ಅಂಗಾಂಗ ದಾನ ಮಾಡುವವರ ಅಂತ್ಯ ಸಂಸ್ಕಾರವನ್ನು ಸಕಲ ಸರಕಾರಿ ಗೌರವದೊಂದಿಗೆ ಮಾಡಲಾಗುವುದು ಎಂದು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರು ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಸ್ಟಾಲಿನ್ ಅವರು, ತಮಿಳುನಾಡು ಅಂಗಾಂಗ ದಾನಗಳಲ್ಲಿ ದೇಶದಲ್ಲಿ ಮುಂದುವರಿದ ರಾಜ್ಯವಾಗಿದೆ. ಈ ಮೂಲಕ ನೂರಾರು ರೋಗಿಗಳಿಗೆ ಹೊಸ ಜೀವನ ಕೊಟ್ಟಿದೆ ಎಂದು ಹೇಳಿದ್ದಾರೆ.
ನೋವಿನ ಸಂದರ್ಭಗಳಲ್ಲಿ ತಮ್ಮ ಆತ್ಮೀಯರ ಅಂಗಾಂಗಗಳನ್ನು ದಾನ ಮಾಡಲು ಮುಂದೆ ಬರುವ ಕುಟುಂಬಗಳ ನಿಸ್ವಾರ್ಥ ತ್ಯಾಗದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ಸ್ಟಾಲಿನ್ ಇದೇ ವೇಳೆ ಹೇಳಿದ್ದಾರೆ.
ಅಂಗಾಂಗ ದಾನಿಗಳು ಮತ್ತು ಅವರ ಕುಟುಂಬದವರ ತ್ಯಾಗವನ್ನು ಗೌರವಿಸುವ ಸಲುವಾಗಿ ಸರ್ಕಾರವು ಅಂತ್ಯಕ್ರಿಯೆಗೆ ಸರ್ಕಾರಿ ಗೌರವವನ್ನು ನೀಡಲು ನಿರ್ಧರಿಸಿದೆ ಎಂದು ಸಿಎಂ ಎಂಕೆ ಸ್ಟಾಲಿನ್ ಅವರು ಹೇಳಿದ್ದಾರೆ.
உடல் உறுப்பு தானத்தின் மூலம் நூற்றுக்கணக்கான நோயாளிகளுக்கு வாழ்வளிக்கும் அரும்பணியில் நாட்டின் முன்னணி மாநிலமாகத் தமிழ்நாடு தொடர்ந்து விளங்கி வருகின்றது.
குடும்ப உறுப்பினர்கள் மூளைச்சாவு நிலையை அடைந்த துயரச் சூழலிலும், அவர்களின் உடல் உறுப்புகளைத் தானமாக அளித்திட முன்வரும்…
— M.K.Stalin (@mkstalin) September 23, 2023
ಇದನ್ನು ಓದಿ: ವಿಶೇಷ ಅಧಿವೇಶನ ಚುನಾಯಿತ ಸಂಸದನಿಗೆ ಅವಹೇಳನ ಮಾಡಲು ಕರೆಯಲಾಗಿದೆಯೇ?: ಡ್ಯಾನಿಶ್ ಅಲಿ