HomeಅಂಕಣಗಳುFund Transfer from center to states : ’ಸುದ್ದಿಯೇನೆ, ಮನೋಲ್ಲಾಸಿನಿ?’

Fund Transfer from center to states : ’ಸುದ್ದಿಯೇನೆ, ಮನೋಲ್ಲಾಸಿನಿ?’

- Advertisement -
- Advertisement -

ಕೋಟ್ಯಾಂತರ ಜನ ಅತ್ತೂ ಕರದೂ ಹಾಕಿದ ಮೇಲೆ? ನೆರೆ ಪರಿಹಾರಕ್ಕೆ ಅಂತ ಇಟಗೊರಿ? ಅಂತ ಕೇಂದ್ರದವರು ರಾಜ್ಯಕ್ಕೆ 1,200 ಕೋಟಿ ರೂಪಾಯಿ ಕೊಟ್ಟಾರ.

ಇದಕ್ಕ ಥರಾಥರಾ ಪ್ರತಿಕ್ರಿಯೆ ಬಂದಾವ.

‘ಇದು ಕಮ್ಮಿ’ ಅಂತ ಕೆಲವು ಜನಾ, ‘ಇದ ಹೆಚ್ಚು, ಇದಕ್ಕಿಂತ ಹೆಚ್ಚು ಏನ್ ಕೊಡತಾರ’ ಅಂತ ಕೆಲವರು ಅಂದರ, ಇನ್ನೂ ಕೆಲವರು ‘ಅವರು ದೇವರು ಇದ್ದಂಗೆ, ಅವರು ಕೃಪಾ ಮಾಡತಾರ. ಸ್ವಲ್ಪ ತಡಾ ಆಗಬಹುದು, ಅಷ್ಟ- ಖುದಾ ಕೆ ಘರ್ ಮೆ ದೇರ್ ಹೈ, ಅಂಧೇರಾ ನಹಿ,’ ಅಂತನೂ ಹೇಳ್ಯಾರ.

ಈ ಗನಗಂಬೀರ ವಿಷಯವನ್ನು ನಮ್ಮಂತಾ ಹುಲು ಮಾನವರು ಸ್ವಲ್ಪ ತಿಳಕೊಳ್ಳೋಣ, ಬನ್ನಿ

‘ಧನ ವಿನಿಯೋಗ’

ಒಂದು ವರ್ಷದಲ್ಲಿ ಕೇಂದ್ರ ಸರಕಾರದಿಂದಾ ರಾಜ್ಯಗಳಿಗೆ ಬರಬಹುದಾದ ರೊಕ್ಕಕ್ಕ ಧನ ವಿನಿಯೋಗ ಅಂತಾರ
ಇದು ಮೂರು ರೀತಿಯದು-

1. ಹಣಕಾಸು ಆಯೋಗ ಹೇಳಿದಷ್ಟು ಕೊಡುವುದು ಹಾಗೂ ಬ್ಯಾರೆ ರೀತಿ ಹಣ ಹಂಚಿಕೆ.

2. ಕೇಂದ್ರದ ಯೋಜನೆಗಳು

3. ಕೇಂದ್ರ ಹಾಗೂ ರಾಜ್ಯದ ಹೆಸರಿನಲ್ಲಿ ವಸೂಲು ಮಾಡುವ ತೆರಿಗೆ ಅಥವಾ ಸುಂಕ. ನಮ್ಮ ಉತ್ತರ ಕರ್ನಾಟಕದಾಗ ಸುಂಕ ಅಂತೇವೆಲ್ಲಾ, ಅಂತಾ ಸುಂಕ ಅಲ್ಲ ಮತ್ತ.

ಒಂದು ವರ್ಷಕ್ಕ ಕೇಂದ್ರ ರಾಜ್ಯಗಳಿಗೆ ಹಂಚುವ ಹಣ ಸುಮಾರು 50 ಲಕ್ಷ ಕೋಟಿ. ಇದರಾಗ 39 ಲಕ್ಷ ಕೋಟಿ ತೆರಿಗೆಯ ಮರು ಹಂಚಿಕೆ, 6 ಲಕ್ಷ ಕೋಟಿ ಮತ್ತ 5 ಲಕ್ಷ ಕೋಟಿ ವಿನಿಯೋಗ. ಇದನ್ನು ಬಿಟ್ಟು ಸುಮಾರು 3 ಲಕ್ಷ ಕೋಟಿ ನೇರ ಹಾಗೂ ನೇರವಲ್ಲದ ಸಬ್ಸಿಡಿ ಬಿಡುಗಡೆಯಾಗುತ್ತದೆ- ಪೆಟ್ರೋಲು, ಪೆಟ್ರೋಲಿನಿಂದ ಮಾಡಿದ ಗೊಬ್ಬರ, ಹಾಗೂ ಗೊಬ್ಬರದಿಂದ ಬೆಳೆದ ಧಾನ್ಯಗಳಿಗೆ.

ಇನ್ನು ಪ್ರಕೃತಿ ವಿಕೋಪ ಮುಂತಾದ ತುರ್ತುಗಳಿಗೆ ಕೊಡುವ ಧನಸಹಾಯ, ಅದು ಬ್ಯಾರೇನ.

ಸುಂಕ- ತೆರಿಗೆಯೊಳಗ ಎರಡು ಥರಾ. ನೇರ ಹಾಗೂ ನೇರವಲ್ಲದ ಅಥವಾ ಅಪ್ರತ್ಯಕ್ಷ. ಸರಕಾರಕ್ಕ ನಾವೆಲ್ಲಾ ಡೈರೆಕ್ಟಾಗಿ ರೊಕ್ಕ ಕೊಟ್ಟರ ಅದು ನೇರ. ಇನ್ನೊಬ್ಬರ ಮೂಲಕ ಕೊಟ್ಟರ ಅದು ಇನ್‍ಡೈರೆಕ್ಟ್ ತೆರಿಗೆ.

ಕೇಂದ್ರ ನೇರವಾಗಿ ವಸೂಲು ಮಾಡುವ ಆದಾಯ ತೆರಿಗೆಯನ್ನು ಅದು ರಾಜ್ಯಗಳಿಗೆ ಕೊಡೋದಿಲ್ಲ. ಸೆಸ್ ಅನ್ನುವ ಸಂಶಯಾಸ್ಪದ ಹೆಸರಿನ ತೆರಿಗೆ ಒಂದು ಅದ. ಈ ಕೆಲಸಕ್ಕೆ ಇದನ್ನು ಉಪಯೋಗಸ್ತೇವಿ ಅಂತೇಳಿ ವಸೂಲು ಮಾಡೋದು ಸೆಸ್ಸು. ಇದನ್ನೂ ರಾಜ್ಯಗಳ ಜೊತೆ ಹಂಚಿಕೊಳ್ಳಬೇಕಾಗಿಲ್ಲ. ಕಳೆದ 10 ವರ್ಷದಾಗ ಈ ಸೆಸ್ಸುಗಳ ಸಂಖ್ಯೆ ಸುಮಾರು 100 ಶೇಕಡಾ ಹೆಚ್ಚಾಗೇದ.

ಇನ್ನು ಜಿಎಸ್‍ಟಿ ಅಥವಾ ಸರಕು ಹಾಗೂ ಸೇವಾ ತೆರಿಗೆ. ಸಿಂಪಲ್ ಆಗಿ ಹೇಳಬೇಕಂದರೆ ಆದಾಯ ಬಿಟ್ಟರ ಉಳಿದ ಎಲ್ಲಾ ತೆರಿಗೆ ಇದರಾಗ ಬರ್ತಾವ. ಅದು ಆದಾಯದ ಮ್ಯಾಲೆ ಆದರ ಇದು ಖರ್ಚಿನ ಮ್ಯಾಲೆ. ಇದರಾಗ ಏನ್ರಿ, ಯಾವುದರ ಹೆಸರಾಗ ರೊಕ್ಕ ಕಸಗೊಳೋದು ಅಂತೀರೇನು? ಅದಕ್ಕ ಹೇಳೋದು ಸಾವಿನ ನಂತರ ಈ ಜೀವನದಾಗ ಖಾತ್ರಿ ಇರೋದು ತೆರಿಗೆ ಮಾತ್ರ ಅಂತ.

ಜಿಎಸ್‍ಟಿಯ ಪಾಲು ರಾಜ್ಯಗಳಿಗೆ ಸಿಗತದ. ಇನ್ನು ಕೇಂದ್ರಕ್ಕ ಕೊಡಲಾರದ ತಾವ ಹಾಕಿ ತಾವೇ ಬಳಸೋ ತೆರಿಗೆ ಕೆಲವು ಅವ. ಹೊಟೆಲ್ ಒಳಗ ಊಟಾ ಮಾಡಿ, ಬೀರ್ ಬಾಟಲ್ ಕೈಯಾಗ ಹಿಡಕೊಂಡು ಸಿನಿಮಾಕ್ಕ ಹೋದವರು ರಾಜ್ಯಕ್ಕೆ ಮೂರು ಥರದ ಸುಂಕ ಸೇವಾ ಮಾಡಿರತಾರ.

ಕೇಂದ್ರ ಸರಕಾರದ ಯೋಜನೆಗಳು- ಒಟ್ಟು 99. ಇದರೊಳಗ ಮೂರು ಥರಾ. ಹಳೇ ಯೋಜನೆ, ನಡುವೆ ನಿಂತು ಹೋಗಿ, ಮತ್ತೆ ಶುರು ಆದ ಹಳೇ ಯೋಜನೆ, ಹಾಗೂ ಹೊಸಾ ಹೆಸರಿನ ಹಳೇ ಯೋಜನೆ.

ಮನೆ ಕಟ್ಟುವುದು, ಮನೆಯಲ್ಲಿ ಸಂಡಾಸು ಕಟ್ಟುವುದು, ಹಾದಿ ಮ್ಯಾಲೆ ಹೋಗೋರು ಹಾದಿ ಮ್ಯಾಲಿನ ಕಸಾ ಗುಡಸೋದು, ಇಂತಾ ಯೋಜನೆ ಒಂದಿಷ್ಟು. ಇನ್ನ ಉತ್ತರಾಖಂಡೀ ಶುದ್ಧ ಹಿಂದೀ ಯಲ್ಲಿ ಹೆಸರಿಟ್ಟ ಉನ್ನತೀಕರಣ್ ಯೋಜನಾ, ವಿಕಾಸ್ ಯೋಜನಾ, ಆಯೋಜನಾ, ನೀತಿ, ಗೀತಿ, ಅವೆಲ್ಲಾ ಬ್ಯಾರೆ.
ಇದರೊಳಗ ಸಂಪೂರ್ಣ ಕೇಂದ್ರ ತಮ್ಮದೇ ದುಡ್ಡು ಹಾಕಿ ನೇರವಾಗಿ ಜಾರಿ ಮಾಡೋ ಅಂಥಾವು 27 ಸ್ಕೀಮು. ಇನ್ನು ಇದರಾಗ ರಾಜ್ಯದವರದೂ ಪಾಲು ಇರಲಿ ಅಂತೇಳಿ, ರಾಜ್ಯದ ನಿಗರಾಣಿಯಲ್ಲಿ ಮಾಡೋ ಅಂಥಾವು 72. ಇವಕ್ಕ ಬರೋ ಫಂಡು ಬ್ಯಾರೆ.

‘ಅಣಕಾಸು ಹಾಯೋಗ’

ಸಣ್ಣ ವಯಸ್ಸಿನಲ್ಲಿಯೇ ದೊಡ್ಡ ವಕೀಲರಾಗಿ, ಭಾರಿ ಭಯಂಕರ ಭಾಷಣಕಾರರಾಗಿ, ‘ಸೋಷಿಯಲ್ ಮೀಡಿಯಾ ಸ್ಟಾರ್’ ಅನ್ನುವ ಬಿರುದಿಗೆ ಭೀಷಣರಾಗಿ, ಆ ನಂತರ ‘ಇದನ್ನ ಯಾಕ್ ಬಿಡೋದ್, ಟ್ರೈಮಾಡೇ ಬಿಡೋಣ’ ಅಂತ ಸಂಸತ್ ಸದಸ್ಯರಾಗಿಯೇ ಬಿಟ್ಟ ನಾಯಕರೊಬ್ಬರು ಕೇಂದ್ರದ ಹತ್ತಿರ ನಾವು ಯಾಕ್ ಕೇಳ್ ಬೇಕು? ನಮ್ಹತ್ರಾನೆ ಇದೆಯಲ್ಲಾ ಬೇಕಾದಷ್ಟು ದುಡ್ಡು, ಮೋದೀಜೀ 14 ನೇ ಅಣಕಾಸು ಹಾಯೋಗದ ಅಡಿಯಲ್ಲಿ ಬೇಕಷ್ಟು ಕೊಟ್ಟಿದಾರೆ, ಅಲ್ವಾ, ಅಂತಂದ್ರು. ನೆನಪ ಅದನ, ಆ ಡೀಪು ಥಾಟಿನ ಗೂಡಾರ್ಥ ಏನು ಹಂಗಂದರೆ?

ಆ ಆಯೊಗದ ಕತಿ ಮಜಾ ಐತಿ. ಸಂವಿಧಾನದ 280ನೇ ಕಲಮಿನ ಪ್ರಕಾರ ಪ್ರತಿ ಐದು ವರ್ಷಕ್ಕೊಮ್ಮೆ ಒಂದು ಹಣಕಾಸು ಆಯೋಗ ಆಗಬೇಕು. ತಾನು ತೆರಿಗೆದಾರರಿಂದ ಸಂಗ್ರಹಿಸಿದ ಹಣವನ್ನ ರಾಜ್ಯಗಳ ಗ್ರಾಮ ಪಂಚಾಯಿತಿ ಹಾಗೂ ನಗರಸಭೆಗಳಿಗೆ ಎಷ್ಟೆಷ್ಟು ಪ್ರಮಾಣದಾಗ ಎಷ್ಟೆಷ್ಟು ಕಂತಿನೊಳಗ ಕೊಡಬೇಕು ಅಂತ ನಿರ್ಧಾರ ಮಾಡೋದು ಈ ಆಯೋಗ. ಈಗ ರಿಸರ್ವ ಬ್ಯಾಂಕಿನ ಮಾಜಿ ಗವರ್ನರ್ ವೈ ವಿ ರೆಡ್ಡಿ ಅವರ ಸದಾರತ್ತಿನೊಳಗ 14ನೇ ಆಯೋಗ ಹಣಕಾಸು ಸಂಗ್ರಹದ 42 ಶೇಕಡಾ ರಾಜ್ಯಗಳಿಗೆ ಕೊಡಬೇಕು ಅಂತ ಹೇಳಿತು. ಕೇಂದ್ರ ಸರಕಾರ ಒಪ್ಪಿಕೊಂಡಿತು. ಆದರೆ ಆ ರೊಕ್ಕಾನ ನಾವು ಹೇಳಿದಂಗ ಖರ್ಚು ಮಾಡಬೇಕು ಅನ್ನೋ ಷರತ್ತು ಹಾಕಿತು.

ಹಿಂದಿಗಿಂತ ಹಣ ವಿನಿಯೋಗದ ಪ್ರಮಾಣ ಹೆಚ್ಚಾದರೂ ಖರ್ಚು ಮಾಡುವ ಸ್ವಾತಂತ್ರ್ಯದ ಪ್ರಮಾಣ ಕಮ್ಮಿ ಆಯಿತು.

ಹಂಗೂ ಸ್ವಾತಂತ್ರ್ಯ ಯಾರಿಗೆ ಬೇಕಾಗೇದ ಬಿಡ್ರಿ. ರೊಕ್ಕ ಇದ್ದರ ಸಾಕು.
“ತುಮ್ ಆಜಾದ್ ಹೋ ಸೋನೆ ಕಿ ಪಿಂಜರೇ ಮೆ.
ಚೀಖನೆ ಕೀ ಆಜಾದೀ ಹೈ ತುಮ್ಹೆ
ಮಗರ್ ಆವಾಜ್ ನಹೀ ಉಠಾನಾ,”
ಅನ್ನೋ ಶಾಯರಿ ಅದಅಲ್ಲಾ, ಹಂಗ.
ಹಣಕಾಸು ಆಯೋಗದ ಶಿಫಾರಸಿನ ಮೇರೆಗೆ ಬಂದ ಹಣವನ್ನು ನಗರ ಹಾಗೂ ಗ್ರಾಮೀಣ ಪ್ರದೇಶದ ಆಡಳಿತಕ್ಕಾಗಿ ಖರ್ಚು ಮಾಡಬೇಕು. ಇದು ಕಾನೂನು ಹಾಗೂ ಸಂಪ್ರದಾಯ.

ಉತ್ತರ ಕರ್ನಾಟಕದ ಮೇಲೆ 118 ವರ್ಷಗಳಲ್ಲಿ ಬೀಳದಷ್ಟು ಮಳಿ ಬಿದ್ದು, ಕೃಷ್ಣಾ ನದಿಯಲ್ಲಿ ಕೇವಲ ಮೂರು ವಾರದಲ್ಲಿ 600 ಟಿಎಂಸಿ ನೀರು ಬಂದು ಜನರ ಜೀವಾ, ಜೀವನ ಎರಡನ್ನೂ ಹರಿಸಿಕೊಂಡು ಹೋತಲ್ಲಾ, ಅದು ಪ್ರಕೃತಿ ವಿಕೋಪ ಅಲ್ಲಾ.

14 ನೇ ಹಣಕಾಸು ಆಯೋಗದ ದುಡ್ಡನ್ನು ನೆರೆ ಪರಿಹಾರದಂತ ಕೆಲಸಕ್ಕೆ ಬಳಸಿಗೋಬೇಕು, ಕೇಂದ್ರದಿಂದ ಹೆಚ್ಚಿನ ಹಣ ಕೇಳಬಾರದು ಎನ್ನುವ ಫರಮಾನು ಕೊಡಿಸುವ ಯುವ, ಶಿಕ್ಷಿತ, ನಾಯಕರನ್ನು ನಾವು ಆರಿಸಿ ಕಳಿಸಿದ್ದೇವಲ್ಲಾ, ಅದು ವಿಕೋಪ.

ಅದು ನೈಸರ್ಗಿಕವೋ ಕೃತ್ರಿಮವೋ ಅದು ಇನ್ನೊಂದು ದಿನದ ಚರ್ಚೆಯ ವಿಷಯ, ಅಲ್ಲವೇ ಮನೋಲ್ಲಾಸಿನೀ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...