Homeಚಳವಳಿಪೂರ್ಣ ಓದಿ: ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ ಅವರ ಐತಿಹಾಸಿಕ ಹೇಳಿಕೆಯ ಪೂರ್ಣಪಾಠ

ಪೂರ್ಣ ಓದಿ: ಸುಪ್ರೀಂಕೋರ್ಟಿನಲ್ಲಿ ಪ್ರಶಾಂತ್ ಭೂಷಣ್ ಅವರ ಐತಿಹಾಸಿಕ ಹೇಳಿಕೆಯ ಪೂರ್ಣಪಾಠ

ಅನ್ಯಮನಸ್ಕನಾಗಿ ಆ ಟ್ವೀಟ್‌ಗಳನ್ನು ನಾನು ಬರೆದಿಲ್ಲ. ಈ ನಮ್ಮ ಗಣರಾಜ್ಯದ ಐತಿಹಾಸಿಕ ಕಾಲಘಟ್ಟದಲ್ಲಿ ನಾನು ನಿರ್ವಹಿಸಬೇಕಿದ್ದ ಉನ್ನತ ಕರ್ತವ್ಯದ ಸಣ್ಣ ಭಾಗ ಆ ಟ್ವೀಟ್‌ಗಳು.

- Advertisement -
- Advertisement -

ಗೌರವಾನ್ವಿತ ನ್ಯಾಯಾಲಯದ ತೀರ್ಪನ್ನು ನಾನು ಓದಿದ್ದೇನೆ. ಮೂರು ದಶಕಗಳಿಂದ ಹೊಗಳುಭಟನಾಗಿಯಲ್ಲದೇ, ಆದರೆ ವಿನಮ್ರ ಕಾವಲುಗಾರನಾಗಿ, ಒಂದಷ್ಟು ವೈಯಕ್ತಿಕ ಮತ್ತು ವೃತ್ತಿಜೀವನದ ಹಿತಾಸಕ್ತಿಗಳನ್ನು ಬದಿಗಿಟ್ಟು ನಾನು ಯಾವ ನ್ಯಾಯಾಲಯದ ಘನತೆಯನ್ನು ಎತ್ತಿಹಿಡಿಯಲು ಪ್ರಯತ್ನಿಸಿದ್ದೇನೋ ಅದೇ ನ್ಯಾಯಾಂಗದ ನಿಂದನೆ ಮಾಡಿದ್ದೇನೆಂದು ನನ್ನನ್ನು ತಪ್ಪಿತಸ್ಥನಾಗಿಸಿರುವ ತೀರ್ಪು ನನಗೆ ನೋವು ತಂದಿದೆ.

ನನಗೆ ನೋವಾಗುತ್ತಿರುವುದು ಶಿಕ್ಷೆ ಆಗಬಹುದು ಎಂಬ ಕಾರಣಕ್ಕಲ್ಲ, ನನ್ನ ಆಶಯವನ್ನು ಸಂಪೂರ್ಣವಾಗಿ ಅಪಾರ್ಥ ಮಾಡಿಕೊಂಡಿರುವುದಕ್ಕಾಗುತ್ತಿದೆ. ನ್ಯಾಯದಾನದ ಸಂಸ್ಥೆಯ ಮೇಲೆ “ದುರುದ್ದೇಶಪೂರಿತವಾದ ಕೀಳುಮಟ್ಟದ, ಲೆಕ್ಕಾಚಾರದ ದಾಳಿ” ಮಾಡಿದ್ದೇನೆಂದು ನ್ಯಾಯಾಲಯ ನನ್ನನ್ನು ತಪ್ಪಿತಸ್ಥನನ್ನಾಗಿಸಿರುವುದನ್ನು ನೋಡಿ ನನಗೆ ಅಘಾತವಾಗಿದೆ.

ಇದನ್ನೂ ಓದಿ: ನೀವೆಷ್ಟೇ ಸಮಯ ನೀಡಿದರೂ ನನ್ನ ಹೇಳಿಕೆ ಬದಲಿಸುವುದಿಲ್ಲ: ಪ್ರಶಾಂತ್ ಭೂಷಣ್

ಈ ದಾಳಿಗಳನ್ನು ಮಾಡುವುದಕ್ಕೆ ನನಗಿದ್ದ ಉದ್ದೇಶಗಳೇನು ಎಂಬುದಕ್ಕೆ ಯಾವುದೇ ಸಾಕ್ಷ್ಯ ನೀಡದೆ ನ್ಯಾಯಾಲಯ ಈ ತೀರ್ಮಾನಕ್ಕೆ ಬಂದಿರುವುದು ನನ್ನನ್ನು ಕುಗ್ಗಿಸಿದೆ. ಸ್ವಯಂಪ್ರೇರಿತ ನೋಟಿಸ್ ನೀಡುವುದಕ್ಕೆ ಕಾರಣವಾದ ದೂರಿನ ಪ್ರತಿಯನ್ನು ಕೂಡ ಒದಗಿಸುವ ಅವಶ್ಯಕತೆ ಇಲ್ಲವೆಂದೂ, ನನ್ನ ಅಫಿಡವಿಟ್‌ನಲ್ಲಿ ಮಾಡಿದ ನಿರ್ದಿಷ್ಟ ಆರೋಪಗಳಿಗೆ ಅಥವಾ ನನ್ನ ಪರ ವಕೀಲರು ಸಲ್ಲಿಸಿದ ಅರ್ಜಿಗೆ ಉತ್ತರಿಸುವ ಅವಶ್ಯಕತೆ ಇಲ್ಲವೆಂದೂ ನ್ಯಾಯಾಲಯ ಬಗೆದಿರುವುದರಿಂದ ನನಗೆ ತೀವ್ರ ನಿರಾಶೆಯಾಗಿದೆ ಎಂದು ಸ್ಪಷ್ಟೀಕರಿಸುತ್ತೇನೆ.

ನನ್ನ ಟ್ವೀಟ್ “ಭಾರತದ ಪ್ರಜಾಪ್ರಭುತ್ವದ ಮುಖ್ಯ ಆಧಾರಸ್ತಂಭವನ್ನು ಅಲುಗಾಡಿಸುವ ಪರಿಣಾಮ ಉಂಟುಮಾಡಬಲ್ಲದು” ಎಂದು ನ್ಯಾಯಾಲಯಕ್ಕೆ ಕಂಡಿರುವುದನ್ನು ನಂಬಲು ಕಷ್ಟವಾಗುತ್ತಿದೆ. ಈ ಎರಡೂ ಟ್ವೀಟ್‌ಗಳು ನನ್ನ ಪ್ರಾಮಾಣಿಕ ನಂಬಿಕೆಯನ್ನು ಪ್ರತಿನಿಧಿಸಿದ್ದವು ಮತ್ತು ಆ ಅಭಿವ್ಯಕ್ತಿಗೆ ಪ್ರಜಾಪ್ರಭುತ್ವದಲ್ಲಿ ಅವಕಾಶವಿರಲೇಬೇಕು ಎಂದು ನಾನು ಇಲ್ಲಿ ಮತ್ತೆ ಪುನರುಚ್ಚರಿಸುತ್ತೇನೆ.

ಇದನ್ನೂ ಓದಿ: ಸಿಜೆಐ ಅಂದ್ರೆ ಸುಪ್ರೀಂ ಕೋರ್ಟ್ ಅಲ್ಲ: ನ್ಯಾಯಾಧೀಶರಿಗಿಂತ ನ್ಯಾಯಾಲಯ ದೊಡ್ಡದು – ಪ್ರಶಾಂತ್ ಭೂಷಣ್

ಅಲ್ಲದೆ, ನ್ಯಾಯಾಂಗದ ಆರೋಗ್ಯಕರ ನಿರ್ವಹಣೆಗೆ ಸಾರ್ವಜನಿಕ ಕಣ್ಗಾವಲು ಅತ್ಯವಶ್ಯ. ಸಾಂವಿಧಾನಿಕ ಸಮತೋಲನ ವ್ಯವಸ್ಥೆಯನ್ನು ಕಾಪಾಡಲು ಪ್ರಜಾಪ್ರಭುತ್ವದಲ್ಲಿ ಯಾವುದೇ ಸಂಸ್ಥೆಯ ಮುಕ್ತ ವಿಮರ್ಶೆ ಅತ್ಯವಶ್ಯ ಎಂದು ನಾನು ನಂಬಿದ್ದೇನೆ. ವೈಯಕ್ತಿಕ ಮತ್ತು ವೃತ್ತಿಪರ ಸೂಕ್ಷ್ಮಗಳಿಗಿಂತ ಸಾಂವಿಧಾನಿಕ ಸಮತೋಲನ ವ್ಯವಸ್ಥೆಯನ್ನು ಉಳಿಸುವುದು ಮೊದಲು ಆಗಬೇಕಾದ ಮತ್ತು ಭವಿಷ್ಯದ ಬಗ್ಗೆ ನಮ್ಮ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ವರ್ತಮಾನದ ಚಿಂತನೆಗಳು ಅಡ್ಡಿ ಬರಬಾರದ, ಉನ್ನತ ಆದರ್ಶಗಳು ನಮ್ಮ ದಿನನಿತ್ಯದ ವಹಿವಾಟುಗಳನ್ನು ತೊಡೆದುಹಾಕಬೇಕಿರುವ ಐತಿಹಾಸಿಕ ಕಾಲಘಟ್ಟದಲ್ಲಿ ನಾವು ಬದುಕಿದ್ದೇವೆ. ಇಂತಹ ಸಮಯದಲ್ಲಿ ಅದೂ ನ್ಯಾಯಾಲಯದ ಅಧಿಕಾರಿಯಾಗಿರುವ ನನ್ನಂತಹವನಿಗೆ ಮಾತನಾಡದೆ ಇರುವುದು ನನ್ನ ಕರ್ತವ್ಯದಿಂದ ವಿಮುಖನಾದಂತೆ.

ಈ ನಮ್ಮ ಗಣರಾಜ್ಯದ ಐತಿಹಾಸಿಕ ಕಾಲಘಟ್ಟದಲ್ಲಿ ನಾನು ನಿರ್ವಹಿಸಬೇಕಿದ್ದ ಉನ್ನತ ಕರ್ತವ್ಯದ ಸಣ್ಣ ಭಾಗ ಆ ಟ್ವೀಟ್‌ಗಳು. ಅನ್ಯಮನಸ್ಕನಾಗಿ ಆ ಟ್ವೀಟ್‌ಗಳನ್ನು ನಾನು ಬರೆದಿಲ್ಲ. ಆ ಟ್ವೀಟ್‌ಗಳಲ್ಲಿ ಅಭಿವ್ಯಕ್ತವಾಗಿರುವ ಸಂಗತಿಗಳು ನನ್ನ ಪ್ರಾಮಾಣಿಕ ನಂಬಿಕೆಯ ಭಾಗವಾಗಿದ್ದವು ಮತ್ತು ಈಗಲೂ ಆಗಿವೆ. ಹೀಗಿರುವಾಗ ಆ ಟ್ವೀಟ್‌ಗಳ ಬಗ್ಗೆ ಕ್ಷಮೆ ಕೇಳುವುದು ನನ್ನ ಕಡೆಯಿಂದ ಅಪ್ರಾಮಾಣಿಕ ಮತ್ತು ನಿಂದನೆಯ ನಡೆಯಾಗುತ್ತದೆ. ಆದುದರಿಂದ, ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರು ತಮ್ಮ ವಿಚಾರಣೆಯಲ್ಲಿ ಹೇಳಿದ ಮಾತುಗಳನ್ನು ವಿನಮ್ರತೆಯಿಂದ ಮತ್ತೊಂದು ರೀತಿಯಲ್ಲಿ ಹೇಳಬಯಸುತ್ತೇನೆ: ನಾನು ಕ್ಷಮಿಸಿರೆಂದು ಕೋರುವುದಿಲ್ಲ. ನೀವು ಉದಾತ್ತ ವೈಶಾಲ್ಯತೆಯನ್ನು ತೋರಿರೆಂದೂ ಕೇಳುವುದಿಲ್ಲ.

ಆದುದರಿಂದ, ಯಾವುದನ್ನು ನಾಗರಿಕನಾಗಿ ನನ್ನ ಅತ್ಯುನ್ನತ ಕರ್ತವ್ಯವೆಂದು ಭಾವಿಸಿದ್ದೇನೋ, ಅದನ್ನು ನ್ಯಾಯಾಲಯವು ಅಪರಾಧ ಎಂದು ಪರಿಗಣಿಸಿರುವ ಈ ಸಂದರ್ಭದಲ್ಲಿ, ಯಾವ ಶಿಕ್ಷೆಯನ್ನು ಕಾನೂನುಪ್ರಕಾರ ನೀಡಲಾಗುತ್ತದೆಯೋ ಅದನ್ನು ಸಂತೋಷದಿಂದ ಸ್ವೀಕರಿಸಲು ನಾನಿಲ್ಲಿ ನಿಂತಿದ್ದೇನೆ.


ಓದಿ: ಸುಪ್ರೀಂಕೋರ್ಟಿನ ನ್ಯಾಯಾಂಗ ನಿಂದನೆ ನೋಟೀಸಿಗೆ ವಕೀಲ ಪ್ರಶಾಂತ್ ಭೂಷಣ್ ಸ್ಫೋಟಕ ಉತ್ತರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...