HomeಅಂಕಣಗಳುFund Transfer from center to states : ’ಸುದ್ದಿಯೇನೆ, ಮನೋಲ್ಲಾಸಿನಿ?’

Fund Transfer from center to states : ’ಸುದ್ದಿಯೇನೆ, ಮನೋಲ್ಲಾಸಿನಿ?’

- Advertisement -
- Advertisement -

ಕೋಟ್ಯಾಂತರ ಜನ ಅತ್ತೂ ಕರದೂ ಹಾಕಿದ ಮೇಲೆ? ನೆರೆ ಪರಿಹಾರಕ್ಕೆ ಅಂತ ಇಟಗೊರಿ? ಅಂತ ಕೇಂದ್ರದವರು ರಾಜ್ಯಕ್ಕೆ 1,200 ಕೋಟಿ ರೂಪಾಯಿ ಕೊಟ್ಟಾರ.

ಇದಕ್ಕ ಥರಾಥರಾ ಪ್ರತಿಕ್ರಿಯೆ ಬಂದಾವ.

‘ಇದು ಕಮ್ಮಿ’ ಅಂತ ಕೆಲವು ಜನಾ, ‘ಇದ ಹೆಚ್ಚು, ಇದಕ್ಕಿಂತ ಹೆಚ್ಚು ಏನ್ ಕೊಡತಾರ’ ಅಂತ ಕೆಲವರು ಅಂದರ, ಇನ್ನೂ ಕೆಲವರು ‘ಅವರು ದೇವರು ಇದ್ದಂಗೆ, ಅವರು ಕೃಪಾ ಮಾಡತಾರ. ಸ್ವಲ್ಪ ತಡಾ ಆಗಬಹುದು, ಅಷ್ಟ- ಖುದಾ ಕೆ ಘರ್ ಮೆ ದೇರ್ ಹೈ, ಅಂಧೇರಾ ನಹಿ,’ ಅಂತನೂ ಹೇಳ್ಯಾರ.

ಈ ಗನಗಂಬೀರ ವಿಷಯವನ್ನು ನಮ್ಮಂತಾ ಹುಲು ಮಾನವರು ಸ್ವಲ್ಪ ತಿಳಕೊಳ್ಳೋಣ, ಬನ್ನಿ

‘ಧನ ವಿನಿಯೋಗ’

ಒಂದು ವರ್ಷದಲ್ಲಿ ಕೇಂದ್ರ ಸರಕಾರದಿಂದಾ ರಾಜ್ಯಗಳಿಗೆ ಬರಬಹುದಾದ ರೊಕ್ಕಕ್ಕ ಧನ ವಿನಿಯೋಗ ಅಂತಾರ
ಇದು ಮೂರು ರೀತಿಯದು-

1. ಹಣಕಾಸು ಆಯೋಗ ಹೇಳಿದಷ್ಟು ಕೊಡುವುದು ಹಾಗೂ ಬ್ಯಾರೆ ರೀತಿ ಹಣ ಹಂಚಿಕೆ.

2. ಕೇಂದ್ರದ ಯೋಜನೆಗಳು

3. ಕೇಂದ್ರ ಹಾಗೂ ರಾಜ್ಯದ ಹೆಸರಿನಲ್ಲಿ ವಸೂಲು ಮಾಡುವ ತೆರಿಗೆ ಅಥವಾ ಸುಂಕ. ನಮ್ಮ ಉತ್ತರ ಕರ್ನಾಟಕದಾಗ ಸುಂಕ ಅಂತೇವೆಲ್ಲಾ, ಅಂತಾ ಸುಂಕ ಅಲ್ಲ ಮತ್ತ.

ಒಂದು ವರ್ಷಕ್ಕ ಕೇಂದ್ರ ರಾಜ್ಯಗಳಿಗೆ ಹಂಚುವ ಹಣ ಸುಮಾರು 50 ಲಕ್ಷ ಕೋಟಿ. ಇದರಾಗ 39 ಲಕ್ಷ ಕೋಟಿ ತೆರಿಗೆಯ ಮರು ಹಂಚಿಕೆ, 6 ಲಕ್ಷ ಕೋಟಿ ಮತ್ತ 5 ಲಕ್ಷ ಕೋಟಿ ವಿನಿಯೋಗ. ಇದನ್ನು ಬಿಟ್ಟು ಸುಮಾರು 3 ಲಕ್ಷ ಕೋಟಿ ನೇರ ಹಾಗೂ ನೇರವಲ್ಲದ ಸಬ್ಸಿಡಿ ಬಿಡುಗಡೆಯಾಗುತ್ತದೆ- ಪೆಟ್ರೋಲು, ಪೆಟ್ರೋಲಿನಿಂದ ಮಾಡಿದ ಗೊಬ್ಬರ, ಹಾಗೂ ಗೊಬ್ಬರದಿಂದ ಬೆಳೆದ ಧಾನ್ಯಗಳಿಗೆ.

ಇನ್ನು ಪ್ರಕೃತಿ ವಿಕೋಪ ಮುಂತಾದ ತುರ್ತುಗಳಿಗೆ ಕೊಡುವ ಧನಸಹಾಯ, ಅದು ಬ್ಯಾರೇನ.

ಸುಂಕ- ತೆರಿಗೆಯೊಳಗ ಎರಡು ಥರಾ. ನೇರ ಹಾಗೂ ನೇರವಲ್ಲದ ಅಥವಾ ಅಪ್ರತ್ಯಕ್ಷ. ಸರಕಾರಕ್ಕ ನಾವೆಲ್ಲಾ ಡೈರೆಕ್ಟಾಗಿ ರೊಕ್ಕ ಕೊಟ್ಟರ ಅದು ನೇರ. ಇನ್ನೊಬ್ಬರ ಮೂಲಕ ಕೊಟ್ಟರ ಅದು ಇನ್‍ಡೈರೆಕ್ಟ್ ತೆರಿಗೆ.

ಕೇಂದ್ರ ನೇರವಾಗಿ ವಸೂಲು ಮಾಡುವ ಆದಾಯ ತೆರಿಗೆಯನ್ನು ಅದು ರಾಜ್ಯಗಳಿಗೆ ಕೊಡೋದಿಲ್ಲ. ಸೆಸ್ ಅನ್ನುವ ಸಂಶಯಾಸ್ಪದ ಹೆಸರಿನ ತೆರಿಗೆ ಒಂದು ಅದ. ಈ ಕೆಲಸಕ್ಕೆ ಇದನ್ನು ಉಪಯೋಗಸ್ತೇವಿ ಅಂತೇಳಿ ವಸೂಲು ಮಾಡೋದು ಸೆಸ್ಸು. ಇದನ್ನೂ ರಾಜ್ಯಗಳ ಜೊತೆ ಹಂಚಿಕೊಳ್ಳಬೇಕಾಗಿಲ್ಲ. ಕಳೆದ 10 ವರ್ಷದಾಗ ಈ ಸೆಸ್ಸುಗಳ ಸಂಖ್ಯೆ ಸುಮಾರು 100 ಶೇಕಡಾ ಹೆಚ್ಚಾಗೇದ.

ಇನ್ನು ಜಿಎಸ್‍ಟಿ ಅಥವಾ ಸರಕು ಹಾಗೂ ಸೇವಾ ತೆರಿಗೆ. ಸಿಂಪಲ್ ಆಗಿ ಹೇಳಬೇಕಂದರೆ ಆದಾಯ ಬಿಟ್ಟರ ಉಳಿದ ಎಲ್ಲಾ ತೆರಿಗೆ ಇದರಾಗ ಬರ್ತಾವ. ಅದು ಆದಾಯದ ಮ್ಯಾಲೆ ಆದರ ಇದು ಖರ್ಚಿನ ಮ್ಯಾಲೆ. ಇದರಾಗ ಏನ್ರಿ, ಯಾವುದರ ಹೆಸರಾಗ ರೊಕ್ಕ ಕಸಗೊಳೋದು ಅಂತೀರೇನು? ಅದಕ್ಕ ಹೇಳೋದು ಸಾವಿನ ನಂತರ ಈ ಜೀವನದಾಗ ಖಾತ್ರಿ ಇರೋದು ತೆರಿಗೆ ಮಾತ್ರ ಅಂತ.

ಜಿಎಸ್‍ಟಿಯ ಪಾಲು ರಾಜ್ಯಗಳಿಗೆ ಸಿಗತದ. ಇನ್ನು ಕೇಂದ್ರಕ್ಕ ಕೊಡಲಾರದ ತಾವ ಹಾಕಿ ತಾವೇ ಬಳಸೋ ತೆರಿಗೆ ಕೆಲವು ಅವ. ಹೊಟೆಲ್ ಒಳಗ ಊಟಾ ಮಾಡಿ, ಬೀರ್ ಬಾಟಲ್ ಕೈಯಾಗ ಹಿಡಕೊಂಡು ಸಿನಿಮಾಕ್ಕ ಹೋದವರು ರಾಜ್ಯಕ್ಕೆ ಮೂರು ಥರದ ಸುಂಕ ಸೇವಾ ಮಾಡಿರತಾರ.

ಕೇಂದ್ರ ಸರಕಾರದ ಯೋಜನೆಗಳು- ಒಟ್ಟು 99. ಇದರೊಳಗ ಮೂರು ಥರಾ. ಹಳೇ ಯೋಜನೆ, ನಡುವೆ ನಿಂತು ಹೋಗಿ, ಮತ್ತೆ ಶುರು ಆದ ಹಳೇ ಯೋಜನೆ, ಹಾಗೂ ಹೊಸಾ ಹೆಸರಿನ ಹಳೇ ಯೋಜನೆ.

ಮನೆ ಕಟ್ಟುವುದು, ಮನೆಯಲ್ಲಿ ಸಂಡಾಸು ಕಟ್ಟುವುದು, ಹಾದಿ ಮ್ಯಾಲೆ ಹೋಗೋರು ಹಾದಿ ಮ್ಯಾಲಿನ ಕಸಾ ಗುಡಸೋದು, ಇಂತಾ ಯೋಜನೆ ಒಂದಿಷ್ಟು. ಇನ್ನ ಉತ್ತರಾಖಂಡೀ ಶುದ್ಧ ಹಿಂದೀ ಯಲ್ಲಿ ಹೆಸರಿಟ್ಟ ಉನ್ನತೀಕರಣ್ ಯೋಜನಾ, ವಿಕಾಸ್ ಯೋಜನಾ, ಆಯೋಜನಾ, ನೀತಿ, ಗೀತಿ, ಅವೆಲ್ಲಾ ಬ್ಯಾರೆ.
ಇದರೊಳಗ ಸಂಪೂರ್ಣ ಕೇಂದ್ರ ತಮ್ಮದೇ ದುಡ್ಡು ಹಾಕಿ ನೇರವಾಗಿ ಜಾರಿ ಮಾಡೋ ಅಂಥಾವು 27 ಸ್ಕೀಮು. ಇನ್ನು ಇದರಾಗ ರಾಜ್ಯದವರದೂ ಪಾಲು ಇರಲಿ ಅಂತೇಳಿ, ರಾಜ್ಯದ ನಿಗರಾಣಿಯಲ್ಲಿ ಮಾಡೋ ಅಂಥಾವು 72. ಇವಕ್ಕ ಬರೋ ಫಂಡು ಬ್ಯಾರೆ.

‘ಅಣಕಾಸು ಹಾಯೋಗ’

ಸಣ್ಣ ವಯಸ್ಸಿನಲ್ಲಿಯೇ ದೊಡ್ಡ ವಕೀಲರಾಗಿ, ಭಾರಿ ಭಯಂಕರ ಭಾಷಣಕಾರರಾಗಿ, ‘ಸೋಷಿಯಲ್ ಮೀಡಿಯಾ ಸ್ಟಾರ್’ ಅನ್ನುವ ಬಿರುದಿಗೆ ಭೀಷಣರಾಗಿ, ಆ ನಂತರ ‘ಇದನ್ನ ಯಾಕ್ ಬಿಡೋದ್, ಟ್ರೈಮಾಡೇ ಬಿಡೋಣ’ ಅಂತ ಸಂಸತ್ ಸದಸ್ಯರಾಗಿಯೇ ಬಿಟ್ಟ ನಾಯಕರೊಬ್ಬರು ಕೇಂದ್ರದ ಹತ್ತಿರ ನಾವು ಯಾಕ್ ಕೇಳ್ ಬೇಕು? ನಮ್ಹತ್ರಾನೆ ಇದೆಯಲ್ಲಾ ಬೇಕಾದಷ್ಟು ದುಡ್ಡು, ಮೋದೀಜೀ 14 ನೇ ಅಣಕಾಸು ಹಾಯೋಗದ ಅಡಿಯಲ್ಲಿ ಬೇಕಷ್ಟು ಕೊಟ್ಟಿದಾರೆ, ಅಲ್ವಾ, ಅಂತಂದ್ರು. ನೆನಪ ಅದನ, ಆ ಡೀಪು ಥಾಟಿನ ಗೂಡಾರ್ಥ ಏನು ಹಂಗಂದರೆ?

ಆ ಆಯೊಗದ ಕತಿ ಮಜಾ ಐತಿ. ಸಂವಿಧಾನದ 280ನೇ ಕಲಮಿನ ಪ್ರಕಾರ ಪ್ರತಿ ಐದು ವರ್ಷಕ್ಕೊಮ್ಮೆ ಒಂದು ಹಣಕಾಸು ಆಯೋಗ ಆಗಬೇಕು. ತಾನು ತೆರಿಗೆದಾರರಿಂದ ಸಂಗ್ರಹಿಸಿದ ಹಣವನ್ನ ರಾಜ್ಯಗಳ ಗ್ರಾಮ ಪಂಚಾಯಿತಿ ಹಾಗೂ ನಗರಸಭೆಗಳಿಗೆ ಎಷ್ಟೆಷ್ಟು ಪ್ರಮಾಣದಾಗ ಎಷ್ಟೆಷ್ಟು ಕಂತಿನೊಳಗ ಕೊಡಬೇಕು ಅಂತ ನಿರ್ಧಾರ ಮಾಡೋದು ಈ ಆಯೋಗ. ಈಗ ರಿಸರ್ವ ಬ್ಯಾಂಕಿನ ಮಾಜಿ ಗವರ್ನರ್ ವೈ ವಿ ರೆಡ್ಡಿ ಅವರ ಸದಾರತ್ತಿನೊಳಗ 14ನೇ ಆಯೋಗ ಹಣಕಾಸು ಸಂಗ್ರಹದ 42 ಶೇಕಡಾ ರಾಜ್ಯಗಳಿಗೆ ಕೊಡಬೇಕು ಅಂತ ಹೇಳಿತು. ಕೇಂದ್ರ ಸರಕಾರ ಒಪ್ಪಿಕೊಂಡಿತು. ಆದರೆ ಆ ರೊಕ್ಕಾನ ನಾವು ಹೇಳಿದಂಗ ಖರ್ಚು ಮಾಡಬೇಕು ಅನ್ನೋ ಷರತ್ತು ಹಾಕಿತು.

ಹಿಂದಿಗಿಂತ ಹಣ ವಿನಿಯೋಗದ ಪ್ರಮಾಣ ಹೆಚ್ಚಾದರೂ ಖರ್ಚು ಮಾಡುವ ಸ್ವಾತಂತ್ರ್ಯದ ಪ್ರಮಾಣ ಕಮ್ಮಿ ಆಯಿತು.

ಹಂಗೂ ಸ್ವಾತಂತ್ರ್ಯ ಯಾರಿಗೆ ಬೇಕಾಗೇದ ಬಿಡ್ರಿ. ರೊಕ್ಕ ಇದ್ದರ ಸಾಕು.
“ತುಮ್ ಆಜಾದ್ ಹೋ ಸೋನೆ ಕಿ ಪಿಂಜರೇ ಮೆ.
ಚೀಖನೆ ಕೀ ಆಜಾದೀ ಹೈ ತುಮ್ಹೆ
ಮಗರ್ ಆವಾಜ್ ನಹೀ ಉಠಾನಾ,”
ಅನ್ನೋ ಶಾಯರಿ ಅದಅಲ್ಲಾ, ಹಂಗ.
ಹಣಕಾಸು ಆಯೋಗದ ಶಿಫಾರಸಿನ ಮೇರೆಗೆ ಬಂದ ಹಣವನ್ನು ನಗರ ಹಾಗೂ ಗ್ರಾಮೀಣ ಪ್ರದೇಶದ ಆಡಳಿತಕ್ಕಾಗಿ ಖರ್ಚು ಮಾಡಬೇಕು. ಇದು ಕಾನೂನು ಹಾಗೂ ಸಂಪ್ರದಾಯ.

ಉತ್ತರ ಕರ್ನಾಟಕದ ಮೇಲೆ 118 ವರ್ಷಗಳಲ್ಲಿ ಬೀಳದಷ್ಟು ಮಳಿ ಬಿದ್ದು, ಕೃಷ್ಣಾ ನದಿಯಲ್ಲಿ ಕೇವಲ ಮೂರು ವಾರದಲ್ಲಿ 600 ಟಿಎಂಸಿ ನೀರು ಬಂದು ಜನರ ಜೀವಾ, ಜೀವನ ಎರಡನ್ನೂ ಹರಿಸಿಕೊಂಡು ಹೋತಲ್ಲಾ, ಅದು ಪ್ರಕೃತಿ ವಿಕೋಪ ಅಲ್ಲಾ.

14 ನೇ ಹಣಕಾಸು ಆಯೋಗದ ದುಡ್ಡನ್ನು ನೆರೆ ಪರಿಹಾರದಂತ ಕೆಲಸಕ್ಕೆ ಬಳಸಿಗೋಬೇಕು, ಕೇಂದ್ರದಿಂದ ಹೆಚ್ಚಿನ ಹಣ ಕೇಳಬಾರದು ಎನ್ನುವ ಫರಮಾನು ಕೊಡಿಸುವ ಯುವ, ಶಿಕ್ಷಿತ, ನಾಯಕರನ್ನು ನಾವು ಆರಿಸಿ ಕಳಿಸಿದ್ದೇವಲ್ಲಾ, ಅದು ವಿಕೋಪ.

ಅದು ನೈಸರ್ಗಿಕವೋ ಕೃತ್ರಿಮವೋ ಅದು ಇನ್ನೊಂದು ದಿನದ ಚರ್ಚೆಯ ವಿಷಯ, ಅಲ್ಲವೇ ಮನೋಲ್ಲಾಸಿನೀ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...