Homeಚಳವಳಿಪೂರ್ಣ ಓದಿ: ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ ಅವರ ಐತಿಹಾಸಿಕ ಹೇಳಿಕೆಯ ಪೂರ್ಣಪಾಠ

ಪೂರ್ಣ ಓದಿ: ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ ಅವರ ಐತಿಹಾಸಿಕ ಹೇಳಿಕೆಯ ಪೂರ್ಣಪಾಠ

ಅನ್ಯಮನಸ್ಕನಾಗಿ ಆ ಟ್ವೀಟ್‌ಗಳನ್ನು ನಾನು ಬರೆದಿಲ್ಲ. ಈ ನಮ್ಮ ಗಣರಾಜ್ಯದ ಐತಿಹಾಸಿಕ ಕಾಲಘಟ್ಟದಲ್ಲಿ ನಾನು ನಿರ್ವಹಿಸಬೇಕಿದ್ದ ಉನ್ನತ ಕರ್ತವ್ಯದ ಸಣ್ಣ ಭಾಗ ಆ ಟ್ವೀಟ್‌ಗಳು.

- Advertisement -
- Advertisement -

ಗೌರವಾನ್ವಿತ ನ್ಯಾಯಾಲಯದ ತೀರ್ಪನ್ನು ನಾನು ಓದಿದ್ದೇನೆ. ಮೂರು ದಶಕಗಳಿಂದ ಹೊಗಳುಭಟನಾಗಿಯಲ್ಲದೇ, ಆದರೆ ವಿನಮ್ರ ಕಾವಲುಗಾರನಾಗಿ, ಒಂದಷ್ಟು ವೈಯಕ್ತಿಕ ಮತ್ತು ವೃತ್ತಿಜೀವನದ ಹಿತಾಸಕ್ತಿಗಳನ್ನು ಬದಿಗಿಟ್ಟು ನಾನು ಯಾವ ನ್ಯಾಯಾಲಯದ ಘನತೆಯನ್ನು ಎತ್ತಿಹಿಡಿಯಲು ಪ್ರಯತ್ನಿಸಿದ್ದೇನೋ ಅದೇ ನ್ಯಾಯಾಂಗದ ನಿಂದನೆ ಮಾಡಿದ್ದೇನೆಂದು ನನ್ನನ್ನು ತಪ್ಪಿತಸ್ಥನಾಗಿಸಿರುವ ತೀರ್ಪು ನನಗೆ ನೋವು ತಂದಿದೆ.

ನನಗೆ ನೋವಾಗುತ್ತಿರುವುದು ಶಿಕ್ಷೆ ಆಗಬಹುದು ಎಂಬ ಕಾರಣಕ್ಕಲ್ಲ, ನನ್ನ ಆಶಯವನ್ನು ಸಂಪೂರ್ಣವಾಗಿ ಅಪಾರ್ಥ ಮಾಡಿಕೊಂಡಿರುವುದಕ್ಕಾಗುತ್ತಿದೆ. ನ್ಯಾಯದಾನದ ಸಂಸ್ಥೆಯ ಮೇಲೆ “ದುರುದ್ದೇಶಪೂರಿತವಾದ ಕೀಳುಮಟ್ಟದ, ಲೆಕ್ಕಾಚಾರದ ದಾಳಿ” ಮಾಡಿದ್ದೇನೆಂದು ನ್ಯಾಯಾಲಯ ನನ್ನನ್ನು ತಪ್ಪಿತಸ್ಥನನ್ನಾಗಿಸಿರುವುದನ್ನು ನೋಡಿ ನನಗೆ ಅಘಾತವಾಗಿದೆ.

ಇದನ್ನೂ ಓದಿ: ನೀವೆಷ್ಟೇ ಸಮಯ ನೀಡಿದರೂ ನನ್ನ ಹೇಳಿಕೆ ಬದಲಿಸುವುದಿಲ್ಲ: ಪ್ರಶಾಂತ್ ಭೂಷಣ್

ಈ ದಾಳಿಗಳನ್ನು ಮಾಡುವುದಕ್ಕೆ ನನಗಿದ್ದ ಉದ್ದೇಶಗಳೇನು ಎಂಬುದಕ್ಕೆ ಯಾವುದೇ ಸಾಕ್ಷ್ಯ ನೀಡದೆ ನ್ಯಾಯಾಲಯ ಈ ತೀರ್ಮಾನಕ್ಕೆ ಬಂದಿರುವುದು ನನ್ನನ್ನು ಕುಗ್ಗಿಸಿದೆ. ಸ್ವಯಂಪ್ರೇರಿತ ನೋಟಿಸ್ ನೀಡುವುದಕ್ಕೆ ಕಾರಣವಾದ ದೂರಿನ ಪ್ರತಿಯನ್ನು ಕೂಡ ಒದಗಿಸುವ ಅವಶ್ಯಕತೆ ಇಲ್ಲವೆಂದೂ, ನನ್ನ ಅಫಿಡವಿಟ್‌ನಲ್ಲಿ ಮಾಡಿದ ನಿರ್ದಿಷ್ಟ ಆರೋಪಗಳಿಗೆ ಅಥವಾ ನನ್ನ ಪರ ವಕೀಲರು ಸಲ್ಲಿಸಿದ ಅರ್ಜಿಗೆ ಉತ್ತರಿಸುವ ಅವಶ್ಯಕತೆ ಇಲ್ಲವೆಂದೂ ನ್ಯಾಯಾಲಯ ಬಗೆದಿರುವುದರಿಂದ ನನಗೆ ತೀವ್ರ ನಿರಾಶೆಯಾಗಿದೆ ಎಂದು ಸ್ಪಷ್ಟೀಕರಿಸುತ್ತೇನೆ.

ನನ್ನ ಟ್ವೀಟ್ “ಭಾರತದ ಪ್ರಜಾಪ್ರಭುತ್ವದ ಮುಖ್ಯ ಆಧಾರಸ್ತಂಭವನ್ನು ಅಲುಗಾಡಿಸುವ ಪರಿಣಾಮ ಉಂಟುಮಾಡಬಲ್ಲದು” ಎಂದು ನ್ಯಾಯಾಲಯಕ್ಕೆ ಕಂಡಿರುವುದನ್ನು ನಂಬಲು ಕಷ್ಟವಾಗುತ್ತಿದೆ. ಈ ಎರಡೂ ಟ್ವೀಟ್‌ಗಳು ನನ್ನ ಪ್ರಾಮಾಣಿಕ ನಂಬಿಕೆಯನ್ನು ಪ್ರತಿನಿಧಿಸಿದ್ದವು ಮತ್ತು ಆ ಅಭಿವ್ಯಕ್ತಿಗೆ ಪ್ರಜಾಪ್ರಭುತ್ವದಲ್ಲಿ ಅವಕಾಶವಿರಲೇಬೇಕು ಎಂದು ನಾನು ಇಲ್ಲಿ ಮತ್ತೆ ಪುನರುಚ್ಚರಿಸುತ್ತೇನೆ.

ಇದನ್ನೂ ಓದಿ: ಸಿಜೆಐ ಅಂದ್ರೆ ಸುಪ್ರೀಂ ಕೋರ್ಟ್ ಅಲ್ಲ: ನ್ಯಾಯಾಧೀಶರಿಗಿಂತ ನ್ಯಾಯಾಲಯ ದೊಡ್ಡದು – ಪ್ರಶಾಂತ್ ಭೂಷಣ್

ಅಲ್ಲದೆ, ನ್ಯಾಯಾಂಗದ ಆರೋಗ್ಯಕರ ನಿರ್ವಹಣೆಗೆ ಸಾರ್ವಜನಿಕ ಕಣ್ಗಾವಲು ಅತ್ಯವಶ್ಯ. ಸಾಂವಿಧಾನಿಕ ಸಮತೋಲನ ವ್ಯವಸ್ಥೆಯನ್ನು ಕಾಪಾಡಲು ಪ್ರಜಾಪ್ರಭುತ್ವದಲ್ಲಿ ಯಾವುದೇ ಸಂಸ್ಥೆಯ ಮುಕ್ತ ವಿಮರ್ಶೆ ಅತ್ಯವಶ್ಯ ಎಂದು ನಾನು ನಂಬಿದ್ದೇನೆ. ವೈಯಕ್ತಿಕ ಮತ್ತು ವೃತ್ತಿಪರ ಸೂಕ್ಷ್ಮಗಳಿಗಿಂತ ಸಾಂವಿಧಾನಿಕ ಸಮತೋಲನ ವ್ಯವಸ್ಥೆಯನ್ನು ಉಳಿಸುವುದು ಮೊದಲು ಆಗಬೇಕಾದ ಮತ್ತು ಭವಿಷ್ಯದ ಬಗ್ಗೆ ನಮ್ಮ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ವರ್ತಮಾನದ ಚಿಂತನೆಗಳು ಅಡ್ಡಿ ಬರಬಾರದ, ಉನ್ನತ ಆದರ್ಶಗಳು ನಮ್ಮ ದಿನನಿತ್ಯದ ವಹಿವಾಟುಗಳನ್ನು ತೊಡೆದುಹಾಕಬೇಕಿರುವ ಐತಿಹಾಸಿಕ ಕಾಲಘಟ್ಟದಲ್ಲಿ ನಾವು ಬದುಕಿದ್ದೇವೆ. ಇಂತಹ ಸಮಯದಲ್ಲಿ ಅದೂ ನ್ಯಾಯಾಲಯದ ಅಧಿಕಾರಿಯಾಗಿರುವ ನನ್ನಂತಹವನಿಗೆ ಮಾತನಾಡದೆ ಇರುವುದು ನನ್ನ ಕರ್ತವ್ಯದಿಂದ ವಿಮುಖನಾದಂತೆ.

ಈ ನಮ್ಮ ಗಣರಾಜ್ಯದ ಐತಿಹಾಸಿಕ ಕಾಲಘಟ್ಟದಲ್ಲಿ ನಾನು ನಿರ್ವಹಿಸಬೇಕಿದ್ದ ಉನ್ನತ ಕರ್ತವ್ಯದ ಸಣ್ಣ ಭಾಗ ಆ ಟ್ವೀಟ್‌ಗಳು. ಅನ್ಯಮನಸ್ಕನಾಗಿ ಆ ಟ್ವೀಟ್‌ಗಳನ್ನು ನಾನು ಬರೆದಿಲ್ಲ. ಆ ಟ್ವೀಟ್‌ಗಳಲ್ಲಿ ಅಭಿವ್ಯಕ್ತವಾಗಿರುವ ಸಂಗತಿಗಳು ನನ್ನ ಪ್ರಾಮಾಣಿಕ ನಂಬಿಕೆಯ ಭಾಗವಾಗಿದ್ದವು ಮತ್ತು ಈಗಲೂ ಆಗಿವೆ. ಹೀಗಿರುವಾಗ ಆ ಟ್ವೀಟ್‌ಗಳ ಬಗ್ಗೆ ಕ್ಷಮೆ ಕೇಳುವುದು ನನ್ನ ಕಡೆಯಿಂದ ಅಪ್ರಾಮಾಣಿಕ ಮತ್ತು ನಿಂದನೆಯ ನಡೆಯಾಗುತ್ತದೆ. ಆದುದರಿಂದ, ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರು ತಮ್ಮ ವಿಚಾರಣೆಯಲ್ಲಿ ಹೇಳಿದ ಮಾತುಗಳನ್ನು ವಿನಮ್ರತೆಯಿಂದ ಮತ್ತೊಂದು ರೀತಿಯಲ್ಲಿ ಹೇಳಬಯಸುತ್ತೇನೆ: ನಾನು ಕ್ಷಮಿಸಿರೆಂದು ಕೋರುವುದಿಲ್ಲ. ನೀವು ಉದಾತ್ತ ವೈಶಾಲ್ಯತೆಯನ್ನು ತೋರಿರೆಂದೂ ಕೇಳುವುದಿಲ್ಲ.

ಆದುದರಿಂದ, ಯಾವುದನ್ನು ನಾಗರಿಕನಾಗಿ ನನ್ನ ಅತ್ಯುನ್ನತ ಕರ್ತವ್ಯವೆಂದು ಭಾವಿಸಿದ್ದೇನೋ, ಅದನ್ನು ನ್ಯಾಯಾಲಯವು ಅಪರಾಧ ಎಂದು ಪರಿಗಣಿಸಿರುವ ಈ ಸಂದರ್ಭದಲ್ಲಿ, ಯಾವ ಶಿಕ್ಷೆಯನ್ನು ಕಾನೂನುಪ್ರಕಾರ ನೀಡಲಾಗುತ್ತದೆಯೋ ಅದನ್ನು ಸಂತೋಷದಿಂದ ಸ್ವೀಕರಿಸಲು ನಾನಿಲ್ಲಿ ನಿಂತಿದ್ದೇನೆ.


ಓದಿ: ಸುಪ್ರೀಂಕೋರ್ಟಿನ ನ್ಯಾಯಾಂಗ ನಿಂದನೆ ನೋಟೀಸಿಗೆ ವಕೀಲ ಪ್ರಶಾಂತ್ ಭೂಷಣ್ ಸ್ಫೋಟಕ ಉತ್ತರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...