HomeಅಂಕಣಗಳುFund Transfer from center to states : ’ಸುದ್ದಿಯೇನೆ, ಮನೋಲ್ಲಾಸಿನಿ?’

Fund Transfer from center to states : ’ಸುದ್ದಿಯೇನೆ, ಮನೋಲ್ಲಾಸಿನಿ?’

- Advertisement -
- Advertisement -

ಕೋಟ್ಯಾಂತರ ಜನ ಅತ್ತೂ ಕರದೂ ಹಾಕಿದ ಮೇಲೆ? ನೆರೆ ಪರಿಹಾರಕ್ಕೆ ಅಂತ ಇಟಗೊರಿ? ಅಂತ ಕೇಂದ್ರದವರು ರಾಜ್ಯಕ್ಕೆ 1,200 ಕೋಟಿ ರೂಪಾಯಿ ಕೊಟ್ಟಾರ.

ಇದಕ್ಕ ಥರಾಥರಾ ಪ್ರತಿಕ್ರಿಯೆ ಬಂದಾವ.

‘ಇದು ಕಮ್ಮಿ’ ಅಂತ ಕೆಲವು ಜನಾ, ‘ಇದ ಹೆಚ್ಚು, ಇದಕ್ಕಿಂತ ಹೆಚ್ಚು ಏನ್ ಕೊಡತಾರ’ ಅಂತ ಕೆಲವರು ಅಂದರ, ಇನ್ನೂ ಕೆಲವರು ‘ಅವರು ದೇವರು ಇದ್ದಂಗೆ, ಅವರು ಕೃಪಾ ಮಾಡತಾರ. ಸ್ವಲ್ಪ ತಡಾ ಆಗಬಹುದು, ಅಷ್ಟ- ಖುದಾ ಕೆ ಘರ್ ಮೆ ದೇರ್ ಹೈ, ಅಂಧೇರಾ ನಹಿ,’ ಅಂತನೂ ಹೇಳ್ಯಾರ.

ಈ ಗನಗಂಬೀರ ವಿಷಯವನ್ನು ನಮ್ಮಂತಾ ಹುಲು ಮಾನವರು ಸ್ವಲ್ಪ ತಿಳಕೊಳ್ಳೋಣ, ಬನ್ನಿ

‘ಧನ ವಿನಿಯೋಗ’

ಒಂದು ವರ್ಷದಲ್ಲಿ ಕೇಂದ್ರ ಸರಕಾರದಿಂದಾ ರಾಜ್ಯಗಳಿಗೆ ಬರಬಹುದಾದ ರೊಕ್ಕಕ್ಕ ಧನ ವಿನಿಯೋಗ ಅಂತಾರ
ಇದು ಮೂರು ರೀತಿಯದು-

1. ಹಣಕಾಸು ಆಯೋಗ ಹೇಳಿದಷ್ಟು ಕೊಡುವುದು ಹಾಗೂ ಬ್ಯಾರೆ ರೀತಿ ಹಣ ಹಂಚಿಕೆ.

2. ಕೇಂದ್ರದ ಯೋಜನೆಗಳು

3. ಕೇಂದ್ರ ಹಾಗೂ ರಾಜ್ಯದ ಹೆಸರಿನಲ್ಲಿ ವಸೂಲು ಮಾಡುವ ತೆರಿಗೆ ಅಥವಾ ಸುಂಕ. ನಮ್ಮ ಉತ್ತರ ಕರ್ನಾಟಕದಾಗ ಸುಂಕ ಅಂತೇವೆಲ್ಲಾ, ಅಂತಾ ಸುಂಕ ಅಲ್ಲ ಮತ್ತ.

ಒಂದು ವರ್ಷಕ್ಕ ಕೇಂದ್ರ ರಾಜ್ಯಗಳಿಗೆ ಹಂಚುವ ಹಣ ಸುಮಾರು 50 ಲಕ್ಷ ಕೋಟಿ. ಇದರಾಗ 39 ಲಕ್ಷ ಕೋಟಿ ತೆರಿಗೆಯ ಮರು ಹಂಚಿಕೆ, 6 ಲಕ್ಷ ಕೋಟಿ ಮತ್ತ 5 ಲಕ್ಷ ಕೋಟಿ ವಿನಿಯೋಗ. ಇದನ್ನು ಬಿಟ್ಟು ಸುಮಾರು 3 ಲಕ್ಷ ಕೋಟಿ ನೇರ ಹಾಗೂ ನೇರವಲ್ಲದ ಸಬ್ಸಿಡಿ ಬಿಡುಗಡೆಯಾಗುತ್ತದೆ- ಪೆಟ್ರೋಲು, ಪೆಟ್ರೋಲಿನಿಂದ ಮಾಡಿದ ಗೊಬ್ಬರ, ಹಾಗೂ ಗೊಬ್ಬರದಿಂದ ಬೆಳೆದ ಧಾನ್ಯಗಳಿಗೆ.

ಇನ್ನು ಪ್ರಕೃತಿ ವಿಕೋಪ ಮುಂತಾದ ತುರ್ತುಗಳಿಗೆ ಕೊಡುವ ಧನಸಹಾಯ, ಅದು ಬ್ಯಾರೇನ.

ಸುಂಕ- ತೆರಿಗೆಯೊಳಗ ಎರಡು ಥರಾ. ನೇರ ಹಾಗೂ ನೇರವಲ್ಲದ ಅಥವಾ ಅಪ್ರತ್ಯಕ್ಷ. ಸರಕಾರಕ್ಕ ನಾವೆಲ್ಲಾ ಡೈರೆಕ್ಟಾಗಿ ರೊಕ್ಕ ಕೊಟ್ಟರ ಅದು ನೇರ. ಇನ್ನೊಬ್ಬರ ಮೂಲಕ ಕೊಟ್ಟರ ಅದು ಇನ್‍ಡೈರೆಕ್ಟ್ ತೆರಿಗೆ.

ಕೇಂದ್ರ ನೇರವಾಗಿ ವಸೂಲು ಮಾಡುವ ಆದಾಯ ತೆರಿಗೆಯನ್ನು ಅದು ರಾಜ್ಯಗಳಿಗೆ ಕೊಡೋದಿಲ್ಲ. ಸೆಸ್ ಅನ್ನುವ ಸಂಶಯಾಸ್ಪದ ಹೆಸರಿನ ತೆರಿಗೆ ಒಂದು ಅದ. ಈ ಕೆಲಸಕ್ಕೆ ಇದನ್ನು ಉಪಯೋಗಸ್ತೇವಿ ಅಂತೇಳಿ ವಸೂಲು ಮಾಡೋದು ಸೆಸ್ಸು. ಇದನ್ನೂ ರಾಜ್ಯಗಳ ಜೊತೆ ಹಂಚಿಕೊಳ್ಳಬೇಕಾಗಿಲ್ಲ. ಕಳೆದ 10 ವರ್ಷದಾಗ ಈ ಸೆಸ್ಸುಗಳ ಸಂಖ್ಯೆ ಸುಮಾರು 100 ಶೇಕಡಾ ಹೆಚ್ಚಾಗೇದ.

ಇನ್ನು ಜಿಎಸ್‍ಟಿ ಅಥವಾ ಸರಕು ಹಾಗೂ ಸೇವಾ ತೆರಿಗೆ. ಸಿಂಪಲ್ ಆಗಿ ಹೇಳಬೇಕಂದರೆ ಆದಾಯ ಬಿಟ್ಟರ ಉಳಿದ ಎಲ್ಲಾ ತೆರಿಗೆ ಇದರಾಗ ಬರ್ತಾವ. ಅದು ಆದಾಯದ ಮ್ಯಾಲೆ ಆದರ ಇದು ಖರ್ಚಿನ ಮ್ಯಾಲೆ. ಇದರಾಗ ಏನ್ರಿ, ಯಾವುದರ ಹೆಸರಾಗ ರೊಕ್ಕ ಕಸಗೊಳೋದು ಅಂತೀರೇನು? ಅದಕ್ಕ ಹೇಳೋದು ಸಾವಿನ ನಂತರ ಈ ಜೀವನದಾಗ ಖಾತ್ರಿ ಇರೋದು ತೆರಿಗೆ ಮಾತ್ರ ಅಂತ.

ಜಿಎಸ್‍ಟಿಯ ಪಾಲು ರಾಜ್ಯಗಳಿಗೆ ಸಿಗತದ. ಇನ್ನು ಕೇಂದ್ರಕ್ಕ ಕೊಡಲಾರದ ತಾವ ಹಾಕಿ ತಾವೇ ಬಳಸೋ ತೆರಿಗೆ ಕೆಲವು ಅವ. ಹೊಟೆಲ್ ಒಳಗ ಊಟಾ ಮಾಡಿ, ಬೀರ್ ಬಾಟಲ್ ಕೈಯಾಗ ಹಿಡಕೊಂಡು ಸಿನಿಮಾಕ್ಕ ಹೋದವರು ರಾಜ್ಯಕ್ಕೆ ಮೂರು ಥರದ ಸುಂಕ ಸೇವಾ ಮಾಡಿರತಾರ.

ಕೇಂದ್ರ ಸರಕಾರದ ಯೋಜನೆಗಳು- ಒಟ್ಟು 99. ಇದರೊಳಗ ಮೂರು ಥರಾ. ಹಳೇ ಯೋಜನೆ, ನಡುವೆ ನಿಂತು ಹೋಗಿ, ಮತ್ತೆ ಶುರು ಆದ ಹಳೇ ಯೋಜನೆ, ಹಾಗೂ ಹೊಸಾ ಹೆಸರಿನ ಹಳೇ ಯೋಜನೆ.

ಮನೆ ಕಟ್ಟುವುದು, ಮನೆಯಲ್ಲಿ ಸಂಡಾಸು ಕಟ್ಟುವುದು, ಹಾದಿ ಮ್ಯಾಲೆ ಹೋಗೋರು ಹಾದಿ ಮ್ಯಾಲಿನ ಕಸಾ ಗುಡಸೋದು, ಇಂತಾ ಯೋಜನೆ ಒಂದಿಷ್ಟು. ಇನ್ನ ಉತ್ತರಾಖಂಡೀ ಶುದ್ಧ ಹಿಂದೀ ಯಲ್ಲಿ ಹೆಸರಿಟ್ಟ ಉನ್ನತೀಕರಣ್ ಯೋಜನಾ, ವಿಕಾಸ್ ಯೋಜನಾ, ಆಯೋಜನಾ, ನೀತಿ, ಗೀತಿ, ಅವೆಲ್ಲಾ ಬ್ಯಾರೆ.
ಇದರೊಳಗ ಸಂಪೂರ್ಣ ಕೇಂದ್ರ ತಮ್ಮದೇ ದುಡ್ಡು ಹಾಕಿ ನೇರವಾಗಿ ಜಾರಿ ಮಾಡೋ ಅಂಥಾವು 27 ಸ್ಕೀಮು. ಇನ್ನು ಇದರಾಗ ರಾಜ್ಯದವರದೂ ಪಾಲು ಇರಲಿ ಅಂತೇಳಿ, ರಾಜ್ಯದ ನಿಗರಾಣಿಯಲ್ಲಿ ಮಾಡೋ ಅಂಥಾವು 72. ಇವಕ್ಕ ಬರೋ ಫಂಡು ಬ್ಯಾರೆ.

‘ಅಣಕಾಸು ಹಾಯೋಗ’

ಸಣ್ಣ ವಯಸ್ಸಿನಲ್ಲಿಯೇ ದೊಡ್ಡ ವಕೀಲರಾಗಿ, ಭಾರಿ ಭಯಂಕರ ಭಾಷಣಕಾರರಾಗಿ, ‘ಸೋಷಿಯಲ್ ಮೀಡಿಯಾ ಸ್ಟಾರ್’ ಅನ್ನುವ ಬಿರುದಿಗೆ ಭೀಷಣರಾಗಿ, ಆ ನಂತರ ‘ಇದನ್ನ ಯಾಕ್ ಬಿಡೋದ್, ಟ್ರೈಮಾಡೇ ಬಿಡೋಣ’ ಅಂತ ಸಂಸತ್ ಸದಸ್ಯರಾಗಿಯೇ ಬಿಟ್ಟ ನಾಯಕರೊಬ್ಬರು ಕೇಂದ್ರದ ಹತ್ತಿರ ನಾವು ಯಾಕ್ ಕೇಳ್ ಬೇಕು? ನಮ್ಹತ್ರಾನೆ ಇದೆಯಲ್ಲಾ ಬೇಕಾದಷ್ಟು ದುಡ್ಡು, ಮೋದೀಜೀ 14 ನೇ ಅಣಕಾಸು ಹಾಯೋಗದ ಅಡಿಯಲ್ಲಿ ಬೇಕಷ್ಟು ಕೊಟ್ಟಿದಾರೆ, ಅಲ್ವಾ, ಅಂತಂದ್ರು. ನೆನಪ ಅದನ, ಆ ಡೀಪು ಥಾಟಿನ ಗೂಡಾರ್ಥ ಏನು ಹಂಗಂದರೆ?

ಆ ಆಯೊಗದ ಕತಿ ಮಜಾ ಐತಿ. ಸಂವಿಧಾನದ 280ನೇ ಕಲಮಿನ ಪ್ರಕಾರ ಪ್ರತಿ ಐದು ವರ್ಷಕ್ಕೊಮ್ಮೆ ಒಂದು ಹಣಕಾಸು ಆಯೋಗ ಆಗಬೇಕು. ತಾನು ತೆರಿಗೆದಾರರಿಂದ ಸಂಗ್ರಹಿಸಿದ ಹಣವನ್ನ ರಾಜ್ಯಗಳ ಗ್ರಾಮ ಪಂಚಾಯಿತಿ ಹಾಗೂ ನಗರಸಭೆಗಳಿಗೆ ಎಷ್ಟೆಷ್ಟು ಪ್ರಮಾಣದಾಗ ಎಷ್ಟೆಷ್ಟು ಕಂತಿನೊಳಗ ಕೊಡಬೇಕು ಅಂತ ನಿರ್ಧಾರ ಮಾಡೋದು ಈ ಆಯೋಗ. ಈಗ ರಿಸರ್ವ ಬ್ಯಾಂಕಿನ ಮಾಜಿ ಗವರ್ನರ್ ವೈ ವಿ ರೆಡ್ಡಿ ಅವರ ಸದಾರತ್ತಿನೊಳಗ 14ನೇ ಆಯೋಗ ಹಣಕಾಸು ಸಂಗ್ರಹದ 42 ಶೇಕಡಾ ರಾಜ್ಯಗಳಿಗೆ ಕೊಡಬೇಕು ಅಂತ ಹೇಳಿತು. ಕೇಂದ್ರ ಸರಕಾರ ಒಪ್ಪಿಕೊಂಡಿತು. ಆದರೆ ಆ ರೊಕ್ಕಾನ ನಾವು ಹೇಳಿದಂಗ ಖರ್ಚು ಮಾಡಬೇಕು ಅನ್ನೋ ಷರತ್ತು ಹಾಕಿತು.

ಹಿಂದಿಗಿಂತ ಹಣ ವಿನಿಯೋಗದ ಪ್ರಮಾಣ ಹೆಚ್ಚಾದರೂ ಖರ್ಚು ಮಾಡುವ ಸ್ವಾತಂತ್ರ್ಯದ ಪ್ರಮಾಣ ಕಮ್ಮಿ ಆಯಿತು.

ಹಂಗೂ ಸ್ವಾತಂತ್ರ್ಯ ಯಾರಿಗೆ ಬೇಕಾಗೇದ ಬಿಡ್ರಿ. ರೊಕ್ಕ ಇದ್ದರ ಸಾಕು.
“ತುಮ್ ಆಜಾದ್ ಹೋ ಸೋನೆ ಕಿ ಪಿಂಜರೇ ಮೆ.
ಚೀಖನೆ ಕೀ ಆಜಾದೀ ಹೈ ತುಮ್ಹೆ
ಮಗರ್ ಆವಾಜ್ ನಹೀ ಉಠಾನಾ,”
ಅನ್ನೋ ಶಾಯರಿ ಅದಅಲ್ಲಾ, ಹಂಗ.
ಹಣಕಾಸು ಆಯೋಗದ ಶಿಫಾರಸಿನ ಮೇರೆಗೆ ಬಂದ ಹಣವನ್ನು ನಗರ ಹಾಗೂ ಗ್ರಾಮೀಣ ಪ್ರದೇಶದ ಆಡಳಿತಕ್ಕಾಗಿ ಖರ್ಚು ಮಾಡಬೇಕು. ಇದು ಕಾನೂನು ಹಾಗೂ ಸಂಪ್ರದಾಯ.

ಉತ್ತರ ಕರ್ನಾಟಕದ ಮೇಲೆ 118 ವರ್ಷಗಳಲ್ಲಿ ಬೀಳದಷ್ಟು ಮಳಿ ಬಿದ್ದು, ಕೃಷ್ಣಾ ನದಿಯಲ್ಲಿ ಕೇವಲ ಮೂರು ವಾರದಲ್ಲಿ 600 ಟಿಎಂಸಿ ನೀರು ಬಂದು ಜನರ ಜೀವಾ, ಜೀವನ ಎರಡನ್ನೂ ಹರಿಸಿಕೊಂಡು ಹೋತಲ್ಲಾ, ಅದು ಪ್ರಕೃತಿ ವಿಕೋಪ ಅಲ್ಲಾ.

14 ನೇ ಹಣಕಾಸು ಆಯೋಗದ ದುಡ್ಡನ್ನು ನೆರೆ ಪರಿಹಾರದಂತ ಕೆಲಸಕ್ಕೆ ಬಳಸಿಗೋಬೇಕು, ಕೇಂದ್ರದಿಂದ ಹೆಚ್ಚಿನ ಹಣ ಕೇಳಬಾರದು ಎನ್ನುವ ಫರಮಾನು ಕೊಡಿಸುವ ಯುವ, ಶಿಕ್ಷಿತ, ನಾಯಕರನ್ನು ನಾವು ಆರಿಸಿ ಕಳಿಸಿದ್ದೇವಲ್ಲಾ, ಅದು ವಿಕೋಪ.

ಅದು ನೈಸರ್ಗಿಕವೋ ಕೃತ್ರಿಮವೋ ಅದು ಇನ್ನೊಂದು ದಿನದ ಚರ್ಚೆಯ ವಿಷಯ, ಅಲ್ಲವೇ ಮನೋಲ್ಲಾಸಿನೀ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...