Homeಅಂತರಾಷ್ಟ್ರೀಯತುಮಕೂರಿಗೆ ಬಂದ ಅಮೇರಿಕದ ಗನ್ನು.. ಭಾರತದಲ್ಲಿ ನಿಷೇಧವಾಗಿದ್ದರೂ ನುಸುಳಿದ್ದು ಹೇಗೆ?

ತುಮಕೂರಿಗೆ ಬಂದ ಅಮೇರಿಕದ ಗನ್ನು.. ಭಾರತದಲ್ಲಿ ನಿಷೇಧವಾಗಿದ್ದರೂ ನುಸುಳಿದ್ದು ಹೇಗೆ?

- Advertisement -
- Advertisement -

ತುಮಕೂರು ಒಂದು ರೀತಿಯಲ್ಲಿ ಯಾವಾಗಲೂ ಶಾಂತಿಯಿಂದ ಕೂಡಿರುವ ನಗರವೆಂಬ ಭಾವನೆ ಎಲ್ಲಾ ಜನಸಾಮಾನ್ಯರಲ್ಲೂ ಇತ್ತು. ಆದರೆ ಇತ್ತಿಚಿಗೆ ಆ ರೀತಿಯ ಭಾವನೆ ಕಡಿಮೆಯಾಗುತ್ತಿದೆ. ಕಾರಣ ನಗರದಲ್ಲಿ ಹೆಚ್ಚುತ್ತಿರುವ ಅಪರಾಧಗಳು. ಎಷ್ಟೇ ಅಧಿಕಾರಗಳೂ ಬಂದು ಹೋದರೂ ಸಹ ಅಪರಾಧಗಳು ಕಡಿಮೆಯಾದಂತೆ ಕಾಣುತ್ತಿಲ್ಲ. ಇದಕ್ಕೆ ತುಮಕೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಹಲವು ಆತಂಕಕಾರಿ ಘಟನೆಗಳೇ ಕಾರಣ.

ಕಳೆದ ವರ್ಷ ಒಂದು ಬೆಳಗ್ಗಿನ ಜಾವ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ನಡೆದ ಮಾಜಿ ಮೇಯರ್ ರವಿಕುಮಾರ್ ಭೀಕರ ಕೊಲೆ ನಗರದಲ್ಲಿ ತಲ್ಲಣ ಉಂಟು ಮಾಡಿತ್ತು. ಅದಿನ್ನು ಮರೆಯುವ ಮುನ್ನವೇ ಇತ್ತಿಚಿಗೆ ತುಮಕೂರಿನಲ್ಲಿ ಭಾರತದಲ್ಲಿ ನಿಷೇಧಿತವಾಗಿರುವ ಏರ್ಗನ್ ಅನುಮಾನಸ್ಫದವಾಗಿ ಸಿಕ್ಕಿದ್ದು ಜನ ಸಾಮಾನ್ಯರ ನಿದ್ದೆಗೆಡಿಸಿದೆ. ಈ ಹಿನ್ನೆಲೆಯಲ್ಲೆ ನಗರದಲ್ಲಿ ಮತ್ತೊಂದು ಕೊಲೆಯ ಸಂಚು ನಡೆದಿದೆಯಾ ಎಂಬ ಅನುಮಾನಗಳು, ತರ್ಕವಿಲ್ಲದ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಜಯನಗರ ಮತ್ತು ತಿಲಕ್‍ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತಿಚಿಗೆ ಸೆಬ್ಟಂಬರ್ 5ರಂದು ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮ ಮುಗಿಸಿ ರಾತ್ರಿ ಗಸ್ತಿನಲ್ಲಿದ್ದ ಜಯನಗರ ಠಾಣೆ ಪೋಲಿಸರಿಗೆ ಉಪ್ಪಾರಹಳ್ಳಿ ಮುಖ್ಯರಸ್ತೆಯ ಸೆಕ್ರೆಡ್‍ಹಾರ್ಟ್ ಶಾಲೆ ಮುಂಭಾಗದಿಂದ ಗೆದ್ದಲಹಳ್ಳಿ ಕಡೆಗೆ ಹೋಗುತ್ತಿರುವ ಮಾರುತಿ 800 ಕಾರು ಅನುಮಾನಸ್ಪದವಾಗಿ ಕಂಡು ತಡೆದು ವಿಚಾರಿಸಿದ್ದಾರೆ.

ಆವೇಳೆ ಕಾರಿನಲ್ಲಿದ್ದ ನಾಲ್ವರು ಪರಾರಿಯಾಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ಆದರೆ ಅವರನ್ನು ಬಂಧಿಸಿದ ಪೋಲಿಸರು ವಿಚಾರಣೆಗೊಳಪಡಿಸಿ, ವಾಹನ ಪರಿಶೀಲಿಸಿದಾಗ ಕಾರಿನಲ್ಲಿ ಅಮೆರಿಕದ ಎಫ್ ಎಕ್ಸ್ ಬಾಕ್ಸ್ ಡಿಸಿಬಿ 125 ಸೌಂಡ್‍ಲೆಸ್ ಗನ್ ಮತ್ತು ಗುಂಡುಗಳು ಇರುವುದು ಪೋಲಿಸರ ಗಮನಕ್ಕೆ ಬಂದಿದೆ. ಭಾರತದಲ್ಲಿ ಎಫ್.ಎಕ್ಸ್.ಬಾಕ್ಸ್ ಗನ್ ಅನ್ನು ನಿಷೇಧಿಸಲಾಗಿದೆ ಆದರೆ ತುಮಕೂರಿನ ಯುವಕರ ಕೈಗೆ ಈ ಗನ್ ಹೇಗೆ ಬಂತು ಎಂಬುವುದನ್ನು ಪೋಲಿಸರು ಬೇಧಿಸಬೇಕಿದೆ. ಈ ಪ್ರಕರಣದಲ್ಲಿ ಗುಬ್ಬಿ ನಗರದ ನಿವಾಸಿಗಳಾದ ನವೀನ್ ಕುಮಾರ್, ದೇವರಾಜು, ನಟರಾಜು, ರಯಾನ್, ಸುಹೇಲ್ ಎಂಬ ಐದು ಜನರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎನ್ನಲಾಗಿದೆ.

ಬಂಧಿತರಾಗಿರುವ ಐದು ಆರೋಪಿಗಳಲ್ಲಿ ನವೀನ್ ಎಂಬಾತ ಈ ಹಿಂದೆ ಇದೇ ಗನ್ ಬಳಕೆ ಮಾಡಿ ನವಿಲು ಬೇಟೆಯಾಡಿದ್ದ. ಈ ಕುರಿತಂತೆ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ. ಈತನೇ ಈ ತಂಡವನ್ನು ಮುನ್ನಡೆಸುತ್ತಿದ್ದ ಎಂದು ಹೇಳಲಾಗಿದೆ. ಎಫ್.ಎಕ್ಸ್. ಬಾಕ್ಸ್ ಡಿಸಿಬಿ ಗನ್ ಅನ್ನು ಲೈಸೆನ್ಸ್ ಪಡೆದು ಯುಎಸ್‍ಎ ಅಲ್ಲಿ ಖರೀದಿ ಮಾಡಬೇಕು. ಆದರೆ ಯಾವುದೇ ಪರವಾನಗಿ ಇಲ್ಲದೆ ಈ ಗನ್ ಭಾರತಕ್ಕೆ ಬಂದದ್ದಾರು ಹೇಗೆ? ಎಂಬುದು ನಿಗೂಢವಾಗಿದೆ.

ತುಮಕೂರಿನ ಇಂತಹ ಚಟುವಟಿಕೆಗಳಿಗೆ ಕೆಲವು ರಾಜಕಾರಣಿಗಳ ಕುಮ್ಮಕ್ಕು ಬಲವಾಗಿದೆ ಎಂಬುವ ಮಾತುಗಳು ಕೇಳಿಬರುತ್ತಿದೆ. ಹಾಗಾಗಿ ಇಂತಹ ಪ್ರಕರಣಗಳನ್ನು ನಿಷ್ಠಾವಂತ ಪೋಲಿಸ್ ಅಧಿಕಾರಿಗಳಿಂದ ತನಿಖೆ ಮಾಡಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕಿದೆ ಇಲ್ಲವಾದಲ್ಲಿ ಗ್ಯಾಂಗ್ ಕಟ್ಟಿಕೊಂಡು ಗನ್ ಹಿಡಿದು ಓಡಾಡುವ ಯುವಜನರ ದಂಡು ಹೆಚ್ಚಾಗಲಿದೆ. ಇಂತಹ ಪ್ರಕರಣಗಳಲ್ಲಿ ಲಾಭ ಪಡೆದುಕೊಳ್ಳಲೆತ್ನಿಸುವ  ರಾಜಕಾರಣಿಗಳು ಸದಾ ಇಂತಹದಕ್ಕಾಗಿಯೇ ಕಾಯುತ್ತಿರುತ್ತಾರೆ. ಈಗಲಾದರೂ ಸಕಾರ ಎಚ್ಚೆತ್ತಕೊಂಡು ತುಮಕೂರು ನಗರವನ್ನು ಅಫರಾದ ಮುಕ್ತ ನಗರವಾಗಿಸುವ ಕಡೆ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಕ್ರಿಯಾಶೀಲವಾಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...