Homeಮುಖಪುಟ‘ಬೆಳಕಿನ ಬೆಳೆ’ ಮಾಲಿಕೆಯ ‘ಜಿ.ಎನ್. ದೇವಿ - ಆಯ್ದ ಬರಹಗಳು’ ಪುಸ್ತಕ ಬಿಡುಗಡೆ ನಾಳೆ

‘ಬೆಳಕಿನ ಬೆಳೆ’ ಮಾಲಿಕೆಯ ‘ಜಿ.ಎನ್. ದೇವಿ – ಆಯ್ದ ಬರಹಗಳು’ ಪುಸ್ತಕ ಬಿಡುಗಡೆ ನಾಳೆ

- Advertisement -
- Advertisement -

ಆಧುನಿಕ ಭಾರತೀಯ ಚಿಂತಕರ ಆಯ್ದ ಬರಹಗಳ ಮೂಲಕ ಅವರ ಚಿಂತನೆ ಪರಿಚಯ ಮಾಡುವ ನಿಟ್ಟಿನಲ್ಲಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು ‘ಬೆಳಕಿನ ಬೆಳೆ’  ಎಂಬ ಮಾಲಿಕೆಯಡಿ ಪ್ರಕಟಿಸಿದ 7 ಪುಸ್ತಕಗಳು ಗಮನ ಸೆಳೆದಿದ್ದವು. ಈ ಮಾಲಿಕೆಯ ಪ್ರಕಟಣೆಯನ್ನು ಡಾ.ಎಂ.ಜಿ. ಹೆಗಡೆ ಅವರ ಸಂಪಾದಕತ್ವದಲ್ಲಿ ಮುಂದುವರೆಸಿ ಪೂರ್ಣಗೊಳಿಸುವ ಜವಾಬ್ದಾರಿಯನ್ನು ಕ್ರಿಯಾ ಮಾಧ್ಯಮ ವಹಿಸಿಕೊಂಡಿದೆ.  ‘ಬೆಳಕಿನ ಬೆಳೆ’ ಮಾಲಿಕೆಯ ಎಂಟನೆಯ ಪುಸ್ತಕವಾಗಿ ಮತ್ತು ಈ ಮಾಲಿಕೆಯಲ್ಲಿ ಕ್ರಿಯಾ ಮಾಧ್ಯಮದ ಪ್ರಕಟಣೆಗಳಲ್ಲಿ ಮೊದಲನೆಯದಾಗಿ, ಪ್ರಸಿದ್ಧ ಚಿಂತಕ ”ಜಿ.ಎನ್. ದೇವಿ ಅವರ ಆಯ್ದ ಬರಹಗಳು’ ಕೃತಿಯು ಅಕ್ಟೋಬರ್ 29 ರಂದು ಉಡುಪಿಯ ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಬಿಡುಗಡೆಯಾಗುತ್ತಿದೆ.

ಕೃತಿ ವಾಚನದ ಮೂಲಕ ಡಾ.ಶ್ರೀಪಾದ ಭಟ್ ರವರು ಕೃತಿ ಬಿಡುಗಡೆ ಮಾಡಲಿದ್ದು,  ಡಾ.ಸಿರಾಜ್ ಅಹ್ಮದ್ ಮತ್ತು ಡಾ.ರಾಜೇಂದ್ರ ಚೆನ್ನಿಯವರು ಡಾ.ಜಿ.ಎನ್ ದೇವಿಯವರ ಬರಹಗಳ ಕುರಿತು ಮಾತನಾಡಲಿದ್ದಾರೆ. ಡಾ.ದೇವಿದಾಸ ನಾಯ್ಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶುಕ್ರವಾರ ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ.

ಒರ್ಫಿಯಸ್‌ನ ಹಾಡು, ಅಪೂರ್ಣ ರಕ್ತ ಕಣ, ಕಳ್ಳನೆನಿಸಿಕೊಂಡ ಅಲೆಮಾರಿ, ಹಿಂಸೆಯ ಪೂರ್ವಾಪರ, ಭಾಷೆಯ ಇರವು: ಜ್ಞಾನ, ಸಮಾಜ ಮತ್ತು ವಾಚೋಹೀನತೆ, ವಾಚೋಹೀನತೆ, ಸ್ಮೃತಿಯ ಭವಿಷ್ಯ – ದೇವಿ ಅವರ ಈ ಐದು ಪ್ರಸಿದ್ಧ ಲೇಖನಗಳು ಪುಸ್ತಕದಲ್ಲಿ ಇವೆ. ಈ ಪುಸ್ತಕದ ಆಯ್ದ ಭಾಗ ನಿಮ್ಮ ಓದಿಗಾಗಿ….

ಪರ್ಯಾಯದ ಹುಡುಕಾಟ

ಪ್ರಸ್ತುತ ಕೃತಿಯಲ್ಲಿ ಮೂರು ಬಹುಮುಖ್ಯ ವಿಷಯಗಳನ್ನು ಕುರಿತು ದೇವಿಯವರು ಧ್ಯಾನಿಸಿ ಬರೆದ ಬರಹಗಳ ಅನುವಾದಗಳಿವೆ. ಪಶ್ಚಿಮ ಹಾಗೂ ಪೂರ್ವಗಳ ವಿದ್ವತ್ತು, ಜಗತ್ತಿನ ಮಹಾನ್ ಕೃತಿಗಳ ಆಳವಾದ ಓದು, ಚರಿತ್ರೆಯ ದಾರ್ಶನಿಕವಾದ ತಿಳವಳಿಕೆ ಹಾಗೂ ಸಾಮಾಜಿಕ ಬದ್ಧತೆಗಳು ಮುಪ್ಪುರಿಗೊಂಡು ಸೃಷ್ಟಿಸಿದ ಜ್ಞಾನವು ಈ ಬರಹಗಳಲ್ಲಿದೆ. ಅಪ್ರಾಮಾಣಿಕವಾದ ಭಾಷಾಡಂಬರದ “ಜಾಗತಿಕ” ಚಿಂತನೆಯ ಹಗಲುವೇಷದ ಬದಲಾಗಿ ಇಪ್ಪತ್ತನೆಯ ಶತಮಾನದಿಂದ ಇತ್ತೀಚೆಗೆ ಮನುಷ್ಯ ಕುಲವು ಎದುರಿಸಿದ ಆತ್ಮ ಘಾತುಕವಾದ ಹಿಂಸೆಗಳು, ಅತಾರ್ಕಿಕವಾದ ಸ್ವವಿನಾಶ, ಸಿನಿಕತನವುಳ್ಳ ಹತಾಶೆ ಇವುಗಳ ಜೊತೆಗೆ ಇವೆಲ್ಲವನ್ನು ಬದಲಾಯಿಸಬೇಕು ಎನ್ನುವ, ‘ಇನ್ನೊಂದುಜಗತ್ತು ಸಾಧ್ಯವಿದೆ ಎನ್ನುವ ನೈತಿಕವಾದ ನಂಬಿಕೆ ಈ ಬರಹಗಳಲ್ಲಿದೆ. ಎಂ.ಜಿ. ಹೆಗಡೆಯವರ ಮಾಂತ್ರಿಕ ಅನುವಾದವು ದಟ್ಟವಾದ, ಸಂಕೀರ್ಣವಾದ ಅನುಭವಗಳನ್ನು ಕನ್ನಡದಲ್ಲಿಅದ್ಭುತವಾಗಿ ಹಿಡಿದುಕೊಡುತ್ತದೆ. ನನಗಂತೂ ಈ ಕೃತಿಯನ್ನುಓದಿದ್ದು ಇಳಿವಯಸ್ಸಿನಲ್ಲಿ ದೊರೆತ ಶಿಕ್ಷಣವಾಗಿದೆ.

– ಡಾ. ರಾಜೇಂದ್ರಚೆನ್ನಿ

ಒರ್ಫಿಯಸ್‌ನ ಹಾಡು

ಬಹಳ ಹಿಂದೆ–ಎಷ್ಟೆಂದರೆ ಐತಿಹಾಸಿಕ ಯುಗಗಳಲ್ಲಿಅಲ್ಲ, ಪೌರಾಣಿಕ ಕಲ್ಪಗಳಲ್ಲಿ- ಒರ್ಫಿಯಸ್‌ತನ್ನ ಪ್ರೀತಿಯ ಯುರಿಡಿಸಿಯನ್ನು ಮೃತ್ಯುಲೋಕದಿಂದ ಮರಳಿ ತರಲು ಹೋರಾಟ ನಡೆಸಿದ. ಮೃತ್ಯು ದೇವತೆಯು ಒರ್ಫಿಯಸ್‌ಗೆ ಯುರಿಡಿಸಿಯನ್ನು ಹಿಂತಿರುಗಿಸಲು ಒಪ್ಪಿದ. ಆದರೆ ಅವಳು ಅವನನ್ನು ಅನುಸರಿಸಿಕೊಂಡು ಹೋಗುತ್ತಿರುವಾಗ ನಿಜಕ್ಕೂ ಅವಳು ತನ್ನನ್ನು ಹಿಂಬಾಲಿಸುತ್ತಿರುವಳೆ ಎಂದು ಅವನು ಹಿಂತಿರುಗಿ ನೋಡುವಂತಿಲ್ಲಎಂದು ಷರತ್ತು ವಿಧಿಸಿದ. ಒರ್ಫಿಯಸ್‌ ಕತ್ತಲೆಯಚಿಂನ ಜಗತ್ತಿನಿಂದ ಹೊರಬಂದಾಗ ಯುರಿಡಿಸಿ ದಿಟವಾಗಿಯೂ ತನ್ನನ್ನು ಹಿಂಬಾಲಿಸಿ ಬರುತ್ತಿದ್ದಾಳೆ ಎಂಬ ನಂಬಿಕೆಯ ಬಲದ ಮೇಲೇ ಕವನಗಳನ್ನು ರಚಿಸಿ ಪಟ್ಟಿಯಾಗಿ ಹಾಡುತ್ತಿದ್ದ– ಯುರಿಡಿಸಿಗೆ ತನ್ನೆದೆಯ ತವಕ ತಲ್ಲಣಗಳ ನಿವೇದನೆ; ಪ್ರಿಯತಮೆಯನ್ನು ಮೃತ್ಯುಮುಖದಿಂದ ರಕ್ಷಿಸಿ ತಂದಯ ಶೋಕಗೀತೆಯಾಗಿ; ಅದೆಲ್ಲಕ್ಕಿಂತ, ಯುರಿಡಿಸಿ ವಾಸ್ತವವಾಗಿಯೂ ತನ್ನನ್ನು ಹಿಂಬಾಲಿಸುತ್ತಿರುವುದು ಹೌದೇ ಎಂಬ ಆಂತಕವನ್ನು ಗೆಲ್ಲುವ ಉಪಾಚಿಂತವಾಗಿ. ಅವನ ದೈವಿಕ ಸಂಗೀತಕ್ಕೆ ಮರುಳಾಗಿ ಲಕ್ಷಂತರ ಹಕ್ಕಿಗಳು ಯುರಿಡಿಸಿಯನ್ನು ಹಿಂಬಾಲಿಸಿದವೆಂದು ಹೇಳುತ್ತಾರೆ. ಅವುಗಳ ಕಿವಿಯಿಂಪದು ಸಂಗೀತ; ಅದರೆ ಒರ್ಫಿಯಸ್‌ಗೆ ಅದು ಯಾತನೆಗೀತೆ; ಹಾಗೆಯೇ ನಂಬಿಕೆಯಘೋಷಣೆ! ಒರ್ಫಿಯಸ್‌ನ ಆ ಹಾಡು ಪ್ರತಿಯೊಬ್ಬ ಪ್ರವರ್ತಕನ ಕ್ರಿಯೆಯಲ್ಲೂ ಪ್ರತಿಧ್ವನಿಸುತ್ತ…

– ಗಣೇಶ್‌ದೇವಿ (ಒರ್ಫಿಯಸ್‌ನ ಹಾಡು)


ಇದನ್ನೂ ಓದಿ: ಡಾ. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಬರೋಡ: ಪ್ರೊ. ಜಿ ಎನ್ ದೇವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...