Homeಅಂತರಾಷ್ಟ್ರೀಯತುಮಕೂರಿಗೆ ಬಂದ ಅಮೇರಿಕದ ಗನ್ನು.. ಭಾರತದಲ್ಲಿ ನಿಷೇಧವಾಗಿದ್ದರೂ ನುಸುಳಿದ್ದು ಹೇಗೆ?

ತುಮಕೂರಿಗೆ ಬಂದ ಅಮೇರಿಕದ ಗನ್ನು.. ಭಾರತದಲ್ಲಿ ನಿಷೇಧವಾಗಿದ್ದರೂ ನುಸುಳಿದ್ದು ಹೇಗೆ?

- Advertisement -
- Advertisement -

ತುಮಕೂರು ಒಂದು ರೀತಿಯಲ್ಲಿ ಯಾವಾಗಲೂ ಶಾಂತಿಯಿಂದ ಕೂಡಿರುವ ನಗರವೆಂಬ ಭಾವನೆ ಎಲ್ಲಾ ಜನಸಾಮಾನ್ಯರಲ್ಲೂ ಇತ್ತು. ಆದರೆ ಇತ್ತಿಚಿಗೆ ಆ ರೀತಿಯ ಭಾವನೆ ಕಡಿಮೆಯಾಗುತ್ತಿದೆ. ಕಾರಣ ನಗರದಲ್ಲಿ ಹೆಚ್ಚುತ್ತಿರುವ ಅಪರಾಧಗಳು. ಎಷ್ಟೇ ಅಧಿಕಾರಗಳೂ ಬಂದು ಹೋದರೂ ಸಹ ಅಪರಾಧಗಳು ಕಡಿಮೆಯಾದಂತೆ ಕಾಣುತ್ತಿಲ್ಲ. ಇದಕ್ಕೆ ತುಮಕೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಹಲವು ಆತಂಕಕಾರಿ ಘಟನೆಗಳೇ ಕಾರಣ.

ಕಳೆದ ವರ್ಷ ಒಂದು ಬೆಳಗ್ಗಿನ ಜಾವ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ನಡೆದ ಮಾಜಿ ಮೇಯರ್ ರವಿಕುಮಾರ್ ಭೀಕರ ಕೊಲೆ ನಗರದಲ್ಲಿ ತಲ್ಲಣ ಉಂಟು ಮಾಡಿತ್ತು. ಅದಿನ್ನು ಮರೆಯುವ ಮುನ್ನವೇ ಇತ್ತಿಚಿಗೆ ತುಮಕೂರಿನಲ್ಲಿ ಭಾರತದಲ್ಲಿ ನಿಷೇಧಿತವಾಗಿರುವ ಏರ್ಗನ್ ಅನುಮಾನಸ್ಫದವಾಗಿ ಸಿಕ್ಕಿದ್ದು ಜನ ಸಾಮಾನ್ಯರ ನಿದ್ದೆಗೆಡಿಸಿದೆ. ಈ ಹಿನ್ನೆಲೆಯಲ್ಲೆ ನಗರದಲ್ಲಿ ಮತ್ತೊಂದು ಕೊಲೆಯ ಸಂಚು ನಡೆದಿದೆಯಾ ಎಂಬ ಅನುಮಾನಗಳು, ತರ್ಕವಿಲ್ಲದ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಜಯನಗರ ಮತ್ತು ತಿಲಕ್‍ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತಿಚಿಗೆ ಸೆಬ್ಟಂಬರ್ 5ರಂದು ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮ ಮುಗಿಸಿ ರಾತ್ರಿ ಗಸ್ತಿನಲ್ಲಿದ್ದ ಜಯನಗರ ಠಾಣೆ ಪೋಲಿಸರಿಗೆ ಉಪ್ಪಾರಹಳ್ಳಿ ಮುಖ್ಯರಸ್ತೆಯ ಸೆಕ್ರೆಡ್‍ಹಾರ್ಟ್ ಶಾಲೆ ಮುಂಭಾಗದಿಂದ ಗೆದ್ದಲಹಳ್ಳಿ ಕಡೆಗೆ ಹೋಗುತ್ತಿರುವ ಮಾರುತಿ 800 ಕಾರು ಅನುಮಾನಸ್ಪದವಾಗಿ ಕಂಡು ತಡೆದು ವಿಚಾರಿಸಿದ್ದಾರೆ.

ಆವೇಳೆ ಕಾರಿನಲ್ಲಿದ್ದ ನಾಲ್ವರು ಪರಾರಿಯಾಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ಆದರೆ ಅವರನ್ನು ಬಂಧಿಸಿದ ಪೋಲಿಸರು ವಿಚಾರಣೆಗೊಳಪಡಿಸಿ, ವಾಹನ ಪರಿಶೀಲಿಸಿದಾಗ ಕಾರಿನಲ್ಲಿ ಅಮೆರಿಕದ ಎಫ್ ಎಕ್ಸ್ ಬಾಕ್ಸ್ ಡಿಸಿಬಿ 125 ಸೌಂಡ್‍ಲೆಸ್ ಗನ್ ಮತ್ತು ಗುಂಡುಗಳು ಇರುವುದು ಪೋಲಿಸರ ಗಮನಕ್ಕೆ ಬಂದಿದೆ. ಭಾರತದಲ್ಲಿ ಎಫ್.ಎಕ್ಸ್.ಬಾಕ್ಸ್ ಗನ್ ಅನ್ನು ನಿಷೇಧಿಸಲಾಗಿದೆ ಆದರೆ ತುಮಕೂರಿನ ಯುವಕರ ಕೈಗೆ ಈ ಗನ್ ಹೇಗೆ ಬಂತು ಎಂಬುವುದನ್ನು ಪೋಲಿಸರು ಬೇಧಿಸಬೇಕಿದೆ. ಈ ಪ್ರಕರಣದಲ್ಲಿ ಗುಬ್ಬಿ ನಗರದ ನಿವಾಸಿಗಳಾದ ನವೀನ್ ಕುಮಾರ್, ದೇವರಾಜು, ನಟರಾಜು, ರಯಾನ್, ಸುಹೇಲ್ ಎಂಬ ಐದು ಜನರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎನ್ನಲಾಗಿದೆ.

ಬಂಧಿತರಾಗಿರುವ ಐದು ಆರೋಪಿಗಳಲ್ಲಿ ನವೀನ್ ಎಂಬಾತ ಈ ಹಿಂದೆ ಇದೇ ಗನ್ ಬಳಕೆ ಮಾಡಿ ನವಿಲು ಬೇಟೆಯಾಡಿದ್ದ. ಈ ಕುರಿತಂತೆ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ. ಈತನೇ ಈ ತಂಡವನ್ನು ಮುನ್ನಡೆಸುತ್ತಿದ್ದ ಎಂದು ಹೇಳಲಾಗಿದೆ. ಎಫ್.ಎಕ್ಸ್. ಬಾಕ್ಸ್ ಡಿಸಿಬಿ ಗನ್ ಅನ್ನು ಲೈಸೆನ್ಸ್ ಪಡೆದು ಯುಎಸ್‍ಎ ಅಲ್ಲಿ ಖರೀದಿ ಮಾಡಬೇಕು. ಆದರೆ ಯಾವುದೇ ಪರವಾನಗಿ ಇಲ್ಲದೆ ಈ ಗನ್ ಭಾರತಕ್ಕೆ ಬಂದದ್ದಾರು ಹೇಗೆ? ಎಂಬುದು ನಿಗೂಢವಾಗಿದೆ.

ತುಮಕೂರಿನ ಇಂತಹ ಚಟುವಟಿಕೆಗಳಿಗೆ ಕೆಲವು ರಾಜಕಾರಣಿಗಳ ಕುಮ್ಮಕ್ಕು ಬಲವಾಗಿದೆ ಎಂಬುವ ಮಾತುಗಳು ಕೇಳಿಬರುತ್ತಿದೆ. ಹಾಗಾಗಿ ಇಂತಹ ಪ್ರಕರಣಗಳನ್ನು ನಿಷ್ಠಾವಂತ ಪೋಲಿಸ್ ಅಧಿಕಾರಿಗಳಿಂದ ತನಿಖೆ ಮಾಡಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕಿದೆ ಇಲ್ಲವಾದಲ್ಲಿ ಗ್ಯಾಂಗ್ ಕಟ್ಟಿಕೊಂಡು ಗನ್ ಹಿಡಿದು ಓಡಾಡುವ ಯುವಜನರ ದಂಡು ಹೆಚ್ಚಾಗಲಿದೆ. ಇಂತಹ ಪ್ರಕರಣಗಳಲ್ಲಿ ಲಾಭ ಪಡೆದುಕೊಳ್ಳಲೆತ್ನಿಸುವ  ರಾಜಕಾರಣಿಗಳು ಸದಾ ಇಂತಹದಕ್ಕಾಗಿಯೇ ಕಾಯುತ್ತಿರುತ್ತಾರೆ. ಈಗಲಾದರೂ ಸಕಾರ ಎಚ್ಚೆತ್ತಕೊಂಡು ತುಮಕೂರು ನಗರವನ್ನು ಅಫರಾದ ಮುಕ್ತ ನಗರವಾಗಿಸುವ ಕಡೆ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಕ್ರಿಯಾಶೀಲವಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...