Homeಅಂತರಾಷ್ಟ್ರೀಯತುಮಕೂರಿಗೆ ಬಂದ ಅಮೇರಿಕದ ಗನ್ನು.. ಭಾರತದಲ್ಲಿ ನಿಷೇಧವಾಗಿದ್ದರೂ ನುಸುಳಿದ್ದು ಹೇಗೆ?

ತುಮಕೂರಿಗೆ ಬಂದ ಅಮೇರಿಕದ ಗನ್ನು.. ಭಾರತದಲ್ಲಿ ನಿಷೇಧವಾಗಿದ್ದರೂ ನುಸುಳಿದ್ದು ಹೇಗೆ?

- Advertisement -
- Advertisement -

ತುಮಕೂರು ಒಂದು ರೀತಿಯಲ್ಲಿ ಯಾವಾಗಲೂ ಶಾಂತಿಯಿಂದ ಕೂಡಿರುವ ನಗರವೆಂಬ ಭಾವನೆ ಎಲ್ಲಾ ಜನಸಾಮಾನ್ಯರಲ್ಲೂ ಇತ್ತು. ಆದರೆ ಇತ್ತಿಚಿಗೆ ಆ ರೀತಿಯ ಭಾವನೆ ಕಡಿಮೆಯಾಗುತ್ತಿದೆ. ಕಾರಣ ನಗರದಲ್ಲಿ ಹೆಚ್ಚುತ್ತಿರುವ ಅಪರಾಧಗಳು. ಎಷ್ಟೇ ಅಧಿಕಾರಗಳೂ ಬಂದು ಹೋದರೂ ಸಹ ಅಪರಾಧಗಳು ಕಡಿಮೆಯಾದಂತೆ ಕಾಣುತ್ತಿಲ್ಲ. ಇದಕ್ಕೆ ತುಮಕೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಹಲವು ಆತಂಕಕಾರಿ ಘಟನೆಗಳೇ ಕಾರಣ.

ಕಳೆದ ವರ್ಷ ಒಂದು ಬೆಳಗ್ಗಿನ ಜಾವ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ನಡೆದ ಮಾಜಿ ಮೇಯರ್ ರವಿಕುಮಾರ್ ಭೀಕರ ಕೊಲೆ ನಗರದಲ್ಲಿ ತಲ್ಲಣ ಉಂಟು ಮಾಡಿತ್ತು. ಅದಿನ್ನು ಮರೆಯುವ ಮುನ್ನವೇ ಇತ್ತಿಚಿಗೆ ತುಮಕೂರಿನಲ್ಲಿ ಭಾರತದಲ್ಲಿ ನಿಷೇಧಿತವಾಗಿರುವ ಏರ್ಗನ್ ಅನುಮಾನಸ್ಫದವಾಗಿ ಸಿಕ್ಕಿದ್ದು ಜನ ಸಾಮಾನ್ಯರ ನಿದ್ದೆಗೆಡಿಸಿದೆ. ಈ ಹಿನ್ನೆಲೆಯಲ್ಲೆ ನಗರದಲ್ಲಿ ಮತ್ತೊಂದು ಕೊಲೆಯ ಸಂಚು ನಡೆದಿದೆಯಾ ಎಂಬ ಅನುಮಾನಗಳು, ತರ್ಕವಿಲ್ಲದ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಜಯನಗರ ಮತ್ತು ತಿಲಕ್‍ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತಿಚಿಗೆ ಸೆಬ್ಟಂಬರ್ 5ರಂದು ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮ ಮುಗಿಸಿ ರಾತ್ರಿ ಗಸ್ತಿನಲ್ಲಿದ್ದ ಜಯನಗರ ಠಾಣೆ ಪೋಲಿಸರಿಗೆ ಉಪ್ಪಾರಹಳ್ಳಿ ಮುಖ್ಯರಸ್ತೆಯ ಸೆಕ್ರೆಡ್‍ಹಾರ್ಟ್ ಶಾಲೆ ಮುಂಭಾಗದಿಂದ ಗೆದ್ದಲಹಳ್ಳಿ ಕಡೆಗೆ ಹೋಗುತ್ತಿರುವ ಮಾರುತಿ 800 ಕಾರು ಅನುಮಾನಸ್ಪದವಾಗಿ ಕಂಡು ತಡೆದು ವಿಚಾರಿಸಿದ್ದಾರೆ.

ಆವೇಳೆ ಕಾರಿನಲ್ಲಿದ್ದ ನಾಲ್ವರು ಪರಾರಿಯಾಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ಆದರೆ ಅವರನ್ನು ಬಂಧಿಸಿದ ಪೋಲಿಸರು ವಿಚಾರಣೆಗೊಳಪಡಿಸಿ, ವಾಹನ ಪರಿಶೀಲಿಸಿದಾಗ ಕಾರಿನಲ್ಲಿ ಅಮೆರಿಕದ ಎಫ್ ಎಕ್ಸ್ ಬಾಕ್ಸ್ ಡಿಸಿಬಿ 125 ಸೌಂಡ್‍ಲೆಸ್ ಗನ್ ಮತ್ತು ಗುಂಡುಗಳು ಇರುವುದು ಪೋಲಿಸರ ಗಮನಕ್ಕೆ ಬಂದಿದೆ. ಭಾರತದಲ್ಲಿ ಎಫ್.ಎಕ್ಸ್.ಬಾಕ್ಸ್ ಗನ್ ಅನ್ನು ನಿಷೇಧಿಸಲಾಗಿದೆ ಆದರೆ ತುಮಕೂರಿನ ಯುವಕರ ಕೈಗೆ ಈ ಗನ್ ಹೇಗೆ ಬಂತು ಎಂಬುವುದನ್ನು ಪೋಲಿಸರು ಬೇಧಿಸಬೇಕಿದೆ. ಈ ಪ್ರಕರಣದಲ್ಲಿ ಗುಬ್ಬಿ ನಗರದ ನಿವಾಸಿಗಳಾದ ನವೀನ್ ಕುಮಾರ್, ದೇವರಾಜು, ನಟರಾಜು, ರಯಾನ್, ಸುಹೇಲ್ ಎಂಬ ಐದು ಜನರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎನ್ನಲಾಗಿದೆ.

ಬಂಧಿತರಾಗಿರುವ ಐದು ಆರೋಪಿಗಳಲ್ಲಿ ನವೀನ್ ಎಂಬಾತ ಈ ಹಿಂದೆ ಇದೇ ಗನ್ ಬಳಕೆ ಮಾಡಿ ನವಿಲು ಬೇಟೆಯಾಡಿದ್ದ. ಈ ಕುರಿತಂತೆ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ. ಈತನೇ ಈ ತಂಡವನ್ನು ಮುನ್ನಡೆಸುತ್ತಿದ್ದ ಎಂದು ಹೇಳಲಾಗಿದೆ. ಎಫ್.ಎಕ್ಸ್. ಬಾಕ್ಸ್ ಡಿಸಿಬಿ ಗನ್ ಅನ್ನು ಲೈಸೆನ್ಸ್ ಪಡೆದು ಯುಎಸ್‍ಎ ಅಲ್ಲಿ ಖರೀದಿ ಮಾಡಬೇಕು. ಆದರೆ ಯಾವುದೇ ಪರವಾನಗಿ ಇಲ್ಲದೆ ಈ ಗನ್ ಭಾರತಕ್ಕೆ ಬಂದದ್ದಾರು ಹೇಗೆ? ಎಂಬುದು ನಿಗೂಢವಾಗಿದೆ.

ತುಮಕೂರಿನ ಇಂತಹ ಚಟುವಟಿಕೆಗಳಿಗೆ ಕೆಲವು ರಾಜಕಾರಣಿಗಳ ಕುಮ್ಮಕ್ಕು ಬಲವಾಗಿದೆ ಎಂಬುವ ಮಾತುಗಳು ಕೇಳಿಬರುತ್ತಿದೆ. ಹಾಗಾಗಿ ಇಂತಹ ಪ್ರಕರಣಗಳನ್ನು ನಿಷ್ಠಾವಂತ ಪೋಲಿಸ್ ಅಧಿಕಾರಿಗಳಿಂದ ತನಿಖೆ ಮಾಡಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕಿದೆ ಇಲ್ಲವಾದಲ್ಲಿ ಗ್ಯಾಂಗ್ ಕಟ್ಟಿಕೊಂಡು ಗನ್ ಹಿಡಿದು ಓಡಾಡುವ ಯುವಜನರ ದಂಡು ಹೆಚ್ಚಾಗಲಿದೆ. ಇಂತಹ ಪ್ರಕರಣಗಳಲ್ಲಿ ಲಾಭ ಪಡೆದುಕೊಳ್ಳಲೆತ್ನಿಸುವ  ರಾಜಕಾರಣಿಗಳು ಸದಾ ಇಂತಹದಕ್ಕಾಗಿಯೇ ಕಾಯುತ್ತಿರುತ್ತಾರೆ. ಈಗಲಾದರೂ ಸಕಾರ ಎಚ್ಚೆತ್ತಕೊಂಡು ತುಮಕೂರು ನಗರವನ್ನು ಅಫರಾದ ಮುಕ್ತ ನಗರವಾಗಿಸುವ ಕಡೆ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಕ್ರಿಯಾಶೀಲವಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...