Homeಅಂತರಾಷ್ಟ್ರೀಯತುಮಕೂರಿಗೆ ಬಂದ ಅಮೇರಿಕದ ಗನ್ನು.. ಭಾರತದಲ್ಲಿ ನಿಷೇಧವಾಗಿದ್ದರೂ ನುಸುಳಿದ್ದು ಹೇಗೆ?

ತುಮಕೂರಿಗೆ ಬಂದ ಅಮೇರಿಕದ ಗನ್ನು.. ಭಾರತದಲ್ಲಿ ನಿಷೇಧವಾಗಿದ್ದರೂ ನುಸುಳಿದ್ದು ಹೇಗೆ?

- Advertisement -
- Advertisement -

ತುಮಕೂರು ಒಂದು ರೀತಿಯಲ್ಲಿ ಯಾವಾಗಲೂ ಶಾಂತಿಯಿಂದ ಕೂಡಿರುವ ನಗರವೆಂಬ ಭಾವನೆ ಎಲ್ಲಾ ಜನಸಾಮಾನ್ಯರಲ್ಲೂ ಇತ್ತು. ಆದರೆ ಇತ್ತಿಚಿಗೆ ಆ ರೀತಿಯ ಭಾವನೆ ಕಡಿಮೆಯಾಗುತ್ತಿದೆ. ಕಾರಣ ನಗರದಲ್ಲಿ ಹೆಚ್ಚುತ್ತಿರುವ ಅಪರಾಧಗಳು. ಎಷ್ಟೇ ಅಧಿಕಾರಗಳೂ ಬಂದು ಹೋದರೂ ಸಹ ಅಪರಾಧಗಳು ಕಡಿಮೆಯಾದಂತೆ ಕಾಣುತ್ತಿಲ್ಲ. ಇದಕ್ಕೆ ತುಮಕೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಹಲವು ಆತಂಕಕಾರಿ ಘಟನೆಗಳೇ ಕಾರಣ.

ಕಳೆದ ವರ್ಷ ಒಂದು ಬೆಳಗ್ಗಿನ ಜಾವ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ನಡೆದ ಮಾಜಿ ಮೇಯರ್ ರವಿಕುಮಾರ್ ಭೀಕರ ಕೊಲೆ ನಗರದಲ್ಲಿ ತಲ್ಲಣ ಉಂಟು ಮಾಡಿತ್ತು. ಅದಿನ್ನು ಮರೆಯುವ ಮುನ್ನವೇ ಇತ್ತಿಚಿಗೆ ತುಮಕೂರಿನಲ್ಲಿ ಭಾರತದಲ್ಲಿ ನಿಷೇಧಿತವಾಗಿರುವ ಏರ್ಗನ್ ಅನುಮಾನಸ್ಫದವಾಗಿ ಸಿಕ್ಕಿದ್ದು ಜನ ಸಾಮಾನ್ಯರ ನಿದ್ದೆಗೆಡಿಸಿದೆ. ಈ ಹಿನ್ನೆಲೆಯಲ್ಲೆ ನಗರದಲ್ಲಿ ಮತ್ತೊಂದು ಕೊಲೆಯ ಸಂಚು ನಡೆದಿದೆಯಾ ಎಂಬ ಅನುಮಾನಗಳು, ತರ್ಕವಿಲ್ಲದ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಜಯನಗರ ಮತ್ತು ತಿಲಕ್‍ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತಿಚಿಗೆ ಸೆಬ್ಟಂಬರ್ 5ರಂದು ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮ ಮುಗಿಸಿ ರಾತ್ರಿ ಗಸ್ತಿನಲ್ಲಿದ್ದ ಜಯನಗರ ಠಾಣೆ ಪೋಲಿಸರಿಗೆ ಉಪ್ಪಾರಹಳ್ಳಿ ಮುಖ್ಯರಸ್ತೆಯ ಸೆಕ್ರೆಡ್‍ಹಾರ್ಟ್ ಶಾಲೆ ಮುಂಭಾಗದಿಂದ ಗೆದ್ದಲಹಳ್ಳಿ ಕಡೆಗೆ ಹೋಗುತ್ತಿರುವ ಮಾರುತಿ 800 ಕಾರು ಅನುಮಾನಸ್ಪದವಾಗಿ ಕಂಡು ತಡೆದು ವಿಚಾರಿಸಿದ್ದಾರೆ.

ಆವೇಳೆ ಕಾರಿನಲ್ಲಿದ್ದ ನಾಲ್ವರು ಪರಾರಿಯಾಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ಆದರೆ ಅವರನ್ನು ಬಂಧಿಸಿದ ಪೋಲಿಸರು ವಿಚಾರಣೆಗೊಳಪಡಿಸಿ, ವಾಹನ ಪರಿಶೀಲಿಸಿದಾಗ ಕಾರಿನಲ್ಲಿ ಅಮೆರಿಕದ ಎಫ್ ಎಕ್ಸ್ ಬಾಕ್ಸ್ ಡಿಸಿಬಿ 125 ಸೌಂಡ್‍ಲೆಸ್ ಗನ್ ಮತ್ತು ಗುಂಡುಗಳು ಇರುವುದು ಪೋಲಿಸರ ಗಮನಕ್ಕೆ ಬಂದಿದೆ. ಭಾರತದಲ್ಲಿ ಎಫ್.ಎಕ್ಸ್.ಬಾಕ್ಸ್ ಗನ್ ಅನ್ನು ನಿಷೇಧಿಸಲಾಗಿದೆ ಆದರೆ ತುಮಕೂರಿನ ಯುವಕರ ಕೈಗೆ ಈ ಗನ್ ಹೇಗೆ ಬಂತು ಎಂಬುವುದನ್ನು ಪೋಲಿಸರು ಬೇಧಿಸಬೇಕಿದೆ. ಈ ಪ್ರಕರಣದಲ್ಲಿ ಗುಬ್ಬಿ ನಗರದ ನಿವಾಸಿಗಳಾದ ನವೀನ್ ಕುಮಾರ್, ದೇವರಾಜು, ನಟರಾಜು, ರಯಾನ್, ಸುಹೇಲ್ ಎಂಬ ಐದು ಜನರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎನ್ನಲಾಗಿದೆ.

ಬಂಧಿತರಾಗಿರುವ ಐದು ಆರೋಪಿಗಳಲ್ಲಿ ನವೀನ್ ಎಂಬಾತ ಈ ಹಿಂದೆ ಇದೇ ಗನ್ ಬಳಕೆ ಮಾಡಿ ನವಿಲು ಬೇಟೆಯಾಡಿದ್ದ. ಈ ಕುರಿತಂತೆ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ. ಈತನೇ ಈ ತಂಡವನ್ನು ಮುನ್ನಡೆಸುತ್ತಿದ್ದ ಎಂದು ಹೇಳಲಾಗಿದೆ. ಎಫ್.ಎಕ್ಸ್. ಬಾಕ್ಸ್ ಡಿಸಿಬಿ ಗನ್ ಅನ್ನು ಲೈಸೆನ್ಸ್ ಪಡೆದು ಯುಎಸ್‍ಎ ಅಲ್ಲಿ ಖರೀದಿ ಮಾಡಬೇಕು. ಆದರೆ ಯಾವುದೇ ಪರವಾನಗಿ ಇಲ್ಲದೆ ಈ ಗನ್ ಭಾರತಕ್ಕೆ ಬಂದದ್ದಾರು ಹೇಗೆ? ಎಂಬುದು ನಿಗೂಢವಾಗಿದೆ.

ತುಮಕೂರಿನ ಇಂತಹ ಚಟುವಟಿಕೆಗಳಿಗೆ ಕೆಲವು ರಾಜಕಾರಣಿಗಳ ಕುಮ್ಮಕ್ಕು ಬಲವಾಗಿದೆ ಎಂಬುವ ಮಾತುಗಳು ಕೇಳಿಬರುತ್ತಿದೆ. ಹಾಗಾಗಿ ಇಂತಹ ಪ್ರಕರಣಗಳನ್ನು ನಿಷ್ಠಾವಂತ ಪೋಲಿಸ್ ಅಧಿಕಾರಿಗಳಿಂದ ತನಿಖೆ ಮಾಡಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕಿದೆ ಇಲ್ಲವಾದಲ್ಲಿ ಗ್ಯಾಂಗ್ ಕಟ್ಟಿಕೊಂಡು ಗನ್ ಹಿಡಿದು ಓಡಾಡುವ ಯುವಜನರ ದಂಡು ಹೆಚ್ಚಾಗಲಿದೆ. ಇಂತಹ ಪ್ರಕರಣಗಳಲ್ಲಿ ಲಾಭ ಪಡೆದುಕೊಳ್ಳಲೆತ್ನಿಸುವ  ರಾಜಕಾರಣಿಗಳು ಸದಾ ಇಂತಹದಕ್ಕಾಗಿಯೇ ಕಾಯುತ್ತಿರುತ್ತಾರೆ. ಈಗಲಾದರೂ ಸಕಾರ ಎಚ್ಚೆತ್ತಕೊಂಡು ತುಮಕೂರು ನಗರವನ್ನು ಅಫರಾದ ಮುಕ್ತ ನಗರವಾಗಿಸುವ ಕಡೆ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಕ್ರಿಯಾಶೀಲವಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...