Homeಚಳವಳಿಪೂರ್ಣ ಓದಿ: ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ ಅವರ ಐತಿಹಾಸಿಕ ಹೇಳಿಕೆಯ ಪೂರ್ಣಪಾಠ

ಪೂರ್ಣ ಓದಿ: ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ ಅವರ ಐತಿಹಾಸಿಕ ಹೇಳಿಕೆಯ ಪೂರ್ಣಪಾಠ

ಅನ್ಯಮನಸ್ಕನಾಗಿ ಆ ಟ್ವೀಟ್‌ಗಳನ್ನು ನಾನು ಬರೆದಿಲ್ಲ. ಈ ನಮ್ಮ ಗಣರಾಜ್ಯದ ಐತಿಹಾಸಿಕ ಕಾಲಘಟ್ಟದಲ್ಲಿ ನಾನು ನಿರ್ವಹಿಸಬೇಕಿದ್ದ ಉನ್ನತ ಕರ್ತವ್ಯದ ಸಣ್ಣ ಭಾಗ ಆ ಟ್ವೀಟ್‌ಗಳು.

- Advertisement -
- Advertisement -

ಗೌರವಾನ್ವಿತ ನ್ಯಾಯಾಲಯದ ತೀರ್ಪನ್ನು ನಾನು ಓದಿದ್ದೇನೆ. ಮೂರು ದಶಕಗಳಿಂದ ಹೊಗಳುಭಟನಾಗಿಯಲ್ಲದೇ, ಆದರೆ ವಿನಮ್ರ ಕಾವಲುಗಾರನಾಗಿ, ಒಂದಷ್ಟು ವೈಯಕ್ತಿಕ ಮತ್ತು ವೃತ್ತಿಜೀವನದ ಹಿತಾಸಕ್ತಿಗಳನ್ನು ಬದಿಗಿಟ್ಟು ನಾನು ಯಾವ ನ್ಯಾಯಾಲಯದ ಘನತೆಯನ್ನು ಎತ್ತಿಹಿಡಿಯಲು ಪ್ರಯತ್ನಿಸಿದ್ದೇನೋ ಅದೇ ನ್ಯಾಯಾಂಗದ ನಿಂದನೆ ಮಾಡಿದ್ದೇನೆಂದು ನನ್ನನ್ನು ತಪ್ಪಿತಸ್ಥನಾಗಿಸಿರುವ ತೀರ್ಪು ನನಗೆ ನೋವು ತಂದಿದೆ.

ನನಗೆ ನೋವಾಗುತ್ತಿರುವುದು ಶಿಕ್ಷೆ ಆಗಬಹುದು ಎಂಬ ಕಾರಣಕ್ಕಲ್ಲ, ನನ್ನ ಆಶಯವನ್ನು ಸಂಪೂರ್ಣವಾಗಿ ಅಪಾರ್ಥ ಮಾಡಿಕೊಂಡಿರುವುದಕ್ಕಾಗುತ್ತಿದೆ. ನ್ಯಾಯದಾನದ ಸಂಸ್ಥೆಯ ಮೇಲೆ “ದುರುದ್ದೇಶಪೂರಿತವಾದ ಕೀಳುಮಟ್ಟದ, ಲೆಕ್ಕಾಚಾರದ ದಾಳಿ” ಮಾಡಿದ್ದೇನೆಂದು ನ್ಯಾಯಾಲಯ ನನ್ನನ್ನು ತಪ್ಪಿತಸ್ಥನನ್ನಾಗಿಸಿರುವುದನ್ನು ನೋಡಿ ನನಗೆ ಅಘಾತವಾಗಿದೆ.

ಇದನ್ನೂ ಓದಿ: ನೀವೆಷ್ಟೇ ಸಮಯ ನೀಡಿದರೂ ನನ್ನ ಹೇಳಿಕೆ ಬದಲಿಸುವುದಿಲ್ಲ: ಪ್ರಶಾಂತ್ ಭೂಷಣ್

ಈ ದಾಳಿಗಳನ್ನು ಮಾಡುವುದಕ್ಕೆ ನನಗಿದ್ದ ಉದ್ದೇಶಗಳೇನು ಎಂಬುದಕ್ಕೆ ಯಾವುದೇ ಸಾಕ್ಷ್ಯ ನೀಡದೆ ನ್ಯಾಯಾಲಯ ಈ ತೀರ್ಮಾನಕ್ಕೆ ಬಂದಿರುವುದು ನನ್ನನ್ನು ಕುಗ್ಗಿಸಿದೆ. ಸ್ವಯಂಪ್ರೇರಿತ ನೋಟಿಸ್ ನೀಡುವುದಕ್ಕೆ ಕಾರಣವಾದ ದೂರಿನ ಪ್ರತಿಯನ್ನು ಕೂಡ ಒದಗಿಸುವ ಅವಶ್ಯಕತೆ ಇಲ್ಲವೆಂದೂ, ನನ್ನ ಅಫಿಡವಿಟ್‌ನಲ್ಲಿ ಮಾಡಿದ ನಿರ್ದಿಷ್ಟ ಆರೋಪಗಳಿಗೆ ಅಥವಾ ನನ್ನ ಪರ ವಕೀಲರು ಸಲ್ಲಿಸಿದ ಅರ್ಜಿಗೆ ಉತ್ತರಿಸುವ ಅವಶ್ಯಕತೆ ಇಲ್ಲವೆಂದೂ ನ್ಯಾಯಾಲಯ ಬಗೆದಿರುವುದರಿಂದ ನನಗೆ ತೀವ್ರ ನಿರಾಶೆಯಾಗಿದೆ ಎಂದು ಸ್ಪಷ್ಟೀಕರಿಸುತ್ತೇನೆ.

ನನ್ನ ಟ್ವೀಟ್ “ಭಾರತದ ಪ್ರಜಾಪ್ರಭುತ್ವದ ಮುಖ್ಯ ಆಧಾರಸ್ತಂಭವನ್ನು ಅಲುಗಾಡಿಸುವ ಪರಿಣಾಮ ಉಂಟುಮಾಡಬಲ್ಲದು” ಎಂದು ನ್ಯಾಯಾಲಯಕ್ಕೆ ಕಂಡಿರುವುದನ್ನು ನಂಬಲು ಕಷ್ಟವಾಗುತ್ತಿದೆ. ಈ ಎರಡೂ ಟ್ವೀಟ್‌ಗಳು ನನ್ನ ಪ್ರಾಮಾಣಿಕ ನಂಬಿಕೆಯನ್ನು ಪ್ರತಿನಿಧಿಸಿದ್ದವು ಮತ್ತು ಆ ಅಭಿವ್ಯಕ್ತಿಗೆ ಪ್ರಜಾಪ್ರಭುತ್ವದಲ್ಲಿ ಅವಕಾಶವಿರಲೇಬೇಕು ಎಂದು ನಾನು ಇಲ್ಲಿ ಮತ್ತೆ ಪುನರುಚ್ಚರಿಸುತ್ತೇನೆ.

ಇದನ್ನೂ ಓದಿ: ಸಿಜೆಐ ಅಂದ್ರೆ ಸುಪ್ರೀಂ ಕೋರ್ಟ್ ಅಲ್ಲ: ನ್ಯಾಯಾಧೀಶರಿಗಿಂತ ನ್ಯಾಯಾಲಯ ದೊಡ್ಡದು – ಪ್ರಶಾಂತ್ ಭೂಷಣ್

ಅಲ್ಲದೆ, ನ್ಯಾಯಾಂಗದ ಆರೋಗ್ಯಕರ ನಿರ್ವಹಣೆಗೆ ಸಾರ್ವಜನಿಕ ಕಣ್ಗಾವಲು ಅತ್ಯವಶ್ಯ. ಸಾಂವಿಧಾನಿಕ ಸಮತೋಲನ ವ್ಯವಸ್ಥೆಯನ್ನು ಕಾಪಾಡಲು ಪ್ರಜಾಪ್ರಭುತ್ವದಲ್ಲಿ ಯಾವುದೇ ಸಂಸ್ಥೆಯ ಮುಕ್ತ ವಿಮರ್ಶೆ ಅತ್ಯವಶ್ಯ ಎಂದು ನಾನು ನಂಬಿದ್ದೇನೆ. ವೈಯಕ್ತಿಕ ಮತ್ತು ವೃತ್ತಿಪರ ಸೂಕ್ಷ್ಮಗಳಿಗಿಂತ ಸಾಂವಿಧಾನಿಕ ಸಮತೋಲನ ವ್ಯವಸ್ಥೆಯನ್ನು ಉಳಿಸುವುದು ಮೊದಲು ಆಗಬೇಕಾದ ಮತ್ತು ಭವಿಷ್ಯದ ಬಗ್ಗೆ ನಮ್ಮ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ವರ್ತಮಾನದ ಚಿಂತನೆಗಳು ಅಡ್ಡಿ ಬರಬಾರದ, ಉನ್ನತ ಆದರ್ಶಗಳು ನಮ್ಮ ದಿನನಿತ್ಯದ ವಹಿವಾಟುಗಳನ್ನು ತೊಡೆದುಹಾಕಬೇಕಿರುವ ಐತಿಹಾಸಿಕ ಕಾಲಘಟ್ಟದಲ್ಲಿ ನಾವು ಬದುಕಿದ್ದೇವೆ. ಇಂತಹ ಸಮಯದಲ್ಲಿ ಅದೂ ನ್ಯಾಯಾಲಯದ ಅಧಿಕಾರಿಯಾಗಿರುವ ನನ್ನಂತಹವನಿಗೆ ಮಾತನಾಡದೆ ಇರುವುದು ನನ್ನ ಕರ್ತವ್ಯದಿಂದ ವಿಮುಖನಾದಂತೆ.

ಈ ನಮ್ಮ ಗಣರಾಜ್ಯದ ಐತಿಹಾಸಿಕ ಕಾಲಘಟ್ಟದಲ್ಲಿ ನಾನು ನಿರ್ವಹಿಸಬೇಕಿದ್ದ ಉನ್ನತ ಕರ್ತವ್ಯದ ಸಣ್ಣ ಭಾಗ ಆ ಟ್ವೀಟ್‌ಗಳು. ಅನ್ಯಮನಸ್ಕನಾಗಿ ಆ ಟ್ವೀಟ್‌ಗಳನ್ನು ನಾನು ಬರೆದಿಲ್ಲ. ಆ ಟ್ವೀಟ್‌ಗಳಲ್ಲಿ ಅಭಿವ್ಯಕ್ತವಾಗಿರುವ ಸಂಗತಿಗಳು ನನ್ನ ಪ್ರಾಮಾಣಿಕ ನಂಬಿಕೆಯ ಭಾಗವಾಗಿದ್ದವು ಮತ್ತು ಈಗಲೂ ಆಗಿವೆ. ಹೀಗಿರುವಾಗ ಆ ಟ್ವೀಟ್‌ಗಳ ಬಗ್ಗೆ ಕ್ಷಮೆ ಕೇಳುವುದು ನನ್ನ ಕಡೆಯಿಂದ ಅಪ್ರಾಮಾಣಿಕ ಮತ್ತು ನಿಂದನೆಯ ನಡೆಯಾಗುತ್ತದೆ. ಆದುದರಿಂದ, ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರು ತಮ್ಮ ವಿಚಾರಣೆಯಲ್ಲಿ ಹೇಳಿದ ಮಾತುಗಳನ್ನು ವಿನಮ್ರತೆಯಿಂದ ಮತ್ತೊಂದು ರೀತಿಯಲ್ಲಿ ಹೇಳಬಯಸುತ್ತೇನೆ: ನಾನು ಕ್ಷಮಿಸಿರೆಂದು ಕೋರುವುದಿಲ್ಲ. ನೀವು ಉದಾತ್ತ ವೈಶಾಲ್ಯತೆಯನ್ನು ತೋರಿರೆಂದೂ ಕೇಳುವುದಿಲ್ಲ.

ಆದುದರಿಂದ, ಯಾವುದನ್ನು ನಾಗರಿಕನಾಗಿ ನನ್ನ ಅತ್ಯುನ್ನತ ಕರ್ತವ್ಯವೆಂದು ಭಾವಿಸಿದ್ದೇನೋ, ಅದನ್ನು ನ್ಯಾಯಾಲಯವು ಅಪರಾಧ ಎಂದು ಪರಿಗಣಿಸಿರುವ ಈ ಸಂದರ್ಭದಲ್ಲಿ, ಯಾವ ಶಿಕ್ಷೆಯನ್ನು ಕಾನೂನುಪ್ರಕಾರ ನೀಡಲಾಗುತ್ತದೆಯೋ ಅದನ್ನು ಸಂತೋಷದಿಂದ ಸ್ವೀಕರಿಸಲು ನಾನಿಲ್ಲಿ ನಿಂತಿದ್ದೇನೆ.


ಓದಿ: ಸುಪ್ರೀಂಕೋರ್ಟಿನ ನ್ಯಾಯಾಂಗ ನಿಂದನೆ ನೋಟೀಸಿಗೆ ವಕೀಲ ಪ್ರಶಾಂತ್ ಭೂಷಣ್ ಸ್ಫೋಟಕ ಉತ್ತರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...