Homeಅಂತರಾಷ್ಟ್ರೀಯತುಮಕೂರಿಗೆ ಬಂದ ಅಮೇರಿಕದ ಗನ್ನು.. ಭಾರತದಲ್ಲಿ ನಿಷೇಧವಾಗಿದ್ದರೂ ನುಸುಳಿದ್ದು ಹೇಗೆ?

ತುಮಕೂರಿಗೆ ಬಂದ ಅಮೇರಿಕದ ಗನ್ನು.. ಭಾರತದಲ್ಲಿ ನಿಷೇಧವಾಗಿದ್ದರೂ ನುಸುಳಿದ್ದು ಹೇಗೆ?

- Advertisement -
- Advertisement -

ತುಮಕೂರು ಒಂದು ರೀತಿಯಲ್ಲಿ ಯಾವಾಗಲೂ ಶಾಂತಿಯಿಂದ ಕೂಡಿರುವ ನಗರವೆಂಬ ಭಾವನೆ ಎಲ್ಲಾ ಜನಸಾಮಾನ್ಯರಲ್ಲೂ ಇತ್ತು. ಆದರೆ ಇತ್ತಿಚಿಗೆ ಆ ರೀತಿಯ ಭಾವನೆ ಕಡಿಮೆಯಾಗುತ್ತಿದೆ. ಕಾರಣ ನಗರದಲ್ಲಿ ಹೆಚ್ಚುತ್ತಿರುವ ಅಪರಾಧಗಳು. ಎಷ್ಟೇ ಅಧಿಕಾರಗಳೂ ಬಂದು ಹೋದರೂ ಸಹ ಅಪರಾಧಗಳು ಕಡಿಮೆಯಾದಂತೆ ಕಾಣುತ್ತಿಲ್ಲ. ಇದಕ್ಕೆ ತುಮಕೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಹಲವು ಆತಂಕಕಾರಿ ಘಟನೆಗಳೇ ಕಾರಣ.

ಕಳೆದ ವರ್ಷ ಒಂದು ಬೆಳಗ್ಗಿನ ಜಾವ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ನಡೆದ ಮಾಜಿ ಮೇಯರ್ ರವಿಕುಮಾರ್ ಭೀಕರ ಕೊಲೆ ನಗರದಲ್ಲಿ ತಲ್ಲಣ ಉಂಟು ಮಾಡಿತ್ತು. ಅದಿನ್ನು ಮರೆಯುವ ಮುನ್ನವೇ ಇತ್ತಿಚಿಗೆ ತುಮಕೂರಿನಲ್ಲಿ ಭಾರತದಲ್ಲಿ ನಿಷೇಧಿತವಾಗಿರುವ ಏರ್ಗನ್ ಅನುಮಾನಸ್ಫದವಾಗಿ ಸಿಕ್ಕಿದ್ದು ಜನ ಸಾಮಾನ್ಯರ ನಿದ್ದೆಗೆಡಿಸಿದೆ. ಈ ಹಿನ್ನೆಲೆಯಲ್ಲೆ ನಗರದಲ್ಲಿ ಮತ್ತೊಂದು ಕೊಲೆಯ ಸಂಚು ನಡೆದಿದೆಯಾ ಎಂಬ ಅನುಮಾನಗಳು, ತರ್ಕವಿಲ್ಲದ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಜಯನಗರ ಮತ್ತು ತಿಲಕ್‍ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತಿಚಿಗೆ ಸೆಬ್ಟಂಬರ್ 5ರಂದು ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮ ಮುಗಿಸಿ ರಾತ್ರಿ ಗಸ್ತಿನಲ್ಲಿದ್ದ ಜಯನಗರ ಠಾಣೆ ಪೋಲಿಸರಿಗೆ ಉಪ್ಪಾರಹಳ್ಳಿ ಮುಖ್ಯರಸ್ತೆಯ ಸೆಕ್ರೆಡ್‍ಹಾರ್ಟ್ ಶಾಲೆ ಮುಂಭಾಗದಿಂದ ಗೆದ್ದಲಹಳ್ಳಿ ಕಡೆಗೆ ಹೋಗುತ್ತಿರುವ ಮಾರುತಿ 800 ಕಾರು ಅನುಮಾನಸ್ಪದವಾಗಿ ಕಂಡು ತಡೆದು ವಿಚಾರಿಸಿದ್ದಾರೆ.

ಆವೇಳೆ ಕಾರಿನಲ್ಲಿದ್ದ ನಾಲ್ವರು ಪರಾರಿಯಾಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ಆದರೆ ಅವರನ್ನು ಬಂಧಿಸಿದ ಪೋಲಿಸರು ವಿಚಾರಣೆಗೊಳಪಡಿಸಿ, ವಾಹನ ಪರಿಶೀಲಿಸಿದಾಗ ಕಾರಿನಲ್ಲಿ ಅಮೆರಿಕದ ಎಫ್ ಎಕ್ಸ್ ಬಾಕ್ಸ್ ಡಿಸಿಬಿ 125 ಸೌಂಡ್‍ಲೆಸ್ ಗನ್ ಮತ್ತು ಗುಂಡುಗಳು ಇರುವುದು ಪೋಲಿಸರ ಗಮನಕ್ಕೆ ಬಂದಿದೆ. ಭಾರತದಲ್ಲಿ ಎಫ್.ಎಕ್ಸ್.ಬಾಕ್ಸ್ ಗನ್ ಅನ್ನು ನಿಷೇಧಿಸಲಾಗಿದೆ ಆದರೆ ತುಮಕೂರಿನ ಯುವಕರ ಕೈಗೆ ಈ ಗನ್ ಹೇಗೆ ಬಂತು ಎಂಬುವುದನ್ನು ಪೋಲಿಸರು ಬೇಧಿಸಬೇಕಿದೆ. ಈ ಪ್ರಕರಣದಲ್ಲಿ ಗುಬ್ಬಿ ನಗರದ ನಿವಾಸಿಗಳಾದ ನವೀನ್ ಕುಮಾರ್, ದೇವರಾಜು, ನಟರಾಜು, ರಯಾನ್, ಸುಹೇಲ್ ಎಂಬ ಐದು ಜನರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎನ್ನಲಾಗಿದೆ.

ಬಂಧಿತರಾಗಿರುವ ಐದು ಆರೋಪಿಗಳಲ್ಲಿ ನವೀನ್ ಎಂಬಾತ ಈ ಹಿಂದೆ ಇದೇ ಗನ್ ಬಳಕೆ ಮಾಡಿ ನವಿಲು ಬೇಟೆಯಾಡಿದ್ದ. ಈ ಕುರಿತಂತೆ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ. ಈತನೇ ಈ ತಂಡವನ್ನು ಮುನ್ನಡೆಸುತ್ತಿದ್ದ ಎಂದು ಹೇಳಲಾಗಿದೆ. ಎಫ್.ಎಕ್ಸ್. ಬಾಕ್ಸ್ ಡಿಸಿಬಿ ಗನ್ ಅನ್ನು ಲೈಸೆನ್ಸ್ ಪಡೆದು ಯುಎಸ್‍ಎ ಅಲ್ಲಿ ಖರೀದಿ ಮಾಡಬೇಕು. ಆದರೆ ಯಾವುದೇ ಪರವಾನಗಿ ಇಲ್ಲದೆ ಈ ಗನ್ ಭಾರತಕ್ಕೆ ಬಂದದ್ದಾರು ಹೇಗೆ? ಎಂಬುದು ನಿಗೂಢವಾಗಿದೆ.

ತುಮಕೂರಿನ ಇಂತಹ ಚಟುವಟಿಕೆಗಳಿಗೆ ಕೆಲವು ರಾಜಕಾರಣಿಗಳ ಕುಮ್ಮಕ್ಕು ಬಲವಾಗಿದೆ ಎಂಬುವ ಮಾತುಗಳು ಕೇಳಿಬರುತ್ತಿದೆ. ಹಾಗಾಗಿ ಇಂತಹ ಪ್ರಕರಣಗಳನ್ನು ನಿಷ್ಠಾವಂತ ಪೋಲಿಸ್ ಅಧಿಕಾರಿಗಳಿಂದ ತನಿಖೆ ಮಾಡಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕಿದೆ ಇಲ್ಲವಾದಲ್ಲಿ ಗ್ಯಾಂಗ್ ಕಟ್ಟಿಕೊಂಡು ಗನ್ ಹಿಡಿದು ಓಡಾಡುವ ಯುವಜನರ ದಂಡು ಹೆಚ್ಚಾಗಲಿದೆ. ಇಂತಹ ಪ್ರಕರಣಗಳಲ್ಲಿ ಲಾಭ ಪಡೆದುಕೊಳ್ಳಲೆತ್ನಿಸುವ  ರಾಜಕಾರಣಿಗಳು ಸದಾ ಇಂತಹದಕ್ಕಾಗಿಯೇ ಕಾಯುತ್ತಿರುತ್ತಾರೆ. ಈಗಲಾದರೂ ಸಕಾರ ಎಚ್ಚೆತ್ತಕೊಂಡು ತುಮಕೂರು ನಗರವನ್ನು ಅಫರಾದ ಮುಕ್ತ ನಗರವಾಗಿಸುವ ಕಡೆ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಕ್ರಿಯಾಶೀಲವಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...