನು ವಿಚಾರಣೆಗೆ ಕರೆದಿದ್ದಾರೆ.

ಪ್ರಕರಣದ ಚಾರ್ಜ್ ಶೀಟ್‌ನಲ್ಲಿ ಸಿಸೋಡಿಯಾ ಅವರನ್ನು ಆರೋಪಿ ಎಂದು ಹೆಸರಿಸಲಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆದಾಗ್ಯೂ, ಅವರ ಮತ್ತು ಇತರ ಶಂಕಿತರ ವಿರುದ್ಧ ತನಿಖೆ ಇನ್ನೂ ನಡೆಯುತ್ತಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

ಈ ಹಿಂದೆ ಅಂದರೆ 2022 ಅಕ್ಟೋಬರ್ 17 ರಂದು ಸಿಸೋಡಿಯಾ ಅವರ ಮನೆ ಮತ್ತು ಬ್ಯಾಂಕ್ ಲಾಕರ್‌ಗಳನ್ನು ಸಹ ಈ ಪ್ರಕರಣದಲ್ಲಿ ಶೋಧಿಸಲಾಗಿತ್ತು. ಇದೀಗ ಮತ್ತೆ ಅವರನ್ನು ವಿಚಾರಣೆಗೆ ಕರೆಯಲಾಗಿದೆ.

“ದೆಹಲಿ ಅಬಕಾರಿ ನೀತಿ 2021-22ರ ರಚನೆ ಮತ್ತು ಅನುಷ್ಠಾನದಲ್ಲಿನ ದೊಡ್ಡ ಪಿತೂರಿಯ ಕುರಿತಾದ ಪ್ರಕರಣದ ಹೆಚ್ಚಿನ ತನಿಖೆ ಇನ್ನೂ ಪ್ರಗತಿಯಲ್ಲಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ತೀಸ್ತಾ ಸೆಟಲ್ವಾಡ್‌ರನ್ನು ಮತ್ತೆ ಜೈಲಿಗೆ ಕಳುಹಿಸಲು ಏಕೆ ಬಯಸುತ್ತೀರಿ? ಸಿಬಿಐಗೆ ಸುಪ್ರೀಂ ಪ್ರಶ್ನೆ

ಈ ಬಗ್ಗೆ ಟ್ವೀಟ್ ಮಾಡಿರುವ ಸಿಸೋಡಿಯಾ ಅವರು, ”ನನ್ನ ವಿರುದ್ಧ ಎಷ್ಟೇ ಶೋಧಕಾರ್ಯ ನಡೆಸಿದರೂ ಕೂಡ ಅಧಿಕಾರಿಗಳಿಗೆ ಏನೂ ಕಂಡುಬಂದಿಲ್ಲ. ಆದರೆ ನಾನು ತನಿಖೆ ಪ್ರಕ್ರಿಯೆಯಲ್ಲಿ ಅಧಿಕಾರಿಗಳಿಗೆ ಸಹಕರಿಸಿದ್ದೇನೆ, ಮುಂದೆಯೂ ಸಹಕರಿಸುತ್ತೇನೆ” ಎಂದು ಹೇಳಿದ್ದಾರೆ.

”ಸಿಬಿಐ ಅಧಿಕಾರಿಗಳು ಮತ್ತೆ ವಿಚಾರಣೆಗೆ ಕರೆದಿದ್ದಾರೆ. ಬಿಜೆಪಿಯವರು ನನ್ನ ವಿರುದ್ಧ ಸಿಬಿಐ, ಇಡಿ ಸಂಸ್ಥೆಗಳ ಸಂಪೂರ್ಣ ಅಧಿಕಾರವನ್ನು ಬಳಸಿ, ನನ್ನ ಮನೆ ಮೇಲೆ ದಾಳಿ ಮಾಡಿದ್ದಾರೆ, ಬ್ಯಾಂಕ್ ಲಾಕರ್‌ಅನ್ನು ಶೋಧಿಸಿದ್ದಾರೆ. ಆದರೆ ಈವರೆಗೂ ನನ್ನ ವಿರುದ್ಧ ಏನೂ ಪತ್ತೆಯಾಗಿಲ್ಲ” ಎಂದು ಮನೀಶ್ ಸಿಸೋಡಿಯಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ದೆಹಲಿಯಲ್ಲಿ ನಾವು ಕೆಲವು ಯೋಜನೆಗಳ ಮೂಲಕ ಮಕ್ಕಳ ಶಿಕ್ಷಣದ ಬಗ್ಗೆ “ಒಳ್ಳೆಯ ಕೆಲಸ” ಮಾಡುತ್ತಿದ್ದೇವೆ. ಆದರೆ ಕೇಂದ್ರ ಸರ್ಕಾರ ಅದರಲ್ಲಿ ಮಧ್ಯ ಪ್ರವೇಶಿಸಲು ಬಯಸುತ್ತದೆ. ಅದನ್ನು ನಾವು ವಿರೋಧ ಮಾಡಿದ್ದೇವೆ ಅದೇ ಕಾರಣಕ್ಕೆ ಕೇಂದ್ರ ನನ್ನ ವಿರುದ್ಧ ಸಿಬಿಐ ಅಧಿಕಾರಿಗಳನ್ನು ಬಿಟ್ಟಿದೆ ಎಂದು ಆರೋಪಿಸಿದರು.

ಈ ಪ್ರಕರಣದಲ್ಲಿ ಬಂಧಿತ ಉದ್ಯಮಿಗಳಾದ ವಿಜಯ್ ನಾಯರ್ ಮತ್ತು ಅಭಿಷೇಕ್ ಬೋಯಿನಪಲ್ಲಿ ಸೇರಿದಂತೆ ಏಳು ಜನ ಆರೋಪಿಗಳಾಗಿದ್ದು, 2022ರ ನವೆಂಬರ್ 25ರಂದು ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು.

ಇತ್ತೀಚೆಗಷ್ಟೇ ಅಬಕಾರಿ ನೀತಿ ಪ್ರಕರಣದಲ್ಲಿಯೇ ಸಿಬಿಐ ಅಧಿಕಾರಿಗಳು, ತೆಲಂಗಾಣದಲ್ಲಿ ಬಿಆರ್‌ಎಸ್ ಎಂಎಲ್‌ಸಿ ಕೆ. ಕವಿತಾ ಅವರ ಮಾಜಿ ಚಾರ್ಟರ್ಡ್ ಅಕೌಂಟೆಂಟ್ ಮತ್ತು ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಬುಚ್ಚಿಬಾಬು ಗೋರಂಟ್ಲಾ ಅವರನ್ನು ಬಂಧಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...