Homeಚಳವಳಿಪೂರ್ಣ ಓದಿ: ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ ಅವರ ಐತಿಹಾಸಿಕ ಹೇಳಿಕೆಯ ಪೂರ್ಣಪಾಠ

ಪೂರ್ಣ ಓದಿ: ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ ಅವರ ಐತಿಹಾಸಿಕ ಹೇಳಿಕೆಯ ಪೂರ್ಣಪಾಠ

ಅನ್ಯಮನಸ್ಕನಾಗಿ ಆ ಟ್ವೀಟ್‌ಗಳನ್ನು ನಾನು ಬರೆದಿಲ್ಲ. ಈ ನಮ್ಮ ಗಣರಾಜ್ಯದ ಐತಿಹಾಸಿಕ ಕಾಲಘಟ್ಟದಲ್ಲಿ ನಾನು ನಿರ್ವಹಿಸಬೇಕಿದ್ದ ಉನ್ನತ ಕರ್ತವ್ಯದ ಸಣ್ಣ ಭಾಗ ಆ ಟ್ವೀಟ್‌ಗಳು.

- Advertisement -
- Advertisement -

ಗೌರವಾನ್ವಿತ ನ್ಯಾಯಾಲಯದ ತೀರ್ಪನ್ನು ನಾನು ಓದಿದ್ದೇನೆ. ಮೂರು ದಶಕಗಳಿಂದ ಹೊಗಳುಭಟನಾಗಿಯಲ್ಲದೇ, ಆದರೆ ವಿನಮ್ರ ಕಾವಲುಗಾರನಾಗಿ, ಒಂದಷ್ಟು ವೈಯಕ್ತಿಕ ಮತ್ತು ವೃತ್ತಿಜೀವನದ ಹಿತಾಸಕ್ತಿಗಳನ್ನು ಬದಿಗಿಟ್ಟು ನಾನು ಯಾವ ನ್ಯಾಯಾಲಯದ ಘನತೆಯನ್ನು ಎತ್ತಿಹಿಡಿಯಲು ಪ್ರಯತ್ನಿಸಿದ್ದೇನೋ ಅದೇ ನ್ಯಾಯಾಂಗದ ನಿಂದನೆ ಮಾಡಿದ್ದೇನೆಂದು ನನ್ನನ್ನು ತಪ್ಪಿತಸ್ಥನಾಗಿಸಿರುವ ತೀರ್ಪು ನನಗೆ ನೋವು ತಂದಿದೆ.

ನನಗೆ ನೋವಾಗುತ್ತಿರುವುದು ಶಿಕ್ಷೆ ಆಗಬಹುದು ಎಂಬ ಕಾರಣಕ್ಕಲ್ಲ, ನನ್ನ ಆಶಯವನ್ನು ಸಂಪೂರ್ಣವಾಗಿ ಅಪಾರ್ಥ ಮಾಡಿಕೊಂಡಿರುವುದಕ್ಕಾಗುತ್ತಿದೆ. ನ್ಯಾಯದಾನದ ಸಂಸ್ಥೆಯ ಮೇಲೆ “ದುರುದ್ದೇಶಪೂರಿತವಾದ ಕೀಳುಮಟ್ಟದ, ಲೆಕ್ಕಾಚಾರದ ದಾಳಿ” ಮಾಡಿದ್ದೇನೆಂದು ನ್ಯಾಯಾಲಯ ನನ್ನನ್ನು ತಪ್ಪಿತಸ್ಥನನ್ನಾಗಿಸಿರುವುದನ್ನು ನೋಡಿ ನನಗೆ ಅಘಾತವಾಗಿದೆ.

ಇದನ್ನೂ ಓದಿ: ನೀವೆಷ್ಟೇ ಸಮಯ ನೀಡಿದರೂ ನನ್ನ ಹೇಳಿಕೆ ಬದಲಿಸುವುದಿಲ್ಲ: ಪ್ರಶಾಂತ್ ಭೂಷಣ್

ಈ ದಾಳಿಗಳನ್ನು ಮಾಡುವುದಕ್ಕೆ ನನಗಿದ್ದ ಉದ್ದೇಶಗಳೇನು ಎಂಬುದಕ್ಕೆ ಯಾವುದೇ ಸಾಕ್ಷ್ಯ ನೀಡದೆ ನ್ಯಾಯಾಲಯ ಈ ತೀರ್ಮಾನಕ್ಕೆ ಬಂದಿರುವುದು ನನ್ನನ್ನು ಕುಗ್ಗಿಸಿದೆ. ಸ್ವಯಂಪ್ರೇರಿತ ನೋಟಿಸ್ ನೀಡುವುದಕ್ಕೆ ಕಾರಣವಾದ ದೂರಿನ ಪ್ರತಿಯನ್ನು ಕೂಡ ಒದಗಿಸುವ ಅವಶ್ಯಕತೆ ಇಲ್ಲವೆಂದೂ, ನನ್ನ ಅಫಿಡವಿಟ್‌ನಲ್ಲಿ ಮಾಡಿದ ನಿರ್ದಿಷ್ಟ ಆರೋಪಗಳಿಗೆ ಅಥವಾ ನನ್ನ ಪರ ವಕೀಲರು ಸಲ್ಲಿಸಿದ ಅರ್ಜಿಗೆ ಉತ್ತರಿಸುವ ಅವಶ್ಯಕತೆ ಇಲ್ಲವೆಂದೂ ನ್ಯಾಯಾಲಯ ಬಗೆದಿರುವುದರಿಂದ ನನಗೆ ತೀವ್ರ ನಿರಾಶೆಯಾಗಿದೆ ಎಂದು ಸ್ಪಷ್ಟೀಕರಿಸುತ್ತೇನೆ.

ನನ್ನ ಟ್ವೀಟ್ “ಭಾರತದ ಪ್ರಜಾಪ್ರಭುತ್ವದ ಮುಖ್ಯ ಆಧಾರಸ್ತಂಭವನ್ನು ಅಲುಗಾಡಿಸುವ ಪರಿಣಾಮ ಉಂಟುಮಾಡಬಲ್ಲದು” ಎಂದು ನ್ಯಾಯಾಲಯಕ್ಕೆ ಕಂಡಿರುವುದನ್ನು ನಂಬಲು ಕಷ್ಟವಾಗುತ್ತಿದೆ. ಈ ಎರಡೂ ಟ್ವೀಟ್‌ಗಳು ನನ್ನ ಪ್ರಾಮಾಣಿಕ ನಂಬಿಕೆಯನ್ನು ಪ್ರತಿನಿಧಿಸಿದ್ದವು ಮತ್ತು ಆ ಅಭಿವ್ಯಕ್ತಿಗೆ ಪ್ರಜಾಪ್ರಭುತ್ವದಲ್ಲಿ ಅವಕಾಶವಿರಲೇಬೇಕು ಎಂದು ನಾನು ಇಲ್ಲಿ ಮತ್ತೆ ಪುನರುಚ್ಚರಿಸುತ್ತೇನೆ.

ಇದನ್ನೂ ಓದಿ: ಸಿಜೆಐ ಅಂದ್ರೆ ಸುಪ್ರೀಂ ಕೋರ್ಟ್ ಅಲ್ಲ: ನ್ಯಾಯಾಧೀಶರಿಗಿಂತ ನ್ಯಾಯಾಲಯ ದೊಡ್ಡದು – ಪ್ರಶಾಂತ್ ಭೂಷಣ್

ಅಲ್ಲದೆ, ನ್ಯಾಯಾಂಗದ ಆರೋಗ್ಯಕರ ನಿರ್ವಹಣೆಗೆ ಸಾರ್ವಜನಿಕ ಕಣ್ಗಾವಲು ಅತ್ಯವಶ್ಯ. ಸಾಂವಿಧಾನಿಕ ಸಮತೋಲನ ವ್ಯವಸ್ಥೆಯನ್ನು ಕಾಪಾಡಲು ಪ್ರಜಾಪ್ರಭುತ್ವದಲ್ಲಿ ಯಾವುದೇ ಸಂಸ್ಥೆಯ ಮುಕ್ತ ವಿಮರ್ಶೆ ಅತ್ಯವಶ್ಯ ಎಂದು ನಾನು ನಂಬಿದ್ದೇನೆ. ವೈಯಕ್ತಿಕ ಮತ್ತು ವೃತ್ತಿಪರ ಸೂಕ್ಷ್ಮಗಳಿಗಿಂತ ಸಾಂವಿಧಾನಿಕ ಸಮತೋಲನ ವ್ಯವಸ್ಥೆಯನ್ನು ಉಳಿಸುವುದು ಮೊದಲು ಆಗಬೇಕಾದ ಮತ್ತು ಭವಿಷ್ಯದ ಬಗ್ಗೆ ನಮ್ಮ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ವರ್ತಮಾನದ ಚಿಂತನೆಗಳು ಅಡ್ಡಿ ಬರಬಾರದ, ಉನ್ನತ ಆದರ್ಶಗಳು ನಮ್ಮ ದಿನನಿತ್ಯದ ವಹಿವಾಟುಗಳನ್ನು ತೊಡೆದುಹಾಕಬೇಕಿರುವ ಐತಿಹಾಸಿಕ ಕಾಲಘಟ್ಟದಲ್ಲಿ ನಾವು ಬದುಕಿದ್ದೇವೆ. ಇಂತಹ ಸಮಯದಲ್ಲಿ ಅದೂ ನ್ಯಾಯಾಲಯದ ಅಧಿಕಾರಿಯಾಗಿರುವ ನನ್ನಂತಹವನಿಗೆ ಮಾತನಾಡದೆ ಇರುವುದು ನನ್ನ ಕರ್ತವ್ಯದಿಂದ ವಿಮುಖನಾದಂತೆ.

ಈ ನಮ್ಮ ಗಣರಾಜ್ಯದ ಐತಿಹಾಸಿಕ ಕಾಲಘಟ್ಟದಲ್ಲಿ ನಾನು ನಿರ್ವಹಿಸಬೇಕಿದ್ದ ಉನ್ನತ ಕರ್ತವ್ಯದ ಸಣ್ಣ ಭಾಗ ಆ ಟ್ವೀಟ್‌ಗಳು. ಅನ್ಯಮನಸ್ಕನಾಗಿ ಆ ಟ್ವೀಟ್‌ಗಳನ್ನು ನಾನು ಬರೆದಿಲ್ಲ. ಆ ಟ್ವೀಟ್‌ಗಳಲ್ಲಿ ಅಭಿವ್ಯಕ್ತವಾಗಿರುವ ಸಂಗತಿಗಳು ನನ್ನ ಪ್ರಾಮಾಣಿಕ ನಂಬಿಕೆಯ ಭಾಗವಾಗಿದ್ದವು ಮತ್ತು ಈಗಲೂ ಆಗಿವೆ. ಹೀಗಿರುವಾಗ ಆ ಟ್ವೀಟ್‌ಗಳ ಬಗ್ಗೆ ಕ್ಷಮೆ ಕೇಳುವುದು ನನ್ನ ಕಡೆಯಿಂದ ಅಪ್ರಾಮಾಣಿಕ ಮತ್ತು ನಿಂದನೆಯ ನಡೆಯಾಗುತ್ತದೆ. ಆದುದರಿಂದ, ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರು ತಮ್ಮ ವಿಚಾರಣೆಯಲ್ಲಿ ಹೇಳಿದ ಮಾತುಗಳನ್ನು ವಿನಮ್ರತೆಯಿಂದ ಮತ್ತೊಂದು ರೀತಿಯಲ್ಲಿ ಹೇಳಬಯಸುತ್ತೇನೆ: ನಾನು ಕ್ಷಮಿಸಿರೆಂದು ಕೋರುವುದಿಲ್ಲ. ನೀವು ಉದಾತ್ತ ವೈಶಾಲ್ಯತೆಯನ್ನು ತೋರಿರೆಂದೂ ಕೇಳುವುದಿಲ್ಲ.

ಆದುದರಿಂದ, ಯಾವುದನ್ನು ನಾಗರಿಕನಾಗಿ ನನ್ನ ಅತ್ಯುನ್ನತ ಕರ್ತವ್ಯವೆಂದು ಭಾವಿಸಿದ್ದೇನೋ, ಅದನ್ನು ನ್ಯಾಯಾಲಯವು ಅಪರಾಧ ಎಂದು ಪರಿಗಣಿಸಿರುವ ಈ ಸಂದರ್ಭದಲ್ಲಿ, ಯಾವ ಶಿಕ್ಷೆಯನ್ನು ಕಾನೂನುಪ್ರಕಾರ ನೀಡಲಾಗುತ್ತದೆಯೋ ಅದನ್ನು ಸಂತೋಷದಿಂದ ಸ್ವೀಕರಿಸಲು ನಾನಿಲ್ಲಿ ನಿಂತಿದ್ದೇನೆ.


ಓದಿ: ಸುಪ್ರೀಂಕೋರ್ಟಿನ ನ್ಯಾಯಾಂಗ ನಿಂದನೆ ನೋಟೀಸಿಗೆ ವಕೀಲ ಪ್ರಶಾಂತ್ ಭೂಷಣ್ ಸ್ಫೋಟಕ ಉತ್ತರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...